Homeಮುಖಪುಟಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

ಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

- Advertisement -
- Advertisement -

ವರದಿಗಾರ |

ಸಂಘಪರಿವಾರದ ಆಸ್ಥಾನ ಪುರೋಹಿತ ಪೇಜಾವರ ವಿಶ್ವೇಶತೀರ್ಥ ಸ್ವಾಮಿಯ ಅಸಲಿ ಅವತಾರ ಅನಾವರಣವಾಗಿದೆ. ಕಳೆದ ವಾರ ಮಂಗಳೂರಲ್ಲಿ ವಿಶ್ವಹಿಂದೂ ಪರಿಷತ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬೇಗ ಆಗಬೇಕೆಂದು ಜನದ್ರೋಹ ಸಭೆಯೊಂದನ್ನು ನಡೆಸಿತ್ತಲ್ಲ, ಅಲ್ಲಿ ಪೇಜಾವರರ ದಿವ್ಯ ಸಾನಿಧ್ಯವಿತ್ತು. ರಾಮಮಂದಿರಕ್ಕಾಗಿ ಪೇಜಾವರ ಸ್ವಾಮಿ ಕ್ಯಾತೆ ತೆಗೆದು ಕೂಗಾಡಿದ ಪರಿ ಭಯೋತ್ಪಾದನೆಯ ಸ್ಯಾಂಪಲ್ಲಿನಂತಿತ್ತು. ನಳಿನ್‌ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ, ಪ್ರತಾಪ್‌ಸಿಂಹ, ಪ್ರಮೋದ್ ಮುತಾಲಿಕ್ ಮುಂತಾದ ಮೂರನೇ ದರ್ಜೆ ಹಿಂದೂತ್ವದ ಹಿಕಮತ್ತುದಾರರ ಗಂಟಲಲ್ಲಿ ಪೇಜಾವರ ಮಾತನಾಡಿದ್ದು ಕೇಳಿದ ಜನ ಬೆಚ್ಚಿಬಿದ್ದಿದ್ದಾರೆ. ಅಲ್ಲಿಗೆ ಈ ಅದ್ವೈತ ಸನ್ಯಾಸಿಯ ದೋಖಾ ದ್ವಂದ್ವ ಸಿದ್ಧಾಂತ ಮತ್ತೊಮ್ಮೆ ಜಗಜ್ಜಾಹೀರಾಗಿ ಹೋಗಿದೆ!

ಪರಧರ್ಮ ಸಹಿಷ್ಣು ಸಂತನ ಗೆಟಪ್ಪಿನಲ್ಲಿ ಓಡಾಡುವ ಈ ಪೊಲಿಟಿಕಲ್ ಸ್ವಾಮಿಯ ನಡೆ-ನುಡಿಯಲ್ಲಿ ಯಾವಾಗಲೂ ವಿರೋಧಾಭಾಸ-ವಿಪರ‍್ಯಾಸಗಳೇ, ಬ್ರಾಹ್ಮಣ್ಯದಡಿಯ ಅಸಮಾನತೆ-ಅಸ್ಪೃಶ್ಯತೆಗಳ ಅರ್ಥ ಮಾಡಿಸುತ್ತವೆ. ಹರಿಜನರ ಕೇರಿಗಳಿಗೆ ಹೋಗಿ ಪಾದ ತೊಳೆಸಿಕೊಳ್ಳುವ ಪೇಜಾವರರು ಮರಳಿ ಉಡುಪಿ ಮಠಕ್ಕೆ ಬರುವಾಗಲೇ ಜನಿವಾರ ಬದಲಿಸಿ ಶುದ್ಧೀಕರಣಗೊಳ್ಳುತ್ತಾರೆ. ಧರ್ಮೋನ್ಮಾದಿ ಕರಸೇವಕರು ಬಾಬರಿ ಮಸೀದಿ ಗುಮ್ಮಟ ಉರುಳಿಸುವಾಗ ಕಣ್ಣಾರೆ ಕಂಡು ಧನ್ಯತಾಭಾವದಿಂದ ಮಂದಹಾಸ ಬೀರುವ ಈ ಸ್ವಾಮಿ ತನ್ನ ಮಠದ ಆವರಣದಲ್ಲೇ ಮುಸ್ಲಿಮರಿಗೆ ಇಫ್ತಾರ್ ಕೂಟ ಏರ್ಪಡಿಸುವ ನಾಟಕವಾಡಬಲ್ಲರು.

ಉಡುಪಿ ಮಾಧ್ವಮಠದಲ್ಲಿ ಪಂಕ್ತಿಭೇದವೇ ಇಲ್ಲವೆಂದು ಹಸಿ-ಹಸಿ ಸುಳ್ಳು ಹೇಳುವ ಪೇಜಾವರ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದ ಮಡೆಸ್ನಾನಕ್ಕೆ ಪರ‍್ಯಾಯವಾಗಿ ಉಡೆಸ್ನಾನದ ಆವಿಷ್ಕಾರ ಮಾಡಿ ಅಮಾಯಕ ಅಬ್ರಾಹ್ಮಣರ ದಿಕ್ಕು ತಪ್ಪಿಸುತ್ತಾರೆ. ಇವತ್ತಿಗೂ ಪೇಜಾವರರು ಗೋ-ಗೂಂಡಾಗಳಿಗೆ, ಬಾಬರಿ ಮಸೀದಿ ಧ್ವಂಸಕರಿಗೆ ಸ್ಫೂರ್ತಿಯ ಚಿಲುಮೆ. ತನ್ನ ಧಾರ್ಮಿಕ ಕಾರ್ಯಾಚರಣೆಗೆ ಅನುಕೂಲ ಆಗುತ್ತದೆಂದಾಗ ಸಾಬರನ್ನು ಮಠಕ್ಕೆ ಕರೆದು ಇಫ್ತಾರ್ ಕೂಟ ಮಾಡುವ ಪೇಜಾವರರು ಶಾಸಕ ರಘುಪತಿ ಭಟ್ಟನಂಥವರು ಕಣ್ಣುಬಿಟ್ಟರೆ ಹೆದರಿ ಮರು ವರ್ಷ ಆ ಇಫ್ತಾರ್ ಪ್ರಹಸನ ಮಾಡುವುದೇ ಇಲ್ಲಾ! ಹಿಂದೂತ್ವದ ಸೈತಾನರು ಪಾಪದ ಸಾಬರ ಬೆತ್ತಲೆ ಮಾಡಿ ಬಡಿದು ಕೇಕೆ ಹಾಕಿದರೂ, ಕೊಂದು ಎಸೆದರೂ ಕಂಡೂ ಕಾಣದಂತಿರುತ್ತಾರೆ ಪೇಜಾವರ ಸ್ವಾಮಿ. ಹಾಗಂತ ಶಾಂತಿ, ಸಹಬಾಳ್ವೆ, ಸಹಿಷ್ಣುತೆ, ಸಂವಿಧಾನದ ಬಗ್ಗೆ ಉದ್ದುದ್ದ ವ್ಯಾಖ್ಯಾನ ಕೊಡಲು ಮಾತ್ರ ಮರೆಯುವುದಿಲ್ಲ……..

ಇಂಥ ಗುಣಧರ್ಮದ ಪೇಜಾವರ ಸ್ವಾಮೀಜಿ ಮೊನ್ನೆ ಮಂಗಳೂರಲ್ಲಿ ಕೇಸರಿ ಕೂಟದಲ್ಲಿ ಉದುರಿಸಿದ ಭೀಭತ್ಸ ಅಣಿ ಮುತ್ತುಗಳು ಅವರ ಜಾಯಮಾನಕ್ಕೆ ತಕ್ಕಂತೆಯೇ ಇದೆ. ಮಾತಿನುದ್ದಕ್ಕೂ ಪೇಜಾವರರ ಮೇಲೆ ಹಿಂದೂತ್ವದ ಭಯೋತ್ಪಾದಕನ ಆವಾಹನೆ ಆದಂತಿತ್ತು. ಹಿಂದೂತ್ವದ ಕಾಳಗದ ಕಾಲಾಳುಗಳಾದ ಅವಿಭಜಿತ ದಕ್ಷಿಣ ಕನ್ನಡದ ಅಬ್ರಾಹ್ಮಣರನ್ನು ಅನಾಹುತಕ್ಕೆ ಪ್ರಚೋದಿಸುವ ಓಘ ಪೇಜಾವರರ ಭಾಷಣಕ್ಕಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಮಾಮನ ಗೆಲ್ಲಿಸುವ ಮಸಲತ್ತಿನ ಮಾತುಗಾರಿಕೆ ಇದಾಗಿತ್ತೆಂಬುದು ಎಂಥ ಗಾಂಪನಿಗೂ ಅರ್ಥವಾಗುತ್ತದೆ!! ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃವೀಕರಣಗೊಂಡಿರುವ ಹಿಂದೂತ್ವದ ಓಟ್‌ಬ್ಯಾಂಕ್ ಇನ್ನಾರು ತಿಂಗಳಲ್ಲಿ ಬರಲಿರುವ ಪಾರ್ಲಿಮೆಂಟ್ ಇಲೆಕ್ಷನ್ ತನಕ ಕಾಪಿಟ್ಟುಕೊಳ್ಳುವ ತಂತ್ರಗಾರಿಕೆ ಪೇಜಾವರ ಟೇಮಿನದಾಗಿತ್ತು.

ನಾಲ್ಕುವರೆ ವರ್ಷದಿಂದ ಸಂಘಪರಿವಾರದ ಬ್ರಾಹ್ಮಣ ರಿಂಗ್‌ಮಾಸ್ಟರ್‌ಗಳ ಪಾದುಕಾ ಪೂಜಾರಿ ಮೋದಿ ಪ್ರಧಾನಿಯಾಗಿದ್ದರೂ ಆತನಿಂದ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲಿಕ್ಕೆ ಯಾಕಾಗಲಿಲ್ಲ ಎಂಬ ಮೂಲಭೂತ ಪ್ರಶ್ನೆ ಮರೆಮಾಚಿದ ಪೇಜಾವರರು ಏಕಾಏಕಿ ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಆ ಮೂಲಕ ಇಲೆಕ್ಷನ್ ಪ್ರಚಾರ ಶುರುಮಾಡಿದ್ದಾರೆ. ಹಿಂದೂತ್ವಕ್ಕಾಗಿ ತನ್ನನ್ನು ಸಂಸದನಾಗಿಸಿದ ಜಿಲ್ಲೆಗೇ ಬೆಂಕಿ ಹಾಕ್ತೇನೆಂದು ಯಾವ ಮುಲಾಜೂ, ಮನುಷ್ಯತ್ವವೂ ಇಲ್ಲದೆ ಆರ್ಭಟಿಸುವ ನಳಿನ್‌ಕುಮಾರ್ ಕಟೀಲ್‌ನಂಥವರನ್ನು ಬಗಲಲ್ಲಿಟ್ಟುಕೊಂಡು ಪೇಜಾವರರು ಮಾಡಿದ ಭಾಷಣದ ನೀತಿ-ರೀತಿಗೆ ಕೂಗುಮಾರಿ ಖ್ಯಾತಿಯ ಚೈತ್ರಾ ಕುಂದಾಪುರ, ಸೂಲಿಬೆಲೆ ಚಕ್ರವರ್ತಿಯಂಥವರೇ ನಾಚಿ ತಲೆ ತಗ್ಗಿಸುವಂತಿತ್ತು!

ಪ್ರತಿದಿನ ಸಾವಿರ ಸುಳ್ಳು ಸಬೂಬು ಹೇಳುವ ಮೋದಿ 2019ರ ಚುನಾವಣೆಯಲ್ಲಿ ಬಚಾವಾಗದ ಪ್ರಪಾತಕ್ಕೆ ಹೋಗಿಬಿದ್ದಿದ್ದಾರೆಂಬುದು ಪೇಜಾವರರಂಥ ಹಿಂದೂ ಸಂತ ಸಂತಾನಕ್ಕೆ ಪಕ್ಕಾ ಆಗಿಹೋಗಿದೆ. ಮೋದಿಯಂಥ ಹುಂಬ ಶೋ ಮ್ಯಾನ್ ದೇಶದ ಚುಕ್ಕಾಣಿ ಹಿಡಿಯುವುದು ಸಂಘಪರಿವಾರಕ್ಕೆ ಅನಿವಾರ್ಯ ಅಗತ್ಯ. ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಬರುತ್ತಿದೆ ಎಂದು ಬಿಂಬಿಸಿದರೆ ಜನರ ಭಾವನೆ ಕೆರಳಿಸಬಹುದೆಂಬ ದೂ(ದು)ರಾಲೋಚನೆ ಕಾವಿ ಕೂಟದ್ದು. ಹಾಗಾಗಿಯೇ ಮಂಗಳೂರಲ್ಲಿ ಪೇಜಾವರರು ಮಾತುಮಾತಿಗೆ ಕಾಂಗ್ರೆಸ್ ರಾಮಮಂದಿರ ವಿರೋಧಿ ಎಂಬಂತೆ ಪ್ರವಚನ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ವಿಶೇಷ ಕಾನೂನು ಮಾಡಬೇಕೆಂದು ಹೇಳುವ ಪೇಜಾವರ ಮಾತಿನ ಅರ್ಥ ಸುಗ್ರೀವಾಜ್ಞೆ ಮೂಲಕ ಅಯೋಧ್ಯೆಯಲ್ಲಿ ರಾಮನಿಗೆ ಗುಡಿಕಟ್ಟಬೇಕೆನ್ನುವುದೇ ಆಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆಗೆ ಕಾಂಗ್ರೆಸ್ ಸಹಕರಿಸಬೇಕೆಂದು ಎಚ್ಚರಿಕೆಯೂ ಪೇಜಾವರ ಸ್ವಾಮಿ ಕೊಟ್ಟಿದ್ದಾರೆ. ಕಾಂಗ್ರೆಸೇನಾದರೂ ರಾಮಮಂದಿರಕ್ಕೆ ಅಡ್ಡಗಾಲು ಹಾಕಿದರೆ ಮುಂಬರುವ ಚುನಾವಣೆಯಲ್ಲಿ ಆ ಪಾರ್ಟಿ ಮಣ್ಣು ಮುಕ್ಕುತ್ತದೆಯೆಂದು ಮೋದಿಯನ್ನು ಮೀರಿಸುವ ಸ್ಟೈಲಲ್ಲಿ ಪೇಜಾವರರು ಭಾಷಣ ಬಿಗಿದಿದ್ದಾರೆ. ಅಷ್ಟೇ ಅಲ್ಲ, ಮುಸ್ಲಿಮರು ರಾಮ ಮಂದಿರಕ್ಕೆ ಬೆಂಬಲಿಸಿ ಹಿಂದೂಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಳ್ಳಬೇಕು ಎಂದಿದ್ದಾರೆ. ಏನಿದರ ಅರ್ಥ? ಸಾಬರು ಅಯೋಧ್ಯೆಯಲ್ಲಿ ರಾಮ ಮಂದಿರ ಆಗದಿದ್ದರೆ ಗಂಡಾಂತರಕ್ಕೆ ಸಿಲುಕಲಿದ್ದಾರೆಂದಾ? ಹಿಂದೂತ್ವದ ದಾದಾಗಿರಿಗೆ ಶರಣಾಗದಿದ್ದರೆ ಉಳಿಗಾಲವಿಲ್ಲವೆಂದಾ? ಸಾತ್ವಿಕ ಸಂತ ತಾನೆಂದೂ ತೋರಿಸಿಕೊಳ್ಳಲು ತಿಣಕಾಡುವ ಪೇಜಾವರರ ಮಾತುಗಾರಿಕೆ ಯಾವ ಹಿಂದೂ ಭಯೋತ್ಪಾಕ ಕಾವಿ ಅಥವಾ ಖಾದಿ ಪುಂಡರ ಭಾಷಣಕ್ಕೆ ಕಮ್ಮಿಯಿದೆ?!

ಜನಾಗ್ರಹ ಸಭೆ ಚುನಾವಣಾ ರಾಜಕೀಯ ಅಲ್ಲ ಅನ್ನುತ್ತಲೇ ಬಿಜೆಪಿ ಪರ ಪರೋಕ್ಷವಾಗಿ ಬಹಿರಂಗ ಪ್ರಚಾರ ಪೇಜಾವರ ಸ್ವಾಮಿ ಮಾಡಿದ್ದಾರೆ. ಬಿಜೆಪಿ ರಾಮ ಮಂದಿರಕ್ಕೆ ಸಂಪೂರ್ಣ ಬೆಂಬಲ ಕೊಡಬೇಕೆಂದು ಹೇಳಿರುವುದೇ ವಿಕಟ ವ್ಯಂಗ್ಯ! ಲೋಕಸಭೆ ಸ್ಥಾನ ತ್ಯಜಿಸಲು ರಾಮ ಮಂದಿರಕ್ಕಾಗಿ ಬಿಜೆಪಿ ಸಂಸದರು ರೆಡಿಯಾಗಬೇಕೆಂದು ಹೇಳಿದ್ದಾರೆ. ಬರೀ ಆರು ತಿಂಗಳು ಬಾಕಿಯಿರುವಾಗ ಚೆಡ್ಡಿ ಎಂಪಿಗಳಿಗೆ ರಾಜೀನಾಮೆ ಕೊಡಿಯೆಂದು ಪೇಜಾವರರು ಹೇಳೋದು ಬಿಜೆಪಿಯನ್ನು ತಾರೀಫು ಮಾಡುವ ತಂತ್ರಗಾರಿಕೆಯಿಂದಷ್ಟೇ. ರಾಮನ ಹೆಸರಲ್ಲಿ ಪ್ರಧಾನಿಯಾದ ಮೋದಿ ನಾಲ್ಕುವರೆ ವರ್ಷದಿಂದ ಏಕೆ ರಾಮನಿಗೊಂದು ನೆಲೆಕೊಡುವ ಕೃತಜ್ಞತಾ ಭಾವದಿಂದ ಪ್ರಾಮಾಣಿಕ ಕೆಲಸ ಮಾಡಲಿಲ್ಲ ಎಂದು ಕೇಳುವ ಗಟ್ಸ್ ಪೇಜಾವರರೇಕೆ ತೋರಿಸುತ್ತಿಲ್ಲ?

ಹಿಂದೂತ್ವದ ದಿವಾಳಿಕೋರತನಕ್ಕೆ ಪೇಜಾವರರು ಸಂಕೇತವಾಗುತ್ತಿರುವುದು ದುರಂತ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...