Homeಮುಖಪುಟಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

ಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

- Advertisement -
- Advertisement -

ವರದಿಗಾರ |

ಸಂಘಪರಿವಾರದ ಆಸ್ಥಾನ ಪುರೋಹಿತ ಪೇಜಾವರ ವಿಶ್ವೇಶತೀರ್ಥ ಸ್ವಾಮಿಯ ಅಸಲಿ ಅವತಾರ ಅನಾವರಣವಾಗಿದೆ. ಕಳೆದ ವಾರ ಮಂಗಳೂರಲ್ಲಿ ವಿಶ್ವಹಿಂದೂ ಪರಿಷತ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬೇಗ ಆಗಬೇಕೆಂದು ಜನದ್ರೋಹ ಸಭೆಯೊಂದನ್ನು ನಡೆಸಿತ್ತಲ್ಲ, ಅಲ್ಲಿ ಪೇಜಾವರರ ದಿವ್ಯ ಸಾನಿಧ್ಯವಿತ್ತು. ರಾಮಮಂದಿರಕ್ಕಾಗಿ ಪೇಜಾವರ ಸ್ವಾಮಿ ಕ್ಯಾತೆ ತೆಗೆದು ಕೂಗಾಡಿದ ಪರಿ ಭಯೋತ್ಪಾದನೆಯ ಸ್ಯಾಂಪಲ್ಲಿನಂತಿತ್ತು. ನಳಿನ್‌ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ, ಪ್ರತಾಪ್‌ಸಿಂಹ, ಪ್ರಮೋದ್ ಮುತಾಲಿಕ್ ಮುಂತಾದ ಮೂರನೇ ದರ್ಜೆ ಹಿಂದೂತ್ವದ ಹಿಕಮತ್ತುದಾರರ ಗಂಟಲಲ್ಲಿ ಪೇಜಾವರ ಮಾತನಾಡಿದ್ದು ಕೇಳಿದ ಜನ ಬೆಚ್ಚಿಬಿದ್ದಿದ್ದಾರೆ. ಅಲ್ಲಿಗೆ ಈ ಅದ್ವೈತ ಸನ್ಯಾಸಿಯ ದೋಖಾ ದ್ವಂದ್ವ ಸಿದ್ಧಾಂತ ಮತ್ತೊಮ್ಮೆ ಜಗಜ್ಜಾಹೀರಾಗಿ ಹೋಗಿದೆ!

ಪರಧರ್ಮ ಸಹಿಷ್ಣು ಸಂತನ ಗೆಟಪ್ಪಿನಲ್ಲಿ ಓಡಾಡುವ ಈ ಪೊಲಿಟಿಕಲ್ ಸ್ವಾಮಿಯ ನಡೆ-ನುಡಿಯಲ್ಲಿ ಯಾವಾಗಲೂ ವಿರೋಧಾಭಾಸ-ವಿಪರ‍್ಯಾಸಗಳೇ, ಬ್ರಾಹ್ಮಣ್ಯದಡಿಯ ಅಸಮಾನತೆ-ಅಸ್ಪೃಶ್ಯತೆಗಳ ಅರ್ಥ ಮಾಡಿಸುತ್ತವೆ. ಹರಿಜನರ ಕೇರಿಗಳಿಗೆ ಹೋಗಿ ಪಾದ ತೊಳೆಸಿಕೊಳ್ಳುವ ಪೇಜಾವರರು ಮರಳಿ ಉಡುಪಿ ಮಠಕ್ಕೆ ಬರುವಾಗಲೇ ಜನಿವಾರ ಬದಲಿಸಿ ಶುದ್ಧೀಕರಣಗೊಳ್ಳುತ್ತಾರೆ. ಧರ್ಮೋನ್ಮಾದಿ ಕರಸೇವಕರು ಬಾಬರಿ ಮಸೀದಿ ಗುಮ್ಮಟ ಉರುಳಿಸುವಾಗ ಕಣ್ಣಾರೆ ಕಂಡು ಧನ್ಯತಾಭಾವದಿಂದ ಮಂದಹಾಸ ಬೀರುವ ಈ ಸ್ವಾಮಿ ತನ್ನ ಮಠದ ಆವರಣದಲ್ಲೇ ಮುಸ್ಲಿಮರಿಗೆ ಇಫ್ತಾರ್ ಕೂಟ ಏರ್ಪಡಿಸುವ ನಾಟಕವಾಡಬಲ್ಲರು.

ಉಡುಪಿ ಮಾಧ್ವಮಠದಲ್ಲಿ ಪಂಕ್ತಿಭೇದವೇ ಇಲ್ಲವೆಂದು ಹಸಿ-ಹಸಿ ಸುಳ್ಳು ಹೇಳುವ ಪೇಜಾವರ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದ ಮಡೆಸ್ನಾನಕ್ಕೆ ಪರ‍್ಯಾಯವಾಗಿ ಉಡೆಸ್ನಾನದ ಆವಿಷ್ಕಾರ ಮಾಡಿ ಅಮಾಯಕ ಅಬ್ರಾಹ್ಮಣರ ದಿಕ್ಕು ತಪ್ಪಿಸುತ್ತಾರೆ. ಇವತ್ತಿಗೂ ಪೇಜಾವರರು ಗೋ-ಗೂಂಡಾಗಳಿಗೆ, ಬಾಬರಿ ಮಸೀದಿ ಧ್ವಂಸಕರಿಗೆ ಸ್ಫೂರ್ತಿಯ ಚಿಲುಮೆ. ತನ್ನ ಧಾರ್ಮಿಕ ಕಾರ್ಯಾಚರಣೆಗೆ ಅನುಕೂಲ ಆಗುತ್ತದೆಂದಾಗ ಸಾಬರನ್ನು ಮಠಕ್ಕೆ ಕರೆದು ಇಫ್ತಾರ್ ಕೂಟ ಮಾಡುವ ಪೇಜಾವರರು ಶಾಸಕ ರಘುಪತಿ ಭಟ್ಟನಂಥವರು ಕಣ್ಣುಬಿಟ್ಟರೆ ಹೆದರಿ ಮರು ವರ್ಷ ಆ ಇಫ್ತಾರ್ ಪ್ರಹಸನ ಮಾಡುವುದೇ ಇಲ್ಲಾ! ಹಿಂದೂತ್ವದ ಸೈತಾನರು ಪಾಪದ ಸಾಬರ ಬೆತ್ತಲೆ ಮಾಡಿ ಬಡಿದು ಕೇಕೆ ಹಾಕಿದರೂ, ಕೊಂದು ಎಸೆದರೂ ಕಂಡೂ ಕಾಣದಂತಿರುತ್ತಾರೆ ಪೇಜಾವರ ಸ್ವಾಮಿ. ಹಾಗಂತ ಶಾಂತಿ, ಸಹಬಾಳ್ವೆ, ಸಹಿಷ್ಣುತೆ, ಸಂವಿಧಾನದ ಬಗ್ಗೆ ಉದ್ದುದ್ದ ವ್ಯಾಖ್ಯಾನ ಕೊಡಲು ಮಾತ್ರ ಮರೆಯುವುದಿಲ್ಲ……..

ಇಂಥ ಗುಣಧರ್ಮದ ಪೇಜಾವರ ಸ್ವಾಮೀಜಿ ಮೊನ್ನೆ ಮಂಗಳೂರಲ್ಲಿ ಕೇಸರಿ ಕೂಟದಲ್ಲಿ ಉದುರಿಸಿದ ಭೀಭತ್ಸ ಅಣಿ ಮುತ್ತುಗಳು ಅವರ ಜಾಯಮಾನಕ್ಕೆ ತಕ್ಕಂತೆಯೇ ಇದೆ. ಮಾತಿನುದ್ದಕ್ಕೂ ಪೇಜಾವರರ ಮೇಲೆ ಹಿಂದೂತ್ವದ ಭಯೋತ್ಪಾದಕನ ಆವಾಹನೆ ಆದಂತಿತ್ತು. ಹಿಂದೂತ್ವದ ಕಾಳಗದ ಕಾಲಾಳುಗಳಾದ ಅವಿಭಜಿತ ದಕ್ಷಿಣ ಕನ್ನಡದ ಅಬ್ರಾಹ್ಮಣರನ್ನು ಅನಾಹುತಕ್ಕೆ ಪ್ರಚೋದಿಸುವ ಓಘ ಪೇಜಾವರರ ಭಾಷಣಕ್ಕಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಮಾಮನ ಗೆಲ್ಲಿಸುವ ಮಸಲತ್ತಿನ ಮಾತುಗಾರಿಕೆ ಇದಾಗಿತ್ತೆಂಬುದು ಎಂಥ ಗಾಂಪನಿಗೂ ಅರ್ಥವಾಗುತ್ತದೆ!! ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃವೀಕರಣಗೊಂಡಿರುವ ಹಿಂದೂತ್ವದ ಓಟ್‌ಬ್ಯಾಂಕ್ ಇನ್ನಾರು ತಿಂಗಳಲ್ಲಿ ಬರಲಿರುವ ಪಾರ್ಲಿಮೆಂಟ್ ಇಲೆಕ್ಷನ್ ತನಕ ಕಾಪಿಟ್ಟುಕೊಳ್ಳುವ ತಂತ್ರಗಾರಿಕೆ ಪೇಜಾವರ ಟೇಮಿನದಾಗಿತ್ತು.

ನಾಲ್ಕುವರೆ ವರ್ಷದಿಂದ ಸಂಘಪರಿವಾರದ ಬ್ರಾಹ್ಮಣ ರಿಂಗ್‌ಮಾಸ್ಟರ್‌ಗಳ ಪಾದುಕಾ ಪೂಜಾರಿ ಮೋದಿ ಪ್ರಧಾನಿಯಾಗಿದ್ದರೂ ಆತನಿಂದ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲಿಕ್ಕೆ ಯಾಕಾಗಲಿಲ್ಲ ಎಂಬ ಮೂಲಭೂತ ಪ್ರಶ್ನೆ ಮರೆಮಾಚಿದ ಪೇಜಾವರರು ಏಕಾಏಕಿ ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಆ ಮೂಲಕ ಇಲೆಕ್ಷನ್ ಪ್ರಚಾರ ಶುರುಮಾಡಿದ್ದಾರೆ. ಹಿಂದೂತ್ವಕ್ಕಾಗಿ ತನ್ನನ್ನು ಸಂಸದನಾಗಿಸಿದ ಜಿಲ್ಲೆಗೇ ಬೆಂಕಿ ಹಾಕ್ತೇನೆಂದು ಯಾವ ಮುಲಾಜೂ, ಮನುಷ್ಯತ್ವವೂ ಇಲ್ಲದೆ ಆರ್ಭಟಿಸುವ ನಳಿನ್‌ಕುಮಾರ್ ಕಟೀಲ್‌ನಂಥವರನ್ನು ಬಗಲಲ್ಲಿಟ್ಟುಕೊಂಡು ಪೇಜಾವರರು ಮಾಡಿದ ಭಾಷಣದ ನೀತಿ-ರೀತಿಗೆ ಕೂಗುಮಾರಿ ಖ್ಯಾತಿಯ ಚೈತ್ರಾ ಕುಂದಾಪುರ, ಸೂಲಿಬೆಲೆ ಚಕ್ರವರ್ತಿಯಂಥವರೇ ನಾಚಿ ತಲೆ ತಗ್ಗಿಸುವಂತಿತ್ತು!

ಪ್ರತಿದಿನ ಸಾವಿರ ಸುಳ್ಳು ಸಬೂಬು ಹೇಳುವ ಮೋದಿ 2019ರ ಚುನಾವಣೆಯಲ್ಲಿ ಬಚಾವಾಗದ ಪ್ರಪಾತಕ್ಕೆ ಹೋಗಿಬಿದ್ದಿದ್ದಾರೆಂಬುದು ಪೇಜಾವರರಂಥ ಹಿಂದೂ ಸಂತ ಸಂತಾನಕ್ಕೆ ಪಕ್ಕಾ ಆಗಿಹೋಗಿದೆ. ಮೋದಿಯಂಥ ಹುಂಬ ಶೋ ಮ್ಯಾನ್ ದೇಶದ ಚುಕ್ಕಾಣಿ ಹಿಡಿಯುವುದು ಸಂಘಪರಿವಾರಕ್ಕೆ ಅನಿವಾರ್ಯ ಅಗತ್ಯ. ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಬರುತ್ತಿದೆ ಎಂದು ಬಿಂಬಿಸಿದರೆ ಜನರ ಭಾವನೆ ಕೆರಳಿಸಬಹುದೆಂಬ ದೂ(ದು)ರಾಲೋಚನೆ ಕಾವಿ ಕೂಟದ್ದು. ಹಾಗಾಗಿಯೇ ಮಂಗಳೂರಲ್ಲಿ ಪೇಜಾವರರು ಮಾತುಮಾತಿಗೆ ಕಾಂಗ್ರೆಸ್ ರಾಮಮಂದಿರ ವಿರೋಧಿ ಎಂಬಂತೆ ಪ್ರವಚನ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ವಿಶೇಷ ಕಾನೂನು ಮಾಡಬೇಕೆಂದು ಹೇಳುವ ಪೇಜಾವರ ಮಾತಿನ ಅರ್ಥ ಸುಗ್ರೀವಾಜ್ಞೆ ಮೂಲಕ ಅಯೋಧ್ಯೆಯಲ್ಲಿ ರಾಮನಿಗೆ ಗುಡಿಕಟ್ಟಬೇಕೆನ್ನುವುದೇ ಆಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆಗೆ ಕಾಂಗ್ರೆಸ್ ಸಹಕರಿಸಬೇಕೆಂದು ಎಚ್ಚರಿಕೆಯೂ ಪೇಜಾವರ ಸ್ವಾಮಿ ಕೊಟ್ಟಿದ್ದಾರೆ. ಕಾಂಗ್ರೆಸೇನಾದರೂ ರಾಮಮಂದಿರಕ್ಕೆ ಅಡ್ಡಗಾಲು ಹಾಕಿದರೆ ಮುಂಬರುವ ಚುನಾವಣೆಯಲ್ಲಿ ಆ ಪಾರ್ಟಿ ಮಣ್ಣು ಮುಕ್ಕುತ್ತದೆಯೆಂದು ಮೋದಿಯನ್ನು ಮೀರಿಸುವ ಸ್ಟೈಲಲ್ಲಿ ಪೇಜಾವರರು ಭಾಷಣ ಬಿಗಿದಿದ್ದಾರೆ. ಅಷ್ಟೇ ಅಲ್ಲ, ಮುಸ್ಲಿಮರು ರಾಮ ಮಂದಿರಕ್ಕೆ ಬೆಂಬಲಿಸಿ ಹಿಂದೂಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಳ್ಳಬೇಕು ಎಂದಿದ್ದಾರೆ. ಏನಿದರ ಅರ್ಥ? ಸಾಬರು ಅಯೋಧ್ಯೆಯಲ್ಲಿ ರಾಮ ಮಂದಿರ ಆಗದಿದ್ದರೆ ಗಂಡಾಂತರಕ್ಕೆ ಸಿಲುಕಲಿದ್ದಾರೆಂದಾ? ಹಿಂದೂತ್ವದ ದಾದಾಗಿರಿಗೆ ಶರಣಾಗದಿದ್ದರೆ ಉಳಿಗಾಲವಿಲ್ಲವೆಂದಾ? ಸಾತ್ವಿಕ ಸಂತ ತಾನೆಂದೂ ತೋರಿಸಿಕೊಳ್ಳಲು ತಿಣಕಾಡುವ ಪೇಜಾವರರ ಮಾತುಗಾರಿಕೆ ಯಾವ ಹಿಂದೂ ಭಯೋತ್ಪಾಕ ಕಾವಿ ಅಥವಾ ಖಾದಿ ಪುಂಡರ ಭಾಷಣಕ್ಕೆ ಕಮ್ಮಿಯಿದೆ?!

ಜನಾಗ್ರಹ ಸಭೆ ಚುನಾವಣಾ ರಾಜಕೀಯ ಅಲ್ಲ ಅನ್ನುತ್ತಲೇ ಬಿಜೆಪಿ ಪರ ಪರೋಕ್ಷವಾಗಿ ಬಹಿರಂಗ ಪ್ರಚಾರ ಪೇಜಾವರ ಸ್ವಾಮಿ ಮಾಡಿದ್ದಾರೆ. ಬಿಜೆಪಿ ರಾಮ ಮಂದಿರಕ್ಕೆ ಸಂಪೂರ್ಣ ಬೆಂಬಲ ಕೊಡಬೇಕೆಂದು ಹೇಳಿರುವುದೇ ವಿಕಟ ವ್ಯಂಗ್ಯ! ಲೋಕಸಭೆ ಸ್ಥಾನ ತ್ಯಜಿಸಲು ರಾಮ ಮಂದಿರಕ್ಕಾಗಿ ಬಿಜೆಪಿ ಸಂಸದರು ರೆಡಿಯಾಗಬೇಕೆಂದು ಹೇಳಿದ್ದಾರೆ. ಬರೀ ಆರು ತಿಂಗಳು ಬಾಕಿಯಿರುವಾಗ ಚೆಡ್ಡಿ ಎಂಪಿಗಳಿಗೆ ರಾಜೀನಾಮೆ ಕೊಡಿಯೆಂದು ಪೇಜಾವರರು ಹೇಳೋದು ಬಿಜೆಪಿಯನ್ನು ತಾರೀಫು ಮಾಡುವ ತಂತ್ರಗಾರಿಕೆಯಿಂದಷ್ಟೇ. ರಾಮನ ಹೆಸರಲ್ಲಿ ಪ್ರಧಾನಿಯಾದ ಮೋದಿ ನಾಲ್ಕುವರೆ ವರ್ಷದಿಂದ ಏಕೆ ರಾಮನಿಗೊಂದು ನೆಲೆಕೊಡುವ ಕೃತಜ್ಞತಾ ಭಾವದಿಂದ ಪ್ರಾಮಾಣಿಕ ಕೆಲಸ ಮಾಡಲಿಲ್ಲ ಎಂದು ಕೇಳುವ ಗಟ್ಸ್ ಪೇಜಾವರರೇಕೆ ತೋರಿಸುತ್ತಿಲ್ಲ?

ಹಿಂದೂತ್ವದ ದಿವಾಳಿಕೋರತನಕ್ಕೆ ಪೇಜಾವರರು ಸಂಕೇತವಾಗುತ್ತಿರುವುದು ದುರಂತ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...