HomeUncategorizedಪೌರತ್ವ ತಿದ್ದುಪಡಿ ಮಸೂದೆ :ಮೋದಿ ಟ್ವೀಟ್ ಗೆ ಕಾಂಗ್ರೆಸ್ ವ್ಯಂಗ್ಯ

ಪೌರತ್ವ ತಿದ್ದುಪಡಿ ಮಸೂದೆ :ಮೋದಿ ಟ್ವೀಟ್ ಗೆ ಕಾಂಗ್ರೆಸ್ ವ್ಯಂಗ್ಯ

- Advertisement -
- Advertisement -

ಅಸ್ಸಾಂ ಜನರ ರಾಜಕೀಯ, ಭಾಷಿಕ, ಸಾಂಸ್ಕೃತಿ ಮತ್ತು ಭೂಮಿ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ಅಸ್ಸಾಂ ರಾಜ್ಯದ ನನ್ನ ಅಣ್ಣಂದಿರು ಮತ್ತು ಅಕ್ಕಂದಿರಿಗೆ ನಾನು ಖಚಿತ ಭರವಸೆ ನೀಡುತ್ತೇವೆ. ಯಾವುದೇ ಕಾರಣಕ್ಕು ನೀವು ಚಿಂತೆಪಡುವ ಅಗತ್ಯವಿಲ್ಲ.ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾಗಿದ್ದರೂ ನಾನು ನಿಮ್ಮ ಹಕ್ಕುಗಳು, ಗುರುತು ಮತ್ತು ಸುಂದರವಾದ ಸಾಂಸ್ಕೃತಿಕತೆಯಿಂದ ಹೊರಗಿಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟ್ ಗೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಅಸ್ಸಾಂ ರಾಜ್ಯದಲ್ಲಿ ಇಂಟರ್ ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ ನಮ್ಮ ಅಣ್ಣಂದಿರು ಮತ್ತು ಅಕ್ಕಂದಿರು ನಿಮ್ಮ ಟ್ವೀಟ್ ಓದಲು ಆಗುತ್ತಿಲ್ಲ ಮೋದೀಜಿ, ಇದನ್ನು ನೀವು ಮರೆತಿದ್ದೀರಾ ಎಂದು ವ್ಯಂಗ್ಯ ಮಾಡಿದೆ.

ಅಸ್ಸಾಂ ಜನರಿಗೆ ಲಭ್ಯವಾಗಬೇಕಿದ್ದ ಇಂಟರ್ ನೆಟ್ ಸೇವೆಗಳನ್ನು ಕಡಿತ ಮಾಡಿರುವುದು. ಇದು ನಿಮಗೆ ಗೊತ್ತಿಲ್ಲವೇ ಎಂದು ಕಾಂಗ್ರೆಸ್ ತನ್ನ ಬ್ಲಾಗ್ ನಲ್ಲಿ ಬರೆದುಕೊಂಡಿದೆ.

ಮತ್ತೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ ಕೇಂದ್ರ ಸರ್ಕಾರ ಮತ್ತು ನಾನು ಅಸ್ಸಾಂ ಜನರ ರಾಜಕೀಯ, ಭಾಷಿಕ, ಸಾಂಸ್ಕೃತಿಕ ಮತ್ತು ಭೂಮಿ ಹಕ್ಕುಗಳನ್ನು ಸಂವಿಧಾನಬದ್ಧವಾಗಿ ರಕ್ಷಿಸಲು ಸಿದ್ದರಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ಮಂಡನೆ ಮತ್ತು ಅಂಗೀಕಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಅಸ್ಸಾಂನಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ಹಿನ್ನೆಲೆಯಲ್ಲ ಇಡೀ ಅಸ್ಸೋಂ ರಾಜ್ಯಾದ್ಯಂತ ಎರಡು ದಿನಗಳಿಂದ ಇಂಟರ್ ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ.

ಮತ್ತೊಂದೆಡೆ ರಾಜ್ಯದಲ್ಲಿ ಕರ್ಪ್ಯೂ ಹೇರಲಾಗಿದೆ. ಇದೇ ವೇಳೆ ಕಾಂಗ್ರೆಸ್ ರಾಜ್ಯ ಘಟಕ ಇಂದು ಬಂದ್ ಗೆ ಕರೆ ನೀಡಿದೆ. ಸೇನೆ ಪ್ರಮುಖ ಸ್ಥಳಗಳಲ್ಲಿ ಪಥಸಚಲನ ನಡೆಸಿದೆ. ಬಿಜೆಪಿ ಸಂಸದ ಕ್ವೀನ್ ಓಜಾ ಮಾತನಾಡಿ, ಈಗಿನ ಸನ್ನಿವೇಶದಲ್ಲಿ ಜನ ಚಿಂತಿತರಾಗಿದ್ದಾರೆ. ಗೊಂದಲಕ್ಕೆ ಒಳಗಾಗಿದ್ದಾರೆ. ನಾಳೆ ಏನಾಗೊತ್ತದೊ ಗೊತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈ ಸಂಬಂಧ ಜನರು ತಪ್ಪಾಗಿ ತಿಳಿದಿದ್ದಾರೆ. ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...