Homeಅಂಕಣಗಳುಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

ಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

- Advertisement -
- Advertisement -

| ಗೌರಿ ಲಂಕೇಶ್ |
23 ಸೆಪ್ಟೆಂಬರ್, 2009 (ಸಂಪಾದಕೀಯದಿಂದ)

ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರತಿಭೆಯನ್ನು ಗುರುತಿಸುವುದಾಗಲಿ, ಅದನ್ನು ಪ್ರೋತ್ಸಾಹಿಸಿ ಬೆಳೆಸುವುದಾಗಲಿ ಗೊತ್ತಿಲ್ಲ ಎಂಬುದಕ್ಕೆ ಈ ಬಾರಿ ರಾಷ್ಟ್ರೀಯ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗಳನ್ನು ಪಡೆದಿರುವ ಪ್ರಕಾಶ್ ರೈ ಮತ್ತು ಉಮಾಶ್ರೀಯವರೇ ಉತ್ತಮ ಉದಾಹರಣೆಗಳು.

ಇಂಗ್ಲಿಷ್‍ನಲ್ಲಿ ‘Think out of the box’ ಎಂಬ ಜಾಣ್ಣುಡಿ ಇದೆ. ಇದರರ್ಥ ಸಾಂಪ್ರದಾಯಿಕವಾಗಿ ಯೋಚಿಸುವ ಬದಲಾಗಿ ಹೊಸ ರೀತಿಯಲ್ಲಿ, ಸೃಜನಾತ್ಮಕವಾಗಿ ಮತ್ತು ಬುದ್ಧಿವಂತಿಕೆಯಿಂದ ಚಿಂತಿಸಿ ಕ್ರಿಯಾಶೀಲರಾಗುವುದು. ಆದರೆ ಕನ್ನಡ ಚಿತ್ರರಂಗದವರಿಗೆ ಕ್ಲೀಷೆ, ಫಾರ್ಮುಲಾ, ರಿಮೇಕ್ ತರಹದ ಸಿದ್ಧ ತಂತ್ರಗಳ ಚೌಕಟ್ಟನ್ನು ಮೀರುವ ಕ್ರಿಯಾಶೀಲತೆಯೇ ಇಲ್ಲದಂತಾಗಿದೆ. ಆದ್ದರಿಂದಲೇ ಪಕ್ಕದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳ ಚಿತ್ರರಂಗಗಳಲ್ಲಿ ಸಾಧ್ಯವಾಗುತ್ತಿರುವ ಹೊಸ ಬಗೆಯ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳು ನಮ್ಮವರಿಂದ ಸಾಧ್ಯವಾಗುತ್ತಿಲ್ಲ.

ಇದಕ್ಕೊಂದು ಉದಾಹರಣೆ ಕೊಡಬಹುದು. ಕಳೆದ ವರ್ಷ ‘ಅಭಿಯುಂ ನಾನುಂ’ (ಅಭಿ ಮತ್ತು ನಾನು) ಎಂಬ ಚಿತ್ರವನ್ನು ತಮಿಳಿನಲ್ಲಿ ನಿರ್ಮಿಸಿ-ನಟಿಸಿದ್ದರು ಪ್ರಕಾಶ್ ರೈ. ತಂದೆ ಮತ್ತು ಮಗಳ ನಡುವಿನ ಸಂಬಂಧವನ್ನು ಕುರಿತ ಆ ಸಿನಿಮಾ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮನ್ನಣೆ ಪಡೆದಿತ್ತು. ಆ ಚಿತ್ರವನ್ನು ಕನ್ನಡದಲ್ಲಿ ರಿಮೇಕ್ ಮಾಡಬೇಕೆಂದು ಹಲವರು ಯೋಚಿಸಿದರಾದರೂ ಕನ್ನಡದವರೇ ಆದ ಪ್ರಕಾಶ್ ಬದಲಾಗಿ ತಂದೆಯ ಪಾತ್ರದಲ್ಲಿ ವಿಷ್ಣುವರ್ಧನ್ ಅವರನ್ನು ಹಾಕಿದರೆ ವಾಸಿ ಎಂದು ಭಾವಿಸಿದರು. ಅದಕ್ಕೆ ಅವರು ನೀಡಿದ ಕಾರಣ “ಪ್ರಕಾಶ್ ರೈಗೆ ಕನ್ನಡದಲ್ಲಿ ಮಾರ್ಕೆಟ್ ಇಲ್ಲ” ಎಂಬುದು.

ಅಂದಹಾಗೆ ‘ಮುಂಗಾರುಮಳೆ’ಯ ಮುನ್ನ ನಟ ಗಣೇಶನಿಗಾಗಲೀ, ‘ದುನಿಯಾ’ ಮುನ್ನ ವಿಜಯ್‍ಗಾಗಲಿ, ‘ನಂದಾ ಲವ್ಸ್ ನಂದಿತಾ’ ಮುನ್ನ ಯೋಗೇಶ್ ಅರ್ಥಾತ್ ಲೂಸ್ ಮಾದನಿಗಾಗಲಿ’ ಯಾವ ಮಾರುಕಟ್ಟೆ ಇತ್ತು? ಇಂತಹ ಪ್ರಶ್ನೆಗಳ ಬಗ್ಗೆ ಗಾಂಧಿನಗರ ಯೋಚಿಸುವುದೇ ಇಲ್ಲ. ಚಿತ್ರವೊಂದರ ಯಶಸ್ಸಿಗೆ ಮಾರುಕಟ್ಟೆ ಮುಖ್ಯ ಎಂಬುದನ್ನು ಒಪ್ಪಿಕೊಂಡರೂ ಅದರೊಂದಿಗೆ ಚಿತ್ರದ ಕಥೆ, ಅದರ ನಿರೂಪಣಾ ಶೈಲಿ ಮತ್ತು ಸದಭಿರುಚಿಯೂ ಅಷ್ಟೇ ಮುಖ್ಯ ಎಂಬುದನ್ನು ಪರಿಗಣಿಸಲೇಬೇಕು. ಈಗ ಆ ಚಿತ್ರವನ್ನು ಪ್ರಕಾಶ್ ರೈ ಸ್ವತಃ ನಿರ್ಮಿಸಿ, ನಿರ್ದೇಶಿಸಿ ನಟಿಸಲು ಹೊರಟಿದ್ದಾರೆ ಎನ್ನುವುದು ಬೇರೆ ಮಾತು.

ಪ್ರಕಾಶ್ ರೈಗೆ ರಾಷ್ಟ್ರಪ್ರಶಸ್ತಿ ಘೋಷಣೆಯಾದಾಗ ನಮ್ಮ ಮಾಧ್ಯಮಗಳು ಅದು ಕನ್ನಡಿಗರಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಸಂದ ಗೌರವ ಎಂಬಂತೆ ಬಿಂಬಿಸಿದ್ದವು. ಆದರೆ ಎರಡು ದಶಕಗಳಿಂದ ಇವತ್ತಿನವರೆಗೂ ಕನ್ನಡ ಚಿತ್ರರಂಗ ಪ್ರಕಾಶ್ ರೈ ಎಂಬ ನಟನನ್ನು ತಿರಸ್ಕರಿಸುತ್ತಲೇ ಬಂದಿದೆ ಎಂಬುದು ವಾಸ್ತವ. 90ರ ದಶಕದ ಆರಂಭದಲ್ಲಿ ನಟನೆಯನ್ನೇ ತನ್ನ ಉಸಿರಾಗಿಸಿಕೊಂಡು ಅವಕಾಶಗಳಿಗಾಗಿ ಪರದಾಡುತ್ತಿದ್ದ ಪ್ರಕಾಶ್ ರೈ ಆಗಿನಿಂದಲೂ ನನಗೆ ಪರಿಚಯ.

ಒಂದು ಬಿಳಿ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಮಾತ್ರ ಹೊಂದಿದ್ದ ಪ್ರಕಾಶ್ ಮಿತ್ರರ ಬಟ್ಟೆ ಧರಿಸಿ ಮಿಂಚುತ್ತಿದ್ದುದ್ದು, ಗೆಳೆಯರೇ ನಾಟಕಗಳಲ್ಲಿ ಅವಕಾಶ ನೀಡದಿದ್ದಾಗ ಗಲಾಟೆ ಮಾಡಿದ್ದು, ಒಂದು ಹೊತ್ತಿನ ಊಟ ಸಿಗುತ್ತದೆಂದು ಚಿಕ್ಕಪುಟ್ಟ ಪಾತ್ರಗಳಿಗೆ ಡಬ್ ಮಾಡುತ್ತಿದ್ದದ್ದು, ಜೇಬಿನಲ್ಲಿ ಕಾಸಿಲ್ಲದೇ ‘ನಟರಾಜ್ ಎಕ್ಸ್‍ಪ್ರೆಸ್’ನಲ್ಲಿ ಓಡಾಡುತ್ತಿದ್ದುದು ಎಲ್ಲವೂ ನನಗೆ ನೆನಪಿದೆ. ಹಾಗಾಗಿ ಖ್ಯಾತ ನಿರ್ದೇಶಕ ಬಾಲಚಂದರ್ ಅವರು ಪ್ರಕಾಶನಿಗೆ ಅವಕಾಶ ಕೊಟ್ಟಾಗ ಅದರ ಬಗ್ಗೆ ಊರಿಗೆಲ್ಲಾ ಢಂಗೂರ ಸಾರಿ ಚೆನ್ನೈಗೆ ಹೋದ ಪ್ರಕಾಶ್ ಆನಂತರ ತೆಲುಗು ಸಿನಿಮಾಗಳಲ್ಲೂ ಖ್ಯಾತಿ ಪಡೆದಿದ್ದು, ಮಣಿರತ್ನಂ ಅವರ ‘ಇರುವರ್’ ಚಿತ್ರದಲ್ಲಿ ಕರುಣಾನಿಧಿಯ ಪಾತ್ರ ಮಾಡಿ ಜನಪ್ರಿಯತೆ ಪಡೆದದ್ದು, ಅದರೆಲ್ಲದರ ಮಧ್ಯೆಯೂ ಕನ್ನಡ ಚಿತ್ರರಂಗದೊಂದಿಗೆ ಸಂಪರ್ಕ ಇಟ್ಟುಕೊಂಡಿರಬೇಕೆಂದು ನಮ್ಮವರು ನೀಡಿದ ಪಾತ್ರಗಳಲ್ಲೂ ನಟಿಸಿದ್ದು, ಗಿರೀಶ್ ಕಾರ್ನಾಡ್ ಬರೆದಿರುವ ನಾಗಾಭರಣ ನಿರ್ದೇಶನದ ‘ನಾಗಮಂಡಲ’ದಲ್ಲಿ ಅದ್ಭುತವಾಗಿ ನಟಿಸಿದ್ದರೂ ರಾಜ್ಯ ಪ್ರಶಸ್ತಿಯಿಂದ ವಂಚಿತನಾಗಿ ಹಲುಬಿದ್ದು… ಎಲ್ಲವೂ ನೆನಪಿದೆ. ಅಪ್ಪಟ ಕನ್ನಡಿಗನಾದ ಪ್ರಕಾಶ್ ಇವತ್ತು ಇಲ್ಲಿ ಮಾರುಕಟ್ಟೆ ಹೊಂದಿರದೆ ತಮಿಳಿನ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆಂದರೆ ಅದು ಆತನ ಪ್ರತಿಭೆಗೆ ಸಂದ ಗೌರವ ಮಾತ್ರವಲ್ಲ, ಕನ್ನಡ ಚಿತ್ರರಂಗಕ್ಕಾದ ಮುಖಭಂಗವೂ ಹೌದು ಎಂದೇ ಭಾವಿಸಬಹುದು. ನಮ್ಮ ಚಿತ್ರರಂಗದಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಪರಂಪರೆ ವಿಸ್ತಾರಗೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...