Homeಅಂಕಣಗಳುಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

ಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

- Advertisement -
- Advertisement -

| ಗೌರಿ ಲಂಕೇಶ್ |
23 ಸೆಪ್ಟೆಂಬರ್, 2009 (ಸಂಪಾದಕೀಯದಿಂದ)

ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರತಿಭೆಯನ್ನು ಗುರುತಿಸುವುದಾಗಲಿ, ಅದನ್ನು ಪ್ರೋತ್ಸಾಹಿಸಿ ಬೆಳೆಸುವುದಾಗಲಿ ಗೊತ್ತಿಲ್ಲ ಎಂಬುದಕ್ಕೆ ಈ ಬಾರಿ ರಾಷ್ಟ್ರೀಯ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗಳನ್ನು ಪಡೆದಿರುವ ಪ್ರಕಾಶ್ ರೈ ಮತ್ತು ಉಮಾಶ್ರೀಯವರೇ ಉತ್ತಮ ಉದಾಹರಣೆಗಳು.

ಇಂಗ್ಲಿಷ್‍ನಲ್ಲಿ ‘Think out of the box’ ಎಂಬ ಜಾಣ್ಣುಡಿ ಇದೆ. ಇದರರ್ಥ ಸಾಂಪ್ರದಾಯಿಕವಾಗಿ ಯೋಚಿಸುವ ಬದಲಾಗಿ ಹೊಸ ರೀತಿಯಲ್ಲಿ, ಸೃಜನಾತ್ಮಕವಾಗಿ ಮತ್ತು ಬುದ್ಧಿವಂತಿಕೆಯಿಂದ ಚಿಂತಿಸಿ ಕ್ರಿಯಾಶೀಲರಾಗುವುದು. ಆದರೆ ಕನ್ನಡ ಚಿತ್ರರಂಗದವರಿಗೆ ಕ್ಲೀಷೆ, ಫಾರ್ಮುಲಾ, ರಿಮೇಕ್ ತರಹದ ಸಿದ್ಧ ತಂತ್ರಗಳ ಚೌಕಟ್ಟನ್ನು ಮೀರುವ ಕ್ರಿಯಾಶೀಲತೆಯೇ ಇಲ್ಲದಂತಾಗಿದೆ. ಆದ್ದರಿಂದಲೇ ಪಕ್ಕದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳ ಚಿತ್ರರಂಗಗಳಲ್ಲಿ ಸಾಧ್ಯವಾಗುತ್ತಿರುವ ಹೊಸ ಬಗೆಯ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳು ನಮ್ಮವರಿಂದ ಸಾಧ್ಯವಾಗುತ್ತಿಲ್ಲ.

ಇದಕ್ಕೊಂದು ಉದಾಹರಣೆ ಕೊಡಬಹುದು. ಕಳೆದ ವರ್ಷ ‘ಅಭಿಯುಂ ನಾನುಂ’ (ಅಭಿ ಮತ್ತು ನಾನು) ಎಂಬ ಚಿತ್ರವನ್ನು ತಮಿಳಿನಲ್ಲಿ ನಿರ್ಮಿಸಿ-ನಟಿಸಿದ್ದರು ಪ್ರಕಾಶ್ ರೈ. ತಂದೆ ಮತ್ತು ಮಗಳ ನಡುವಿನ ಸಂಬಂಧವನ್ನು ಕುರಿತ ಆ ಸಿನಿಮಾ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮನ್ನಣೆ ಪಡೆದಿತ್ತು. ಆ ಚಿತ್ರವನ್ನು ಕನ್ನಡದಲ್ಲಿ ರಿಮೇಕ್ ಮಾಡಬೇಕೆಂದು ಹಲವರು ಯೋಚಿಸಿದರಾದರೂ ಕನ್ನಡದವರೇ ಆದ ಪ್ರಕಾಶ್ ಬದಲಾಗಿ ತಂದೆಯ ಪಾತ್ರದಲ್ಲಿ ವಿಷ್ಣುವರ್ಧನ್ ಅವರನ್ನು ಹಾಕಿದರೆ ವಾಸಿ ಎಂದು ಭಾವಿಸಿದರು. ಅದಕ್ಕೆ ಅವರು ನೀಡಿದ ಕಾರಣ “ಪ್ರಕಾಶ್ ರೈಗೆ ಕನ್ನಡದಲ್ಲಿ ಮಾರ್ಕೆಟ್ ಇಲ್ಲ” ಎಂಬುದು.

ಅಂದಹಾಗೆ ‘ಮುಂಗಾರುಮಳೆ’ಯ ಮುನ್ನ ನಟ ಗಣೇಶನಿಗಾಗಲೀ, ‘ದುನಿಯಾ’ ಮುನ್ನ ವಿಜಯ್‍ಗಾಗಲಿ, ‘ನಂದಾ ಲವ್ಸ್ ನಂದಿತಾ’ ಮುನ್ನ ಯೋಗೇಶ್ ಅರ್ಥಾತ್ ಲೂಸ್ ಮಾದನಿಗಾಗಲಿ’ ಯಾವ ಮಾರುಕಟ್ಟೆ ಇತ್ತು? ಇಂತಹ ಪ್ರಶ್ನೆಗಳ ಬಗ್ಗೆ ಗಾಂಧಿನಗರ ಯೋಚಿಸುವುದೇ ಇಲ್ಲ. ಚಿತ್ರವೊಂದರ ಯಶಸ್ಸಿಗೆ ಮಾರುಕಟ್ಟೆ ಮುಖ್ಯ ಎಂಬುದನ್ನು ಒಪ್ಪಿಕೊಂಡರೂ ಅದರೊಂದಿಗೆ ಚಿತ್ರದ ಕಥೆ, ಅದರ ನಿರೂಪಣಾ ಶೈಲಿ ಮತ್ತು ಸದಭಿರುಚಿಯೂ ಅಷ್ಟೇ ಮುಖ್ಯ ಎಂಬುದನ್ನು ಪರಿಗಣಿಸಲೇಬೇಕು. ಈಗ ಆ ಚಿತ್ರವನ್ನು ಪ್ರಕಾಶ್ ರೈ ಸ್ವತಃ ನಿರ್ಮಿಸಿ, ನಿರ್ದೇಶಿಸಿ ನಟಿಸಲು ಹೊರಟಿದ್ದಾರೆ ಎನ್ನುವುದು ಬೇರೆ ಮಾತು.

ಪ್ರಕಾಶ್ ರೈಗೆ ರಾಷ್ಟ್ರಪ್ರಶಸ್ತಿ ಘೋಷಣೆಯಾದಾಗ ನಮ್ಮ ಮಾಧ್ಯಮಗಳು ಅದು ಕನ್ನಡಿಗರಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಸಂದ ಗೌರವ ಎಂಬಂತೆ ಬಿಂಬಿಸಿದ್ದವು. ಆದರೆ ಎರಡು ದಶಕಗಳಿಂದ ಇವತ್ತಿನವರೆಗೂ ಕನ್ನಡ ಚಿತ್ರರಂಗ ಪ್ರಕಾಶ್ ರೈ ಎಂಬ ನಟನನ್ನು ತಿರಸ್ಕರಿಸುತ್ತಲೇ ಬಂದಿದೆ ಎಂಬುದು ವಾಸ್ತವ. 90ರ ದಶಕದ ಆರಂಭದಲ್ಲಿ ನಟನೆಯನ್ನೇ ತನ್ನ ಉಸಿರಾಗಿಸಿಕೊಂಡು ಅವಕಾಶಗಳಿಗಾಗಿ ಪರದಾಡುತ್ತಿದ್ದ ಪ್ರಕಾಶ್ ರೈ ಆಗಿನಿಂದಲೂ ನನಗೆ ಪರಿಚಯ.

ಒಂದು ಬಿಳಿ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಮಾತ್ರ ಹೊಂದಿದ್ದ ಪ್ರಕಾಶ್ ಮಿತ್ರರ ಬಟ್ಟೆ ಧರಿಸಿ ಮಿಂಚುತ್ತಿದ್ದುದ್ದು, ಗೆಳೆಯರೇ ನಾಟಕಗಳಲ್ಲಿ ಅವಕಾಶ ನೀಡದಿದ್ದಾಗ ಗಲಾಟೆ ಮಾಡಿದ್ದು, ಒಂದು ಹೊತ್ತಿನ ಊಟ ಸಿಗುತ್ತದೆಂದು ಚಿಕ್ಕಪುಟ್ಟ ಪಾತ್ರಗಳಿಗೆ ಡಬ್ ಮಾಡುತ್ತಿದ್ದದ್ದು, ಜೇಬಿನಲ್ಲಿ ಕಾಸಿಲ್ಲದೇ ‘ನಟರಾಜ್ ಎಕ್ಸ್‍ಪ್ರೆಸ್’ನಲ್ಲಿ ಓಡಾಡುತ್ತಿದ್ದುದು ಎಲ್ಲವೂ ನನಗೆ ನೆನಪಿದೆ. ಹಾಗಾಗಿ ಖ್ಯಾತ ನಿರ್ದೇಶಕ ಬಾಲಚಂದರ್ ಅವರು ಪ್ರಕಾಶನಿಗೆ ಅವಕಾಶ ಕೊಟ್ಟಾಗ ಅದರ ಬಗ್ಗೆ ಊರಿಗೆಲ್ಲಾ ಢಂಗೂರ ಸಾರಿ ಚೆನ್ನೈಗೆ ಹೋದ ಪ್ರಕಾಶ್ ಆನಂತರ ತೆಲುಗು ಸಿನಿಮಾಗಳಲ್ಲೂ ಖ್ಯಾತಿ ಪಡೆದಿದ್ದು, ಮಣಿರತ್ನಂ ಅವರ ‘ಇರುವರ್’ ಚಿತ್ರದಲ್ಲಿ ಕರುಣಾನಿಧಿಯ ಪಾತ್ರ ಮಾಡಿ ಜನಪ್ರಿಯತೆ ಪಡೆದದ್ದು, ಅದರೆಲ್ಲದರ ಮಧ್ಯೆಯೂ ಕನ್ನಡ ಚಿತ್ರರಂಗದೊಂದಿಗೆ ಸಂಪರ್ಕ ಇಟ್ಟುಕೊಂಡಿರಬೇಕೆಂದು ನಮ್ಮವರು ನೀಡಿದ ಪಾತ್ರಗಳಲ್ಲೂ ನಟಿಸಿದ್ದು, ಗಿರೀಶ್ ಕಾರ್ನಾಡ್ ಬರೆದಿರುವ ನಾಗಾಭರಣ ನಿರ್ದೇಶನದ ‘ನಾಗಮಂಡಲ’ದಲ್ಲಿ ಅದ್ಭುತವಾಗಿ ನಟಿಸಿದ್ದರೂ ರಾಜ್ಯ ಪ್ರಶಸ್ತಿಯಿಂದ ವಂಚಿತನಾಗಿ ಹಲುಬಿದ್ದು… ಎಲ್ಲವೂ ನೆನಪಿದೆ. ಅಪ್ಪಟ ಕನ್ನಡಿಗನಾದ ಪ್ರಕಾಶ್ ಇವತ್ತು ಇಲ್ಲಿ ಮಾರುಕಟ್ಟೆ ಹೊಂದಿರದೆ ತಮಿಳಿನ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆಂದರೆ ಅದು ಆತನ ಪ್ರತಿಭೆಗೆ ಸಂದ ಗೌರವ ಮಾತ್ರವಲ್ಲ, ಕನ್ನಡ ಚಿತ್ರರಂಗಕ್ಕಾದ ಮುಖಭಂಗವೂ ಹೌದು ಎಂದೇ ಭಾವಿಸಬಹುದು. ನಮ್ಮ ಚಿತ್ರರಂಗದಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಪರಂಪರೆ ವಿಸ್ತಾರಗೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....