Homeಅಂಕಣಗಳುಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

ಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

- Advertisement -
- Advertisement -

| ಗೌರಿ ಲಂಕೇಶ್ |
23 ಸೆಪ್ಟೆಂಬರ್, 2009 (ಸಂಪಾದಕೀಯದಿಂದ)

ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರತಿಭೆಯನ್ನು ಗುರುತಿಸುವುದಾಗಲಿ, ಅದನ್ನು ಪ್ರೋತ್ಸಾಹಿಸಿ ಬೆಳೆಸುವುದಾಗಲಿ ಗೊತ್ತಿಲ್ಲ ಎಂಬುದಕ್ಕೆ ಈ ಬಾರಿ ರಾಷ್ಟ್ರೀಯ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗಳನ್ನು ಪಡೆದಿರುವ ಪ್ರಕಾಶ್ ರೈ ಮತ್ತು ಉಮಾಶ್ರೀಯವರೇ ಉತ್ತಮ ಉದಾಹರಣೆಗಳು.

ಇಂಗ್ಲಿಷ್‍ನಲ್ಲಿ ‘Think out of the box’ ಎಂಬ ಜಾಣ್ಣುಡಿ ಇದೆ. ಇದರರ್ಥ ಸಾಂಪ್ರದಾಯಿಕವಾಗಿ ಯೋಚಿಸುವ ಬದಲಾಗಿ ಹೊಸ ರೀತಿಯಲ್ಲಿ, ಸೃಜನಾತ್ಮಕವಾಗಿ ಮತ್ತು ಬುದ್ಧಿವಂತಿಕೆಯಿಂದ ಚಿಂತಿಸಿ ಕ್ರಿಯಾಶೀಲರಾಗುವುದು. ಆದರೆ ಕನ್ನಡ ಚಿತ್ರರಂಗದವರಿಗೆ ಕ್ಲೀಷೆ, ಫಾರ್ಮುಲಾ, ರಿಮೇಕ್ ತರಹದ ಸಿದ್ಧ ತಂತ್ರಗಳ ಚೌಕಟ್ಟನ್ನು ಮೀರುವ ಕ್ರಿಯಾಶೀಲತೆಯೇ ಇಲ್ಲದಂತಾಗಿದೆ. ಆದ್ದರಿಂದಲೇ ಪಕ್ಕದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳ ಚಿತ್ರರಂಗಗಳಲ್ಲಿ ಸಾಧ್ಯವಾಗುತ್ತಿರುವ ಹೊಸ ಬಗೆಯ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳು ನಮ್ಮವರಿಂದ ಸಾಧ್ಯವಾಗುತ್ತಿಲ್ಲ.

ಇದಕ್ಕೊಂದು ಉದಾಹರಣೆ ಕೊಡಬಹುದು. ಕಳೆದ ವರ್ಷ ‘ಅಭಿಯುಂ ನಾನುಂ’ (ಅಭಿ ಮತ್ತು ನಾನು) ಎಂಬ ಚಿತ್ರವನ್ನು ತಮಿಳಿನಲ್ಲಿ ನಿರ್ಮಿಸಿ-ನಟಿಸಿದ್ದರು ಪ್ರಕಾಶ್ ರೈ. ತಂದೆ ಮತ್ತು ಮಗಳ ನಡುವಿನ ಸಂಬಂಧವನ್ನು ಕುರಿತ ಆ ಸಿನಿಮಾ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮನ್ನಣೆ ಪಡೆದಿತ್ತು. ಆ ಚಿತ್ರವನ್ನು ಕನ್ನಡದಲ್ಲಿ ರಿಮೇಕ್ ಮಾಡಬೇಕೆಂದು ಹಲವರು ಯೋಚಿಸಿದರಾದರೂ ಕನ್ನಡದವರೇ ಆದ ಪ್ರಕಾಶ್ ಬದಲಾಗಿ ತಂದೆಯ ಪಾತ್ರದಲ್ಲಿ ವಿಷ್ಣುವರ್ಧನ್ ಅವರನ್ನು ಹಾಕಿದರೆ ವಾಸಿ ಎಂದು ಭಾವಿಸಿದರು. ಅದಕ್ಕೆ ಅವರು ನೀಡಿದ ಕಾರಣ “ಪ್ರಕಾಶ್ ರೈಗೆ ಕನ್ನಡದಲ್ಲಿ ಮಾರ್ಕೆಟ್ ಇಲ್ಲ” ಎಂಬುದು.

ಅಂದಹಾಗೆ ‘ಮುಂಗಾರುಮಳೆ’ಯ ಮುನ್ನ ನಟ ಗಣೇಶನಿಗಾಗಲೀ, ‘ದುನಿಯಾ’ ಮುನ್ನ ವಿಜಯ್‍ಗಾಗಲಿ, ‘ನಂದಾ ಲವ್ಸ್ ನಂದಿತಾ’ ಮುನ್ನ ಯೋಗೇಶ್ ಅರ್ಥಾತ್ ಲೂಸ್ ಮಾದನಿಗಾಗಲಿ’ ಯಾವ ಮಾರುಕಟ್ಟೆ ಇತ್ತು? ಇಂತಹ ಪ್ರಶ್ನೆಗಳ ಬಗ್ಗೆ ಗಾಂಧಿನಗರ ಯೋಚಿಸುವುದೇ ಇಲ್ಲ. ಚಿತ್ರವೊಂದರ ಯಶಸ್ಸಿಗೆ ಮಾರುಕಟ್ಟೆ ಮುಖ್ಯ ಎಂಬುದನ್ನು ಒಪ್ಪಿಕೊಂಡರೂ ಅದರೊಂದಿಗೆ ಚಿತ್ರದ ಕಥೆ, ಅದರ ನಿರೂಪಣಾ ಶೈಲಿ ಮತ್ತು ಸದಭಿರುಚಿಯೂ ಅಷ್ಟೇ ಮುಖ್ಯ ಎಂಬುದನ್ನು ಪರಿಗಣಿಸಲೇಬೇಕು. ಈಗ ಆ ಚಿತ್ರವನ್ನು ಪ್ರಕಾಶ್ ರೈ ಸ್ವತಃ ನಿರ್ಮಿಸಿ, ನಿರ್ದೇಶಿಸಿ ನಟಿಸಲು ಹೊರಟಿದ್ದಾರೆ ಎನ್ನುವುದು ಬೇರೆ ಮಾತು.

ಪ್ರಕಾಶ್ ರೈಗೆ ರಾಷ್ಟ್ರಪ್ರಶಸ್ತಿ ಘೋಷಣೆಯಾದಾಗ ನಮ್ಮ ಮಾಧ್ಯಮಗಳು ಅದು ಕನ್ನಡಿಗರಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಸಂದ ಗೌರವ ಎಂಬಂತೆ ಬಿಂಬಿಸಿದ್ದವು. ಆದರೆ ಎರಡು ದಶಕಗಳಿಂದ ಇವತ್ತಿನವರೆಗೂ ಕನ್ನಡ ಚಿತ್ರರಂಗ ಪ್ರಕಾಶ್ ರೈ ಎಂಬ ನಟನನ್ನು ತಿರಸ್ಕರಿಸುತ್ತಲೇ ಬಂದಿದೆ ಎಂಬುದು ವಾಸ್ತವ. 90ರ ದಶಕದ ಆರಂಭದಲ್ಲಿ ನಟನೆಯನ್ನೇ ತನ್ನ ಉಸಿರಾಗಿಸಿಕೊಂಡು ಅವಕಾಶಗಳಿಗಾಗಿ ಪರದಾಡುತ್ತಿದ್ದ ಪ್ರಕಾಶ್ ರೈ ಆಗಿನಿಂದಲೂ ನನಗೆ ಪರಿಚಯ.

ಒಂದು ಬಿಳಿ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಮಾತ್ರ ಹೊಂದಿದ್ದ ಪ್ರಕಾಶ್ ಮಿತ್ರರ ಬಟ್ಟೆ ಧರಿಸಿ ಮಿಂಚುತ್ತಿದ್ದುದ್ದು, ಗೆಳೆಯರೇ ನಾಟಕಗಳಲ್ಲಿ ಅವಕಾಶ ನೀಡದಿದ್ದಾಗ ಗಲಾಟೆ ಮಾಡಿದ್ದು, ಒಂದು ಹೊತ್ತಿನ ಊಟ ಸಿಗುತ್ತದೆಂದು ಚಿಕ್ಕಪುಟ್ಟ ಪಾತ್ರಗಳಿಗೆ ಡಬ್ ಮಾಡುತ್ತಿದ್ದದ್ದು, ಜೇಬಿನಲ್ಲಿ ಕಾಸಿಲ್ಲದೇ ‘ನಟರಾಜ್ ಎಕ್ಸ್‍ಪ್ರೆಸ್’ನಲ್ಲಿ ಓಡಾಡುತ್ತಿದ್ದುದು ಎಲ್ಲವೂ ನನಗೆ ನೆನಪಿದೆ. ಹಾಗಾಗಿ ಖ್ಯಾತ ನಿರ್ದೇಶಕ ಬಾಲಚಂದರ್ ಅವರು ಪ್ರಕಾಶನಿಗೆ ಅವಕಾಶ ಕೊಟ್ಟಾಗ ಅದರ ಬಗ್ಗೆ ಊರಿಗೆಲ್ಲಾ ಢಂಗೂರ ಸಾರಿ ಚೆನ್ನೈಗೆ ಹೋದ ಪ್ರಕಾಶ್ ಆನಂತರ ತೆಲುಗು ಸಿನಿಮಾಗಳಲ್ಲೂ ಖ್ಯಾತಿ ಪಡೆದಿದ್ದು, ಮಣಿರತ್ನಂ ಅವರ ‘ಇರುವರ್’ ಚಿತ್ರದಲ್ಲಿ ಕರುಣಾನಿಧಿಯ ಪಾತ್ರ ಮಾಡಿ ಜನಪ್ರಿಯತೆ ಪಡೆದದ್ದು, ಅದರೆಲ್ಲದರ ಮಧ್ಯೆಯೂ ಕನ್ನಡ ಚಿತ್ರರಂಗದೊಂದಿಗೆ ಸಂಪರ್ಕ ಇಟ್ಟುಕೊಂಡಿರಬೇಕೆಂದು ನಮ್ಮವರು ನೀಡಿದ ಪಾತ್ರಗಳಲ್ಲೂ ನಟಿಸಿದ್ದು, ಗಿರೀಶ್ ಕಾರ್ನಾಡ್ ಬರೆದಿರುವ ನಾಗಾಭರಣ ನಿರ್ದೇಶನದ ‘ನಾಗಮಂಡಲ’ದಲ್ಲಿ ಅದ್ಭುತವಾಗಿ ನಟಿಸಿದ್ದರೂ ರಾಜ್ಯ ಪ್ರಶಸ್ತಿಯಿಂದ ವಂಚಿತನಾಗಿ ಹಲುಬಿದ್ದು… ಎಲ್ಲವೂ ನೆನಪಿದೆ. ಅಪ್ಪಟ ಕನ್ನಡಿಗನಾದ ಪ್ರಕಾಶ್ ಇವತ್ತು ಇಲ್ಲಿ ಮಾರುಕಟ್ಟೆ ಹೊಂದಿರದೆ ತಮಿಳಿನ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆಂದರೆ ಅದು ಆತನ ಪ್ರತಿಭೆಗೆ ಸಂದ ಗೌರವ ಮಾತ್ರವಲ್ಲ, ಕನ್ನಡ ಚಿತ್ರರಂಗಕ್ಕಾದ ಮುಖಭಂಗವೂ ಹೌದು ಎಂದೇ ಭಾವಿಸಬಹುದು. ನಮ್ಮ ಚಿತ್ರರಂಗದಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಪರಂಪರೆ ವಿಸ್ತಾರಗೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...