Homeರಾಜಕೀಯಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

ಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

- Advertisement -
- Advertisement -

ಪ್ರಿಯಾಂಕ ಗಾಂಧಿಯವರ ಅದಿಕೃತ ರಾಜಕೀಯ ಪ್ರವೇಶದ ಘೋಷಣೆಯ ನಂತರ, ವಿಕೃತ ಬುದ್ಧಿಯ ‘ಭಕ್ತರು’ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಅವಹೇಳನ ಮಾಡಲು ಯತ್ನಿಸುತ್ತಿದ್ದಾರೆ. ಅದ್ಯ ಸಾಮಾಜಿಕ ಜಾಲತಾಣಗಳಲ್ಲಿ ಅಂತಹ ಒಂದು ವಿಡಿಯೋ ಹರಿದಾಡುತ್ತಿದ್ದು ಸುಳ್ಳನ್ನು ಕಕ್ಕುತ್ತ ಸಾಗಿದೆ.
ಮಿಥ್ಯ: ‘ಪಾನಮತ್ತ ನಾಯಕಿ ಕಾಂಗ್ರೆಸ್‍ಗೆ ಹೊಸ ಭರವಸೆ ಇರಬಹುದು, ಆದರೆ ಈ ದೇಶದ ಜನರಿಗಲ್ಲ’ ಎಂಬ ಕ್ಯಾಪ್ಸನ್‍ನೊಂದಿಗೆ ಪ್ರಿಯಾಂಕಾ ಗಾಂಧಿಯ ಒಂದು ವಿಡಿಯೋವನ್ನು ಫೇಸ್‍ಬುಕ್, ವ್ಯಾಟ್ಸಾಪ್, ಟ್ವಿಟರ್‍ಗಳಲ್ಲಿ ಅಮಲೇರಿದ ‘ಭಕ್ತರು’ ತೇಲಿಬಿಟ್ಟಿದ್ದಾರೆ. ‘humlog’ ಎನ್ನುವ ಫೇಸ್‍ಬುಕ್ ಈ ಸುದ್ದಿ ಮೂಲವಾಗಿದ್ದು, ಇದಕ್ಕೆ ಈಗ 98 ಸಾವಿರಕ್ಕೂ ಹೆಚ್ಚು ವ್ಯೂವ್‍ಗಳಿದ್ದು, 3,800ಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಹಮಲೋಗ್ ಫೇಸಬುಕ್ ಪೇಜ್‍ನ ವಿಕೃತ ಬುದ್ಧಿ

ವಿಮಲ್ ಶರ್ಮಾ ಎಂಬ ವ್ಯಕ್ತಿಯ ಫೇಸ್‍ಬುಕ್ ಪೇಜ್ ಕೂಡ ಇದನ್ನೇ ಹರಡುತ್ತ, ‘ಪ್ರತಿದಿನ ಸಂಜೆ ಕುಡಿಯುವವರ ಮೇಲೆ ಕಾಂಗ್ರೆಸ್‍ಗೆ ಭರವಸೆ ಇರಬಹುದು, ದೇಶದ ಜನರಿಗಲ್ಲ. ಒಬ್ಬ ಮದ್ಯವ್ಯಸನಿ ನಾಯಕಿಯಾಗಲು ಸಾಧ್ಯವಿಲ್ಲ….’ ಎಂದೆಲ್ಲ ಬರೆಯಲಾಗಿದೆ.
ಸತ್ಯ: ಇದು ವಿಕೃತ ಮನಸ್ಸಿನ ಬಲಪಂಥಿಯರ ಕೆಲಸವೇ ಎನ್ನುವುದರಲ್ಲಿ ಎರಡು ಮಾತೇ ಇಲ್ಲ. ಪ್ರಚಲಿತದಲ್ಲಿರುವ ವಿಡಿಯೋದಲ್ಲಿ ಪ್ರಿಯಾಂಕಾ ಗಾಂಧಿ ಸಿಟ್ಟಿನಿಂದ ಗದರಿದ್ದು ನಿಜ. ಆದರೆ, ಈ ವಿಡಿಯೋ 9 ತಿಂಗಳ ಹಳೆಯದಾಗಿದ್ದು, ಇದನ್ನು ಏಪ್ರಿಲ್ 18, 2018ರಂದು ಎಎನ್‍ಐ ಕೂಡ ಈ ವಿಡಿಯೋವನ್ನು ಟ್ವೀಟ್ ಮಾಡಿದ್ದು, ‘ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿ ಕೋಪಿತರಾದ ಪ್ರಿಯಾಂಕಾ ಗಾಂಧಿ’ ಎಂಬ ಕ್ಯಾಪ್ಸನ್ ನೀಡಲಾಗಿದ್ದು, ‘ಪರೆಸ್ಪರ ತಳ್ಳಾಡಬೇಡಿ. ನೀವು ಯಾವ ಕಾರಣಕ್ಕೆ ಇಲ್ಲಿ ಸೇರಿದ್ದಿರಿ ಎಂಬುದು ನಿಮಗೆ ಅರಿವಿರಲಿ. ನಿಮಗೆ ಸರಿಯಾಗಿ ವರ್ತಸಲಾಗದಿದ್ದರೆ ಮನೆಗೆ ಹೋಗಿ. ಈಗ ಎಲ್ಲರೂ ಅಲ್ಲಿವರೆಗೆ ಸಾಲಾಗಿ ಸಂಯಮದಿಂದ ನಡೆಯಿರಿ’ ಎಂದು ಗದರಿದರು ಎಂದು ವಿವರಿಸಲಾಗಿದೆ.
ಕಥುವಾ ಮತ್ತು ಉನ್ನಾವೊ ರೇಪ್ ಪ್ರಕರಣಗಳನ್ನು ಖಂಡಿಸಿ, ಕಾಂಗ್ರೆಸ್ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಯೋಜಿಸಿದ್ದ ಮಧ್ಯರಾತ್ರಿಯ

ವಿಮಲ್ ಶರ್ಮಾ ಎನ್ನುವ ಕೊಳಕನ ಫೇಕ್ ಪೋಸ್ಟ್

ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿನ ಘಟನೆಯಿದು. ಆನರು ಏಕಾಏಕಿ ತಳ್ಳಾಟ ಆರಂಭಿಸಿದಾಗ, ಪ್ರಿಯಾಂಕಾ ಗಾಂಧಿ ಮೇಲಿನಂತೆ ಗದರಿದ್ದಾರೆ. ಈ ಘಟನೆಯನ್ನು ಇಂಡಿಯಾ ಟುದೇ, ಹಿಂದೂಸ್ತಾನ್ ಟೈಮ್ಸ್‍ಗಳು ಕೂಡ ವರದಿ ಮಾಡಿದ್ದವಲ್ಲದೇ ಜನರ ನೂಕಾಟ, ಕಿಡಿಗೇಡಿತನ ತಡೆಯಲು ಪೊಲೀಸರೂ ಶ್ರಮ ಪಡಬೇಕಾಗಿತು. ತಳ್ಳಾಟದಲ್ಲಿ ಪ್ರಿಯಾಂಕಾರ ಮಕ್ಕಳನ್ನೂ ನೂಕಲಾಗಿತ್ತು. ಪಾನಮತ್ತರಾಗಿದ್ದ ಕೆಲವರು ಬ್ಯಾರಿಕೇಡ್‍ಗಳನ್ನು ಕೀಳಲೂ ಯತ್ನಿಸಿದರು ಎಂದು ವರದಿ ಮಾಡಲಾಗಿತ್ತು.
ವಿಡಿಯೋ ವಿಳಾಸ: https://twitter.com/i/status/984515031621668864

ಇದು ಅಸಲಿ ಸತ್ಯ. ಆದರೆ ಕೊಳಕು ಬುದ್ಧಿಯ ಭಕ್ತರು ಈ ವಿಡಿಯೋಕ್ಕೆ ಅವಹೇಳನದ ಕ್ಯಾಪ್ಸನ್ ಹಾಕಿ ಸುಳ್ಳು ಕತೆಯನ್ನು ಹರಡತೊಡಗಿದ್ದಾರೆ. ಕರ್ನಾಟಕದಲ್ಲಿ ವಿಕೃತ ವಿಷಭಟ್ಟನೂ ಕೂಡ ಗೌರಿ ಲಂಕೇಶರ ಕೊಲೆಯ ನಂತೆ ಇದೇ ಮಾದರಿಯಲ್ಲಿ ತನ್ನ ಹಲ್ಕಾ ಬುದ್ಧಿ ತೋರಿಸಿದ್ದ. ಈಗ ಈತನನ್ನು ಹಂಪಿ ಕನ್ನಡ ವಿವಿ ಕಾರ್ಯಕ್ರಮಕ್ಕೆ ಬರದಂತೆ ಓಡಿಸಲಾಗಿದೆ.
ಪ್ರಿಯಾಂಕಾ ಕುರಿತ ಮೇಲಿನ ಫೇಕ್‍ಸ್ಟೋರಿಯನ್ನು ಅಲ್ಟ್‍ನ್ಯೂಸ್, ಡೆಬ್‍ಕೂಪ್, ಬಿಬಿಸಿ (ಹಿಂದಿ)ಗಳು ಬಸ್ರ್ಟ್ ಮಾಡಿದ್ದು ‘ಭಕ್ತರ’ ವಿತಂಡ ಬುದ್ದಿಯನ್ನು ತೆರೆದು ಇಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...