Homeಮುಖಪುಟಪ್ರಿಯಾಂಕಾ ವರ್ಸಸ್ ಮೋದಿ : ಸಿನೀಮಿಯ ಸಂಘರ್ಷ ಮತ್ತು ದೂರದೃಷ್ಟಿ

ಪ್ರಿಯಾಂಕಾ ವರ್ಸಸ್ ಮೋದಿ : ಸಿನೀಮಿಯ ಸಂಘರ್ಷ ಮತ್ತು ದೂರದೃಷ್ಟಿ

- Advertisement -
- Advertisement -

| ನೀಲಗಾರ |

ಅಲಹಾಬಾದ್‍ನಿಂದ ವಾರಣಾಸಿಗೆ ಗಂಗಾನದಿಯಲ್ಲಿ ದೋಣಿ ಪಯಣಿಸಿದ್ದು ಕೇವಲ 100 ಕಿ.ಮೀ.ಗಳಷ್ಟೇ ಆಗಿರಲಿಲ್ಲ. ಅದು ಭಾರತದ ರಾಜಕಾರಣದಲ್ಲಿ ಆದ ಬಹುಮುಖ್ಯ ಪ್ರಯಾಣವಾಗಿತ್ತು. ಅಲ್ಲಿನ ಫೋಟೋಗಳನ್ನು ನೋಡಿದರೆ ಅದು ಸುಲಭಕ್ಕೆ ಅರ್ಥವಾಗುತ್ತದೆ. ಆದರೆ, ಅದರ ಹಿಂದೆ ಇನ್ನೂ ಅನೇಕ ಮಹತ್ವದ ಸಂಗತಿಗಳಿವೆ.

  1. ಅಲಹಾಬಾದ್‍ನಿಂದ ಪ್ರಯಾಣ ಆರಂಭಿಸುವ ಮುನ್ನ ಆಕೆ ತಂಗಿದ್ದು, ಸ್ವರಾಜ್ ಭವನದಲ್ಲಿ. ಅದು ಜವಹರಲಾಲ್ ನೆಹರೂ ಅವರ ಮನೆ. ಅದೇ ಮನೆಯಲ್ಲಿ ಇಂದಿರಾಗಾಂಧಿ ಹುಟ್ಟಿದ್ದು. ಅಷ್ಟೇ ಅಲ್ಲದೇ, ಅದೇ ಸ್ವರಾಜ್ ಭವನದಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬಹುಮುಖ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತು. ಸ್ವತಂತ್ರ ಸಂಗ್ರಾಮದ ಪರಂಪರೆಯನ್ನು ನಮಗಿಂತ ಹೆಚ್ಚು ಯಾರು ತಮ್ಮದೆಂದುಕೊಳ್ಳಲು ಸಾಧ್ಯ ಎಂಬ ಸಂದೇಶ ರವಾನಿಸುವ ಉದ್ದೇಶ ಅವರಿಗಿತ್ತೋ ಇಲ್ಲವೋ ಗೊತ್ತಿಲ್ಲ. ಏಕೆಂದರೆ ಆ ದಿನ ಪ್ರಿಯಾಂಕಾ ಮಾಡಿದ ಟ್ವೀಟ್‍ನಲ್ಲಿ ಅಜ್ಜಿ ಇಂದಿರಾಗಾಂಧಿಯ ವಾರಸುದಾರಿಕೆಯನ್ನು ಹೊತ್ತುಕೊಳ್ಳುವ ಮಾತುಗಳಿದ್ದವು. ‘ಸ್ವರಾಜ್ ಭವನದ ಅಂಗಳದಲ್ಲಿ ಕುಳಿತರೆ ನನ್ನ ಅಜ್ಜಿ ಹುಟ್ಟಿದ ಕೊಠಡಿ ಕಾಣುತ್ತಿದೆ. ನನ್ನಜ್ಜಿ ಮಲಗುವ ಮುನ್ನ ನನಗೆ ಜೋನ್ ಆಫ್ ಆರ್ಕ್ ಕಥೆಗಳನ್ನು ಹೇಳಿ, ಭಯ ಬಿಟ್ಟು ಧೈರ್ಯಶಾಲಿಯಾಗು ಎಲ್ಲವೂ ಸರಿ ಹೋಗಿಬಿಡುತ್ತದೆ ಎಂದು ಹೇಳುತ್ತಿದ್ದಳು’ ಎಂಬ ಟ್ವೀಟ್ ಅದು.

  1. ತ್ರಿವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಿ ಹೊರಟ ಪ್ರಿಯಾಂಕಾ, ವಿದ್ಯಾರ್ಥಿಗಳೊಂದಿಗೆ ‘ಬೋಟ್ ಪೆ ಚರ್ಚಾ’ ಮಾಡಿದರು. ಇದರಲ್ಲಿ ಮೋದಿ ನಡೆಸಿದ ಈವೆಂಟ್‍ನ ಪುನರಾವರ್ತನೆ ಅಲ್ಲದೇ ಇನ್ನೇನೂ ಹೆಚ್ಚುಗಾರಿಕೆ ಇರಲಿಲ್ಲ.
  2. ಆದರೆ, ಬಡೇ ಹನುಮಾನ್ ದೇವಸ್ಥಾನದಿಂದ ಆರಂಭಿಸಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ನಡೆಸಿದ ಪೂಜೆಯವರೆಗೆ ಎಲ್ಲಾ ಕಡೆ ಕಾಂಗ್ರೆಸ್ ಪ್ರದರ್ಶಿಸಲಿಚ್ಛಿಸುತ್ತಿರುವ ‘ಧಾರ್ಮಿಕ ಒಲವಿನ’ ಪ್ರದರ್ಶನ ಇದ್ದೇ ಇತ್ತು. ಗಂಗಾ ಆರತಿಯೂ ಸೇರಿ ಇವೆಲ್ಲಾ ಆಚರಣೆಗಳು ಮೋದಿ ಅಥವಾ ರಾಹುಲ್ ಗಾಂಧಿಯ ಭಕ್ತಿ ಪ್ರದರ್ಶನಕ್ಕಿಂತ ಸಹಜವಾಗಿದ್ದವು. ರಾಹುಲ್ ಇದನ್ನು ತೋರಿಕೆಗೆ ಮಾಡುವಂತೆ, ಮೋದಿ ಅಹಂಕಾರದಿಂದ ಪ್ರದರ್ಶನಕ್ಕಾಗಿ ಮಾಡುವಂತೆ ಕಾಣುವ ಭಕ್ತಿ, ಆಚರಣೆಗಳು, ಪ್ರಿಯಾಂಕಾ ಮಾಡಿದಾಗ ಸಹಜ ಭಕ್ತಿಯಂತೆ ಕಾಣುತ್ತಿದ್ದವು. 3 ದಿನಗಳ ಪ್ರಯಾಣದಲ್ಲಿ ಮಧ್ಯೆ ಒಮ್ಮೆ ದರ್ಗಾಗೂ ಹೋಗಿದ್ದದ್ದು ಗಮನೀಯವಾದುದು.
  3. ಅಷ್ಟೇನೂ ದೊಡ್ಡದಲ್ಲದ, ಐಷಾರಾಮಿ ಸೌಲಭ್ಯಗಳಿಲ್ಲದ ಮತ್ತು ತ್ರಿವರ್ಣದ ಖಾದಿ ಬಟ್ಟೆಗಳಿಂದ ಸಿಂಗರಿಸಲ್ಪಟ್ಟಿದ್ದ ಬೋಟಿನಲ್ಲಿ ಪ್ರಿಯಾಂಕಾ ಪಯಣಿಸಿದರು. ನಿಧಾನಕ್ಕೆ ಜನರು ಇದನ್ನು ಮೋದಿ ಪಯಣಿಸಿದ ಸೀ ಪ್ಲೇನ್ ಜೊತೆ ಹೋಲಿಸಬಹುದು.
  4. ಈ ಅವಧಿಯಲ್ಲೇ ಬಂದ ಹೋಳಿ ಹಬ್ಬವನ್ನು ಪ್ರಿಯಾಂಕಾ ಅಲ್ಲಿನ ಸಾಮಾನ್ಯ ಜನರ ಜೊತೆ ಸೇರಿ ಆಚರಿಸಿದರು.
  5. ಅಂತಿಮವಾಗಿ ವಾರಣಾಸಿ ತಲುಪಿದ ನಂತರ ದೇವಸ್ಥಾನಗಳ ಭೇಟಿಯ ನಂತರ ನಡೆಸಿದ ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಮಾತಾಡಿದ್ದು ಮೋದಿಯವರು ತಮ್ಮ ಕ್ಷೇತ್ರಕ್ಕೆ ಕೊಟ್ಟಿದ್ದ ಭರವಸೆಗಳ ಕುರಿತು. ಅದರ ಪಟ್ಟಿಯನ್ನು ಇಟ್ಟುಕೊಂಡು ಅತ್ಯಂತ ಸರಳವಾಗಿ ಜನರ ಜೊತೆ ಸಂಭಾಷಣೆಯನ್ನು ಶುರು ಮಾಡಿದರು. ‘ಇದೇನು?’, ‘ಇದು ಮೋದಿಯವರು ಕೊಟ್ಟಿದ್ದ ಭರವಸೆಗಳು’, ‘ಇದು ಈಡೇರಿದೆಯಾ?’ “ಇಲ್ಲಾ”, ‘ಇದು?’ “ಇಲ್ಲಾ”, ‘ಇದು’ “ಅದೂ ಇಲ್ಲ”. ಮಾತಾಡುತ್ತಿರುವುದು ಎದುರಿಗಿರುವ ಕೆಲವು ಸಾವಿರ ಜನರಿಗಾದರೂ, ಅದು ಉತ್ತರ ಪ್ರದೇಶಕ್ಕೆ ಕೊಡಬೇಕಾದ ಸಂದೇಶ ಕೊಡುತ್ತದೆಂಬುದು ಆಕೆಗೆ ಗೊತ್ತಿತ್ತು.
  6. ಎಲ್ಲಕ್ಕಿಂತ ಮುಖ್ಯವಾಗಿ, ಮೇಲಿನ ಫೋಟೋದಲ್ಲಿರುವಂತೆ, ದೇವರ ತಿಲಕ ಮತ್ತು ವಿಭೂತಿಯನ್ನು ಹಚ್ಚಿಕೊಂಡು ಪ್ರಿಯಾಂಕಾ ವೇದಿಕೆಯ ಮೇಲೆ ಆಸೀನವಾಗಿದ್ದು. ಜೊತೆಗೆ ಕೊರಳಿಗೆ ರುದ್ರಾಕ್ಷಿ ಮಾಲೆಗಳು. ಅದೇ ವೇಷದಲ್ಲೇ ವೇದಿಕೆಯ ಭಾಷಣವನ್ನೂ ಮಾಡಿದ್ದು. ಇಂತಹ ವೇಷವನ್ನು ಮೊದಲು ಹಾಕಿದ್ದು ಮೋದಿ. ಆಗ, ದೇಶದ ಗಣನೀಯ ಸಂಖ್ಯೆಯ ಜನರ ಪುಣ್ಯಕ್ಷೇತ್ರದಿಂದ ಒಬ್ಬ ಹೊಸ ಸಮರ್ಥ ಸಾಧು ಮೇಲೆದ್ದು ಬಂದಂತೆ ಕಾಣಲು ಬೇಕಾದ ಕೊರಿಯೋಗ್ರಫಿ ನಡೆದಿತ್ತು. ಈಗ? ಈಗ ಸಿನೆಮಾಗಳಲ್ಲಿ ಕಾಣುವಂತಹ ಒಂದು ಸೀನ್ ಸೃಷ್ಟಿಸಲಾಗಿದೆ. ಧರ್ಮದ ಸೋಗಿನಲ್ಲಿ ವಂಚಿಸುವ ದುಷ್ಟನೊಬ್ಬನನ್ನು ಸಂಹರಿಸಲು ಎಳೆಯ ಬಾಲಕಿಯೊಬ್ಬಳು ದೈವ ಕೃಪೆಯನ್ನು ಪಡೆದುಕೊಂಡು ಎದುರು ನಿಂತರೆ ಹೇಗಿರುತ್ತೋ ಆ ರೀತಿಯ ಸೀನ್. ಪ್ರಿಯಾಂಕಾ ವೇದಿಕೆಯ ಮಧ್ಯಭಾಗದಲ್ಲಿ ಕೂತು ಆಶೀರ್ವದಿಸುವಂತೆ ಒಮ್ಮೆ ಕೈ ಮುಂದೆ ಮಾಡುತ್ತಾರೆ. ಅದು ಕಾಂಗ್ರೆಸ್ಸಿನ ಚಿಹ್ನೆಯೆಂಬುದೂ ಕಾರಣವಿರಬಹುದು. ಆದರೆ, ಆಕೆಯಲ್ಲಿ ದುರ್ಗೆ, ಕಾಳಿ ಇತ್ಯಾದಿಗಳನ್ನು ಸಾಮಾನ್ಯ ಜನರು ಕಾಣುವ ಸಾಧ್ಯತೆ ಇದೆ.
  7. ಭಾರತದ ರಾಜಕಾರಣದಲ್ಲಿ ಇಂತಹ ಇನ್ನೂ ಏನೇನನ್ನು ನಾವು ನೋಡಬೇಕಾಗುತ್ತೋ ಗೊತ್ತಿಲ್ಲ. ಆದರೆ, ಇಲ್ಲಿನ ಚುನಾವಣೆಗಳ ರಂಗನ್ನು ವಿಪರೀತವಾಗಿ ಏರಿಸಿದ ನರೇಂದ್ರ ಮೋದಿಗೆ ಅದೇ ರೀತಿಯಲ್ಲಿ ಹೋಳಿ ಎರಚುವ ಸಾಮಥ್ರ್ಯ ನಮಗೂ ಇದೆ ಎಂದು ವಿರೋಧ ಪಕ್ಷವು ತೋರಿಸುತ್ತಿದೆ. ಅಂತಹ ಮುಖಾಮುಖಿಯಲ್ಲಿ ರಾಹುಲ್‍ಗಿಂತ ಪ್ರಿಯಾಂಕಾಗೆ ಹೆಚ್ಚಿನ ಸಾಧ್ಯತೆಗಳಿವೆ ಎಂಬುದನ್ನು ಈ ‘ಗಂಗಾಪಯಣ’ ತೋರಿಸಿದೆ.
  8. ಹಾಗೆ ನೋಡಿದರೆ ರಾಹುಲ್‍ಗಾಂಧಿ ರೈತರ ಸಂಕಷ್ಟ, ನಿರುದ್ಯೋಗ, ರಾಫೇಲ್ ಭ್ರಷ್ಟಾಚಾರ ಇತ್ಯಾದಿ ಅಸಲಿ ಸಂಗತಿಗಳ ಕುರಿತು ಮಾತನಾಡುತ್ತಿರುವುದಕ್ಕೇ ಹೆಚ್ಚಿನ ಮಹತ್ವ ಇರಬೇಕಿತ್ತು. ಆದರೆ, ರಾಜಕಾರಣವು ಒಂದು ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವ ವಿವಿಧ ಸಿನೀಮಿಯ ದೃಶ್ಯಗಳಿಂದ ಜನರನ್ನು ಮರುಳುಗೊಳಿಸುವ ಆಟವಾಡುತ್ತದೆ. ಇಂತಹ ಬಿಂಬಗಳು ಬಹುಬೇಗನೇ ಅಸಲಿ ಸಮಸ್ಯೆಗಳನ್ನು ಮಸುಕುಗೊಳಿಸುತ್ತವೆ. ಅದೇನೇ ಇರಲಿ, ಈ ಆಟದಲ್ಲಿ ಪ್ರಿಯಾಂಕಾ ಪ್ರವೇಶದಿಂದ ಮೋದಿ ಭಕ್ತ ಪಡೆಯು ಗಲಿಬಿಲಿಗೊಳ್ಳುವುದರಲ್ಲಿ ಸಂಶಯವಿಲ್ಲ.
  9. ಇಂದಿಗೆ 10 ವರ್ಷಗಳ ನಂತರ ಎಲ್ಲರೂ ಹೌದಲ್ಲಾ ಎಂದುಕೊಳ್ಳಬಹುದಾದ ಇನ್ನೊಂದು ಸಂಗತಿಯಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಸೀಟು ಗಳಿಕೆ ಆಗಲಾರದು. ಪ್ರಿಯಾಂಕಾ ಗಾಂಧಿಯ ರಾಜಕೀಯ ಪ್ರವೇಶವು ಕಾಂಗ್ರೆಸ್ ಪಕ್ಷದ ದೀರ್ಘಕಾಲಿಕ ಹೂಡಿಕೆಯಾಗಿದೆ. 1990ಕ್ಕೆ ಮುಂಚೆ ಉತ್ತರ ಪ್ರದೇಶದ ಮೇಲೆ ಇಟ್ಟುಕೊಂಡಿದ್ದ ಹಿಡಿತವೇ ಆ ಪಕ್ಷಕ್ಕೆ ದೇಶವನ್ನಾಳುವ ಶಕ್ತಿ ತಂದುಕೊಡುತ್ತಿತ್ತು. ಉತ್ತರ ಪ್ರದೇಶದ ಮುಖ್ಯಮಂತ್ರಿ ವಿ.ಪಿ.ಸಿಂಗ್ ನಂತರ ರಾಜೀವ್‍ಗಾಂಧಿ ಸಂಪುಟದಿಂದ ಹೊರನಡೆದ ಮೇಲೆ ಅದು ಕುಸಿಯಿತು. ಅಲ್ಲಿಂದ ಇಲ್ಲಿಯವರೆಗೆ ಕಾಂಗ್ರೆಸ್ ಮತ್ತೆ ಅಲ್ಲಿ ಅಧಿಕಾರಕ್ಕೆ ಬಂದಿಲ್ಲ. ವಿ.ಪಿ.ಸಿಂಗರ ನಂತರ ಬಿಜೆಪಿ, ಎಸ್‍ಪಿ, ಬಿಎಸ್‍ಪಿಗಳ ನಡುವಿನ ಸಂಘರ್ಷದಲ್ಲಿ ಕಾಂಗ್ರೆಸ್ ಮಂಕಾಗುತ್ತಾ ಬಂದಿತ್ತು. ಮರಳಿ ಉತ್ತರ ಪ್ರದೇಶ ಪಡೆದುಕೊಳ್ಳಲು ಬೇಕಾದ ಬಲವಾದ ಅಸ್ತ್ರವಾಗಿ ಪ್ರಿಯಾಂಕಾರನ್ನು ರಂಗಕ್ಕಿಳಿಸಲಾಗಿದೆ. ಈ ಸದ್ಯ ರಂಗಪ್ರವೇಶವಂತೂ ಯಶಸ್ವಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...