Homeಮುಖಪುಟಪ್ರಿಯಾಂಕಾ ವರ್ಸಸ್ ಮೋದಿ : ಸಿನೀಮಿಯ ಸಂಘರ್ಷ ಮತ್ತು ದೂರದೃಷ್ಟಿ

ಪ್ರಿಯಾಂಕಾ ವರ್ಸಸ್ ಮೋದಿ : ಸಿನೀಮಿಯ ಸಂಘರ್ಷ ಮತ್ತು ದೂರದೃಷ್ಟಿ

- Advertisement -
- Advertisement -

| ನೀಲಗಾರ |

ಅಲಹಾಬಾದ್‍ನಿಂದ ವಾರಣಾಸಿಗೆ ಗಂಗಾನದಿಯಲ್ಲಿ ದೋಣಿ ಪಯಣಿಸಿದ್ದು ಕೇವಲ 100 ಕಿ.ಮೀ.ಗಳಷ್ಟೇ ಆಗಿರಲಿಲ್ಲ. ಅದು ಭಾರತದ ರಾಜಕಾರಣದಲ್ಲಿ ಆದ ಬಹುಮುಖ್ಯ ಪ್ರಯಾಣವಾಗಿತ್ತು. ಅಲ್ಲಿನ ಫೋಟೋಗಳನ್ನು ನೋಡಿದರೆ ಅದು ಸುಲಭಕ್ಕೆ ಅರ್ಥವಾಗುತ್ತದೆ. ಆದರೆ, ಅದರ ಹಿಂದೆ ಇನ್ನೂ ಅನೇಕ ಮಹತ್ವದ ಸಂಗತಿಗಳಿವೆ.

  1. ಅಲಹಾಬಾದ್‍ನಿಂದ ಪ್ರಯಾಣ ಆರಂಭಿಸುವ ಮುನ್ನ ಆಕೆ ತಂಗಿದ್ದು, ಸ್ವರಾಜ್ ಭವನದಲ್ಲಿ. ಅದು ಜವಹರಲಾಲ್ ನೆಹರೂ ಅವರ ಮನೆ. ಅದೇ ಮನೆಯಲ್ಲಿ ಇಂದಿರಾಗಾಂಧಿ ಹುಟ್ಟಿದ್ದು. ಅಷ್ಟೇ ಅಲ್ಲದೇ, ಅದೇ ಸ್ವರಾಜ್ ಭವನದಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬಹುಮುಖ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತು. ಸ್ವತಂತ್ರ ಸಂಗ್ರಾಮದ ಪರಂಪರೆಯನ್ನು ನಮಗಿಂತ ಹೆಚ್ಚು ಯಾರು ತಮ್ಮದೆಂದುಕೊಳ್ಳಲು ಸಾಧ್ಯ ಎಂಬ ಸಂದೇಶ ರವಾನಿಸುವ ಉದ್ದೇಶ ಅವರಿಗಿತ್ತೋ ಇಲ್ಲವೋ ಗೊತ್ತಿಲ್ಲ. ಏಕೆಂದರೆ ಆ ದಿನ ಪ್ರಿಯಾಂಕಾ ಮಾಡಿದ ಟ್ವೀಟ್‍ನಲ್ಲಿ ಅಜ್ಜಿ ಇಂದಿರಾಗಾಂಧಿಯ ವಾರಸುದಾರಿಕೆಯನ್ನು ಹೊತ್ತುಕೊಳ್ಳುವ ಮಾತುಗಳಿದ್ದವು. ‘ಸ್ವರಾಜ್ ಭವನದ ಅಂಗಳದಲ್ಲಿ ಕುಳಿತರೆ ನನ್ನ ಅಜ್ಜಿ ಹುಟ್ಟಿದ ಕೊಠಡಿ ಕಾಣುತ್ತಿದೆ. ನನ್ನಜ್ಜಿ ಮಲಗುವ ಮುನ್ನ ನನಗೆ ಜೋನ್ ಆಫ್ ಆರ್ಕ್ ಕಥೆಗಳನ್ನು ಹೇಳಿ, ಭಯ ಬಿಟ್ಟು ಧೈರ್ಯಶಾಲಿಯಾಗು ಎಲ್ಲವೂ ಸರಿ ಹೋಗಿಬಿಡುತ್ತದೆ ಎಂದು ಹೇಳುತ್ತಿದ್ದಳು’ ಎಂಬ ಟ್ವೀಟ್ ಅದು.

  1. ತ್ರಿವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಿ ಹೊರಟ ಪ್ರಿಯಾಂಕಾ, ವಿದ್ಯಾರ್ಥಿಗಳೊಂದಿಗೆ ‘ಬೋಟ್ ಪೆ ಚರ್ಚಾ’ ಮಾಡಿದರು. ಇದರಲ್ಲಿ ಮೋದಿ ನಡೆಸಿದ ಈವೆಂಟ್‍ನ ಪುನರಾವರ್ತನೆ ಅಲ್ಲದೇ ಇನ್ನೇನೂ ಹೆಚ್ಚುಗಾರಿಕೆ ಇರಲಿಲ್ಲ.
  2. ಆದರೆ, ಬಡೇ ಹನುಮಾನ್ ದೇವಸ್ಥಾನದಿಂದ ಆರಂಭಿಸಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ನಡೆಸಿದ ಪೂಜೆಯವರೆಗೆ ಎಲ್ಲಾ ಕಡೆ ಕಾಂಗ್ರೆಸ್ ಪ್ರದರ್ಶಿಸಲಿಚ್ಛಿಸುತ್ತಿರುವ ‘ಧಾರ್ಮಿಕ ಒಲವಿನ’ ಪ್ರದರ್ಶನ ಇದ್ದೇ ಇತ್ತು. ಗಂಗಾ ಆರತಿಯೂ ಸೇರಿ ಇವೆಲ್ಲಾ ಆಚರಣೆಗಳು ಮೋದಿ ಅಥವಾ ರಾಹುಲ್ ಗಾಂಧಿಯ ಭಕ್ತಿ ಪ್ರದರ್ಶನಕ್ಕಿಂತ ಸಹಜವಾಗಿದ್ದವು. ರಾಹುಲ್ ಇದನ್ನು ತೋರಿಕೆಗೆ ಮಾಡುವಂತೆ, ಮೋದಿ ಅಹಂಕಾರದಿಂದ ಪ್ರದರ್ಶನಕ್ಕಾಗಿ ಮಾಡುವಂತೆ ಕಾಣುವ ಭಕ್ತಿ, ಆಚರಣೆಗಳು, ಪ್ರಿಯಾಂಕಾ ಮಾಡಿದಾಗ ಸಹಜ ಭಕ್ತಿಯಂತೆ ಕಾಣುತ್ತಿದ್ದವು. 3 ದಿನಗಳ ಪ್ರಯಾಣದಲ್ಲಿ ಮಧ್ಯೆ ಒಮ್ಮೆ ದರ್ಗಾಗೂ ಹೋಗಿದ್ದದ್ದು ಗಮನೀಯವಾದುದು.
  3. ಅಷ್ಟೇನೂ ದೊಡ್ಡದಲ್ಲದ, ಐಷಾರಾಮಿ ಸೌಲಭ್ಯಗಳಿಲ್ಲದ ಮತ್ತು ತ್ರಿವರ್ಣದ ಖಾದಿ ಬಟ್ಟೆಗಳಿಂದ ಸಿಂಗರಿಸಲ್ಪಟ್ಟಿದ್ದ ಬೋಟಿನಲ್ಲಿ ಪ್ರಿಯಾಂಕಾ ಪಯಣಿಸಿದರು. ನಿಧಾನಕ್ಕೆ ಜನರು ಇದನ್ನು ಮೋದಿ ಪಯಣಿಸಿದ ಸೀ ಪ್ಲೇನ್ ಜೊತೆ ಹೋಲಿಸಬಹುದು.
  4. ಈ ಅವಧಿಯಲ್ಲೇ ಬಂದ ಹೋಳಿ ಹಬ್ಬವನ್ನು ಪ್ರಿಯಾಂಕಾ ಅಲ್ಲಿನ ಸಾಮಾನ್ಯ ಜನರ ಜೊತೆ ಸೇರಿ ಆಚರಿಸಿದರು.
  5. ಅಂತಿಮವಾಗಿ ವಾರಣಾಸಿ ತಲುಪಿದ ನಂತರ ದೇವಸ್ಥಾನಗಳ ಭೇಟಿಯ ನಂತರ ನಡೆಸಿದ ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಮಾತಾಡಿದ್ದು ಮೋದಿಯವರು ತಮ್ಮ ಕ್ಷೇತ್ರಕ್ಕೆ ಕೊಟ್ಟಿದ್ದ ಭರವಸೆಗಳ ಕುರಿತು. ಅದರ ಪಟ್ಟಿಯನ್ನು ಇಟ್ಟುಕೊಂಡು ಅತ್ಯಂತ ಸರಳವಾಗಿ ಜನರ ಜೊತೆ ಸಂಭಾಷಣೆಯನ್ನು ಶುರು ಮಾಡಿದರು. ‘ಇದೇನು?’, ‘ಇದು ಮೋದಿಯವರು ಕೊಟ್ಟಿದ್ದ ಭರವಸೆಗಳು’, ‘ಇದು ಈಡೇರಿದೆಯಾ?’ “ಇಲ್ಲಾ”, ‘ಇದು?’ “ಇಲ್ಲಾ”, ‘ಇದು’ “ಅದೂ ಇಲ್ಲ”. ಮಾತಾಡುತ್ತಿರುವುದು ಎದುರಿಗಿರುವ ಕೆಲವು ಸಾವಿರ ಜನರಿಗಾದರೂ, ಅದು ಉತ್ತರ ಪ್ರದೇಶಕ್ಕೆ ಕೊಡಬೇಕಾದ ಸಂದೇಶ ಕೊಡುತ್ತದೆಂಬುದು ಆಕೆಗೆ ಗೊತ್ತಿತ್ತು.
  6. ಎಲ್ಲಕ್ಕಿಂತ ಮುಖ್ಯವಾಗಿ, ಮೇಲಿನ ಫೋಟೋದಲ್ಲಿರುವಂತೆ, ದೇವರ ತಿಲಕ ಮತ್ತು ವಿಭೂತಿಯನ್ನು ಹಚ್ಚಿಕೊಂಡು ಪ್ರಿಯಾಂಕಾ ವೇದಿಕೆಯ ಮೇಲೆ ಆಸೀನವಾಗಿದ್ದು. ಜೊತೆಗೆ ಕೊರಳಿಗೆ ರುದ್ರಾಕ್ಷಿ ಮಾಲೆಗಳು. ಅದೇ ವೇಷದಲ್ಲೇ ವೇದಿಕೆಯ ಭಾಷಣವನ್ನೂ ಮಾಡಿದ್ದು. ಇಂತಹ ವೇಷವನ್ನು ಮೊದಲು ಹಾಕಿದ್ದು ಮೋದಿ. ಆಗ, ದೇಶದ ಗಣನೀಯ ಸಂಖ್ಯೆಯ ಜನರ ಪುಣ್ಯಕ್ಷೇತ್ರದಿಂದ ಒಬ್ಬ ಹೊಸ ಸಮರ್ಥ ಸಾಧು ಮೇಲೆದ್ದು ಬಂದಂತೆ ಕಾಣಲು ಬೇಕಾದ ಕೊರಿಯೋಗ್ರಫಿ ನಡೆದಿತ್ತು. ಈಗ? ಈಗ ಸಿನೆಮಾಗಳಲ್ಲಿ ಕಾಣುವಂತಹ ಒಂದು ಸೀನ್ ಸೃಷ್ಟಿಸಲಾಗಿದೆ. ಧರ್ಮದ ಸೋಗಿನಲ್ಲಿ ವಂಚಿಸುವ ದುಷ್ಟನೊಬ್ಬನನ್ನು ಸಂಹರಿಸಲು ಎಳೆಯ ಬಾಲಕಿಯೊಬ್ಬಳು ದೈವ ಕೃಪೆಯನ್ನು ಪಡೆದುಕೊಂಡು ಎದುರು ನಿಂತರೆ ಹೇಗಿರುತ್ತೋ ಆ ರೀತಿಯ ಸೀನ್. ಪ್ರಿಯಾಂಕಾ ವೇದಿಕೆಯ ಮಧ್ಯಭಾಗದಲ್ಲಿ ಕೂತು ಆಶೀರ್ವದಿಸುವಂತೆ ಒಮ್ಮೆ ಕೈ ಮುಂದೆ ಮಾಡುತ್ತಾರೆ. ಅದು ಕಾಂಗ್ರೆಸ್ಸಿನ ಚಿಹ್ನೆಯೆಂಬುದೂ ಕಾರಣವಿರಬಹುದು. ಆದರೆ, ಆಕೆಯಲ್ಲಿ ದುರ್ಗೆ, ಕಾಳಿ ಇತ್ಯಾದಿಗಳನ್ನು ಸಾಮಾನ್ಯ ಜನರು ಕಾಣುವ ಸಾಧ್ಯತೆ ಇದೆ.
  7. ಭಾರತದ ರಾಜಕಾರಣದಲ್ಲಿ ಇಂತಹ ಇನ್ನೂ ಏನೇನನ್ನು ನಾವು ನೋಡಬೇಕಾಗುತ್ತೋ ಗೊತ್ತಿಲ್ಲ. ಆದರೆ, ಇಲ್ಲಿನ ಚುನಾವಣೆಗಳ ರಂಗನ್ನು ವಿಪರೀತವಾಗಿ ಏರಿಸಿದ ನರೇಂದ್ರ ಮೋದಿಗೆ ಅದೇ ರೀತಿಯಲ್ಲಿ ಹೋಳಿ ಎರಚುವ ಸಾಮಥ್ರ್ಯ ನಮಗೂ ಇದೆ ಎಂದು ವಿರೋಧ ಪಕ್ಷವು ತೋರಿಸುತ್ತಿದೆ. ಅಂತಹ ಮುಖಾಮುಖಿಯಲ್ಲಿ ರಾಹುಲ್‍ಗಿಂತ ಪ್ರಿಯಾಂಕಾಗೆ ಹೆಚ್ಚಿನ ಸಾಧ್ಯತೆಗಳಿವೆ ಎಂಬುದನ್ನು ಈ ‘ಗಂಗಾಪಯಣ’ ತೋರಿಸಿದೆ.
  8. ಹಾಗೆ ನೋಡಿದರೆ ರಾಹುಲ್‍ಗಾಂಧಿ ರೈತರ ಸಂಕಷ್ಟ, ನಿರುದ್ಯೋಗ, ರಾಫೇಲ್ ಭ್ರಷ್ಟಾಚಾರ ಇತ್ಯಾದಿ ಅಸಲಿ ಸಂಗತಿಗಳ ಕುರಿತು ಮಾತನಾಡುತ್ತಿರುವುದಕ್ಕೇ ಹೆಚ್ಚಿನ ಮಹತ್ವ ಇರಬೇಕಿತ್ತು. ಆದರೆ, ರಾಜಕಾರಣವು ಒಂದು ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವ ವಿವಿಧ ಸಿನೀಮಿಯ ದೃಶ್ಯಗಳಿಂದ ಜನರನ್ನು ಮರುಳುಗೊಳಿಸುವ ಆಟವಾಡುತ್ತದೆ. ಇಂತಹ ಬಿಂಬಗಳು ಬಹುಬೇಗನೇ ಅಸಲಿ ಸಮಸ್ಯೆಗಳನ್ನು ಮಸುಕುಗೊಳಿಸುತ್ತವೆ. ಅದೇನೇ ಇರಲಿ, ಈ ಆಟದಲ್ಲಿ ಪ್ರಿಯಾಂಕಾ ಪ್ರವೇಶದಿಂದ ಮೋದಿ ಭಕ್ತ ಪಡೆಯು ಗಲಿಬಿಲಿಗೊಳ್ಳುವುದರಲ್ಲಿ ಸಂಶಯವಿಲ್ಲ.
  9. ಇಂದಿಗೆ 10 ವರ್ಷಗಳ ನಂತರ ಎಲ್ಲರೂ ಹೌದಲ್ಲಾ ಎಂದುಕೊಳ್ಳಬಹುದಾದ ಇನ್ನೊಂದು ಸಂಗತಿಯಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಸೀಟು ಗಳಿಕೆ ಆಗಲಾರದು. ಪ್ರಿಯಾಂಕಾ ಗಾಂಧಿಯ ರಾಜಕೀಯ ಪ್ರವೇಶವು ಕಾಂಗ್ರೆಸ್ ಪಕ್ಷದ ದೀರ್ಘಕಾಲಿಕ ಹೂಡಿಕೆಯಾಗಿದೆ. 1990ಕ್ಕೆ ಮುಂಚೆ ಉತ್ತರ ಪ್ರದೇಶದ ಮೇಲೆ ಇಟ್ಟುಕೊಂಡಿದ್ದ ಹಿಡಿತವೇ ಆ ಪಕ್ಷಕ್ಕೆ ದೇಶವನ್ನಾಳುವ ಶಕ್ತಿ ತಂದುಕೊಡುತ್ತಿತ್ತು. ಉತ್ತರ ಪ್ರದೇಶದ ಮುಖ್ಯಮಂತ್ರಿ ವಿ.ಪಿ.ಸಿಂಗ್ ನಂತರ ರಾಜೀವ್‍ಗಾಂಧಿ ಸಂಪುಟದಿಂದ ಹೊರನಡೆದ ಮೇಲೆ ಅದು ಕುಸಿಯಿತು. ಅಲ್ಲಿಂದ ಇಲ್ಲಿಯವರೆಗೆ ಕಾಂಗ್ರೆಸ್ ಮತ್ತೆ ಅಲ್ಲಿ ಅಧಿಕಾರಕ್ಕೆ ಬಂದಿಲ್ಲ. ವಿ.ಪಿ.ಸಿಂಗರ ನಂತರ ಬಿಜೆಪಿ, ಎಸ್‍ಪಿ, ಬಿಎಸ್‍ಪಿಗಳ ನಡುವಿನ ಸಂಘರ್ಷದಲ್ಲಿ ಕಾಂಗ್ರೆಸ್ ಮಂಕಾಗುತ್ತಾ ಬಂದಿತ್ತು. ಮರಳಿ ಉತ್ತರ ಪ್ರದೇಶ ಪಡೆದುಕೊಳ್ಳಲು ಬೇಕಾದ ಬಲವಾದ ಅಸ್ತ್ರವಾಗಿ ಪ್ರಿಯಾಂಕಾರನ್ನು ರಂಗಕ್ಕಿಳಿಸಲಾಗಿದೆ. ಈ ಸದ್ಯ ರಂಗಪ್ರವೇಶವಂತೂ ಯಶಸ್ವಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...