HomeUncategorizedಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

ಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ.ರಂಜಿತ್ ಮೇಲಿನ ಮೇಲ್ಜಾತಿ ಮನಸ್ಸಿನ ದಾಳಿ ಮತ್ತು ಬೆದರಿಕೆಗಳನ್ನು ವಿರೋಧಿಸಿ, ಆನ್ ಲೈನ್ ಪಿಟಿಷನ್ ಆರಂಭಿಸಿ 300ಕ್ಕೂ ಹೆಚ್ಚು ಕಲಾವಿದರು ಖ್ಯಾತ ಜನಪ್ರಿಯ ತಮಿಳು ಚಿತ್ರನಿರ್ದೇಶಕ ಪ.ರಂಜಿತ್ ದೃಢವಾಗಿ ಬೆಂಬಲಕ್ಕೆ ನಿಂತಿದ್ದಾರೆ.

ಅಪರೂಪದ ಚಿತ್ರನಿರ್ದೇಶಕ ಪಾ.ರಂಜಿತ್‍ನ ಇತ್ತೀಚಿನ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಚೋಳರ ಕಾಲದ ರಾಜರಾಜ ಚೋಳನ ಆಳ್ವಿಕೆಯಲ್ಲಿ ದಲಿತರ ಮೇಲೆ ದಬ್ಬಾಳಿಕೆ, ದಲಿತರ ಭೂ ಕಬಳಿಕೆ ಮತ್ತು ದಲಿತ ಹೆಣ್ಣುಮಕ್ಕಳನ್ನು ದೇವದಾಸಿ ಮಾಡುವಂತಹ ಘಟನೆಗಳು ನಡೆದಿವೆ… ಇವುಗಳನ್ನೆಲ್ಲ ಸಿನೆಮಾ ಮಾಡಿ ತೋರಿಸಬೇಕು” ಎಂದಿದ್ದರು. ಇದಕ್ಕೆ ಬಾಲಾ ಎನ್ನುವವವರು ಪೋಲಿಸ್ ಸ್ಟೇಶನ್‍ನಲ್ಲಿ “ರಂಜಿತ್ ಅವರು ಮಾಡುತ್ತಿರುವ ಸಿನಿಮಾ, ಸಮಾಜದಲ್ಲಿ ಜಾತಿ ಜಾತಿಗಳ ಮಧ್ಯ ವೈಷಮ್ಯವನ್ನು ಬೆಳೆಸುತ್ತದೆ” ಎನ್ನುವ ಕಾರಣ ಕೊಟ್ಟು ದೂರನ್ನೂ ದಾಖಲಿಸಿದ್ದರು.

ಈ ವಿಷಯದ ಕುರಿತು ಅರ್ಥಪೂರ್ಣ ಮತ್ತು ರಚನಾತ್ಮಕ ಚರ್ಚೆ ಸಂವಾದ ಮಾಡಲು ಸಾಧ್ಯವಿದೆ ಎಂದು collective Coalition for Artist’s Right to Speech ನ ಹೇಳಿಕೆಯಲ್ಲಿ ತಿಳಿಸಿರುವ ಕಲಾವಿದರು, ಆದರೆ ದುರಾದೃಷ್ಟವಶಾತ್ ಇದಕ್ಕೆ ವಿರುದ್ಧವಾಗಿ ಪ.ರಂಜಿತ್ ಅಭಿಪ್ರಾಯದ ಮೇಲೆ ದಾಳಿ ನಡೆಯುತ್ತಿದೆ. ಅಷ್ಟೇ ಅಲ್ಲದೇ ಕೆಲವು ಜಾತಿವಾದಿ ಮನಸ್ಥಿತಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಪ.ರಂಜಿತ್ ವಿರುದ್ಧ ಮಾತಾಡಿ ಅವರ ಮೊಬೈಲ್ ನಂಬರ್ ಅನ್ನು ಹಂಚುವ ಮೂಲಕ ಜೀವ ಬೆದರಿಕೆ ಹಾಕಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಕಲಾವಿದರ ಒಕ್ಕೂಟ ಆರೋಪ ಮಾಡಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಚಿಂತನೆಯ ಬಗ್ಗೆ ನಂಬಿಕೆ ಇರುವುದರಿಂದ, ಸಂಬಂಧಪಟ್ಟ ಕಲಾವಿದನಿಗೆ ಅವರ ವಾಕ್ ಸ್ವಾತಂತ್ರ್ಯದ ಹಕ್ಕು ಅಪಾಯದಲ್ಲಿದ್ದಾಗ ಅವರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ನಾವು ನಂಬುತ್ತೇವೆ” ಎಂದು ಹೇಳಿಕೆ ತಿಳಿಸಿದೆ.

ರಂಜಿತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದನ್ನು ತಡೆಯುವ ಸಲುವಾಗಿ ಈ ಗುಂಪು ಆನ್‍ಲೈನ್ ಅರ್ಜಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ತಿಳಿಸಿದೆ. ಅರ್ಜಿಯಲ್ಲಿ ಮಂಗಳವಾರ ರಾತ್ರಿಯ ವೇಳೆಗೆ 6,300 ಕ್ಕೂ ಹೆಚ್ಚು ಸಹಿಗಳಿವೆ. ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...