Homeಮುಖಪುಟಏನಿದು ಫಿಲ್ಮ್ ಡೈರೆಕ್ಷನ್?

ಏನಿದು ಫಿಲ್ಮ್ ಡೈರೆಕ್ಷನ್?

- Advertisement -
- Advertisement -

| ರಾಜಶೇಖರ್ ಅಕ್ಕಿ |

ನಾನಾಗ ಹೈಸ್ಕೂಲಿನಲ್ಲಿದ್ದೆ, ಒಂದು ಸಿನೆಮಾ ನೋಡಿ ಬಂದ ನಂತರ ನನ್ನ ಒಬ್ಬ ಗೆಳೆಯ ಹೇಳಿದ್ದು, ‘ಪಿಚ್ಚರ್ ಅಷ್ಟು ಚೆನ್ನಾಗಿದ್ದಿಲ್ಲ, ಆದರೆ ಡರೆಕ್ಷನ್ ಮಸ್ತ್ ಇತ್ತು’. ಇದೇನಿದು? ಇದ್ಹೆಂಗೆ ಸಾಧ್ಯ? ಅಭಿನಯ ಅಂದ್ರೆ ಗೊತ್ತು, ಛಾಯಾಗ್ರಹಣ ಗೊತ್ತು, ಸಂಗೀತ ಗೊತ್ತು, ಈ ಡೈರೆಕ್ಷನ್ ಅಂದ್ರೇನು? ಸಿನೆಮಾಗಳನ್ನು ಇಷ್ಟು ಇಷ್ಟ ಪಡುವ ನನಗೆ ಈ ಡೈರೆಕ್ಷನ್ ಅನ್ನೋದೇನು ಎನ್ನೋದು ಗೊತ್ತೇ ಇಲ್ವಲ್ಲ? ನಾನು ಕಣ್ಣು ಪಿಳಿ ಪಿಳಿ ಬಿಟ್ಟು ನೋಡಿದೆ.

ಹಂಗಾದ್ರೆ ಚಲನಚಿತ್ರ ನಿರ್ದೇಶನ ಅಂದ್ರೇನು?
ಚಿತ್ರಕಥೆಯನ್ನು ತೆಗೆದುಕೊಂಡು ದೃಶ್ಯ ಮಾಧ್ಯಮಕ್ಕೆ ಇಳಿಸುವುದೇ ನಿರ್ದೇಶನ ಹಾಗೂ ಅದನ್ನು ದೃಶ್ಯ ಮಾಧ್ಯಮಕ್ಕೆ ಇಳಿಸುವ ಜವಾಬ್ದಾರಿ ಹೊತ್ತವನನ್ನು ನಿರ್ದೇಶಕ ಎನ್ನಬಹುದು. ಅಂದರೆ, ಸ್ಕ್ರಿಪ್ಟ್‍ಅನ್ನು ತೆಗೆದುಕೊಂಡು ಆಯಾ ದೃಶ್ಯಕ್ಕೆ ಬೇಕಾಗಿರುವ ಶಾಟ್‍ಗಳನ್ನು ಆಯ್ಕೆ ಮಾಡಿ ಶೂಟಿಂಗ್ ಮಾಡಿ ಸಂಕಲನ ಮಾಡಿದರೆ ಅದುವೇ ನಿರ್ದೇಶನ.

ಅಷ್ಟೇನಾ? ಹಂಗಂದ್ರೆ, ನನ್ನ ಗೆಳೆಯ ಹೇಳಿದ ಮಾತು, ಡೈರೆಕ್ಷನ್ ಮಸ್ತ್ ಇತ್ತು ಅಂದರೇನು? ನಿರ್ದೇಶನ ಮಸ್ತ್ ಆಗಲು ಏನೆಲ್ಲ ಮಾಡಬೇಕು? ಏನೆಲ್ಲ ಒಳಗೊಂಡಿರುತ್ತೆ ಈ ಚಲನಚಿತ್ರ ನಿರ್ದೇಶನ?

ಸರಳವಾಗಿ ಹೇಳಬೇಕೆಂದರೆ, ಕಥೆಯ, ಚಿತ್ರಕಥೆಯ, ಛಾಯಾಗ್ರಹಣದ, ಅಭಿನಯದ ಮತ್ತು ಸಂಕಲನದ ಆಳವಾದ ಜ್ಞಾನ ನಿರ್ದೇಶಕನಿಗಿರಬೇಕು, ಈ ಎಲ್ಲಾ ವಿಭಾಗಗಳಿಗೂ ನಿರ್ದೇಶಕನೇ ಜವಾಬ್ದಾರ. ಅಂದರೆ ನಿರ್ದೇಶಕ ಬರೀ ಸೂಪರ್‍ವೈಸರ್ ಆಗಿರಬೇಕಾ? ಅಥವಾ ಆಯಾ ದೃಶ್ಯಗಳಲ್ಲಿ ಯಾವ್ಯಾವ ಶಾಟ್ ಬೇಕು ಎಂದು ಛಾಯಾಗ್ರಾಹಕನಿಗೆ ಮತ್ತು ನಟರಿಗೆ ಹೇಳುವುದೇ ನಿರ್ದೇಶಕನ ಕೆಲಸ ಮತ್ತು ಇತರ ಕೆಲಸಗಳನ್ನೆಲ್ಲಾ ಮೇಲ್ವಿಚಾರಣೆ ಮಾಡುವುದು ಎಂದು ಅನ್ನಬಹುದಾ?

ಇರಲಿ, ನಿರ್ದೇಶಕನ ಕೆಲಸಗಳೇನು ಎಂದು ಸದ್ಯಕ್ಕೆ ನನಗೆ ತಿಳಿದಿರುವ ಕೆಲಸಗಳ ಪಟ್ಟಿ ಮಾಡುವ.
ಒಂದು, ಕಥೆಯ ಆಳ ಜ್ಞಾನ, ಕಥೆ ಹೇಗೆ ಕೆಲಸ ಮಾಡುವುದು ಎನ್ನುವುದರ ಸ್ಪಷ್ಟತೆ (ಸ್ಟ್ರಕ್ಚರ್ ಬಗ್ಗೆ ಈಗಾಗಲೇ ಬರೆದಿದ್ದೇನೆ. ಲಿಂಕ್) ಈ ಕಥೆ ಏನು? ಈ ಕಥೆ ಏಕೆ? ಈ ಕಥೆಯೇ ಏಕೆ? ಈ ಕಥೆಗೆ ಈ ನಿರ್ದೇಶಕನೇ ಏಕೆ? ಈ ಕಥೆ ಇಂದೇಕೆ? ಮೊದಲು ಈ ಮೂಲಪ್ರಶ್ನೆಗಳಿಗೆ ಸಮಾಧಾನಕರ ಉತ್ತರ ನೀಡಿದ ನಂತರ ಈ ಕಥೆ ಯಾರದ್ದು, ಕಥೆಯ ಉದ್ದೇಶ ಏನು, ಕಥಾನಾಯಕಿಯ ಉದ್ದೇಶ ಏನು, ಕಥೆ ಎಲ್ಲೆಲ್ಲಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ, ಚಿತ್ರಕಥೆಯಲ್ಲಿ ಬರೆದ ದೃಶ್ಯಗಳು ಕಥೆಯ ಆತ್ಮವನ್ನು ಬಿಂಬಿಸುತ್ತಿವೆಯೇ ಎನ್ನುವ ಹತ್ತಾರು ಪ್ರಶ್ನೆಗಳಿಗೂ ಉತ್ತರ ಕಂಡುಕೊಳ್ಳಬೇಕು.

ಮೇಲಿನ ಎಲ್ಲಾ ಅಂಶಗಳನ್ನು ಖಾತ್ರಿಪಡಿಸಿಕೊಂಡ ನಂತರ ಆಯಾ ದೃಶ್ಯಗಳಿಗೆ ಆಗತ್ಯವಿರುವ ಶಾಟ್‍ಗಳನ್ನು ಆಯ್ಕೆ ಮಾಡಬೇಕು. (ಇದರ ಬಗ್ಗೆ ಮುಂದಿನ ಪ್ಯಾರಾದಲ್ಲಿ). ಆ ದೃಶ್ಯಕ್ಕೆ ಆಯ್ಕೆ ಮಾಡಿದ ಶಾಟ್‍ಗಳು ಸಾಕೇ, ಇನ್ನೂ ಕಡಿಮೆ ಶಾಟ್‍ಗಳಲ್ಲಿ ಆ ದೃಶ್ಯದ ಸಾರವನ್ನು ಸೆರೆಹಿಡಿಯಬಹುದೇ ಮುಂತಾದ ಪ್ರಶ್ನೆಗಳಿಗೆ ಉತ್ತರಿಸಿ ಅದರನುಗುಣವಾಗಿ ಚಿತ್ರೀಕರಣ ಮಾಡಬೇಕು. ಈ ಹಂತದಲ್ಲಿ ನಿರ್ದೇಶಕನಿಗೆ ತಾಂತ್ರಿಕ ಅಂಶಗಳ ಸಂಪೂರ್ಣ ಅರಿವು ಇರಬೇಕಾಗುತ್ತದೆ. ಯಾವ ಕ್ಯಾಮರ ಬಳಸಬೇಕು, ಯಾವ ಲೆನ್ಸ್ ಬಳಸಬೇಕು, ಯಾವ ಕೋನ ಇಡಬೇಕು, ಶಾಟ್‍ನಲ್ಲಿ ಕ್ಯಾಮರ ಚಲನೆ ಇರಬೇಕೇ ಇತ್ಯಾದಿ ಪ್ರಶ್ನೆಗಳೊಂದಿಗೆ ಪರದೆಯಲ್ಲಿ ಕಾಣುವ ಎಲ್ಲಾ ವಸ್ತುಗಳು ಹೇಗಿರಬೇಕು ಎನ್ನುವುದನ್ನೂ ನಿರ್ದೇಶಕನೇ ನಿರ್ಧರಿಸಬೇಕು.

ಇದರೊಂದಿಗೆ ಅಭಿನಯ. ನಟರ ಹಾವಭಾವದೊಂದಿಗೆ ಎಲ್ಲಾ ನಟರ ಚಲನೆಗಳನ್ನೂ ನಿರ್ದೇಶಕನೇ ನಿರ್ಧರಿಸಬೇಕು. (ಪಾತ್ರ ಸೃಷ್ಟಿಯಲ್ಲಿ ನಿರ್ದೇಶಕನ ಪಾತ್ರದ ಬಗ್ಗೆ ಈಗಾಗಲೇ ಬರೆದಿದ್ದೇನೆ.) ಚಿತ್ರೀಕರಣ ಮುಗಿಸಿದ ನಂತರ ಅತ್ಯಂತ ಮುಖ್ಯ ಅಂಗವಾದ ಸಂಕಲನದ ಪ್ರಕ್ರಿಯೆಯಲ್ಲಿ ಸಂಕಲನಕಾರಳೊಂದಿಗೆ ಸೇರಿ ಪ್ರೇಕ್ಷಕರಿಗೆ ಕೊನೆಯದಾಗಿ ಚಿತ್ರ ಹೇಗೆ ತಲುಪುವುದು ಎನ್ನುವ ಕೆಲಸ ಮುಗಿಸಬೇಕು. (ಸಂಕಲನದ ಬಗ್ಗೆ ಇನ್ನೊಂದು ಲೇಖನ ಬೇಕು.)

ಅಂದ್ರೆ? ಇಷ್ಟೇನಾ ನಿರ್ದೇಶನ ಅಂದರೆ?
ನಿರ್ದೇಶನದ ಬಗ್ಗೆ ಹಲವಾರು ಥಿಯರಿಗಳಿವೆ. ಅಂದ್ರೆ ತಾರ್ಕಾವ್‍ಸ್ಕಿ (Andrei Tarkovsky)ಎಂಬ ರಷಿಯಾದ ನಿರ್ದೇಶಕ ಸಿನೆಮಾ ಎನ್ನುವುದು ಸಮಯದಲ್ಲಿ ಕೆತ್ತನೆ (sculpting) ಮಾಡಿದಂತೆ ಎಂದು ಹೇಳಿ ಚಲನಚಿತ್ರ ಎಂದರೆ ಏನು, ಅದರ ಜೀವ ಎಂಥದ್ದು ಎನ್ನುವುದರ ಬಗ್ಗೆ ಮಾತನಾಡುತ್ತಾರೆ. ಸ್ಟಾಕರ್, ಸೊಲಾರಿಸ್, ಮಿರರ್ ಮುಂತಾದ ಸಿನೆಮಾಗಳನ್ನು ನಿರ್ದೇಶಿಸಿದ ಇವರ ಸಿನೆಮಾಗಳಲ್ಲಿ ಆಧ್ಯಾತ್ಮ, ಕನಸು ಮುಂತಾದ ವಿಷಯಗಳನ್ನು ಸೆರೆಹಿಡಿಯುವ ಪ್ರಯತ್ನ ಕಾಣಿಸುತ್ತದೆ. ಇವರ ಚಿತ್ರಗಳಲ್ಲಿ ತುಂಬಾ ಉದ್ದದ ಶಾಟ್‍ಗಳು ಮತ್ತು ತುಂಬಾ ಕಡಿಮೆ ಕಟ್‍ಗಳು ಕಾಣಿಸುತ್ತವೆ. ಆದರೆ ಐಸೆನ್‍ಸ್ಟೈನ್ ಮತ್ತು ಡೇವಿಡ್ ಮ್ಯಾಮೆಟ್(ಇವರ ಬಗ್ಗೆ ಬರೆದಿದ್ದೇನೆ) ಮುಂತಾದವರು ಮೊಂಟಾಜ್ ಥಿಯರಿಯನ್ನು ಮುಂದಿಡುತ್ತಾರೆ. ಚಿತ್ರದಲ್ಲಿ ಮುಂದೇನಾಗುವುದು ಎನ್ನುವ ಪ್ರಶ್ನೆ ಪ್ರೇಕ್ಷಕರನ್ನು ಹಿಡಿದಿಡಬೇಕು, ಪ್ರತಿಯೊಂದು ದೃಶ್ಯವೂ ಕಥೆಯನ್ನು ಮುಂದೊಯ್ಯಬೇಕು, ಪ್ರತಿಯೊಂದು ದೃಶ್ಯದ ಉದ್ದೇಶ ಸ್ಪಷ್ಟವಾಗಿರಬೇಕು, ಸಂಭಾಷಣೆಯ ಪ್ರತಿಯೊಂದು ತುಣುಕು ಸಹ ಚಿತ್ರಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಇತ್ಯಾದಿ.

ಅಂದರೆ, ಈ ಎರಡೂ ಥಿಯರಿಗಳು ಒಂದಕ್ಕೊಂದು ವಿರುದ್ಧದ ಥಿಯರಿಗಳಾ? ದೃಶ್ಯದ ಉದ್ದೇಶ ಸ್ಪಷ್ಟವಾದರೆ ಸಾಕಲ್ವಾ, ಅದಕ್ಕೆ ಜೀವ ತುಂಬೋದು ಅಂದರೆ ಏನು?

ಕಥೆಗಳ ಆಧಾರದ ಮೇಲೆ ಅದರ ಹಿಂದಿರಬೇಕಾದ ಥಿಯರಿ ನಿರ್ಧಾರವಾಗಬೇಕೆ? ಅಥವಾ ನಿರ್ದೇಶಕ ಒಂದೇ ಥಿಯರಿಗೆ ಬದ್ಧವಾಗಬೇಕೆ?
1999ರಲ್ಲಿ ಪೋಸ್ಟ್‍ಮೆನ್ ಇನ ದ ಮೌಂಟನ್ಸ್ ಎನ್ನುವ ಚಿತ್ರ ಬಂತು. ಅದರಲ್ಲಿಯ ಮೊದಲ ದೃಶ್ಯ; ತಂದೆ ಮಗ ಇಬ್ಬರೂ ಮಾರನೆಯ ದಿನ ಬೆಳಗ್ಗೆ ತಮ್ಮ ಪ್ರವಾಸಕ್ಕೆ ಹೊರಡಲಿದ್ದಾರೆ, ಹಾಗಾಗಿ ರಾತ್ರಿ ದೀಪದ ಬೆಳಕಿನಲ್ಲಿ ನಕ್ಷೆಗಳನ್ನು, ಇತರ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನೊಂದು ದೃಶ್ಯದಲ್ಲಿ ತಂದೆ ಮಗ ಒಂದು ಊರಿಗೆ ಬೆಳ್ಳಂಬೆಳಗ್ಗೆ ಬಂದು ಮುಟ್ಟುತ್ತಾರೆ. ಈ ದೃಶ್ಯಗಳನ್ನು ನೋಡುತ್ತಿರುವಾಗ ಒಬ್ಬ ಪ್ರೇಕ್ಷಕನನ್ನು ಸಂಪೂರ್ಣವಾಗಿ ಅಲ್ಲಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗುತ್ತಾನೆ ನಿರ್ದೇಶಕ ಹೋ ಜಿಯಾಂಗಿ? ಅದನ್ನು ಮಾಡಲು ಹೇಗೆ ಸಾಧ್ಯವಾಯಿತು?

ಸಿಡ್ನಿ ಲುಮೆಟ್ ಅವರ ಚಿತ್ರ ದಿ ವರ್ಡಿಕ್ಟ್ ನೋಡುವಾಗ ಅದೊಂದು ವಿದ್ಯುತ್ ಪ್ರವಹಿಸುತ್ತಿರುವ ತಂತಿ ಎಂತಲೇ ಭಾಸವಾಯಿತು. ಪ್ರತಿಯೊಂದು ದೃಶ್ಯವೂ ಜೀವಂತವಾಗಿದೆ; ಅದರದೇ ಬಿಗಿತ, ಟೆನ್ಷನ್ ಹೊಂದಿದೆ. ಆ ಬಿಗಿತ ಪ್ರೇಕ್ಷಕನನ್ನು ಒಂದುಕ್ಷಣವೂ ಬಿಡುವುದಿಲ್ಲ. ಹಿನ್ನಲೆ ಸಂಗೀತ ಇಲ್ಲದೇ ಅಷ್ಟು ಟೆನ್ಷನ್ ತಂದಿಡುತ್ತಾರೆ. ಅದನ್ನು ಹೇಗೆ ಮಾಡಲು ಸಾಧ್ಯವಾಯಿತು?

ನಾವು ಚಿಕ್ಕವರಿದ್ದಾಗ ಒಂದು ಮಾಡ್ತಿದ್ವಿ. ಯಾರೋ ಸಿನೆಮಾ ನೋಡಿ ಬಂದಕೂಡಲೇ, ಅವರನ್ನು ಸ್ಟೋರಿ ಹೇಳು ಎಂದು ಪೀಡಿಸುತ್ತಿದ್ವಿ. ಅನೇಕ ಸಲ ಅವರು ಆ ಚಿತ್ರದ ಸಂಪೂರ್ಣ ಸ್ಟೋರಿಯನ್ನು ಕಣ್ಣಿಗೆ ಕಾಣುವ ಹಾಗೆ ಹೇಳುತ್ತಿದ್ದರು. (ಮಕ್ಕಳಷ್ಟೇ ಅಲ್ಲ, ವಯಸ್ಕರೂ ಇದನ್ನು ಮಾಡುತ್ತಿದ್ದರು.) ಅಂದರೆ, ಸಿನೆಮಾ ಎಂದರೆ ಕಥೆ ಎಂದಾಯಿತಲ್ಲ?

ಫಾರೆಸ್ಟ್ ಗಂಪ್, ಕಾಸ್ಟ್ ಅವೇ ಮುಂತಾದ ಚಿತ್ರಗಳು ಎಲ್ಲರಿಗೂ ಇಷ್ಟವಾಗಿದ್ದರೂ ಆ ಚಿತ್ರಗಳ ನಿರ್ದೇಶಕ ಯಾರು ಎಂದು ತಿಳಿದುಕೊಳ್ಳುವ ಗೋಜಿಗೆ ಯಾರೂ ಹೋಗುವುದಿಲ್ಲ. ಅದೇಕೆ?

ನಿರ್ದೇಶನದ ವಿಷಯಕ್ಕೆ ಬಂದಾಗ ಇನ್ನೂ ಇಂತಹ ನೂರಾರು ಪ್ರಶ್ನೆಗಳು ಎದುರಾಗುತ್ತವೆ. ಲೇಖಕನ ತಲೆಯಲ್ಲಿ ಬಿತ್ತಿದ ಕಥೆಯೆನ್ನುವ ಬೀಜ ಮೊಳಕೆಯೊಡೆದು, ಚಿಗುರಿ, ಗಿಡವಾಗಿ, ಮರವಾಗಿ ಹೂ ಹಣ್ಣು ಕೊಡುವ ಪ್ರಕ್ರಿಯೆ ಇದು; ಬೇರೆ ಬೇರೆ ಹಂತಗಳಲ್ಲಿ ಬೇರೆ ಬೇರೆಯವರು ಪೋಷಿಸುತ್ತ ಹೋಗುತ್ತಾರೆ. ನಮಗೆ ಹಣ್ಣು ರುಚಿಕರವಾಗಿರಬೇಕು ಅಷ್ಟೇ.

ಅಂದಹಾಗೆ, ‘ಪಿಚ್ಚರ್ ಚೆನ್ನಾಗಿದ್ದಿಲ್ಲ, ಆದರೆ ಡರೆಕ್ಷನ್ ಮಸ್ತ್ ಇತ್ತು’ ಎಂದು ಹೇಳಿದ ನನ್ನ ಹೈಸ್ಕೂಲಿನ ಆ ಗೆಳೆಯ ಡಬ್ಬಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...