Homeಸುಳ್ಳಪ್ಪೋ ಸುಳ್ಳುಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

ಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

- Advertisement -
- Advertisement -

ಚುನಾವಣೆ ಸಮರದಲ್ಲಿ ಸುಳ್ಳು ಸಹಜ. ಆದರೆ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಮಾಣ ಹೆಚ್ಚಾದಂತೆಲ್ಲ ಸುಳ್ಳುಗಳ ಮಹಾಪೂರವೇ ಹರಿದು ಬರುತ್ತಿದ್ದು ರಾಜಕೀಯ, ಏಧರ್ಮಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪರೀಕ್ಷಿಸದೇ ನಂಬುವಂತೆಯೇ ಇಲ್ಲ.
ಅದಿರಲಿ, ಸರ್ಕಾರವೇ ಇಂತಹ ಫೇಕ್ ಫ್ಯಾಕ್ಟರಿಗಳನ್ನು ಪೋಷಿಸತೊಡಗಿದರೆ, ದೇಶದ ಪ್ರಧಾನಿಯೇ ಇಂತಹ ಸುಳ್ ಕಾರ್ಖಾನೆಗಳನ್ನು ಪ್ರಮೋಟ್ ಮಾಡತೊಡಗಿದರೆ ಅದಕ್ಕಿಂತ ನಾಚಿಕೆಗೇಡು ಬೇರೆನಿದೆ?
ಕಳೆದ ತಿಂಗಳು ಸಮರ್ಥ ಬನ್ಸಾಲ್ ಎಂಬ ಪರ್ತಕರ್ತರು ಈ ಫೇಕ್ ಫ್ಯಾಕ್ಟರಿಗಳ ಕುರಿತು ಒಂದು ತನಿಖಾ ವರದಿ ಪ್ರಕಟಿಸಿದರು. ಹೆಚ್ಚುತ್ತಿರುವ ಫೇಕ್ ಸ್ಟೋರಿಗಳು ಮತ್ತು ಸರ್ಕಾರದ ನಡುವೆ ಲಿಂಕ್ ಇರುವುದನ್ನು ಅವರು ಎಳೆಎಳೆಯಾಗಿ ತೋರಿಸಿದ್ದರು. ಪ್ರಧಾನಿಯ ನಮೋ ಆ್ಯಪ್ ಮೂಲಕ ಸುಳ್ಳು ಸುದ್ದಿಗಳು, ಕುಚೋದ್ಯಗಳು ಹರಿದಾಡುವುದನ್ನು ಬನ್ಸಾಲ್ ತೋರಿಸಿದರು.
ನಮೋ ಆ್ಯಪ್‍ನ ‘ಮೈ ನೆಟ್‍ವರ್ಕ್’ ವಿಭಾಗದಲ್ಲಿ 15 ಪ್ರಮೋಟೆಡ್ ಅಕೌಂಟುಗಳಿವೆ, ಅದರಲ್ಲಿ ಫೇಕ್ ಫ್ಯಾಕಟ್ರಿ ಎಂದೇ ಕುಖ್ಯಾತಿ ಪಡೆದಿರುವ ‘ದಿ ಇಂಡಿಯನ್ ಐ’ ಕೂಡ ಇದೆ. ಬಳಕೆದಾರರು ಇದನ್ನು ಫಾಲೋ ಮಾಡದೇ ಇದ್ದಾಗಲೂ ಇದರ ಪೋಸ್ಟ್‍ಗಳು ಅವರ ‘ಮೈ ನೆಟ್‍ವರ್ಕ್’ ಫೀಡರ್‍ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ.

ಕೇಜ್ರಿವಾಲಾ ದೇಶದ್ರೋಹಿಯಂತೆ!
ಫೇಸ್‍ಬುಕ್ ಪೇಜ್, ಟ್ವಿಟರ್, ವೆಬ್‍ಸೈಟ್- ಹೀಗೆ ಸಾಮಾಜಿಕ ಜಾಲತಾಣದ ಎಲ್ಲ ಸ್ತರಗಳಲ್ಲೂ ಇರುವ ‘ದಿ ಇಂಡಿಯನ್ ಐ’ ಎಂತಹ ಕುಚೋದ್ಯ ಮಾಡುತ್ತದೆ ಎಂಬುದಕ್ಕೆ ಈ ಉದಾಹರಣೆ ನೋಡಿ. ವಿರೋಧ ಪಕ್ಷಗಳ ಮಹಾಘಟಬಂಧನ್ ಸಮಾವೇಶದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರು ಪಾಕಿಸ್ತಾನದ ಪರ ಮಾತಾಡಿದರು ಎಂದು ಈ ಇಂಡಿಯನ್ ಐ ಸುಳ್ ಸುದ್ದಿ ಹರಡಿತ್ತು. ‘ಮತ್ತೆ ಮೋದಿ ಅಧಿಕಾರಕ್ಕೆ ಬಂದರೆ ಪಾಕಿಸ್ತಾನಕ್ಕೆ ತೊಂದರೆ’ ಎಂಬರ್ಥದಲ್ಲಿ ಕೇಜ್ರಿವಾಲ ಮಾತಾಡಿದರು ಎಂದಿತ್ತು. ಅದಕ್ಕಾಗಿ ಅವರನ್ನು ದೇಶದ್ರೋಹಿ ಎಂದು ‘ಆರ್ಡರ್’ ಅನ್ನೂ ಪಾಸ್ ಮಾಡಿಬಿಟ್ಟಿತ್ತು.
ಆದರೆ ಆಗಲೇ ಅಲ್ಟ್‍ನ್ಯೂಸ್ ಇಂಡಿಯನ್ ಐ ಹಾಕಿರುವ ವಿಡಿಯೋ ತಿರುಚಿದ್ದು ಎಂದು ಸಾಬೀತು ಮಾಡಿತ್ತು. ‘ಮೋದಿ ಮತ್ತು ಶಾ ಮತ್ತೆ ಅಧಿಕಾರಕ್ಕೆ ಬಂದರೆ ದೇಶ ಉಳಿಯಲಾರದು’ ಎಂಬ ಕೇಜ್ರಿವಾಲರ ಮಾತನ್ನು ತಿರುಚಲಾಗಿತ್ತು. ‘ದೇಶ’ ಎಂದಿರುವಲ್ಲಿ ‘ಪಾಕಿಸ್ತಾನ’ ಎಂದು ಸೇರಿಸಲಾಗಿತ್ತು! ಇಂತಹ ಅನಾಹುತ ಮಾಡುವ ಗುಂಪಿಗೆ ನರೇಂದ್ರ ಮೋದಿಯವರ ಆ್ಯಪ್ ಸಪೋರ್ಟು ಮಾಡುತ್ತಿದೆ.
ಗುಜರಾತ್ ಲಿಂಕ್
ಅಲ್ಟ್‍ನ್ಯೂಸ್ ಕಳೆದ ಸೆಪ್ಟೆಂಬರ್‍ನಲ್ಲಿ ಈ ಇಂಡಿಯನ್ ಐಗಿರುವ ಗುಜರಾತ್ ಲಿಂಕನ್ನು ಬಯಲು ಮಾಡಿತ್ತು. ಗುಜರಾತ್ ಮೂಲದ ಸಿಲ್ವರ್ ಟಚ್ ಟೆಕ್ನಾಲಜೀಸ್ ಕಂಪನಿಗೂ ಇದಕ್ಕೂ ಸಂಬಂಧವಿದೆ. ಈ ಸಿಲ್ವರ್ ಟಚ್ ಟೆಕ್ನಾಲಜಿ ಸಂಸ್ಥೆಯೇ ನಮೋ ಆ್ಯಪ್ ರೂಪಿಸಿದೆ! ಈ ಕಂಪನಿಯ ಸರ್ವರ್‍ಗಳ ಮೂಲಕವೇ ಇಂಡಿಯನ್ ಐ ಹಾಸ್ಟ್ ಮಾಡಲಾಗುತ್ತಿತ್ತು. ಅಲ್ಟ್‍ನ್ಯೂಸ್ ತನಿಖೆಯ ನಂತರ ಇಂಡಿಯನ್ ಐ ಐಪಿ ಅಡ್ರೆಸ್ ಬದಲು ಮಾಡಲಾಗಿತು.
ಇದೇ ಇಂಡಿಯನ್ ಐ ಕೊಲ್ಕೊತ್ತಾದ ಮಹಾಘಟಬಂಧನ್ ರ್ಯಾಲಿಯಲ್ಲಿ ಯಾರೊಬ್ಬರೂ ‘ಭಾರತ್ ಮಾತಾ ಕಿ ಜೈ’ ಅನ್ನಲಿಲ್ಲ ಎಂದು ಸುಳ್ಳು ಹರಡಿತ್ತು. ಇದನ್ನೇ ಅಮಿತ್ ಶಾ ತಮ್ಮ ಭಾಷಣಗಳಲ್ಲಿ ಹೇಳಿದ್ದರು. ಆದರೆ ರ್ಯಾಲಿಯ ಕೊನೆಯಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ವಂದೇ ಮಾತರಂ ಘೋಷಣೆಗಳನ್ನು ಹೇಳಿದ್ದು ವಿಡಿಯೋದಲ್ಲಿ ಸ್ಪಷ್ಟವಾಗಿದೆ.
ಹೀಗೆ ಬರೀ ಸುಳ್ಳು, ಕುಚೋದ್ಯವನ್ನೇ ಮಾಡುವ ಇಂತಹ ನೂರಾರು ಗುಂಪುಗಳಿವೆ. ಆದರೆ, ಪ್ರಧಾನಿಯವರ ನಮೋ ಆ್ಯಪ್ ಇಂಥವನ್ನು ಬೆಂಬಲಿಸುತ್ತದೆ ಎನ್ನುವ ವಿಷಯ ಅಸಹ್ಯಕರವಾದುದು.
ಪ್ರಧಾನಿಯೇ ಒಬ್ಬ ಮಹಾ ಸುಳ್ಳುಗಾರನಾಗಿರುವಾಗ, ಸುಳ್ಳುಗಲೇ ಅವರ ಬಂಡವಾಳವಾಗಿರುವಾಗ ಇಂಥದ್ದೆಲ್ಲ ನಡೆಯದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...