Homeಸುಳ್ಳಪ್ಪೋ ಸುಳ್ಳುಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

ಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

- Advertisement -
- Advertisement -

ಚುನಾವಣೆ ಸಮರದಲ್ಲಿ ಸುಳ್ಳು ಸಹಜ. ಆದರೆ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಮಾಣ ಹೆಚ್ಚಾದಂತೆಲ್ಲ ಸುಳ್ಳುಗಳ ಮಹಾಪೂರವೇ ಹರಿದು ಬರುತ್ತಿದ್ದು ರಾಜಕೀಯ, ಏಧರ್ಮಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪರೀಕ್ಷಿಸದೇ ನಂಬುವಂತೆಯೇ ಇಲ್ಲ.
ಅದಿರಲಿ, ಸರ್ಕಾರವೇ ಇಂತಹ ಫೇಕ್ ಫ್ಯಾಕ್ಟರಿಗಳನ್ನು ಪೋಷಿಸತೊಡಗಿದರೆ, ದೇಶದ ಪ್ರಧಾನಿಯೇ ಇಂತಹ ಸುಳ್ ಕಾರ್ಖಾನೆಗಳನ್ನು ಪ್ರಮೋಟ್ ಮಾಡತೊಡಗಿದರೆ ಅದಕ್ಕಿಂತ ನಾಚಿಕೆಗೇಡು ಬೇರೆನಿದೆ?
ಕಳೆದ ತಿಂಗಳು ಸಮರ್ಥ ಬನ್ಸಾಲ್ ಎಂಬ ಪರ್ತಕರ್ತರು ಈ ಫೇಕ್ ಫ್ಯಾಕ್ಟರಿಗಳ ಕುರಿತು ಒಂದು ತನಿಖಾ ವರದಿ ಪ್ರಕಟಿಸಿದರು. ಹೆಚ್ಚುತ್ತಿರುವ ಫೇಕ್ ಸ್ಟೋರಿಗಳು ಮತ್ತು ಸರ್ಕಾರದ ನಡುವೆ ಲಿಂಕ್ ಇರುವುದನ್ನು ಅವರು ಎಳೆಎಳೆಯಾಗಿ ತೋರಿಸಿದ್ದರು. ಪ್ರಧಾನಿಯ ನಮೋ ಆ್ಯಪ್ ಮೂಲಕ ಸುಳ್ಳು ಸುದ್ದಿಗಳು, ಕುಚೋದ್ಯಗಳು ಹರಿದಾಡುವುದನ್ನು ಬನ್ಸಾಲ್ ತೋರಿಸಿದರು.
ನಮೋ ಆ್ಯಪ್‍ನ ‘ಮೈ ನೆಟ್‍ವರ್ಕ್’ ವಿಭಾಗದಲ್ಲಿ 15 ಪ್ರಮೋಟೆಡ್ ಅಕೌಂಟುಗಳಿವೆ, ಅದರಲ್ಲಿ ಫೇಕ್ ಫ್ಯಾಕಟ್ರಿ ಎಂದೇ ಕುಖ್ಯಾತಿ ಪಡೆದಿರುವ ‘ದಿ ಇಂಡಿಯನ್ ಐ’ ಕೂಡ ಇದೆ. ಬಳಕೆದಾರರು ಇದನ್ನು ಫಾಲೋ ಮಾಡದೇ ಇದ್ದಾಗಲೂ ಇದರ ಪೋಸ್ಟ್‍ಗಳು ಅವರ ‘ಮೈ ನೆಟ್‍ವರ್ಕ್’ ಫೀಡರ್‍ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ.

ಕೇಜ್ರಿವಾಲಾ ದೇಶದ್ರೋಹಿಯಂತೆ!
ಫೇಸ್‍ಬುಕ್ ಪೇಜ್, ಟ್ವಿಟರ್, ವೆಬ್‍ಸೈಟ್- ಹೀಗೆ ಸಾಮಾಜಿಕ ಜಾಲತಾಣದ ಎಲ್ಲ ಸ್ತರಗಳಲ್ಲೂ ಇರುವ ‘ದಿ ಇಂಡಿಯನ್ ಐ’ ಎಂತಹ ಕುಚೋದ್ಯ ಮಾಡುತ್ತದೆ ಎಂಬುದಕ್ಕೆ ಈ ಉದಾಹರಣೆ ನೋಡಿ. ವಿರೋಧ ಪಕ್ಷಗಳ ಮಹಾಘಟಬಂಧನ್ ಸಮಾವೇಶದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರು ಪಾಕಿಸ್ತಾನದ ಪರ ಮಾತಾಡಿದರು ಎಂದು ಈ ಇಂಡಿಯನ್ ಐ ಸುಳ್ ಸುದ್ದಿ ಹರಡಿತ್ತು. ‘ಮತ್ತೆ ಮೋದಿ ಅಧಿಕಾರಕ್ಕೆ ಬಂದರೆ ಪಾಕಿಸ್ತಾನಕ್ಕೆ ತೊಂದರೆ’ ಎಂಬರ್ಥದಲ್ಲಿ ಕೇಜ್ರಿವಾಲ ಮಾತಾಡಿದರು ಎಂದಿತ್ತು. ಅದಕ್ಕಾಗಿ ಅವರನ್ನು ದೇಶದ್ರೋಹಿ ಎಂದು ‘ಆರ್ಡರ್’ ಅನ್ನೂ ಪಾಸ್ ಮಾಡಿಬಿಟ್ಟಿತ್ತು.
ಆದರೆ ಆಗಲೇ ಅಲ್ಟ್‍ನ್ಯೂಸ್ ಇಂಡಿಯನ್ ಐ ಹಾಕಿರುವ ವಿಡಿಯೋ ತಿರುಚಿದ್ದು ಎಂದು ಸಾಬೀತು ಮಾಡಿತ್ತು. ‘ಮೋದಿ ಮತ್ತು ಶಾ ಮತ್ತೆ ಅಧಿಕಾರಕ್ಕೆ ಬಂದರೆ ದೇಶ ಉಳಿಯಲಾರದು’ ಎಂಬ ಕೇಜ್ರಿವಾಲರ ಮಾತನ್ನು ತಿರುಚಲಾಗಿತ್ತು. ‘ದೇಶ’ ಎಂದಿರುವಲ್ಲಿ ‘ಪಾಕಿಸ್ತಾನ’ ಎಂದು ಸೇರಿಸಲಾಗಿತ್ತು! ಇಂತಹ ಅನಾಹುತ ಮಾಡುವ ಗುಂಪಿಗೆ ನರೇಂದ್ರ ಮೋದಿಯವರ ಆ್ಯಪ್ ಸಪೋರ್ಟು ಮಾಡುತ್ತಿದೆ.
ಗುಜರಾತ್ ಲಿಂಕ್
ಅಲ್ಟ್‍ನ್ಯೂಸ್ ಕಳೆದ ಸೆಪ್ಟೆಂಬರ್‍ನಲ್ಲಿ ಈ ಇಂಡಿಯನ್ ಐಗಿರುವ ಗುಜರಾತ್ ಲಿಂಕನ್ನು ಬಯಲು ಮಾಡಿತ್ತು. ಗುಜರಾತ್ ಮೂಲದ ಸಿಲ್ವರ್ ಟಚ್ ಟೆಕ್ನಾಲಜೀಸ್ ಕಂಪನಿಗೂ ಇದಕ್ಕೂ ಸಂಬಂಧವಿದೆ. ಈ ಸಿಲ್ವರ್ ಟಚ್ ಟೆಕ್ನಾಲಜಿ ಸಂಸ್ಥೆಯೇ ನಮೋ ಆ್ಯಪ್ ರೂಪಿಸಿದೆ! ಈ ಕಂಪನಿಯ ಸರ್ವರ್‍ಗಳ ಮೂಲಕವೇ ಇಂಡಿಯನ್ ಐ ಹಾಸ್ಟ್ ಮಾಡಲಾಗುತ್ತಿತ್ತು. ಅಲ್ಟ್‍ನ್ಯೂಸ್ ತನಿಖೆಯ ನಂತರ ಇಂಡಿಯನ್ ಐ ಐಪಿ ಅಡ್ರೆಸ್ ಬದಲು ಮಾಡಲಾಗಿತು.
ಇದೇ ಇಂಡಿಯನ್ ಐ ಕೊಲ್ಕೊತ್ತಾದ ಮಹಾಘಟಬಂಧನ್ ರ್ಯಾಲಿಯಲ್ಲಿ ಯಾರೊಬ್ಬರೂ ‘ಭಾರತ್ ಮಾತಾ ಕಿ ಜೈ’ ಅನ್ನಲಿಲ್ಲ ಎಂದು ಸುಳ್ಳು ಹರಡಿತ್ತು. ಇದನ್ನೇ ಅಮಿತ್ ಶಾ ತಮ್ಮ ಭಾಷಣಗಳಲ್ಲಿ ಹೇಳಿದ್ದರು. ಆದರೆ ರ್ಯಾಲಿಯ ಕೊನೆಯಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ವಂದೇ ಮಾತರಂ ಘೋಷಣೆಗಳನ್ನು ಹೇಳಿದ್ದು ವಿಡಿಯೋದಲ್ಲಿ ಸ್ಪಷ್ಟವಾಗಿದೆ.
ಹೀಗೆ ಬರೀ ಸುಳ್ಳು, ಕುಚೋದ್ಯವನ್ನೇ ಮಾಡುವ ಇಂತಹ ನೂರಾರು ಗುಂಪುಗಳಿವೆ. ಆದರೆ, ಪ್ರಧಾನಿಯವರ ನಮೋ ಆ್ಯಪ್ ಇಂಥವನ್ನು ಬೆಂಬಲಿಸುತ್ತದೆ ಎನ್ನುವ ವಿಷಯ ಅಸಹ್ಯಕರವಾದುದು.
ಪ್ರಧಾನಿಯೇ ಒಬ್ಬ ಮಹಾ ಸುಳ್ಳುಗಾರನಾಗಿರುವಾಗ, ಸುಳ್ಳುಗಲೇ ಅವರ ಬಂಡವಾಳವಾಗಿರುವಾಗ ಇಂಥದ್ದೆಲ್ಲ ನಡೆಯದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...