Homeಸಿನಿಮಾಕ್ರೀಡೆಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಾಯಕರಿಗಿರುವ ಫಾಲೋವರ್ಸ್‍ಗಳ ಸಂಖ್ಯೆಯು ಅವರು ಸಮಾಜದಲ್ಲಿ ಬೀರುವ ಪ್ರಭಾವವನ್ನು ಸಹ ಸೂಚಿಸುತ್ತದೆ. ಈ ನಿಟ್ಟಿನಲ್ಲಿ ಫೇಸ್ ಬುಕ್‍ನಲ್ಲಿ ಯಾವ ಯಾವ ಸ್ಟಾರ್‍ಗೆ ಎಷ್ಟೆಷ್ಟು ಜನ ಫಾಲೋವರ್ಸ್ ಇದ್ದಾರೆ ಎಂದು ಗೊತ್ತಾದರೆ ನೀವು ಬೆಚ್ಚಿ ಬೀಳುತ್ತೀರಿ.. ಇನ್ನೇಕೆ ತಡ ನೋಡಿಬಿಡಿ. ಕ್ರೀಡೆ, ಸಿನಿಮಾ ಮತ್ತು ರಾಜಕೀಯ ಸೆಲೆಬ್ರೆಟಿಗಳನ್ನು ನೋಡೋಣ.

ಯುವಜನರ ನೆಚ್ಚಿನ ಕ್ರಿಕೆಟಿಗ ವಿರಾಟ್ ಕೊಯ್ಲಿಗೆ ಫೇಸ್ ಬುಕ್ ನಲ್ಲಿ 3 ಕೋಟಿ 71 ಲಕ್ಷ ಬೆಂಬಲಿಗರಿದ್ದರೆ, ಸಚಿನ್ ತೆಂಡೂಲ್ಕರ್‍ಗೆ 2 ಕೋಟಿ 84 ಲಕ್ಷ ಜನ ಫಾಲೋವರ್ಸ್ ಇದ್ದಾರೆ. ಮಹೇಂದ್ರ ಸಿಂಗ್ ಧೋನಿ ಪೇಜ್‍ಗೆ 2 ಕೋಟಿ 4 ಲಕ್ಷ ಲೈಕ್ಸ್ ಇವೆ. ಯುವರಾಜ್ ಸಿಂಗ್‍ಗೆ 1ಕೋಟಿ 45 ಲಕ್ಷ, ವೀರೇಂದರ್ ಸೆಹ್ವಾಗ್‍ಗೆ 1ಕೋಟಿ 43 ಲಕ್ಷ, ರೋಹಿತ್ ಶರ್ಮಾಗೆ 1ಕೋಟಿ 9 ಲಕ್ಷ ಬೆಂಬಲಿಗರಿದ್ದಾರೆ. ಇನ್ನು ಭಾರತದ ಟೆನಿಸ್ ತಾರೆ ಸಾನಿಯ ಮಿರ್ಜಾಗೆ 1ಕೋಟಿ 24 ಲಕ್ಷ ಫಾಲೋವರ್ಸ್ ಇದ್ದರೆ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‍ಗೆ 78ಲಕ್ಷ ಲೈಕ್ಸ್ ಇವೆ.

ಸಿನಿಮಾ ತಾರೆಯರಲ್ಲಿ ಪ್ರಿಯಾಂಕ ಚೋಪ್ರಾಗೆ ಬರೋಬ್ಬರಿ 4ಕೋಟಿ ಫಾಲೋವರ್ಸ್ ಇದ್ದಾರೆ. ಇನ್ನುಳಿದಂತೆ ಸಲ್ಮಾನ್ ಖಾನ್ ಗೆ 3ಕೋಟಿ, 63ಲಕ್ಷ, ದೀಪಿಕಾ ಪಡುಕೋಣೆಗೆ 3ಕೋಟಿ, 42 ಲಕ್ಷ, ಅಮಿತಾಬ್ ಬಚ್ಚನ್‍ಗೆ 3ಕೋಟಿ 2 ಲಕ್ಷ, ಶಾರುಕ್ ಖಾನ್‍ಗೆ 2ಕೋಟಿ 94 ಲಕ್ಷ, ಶ್ರೇಯಾ ಘೋಷಾಲ್‍ಗೆ 2ಕೋಟಿ 77 ಲಕ್ಷ, ಮಾಧುರಿ ದಿಕ್ಷಿತ್‍ಗೆ 2ಕೋಟಿ 57 ಲಕ್ಷ, ಅಮಿರ್ ಖಾನ್‍ಗೆ 1ಕೋಟಿ 55 ಲಕ್ಷ, ಕತ್ರಿನಾ ಕೈಫ್‍ಗೆ 1ಕೋಟಿ 41 ಲಕ್ಷ ಫ್ಯಾನ್ಸ್ ಇದ್ದಾರೆ.

ರಾಜಕೀಯ ವ್ಯಕ್ತಿಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಫೇಸ್ ಬುಕ್ ನಲ್ಲಿ 4 ಕೋಟಿ 39 ಲಕ್ಷ ಫಾಲೋವರ್ಸ್ ಇದ್ದಾರೆ. ಅಮಿತ್ ಶಾಗೆ 1ಕೋಟಿ 44 ಲಕ್ಷ, ದೇವೇಂದ್ರ ಫಡ್ನಾವಿಸ್ 92 ಲಕ್ಷ, ಅರವಿಂದ್ ಕೇಜ್ರಿವಾಲ್‍ಗೆ 71 ಲಕ್ಷ, ಗೌತಮ್ ಗಂಭೀರ್ 69 ಲಕ್ಷ, ಅಖಿಲೇಶ್ ಯಾದವ್ 68 ಲಕ್ಷ, ರಾಜ್‍ನಾಥ್ ಸಿಂಗ್ 68 ಲಕ್ಷ, ಕಮಲ್ ಹಾಸನ್ 35 ಲಕ್ಷ, ಮಮತಾ ಬ್ಯಾನರ್ಜಿ 30 ಲಕ್ಷ, ರಾಹುಲ್ ಗಾಂಧಿ 28 ಲಕ್ಷ, ಅಸಾದ್ದೀನ್ ಒವೈಸಿಗೆ 26 ಲಕ್ಷ, ಎಂ.ಕೆ ಸ್ಟ್ಯಾಲಿನ್ 20 ಲಕ್ಷ, ಚಂದ್ರಬಾಬು ನಾಯ್ಡು 18 ಲಕ್ಷ, ಜಗನ್ ಮೋಹನ್ ರೆಡ್ಡಿ 17 ಲಕ್ಷ, ನವೀನ್ ಪಟ್ನಾಯಕ್ 14 ಲಕ್ಷ ಫಾಲೋವರ್ಸ್‍ಗಳನ್ನು ಹೊಂದಿದ್ದಾರೆ.

ಕರ್ನಾಟಕಕ್ಕೆ ಬರುವುದಾದರೆ ಪ್ರಕಾಶ್ ರಾಜ್‍ರವರಿಗೆ 44 ಲಕ್ಷ, ಯಡಿಯೂರಪ್ಪನವರಿಗೆ 17 ಲಕ್ಷ, ರಮ್ಯ ದಿವ್ಯ ಸ್ಪಂದನರವರಿಗೆ 15 ಲಕ್ಷ, ಡಿ.ಕೆ ಶಿವಕುಮಾರ್‍ಗೆ 5 ಲಕ್ಷ, ಎಚ್.ಡಿ ಕುಮಾರಸ್ವಾಮಿರವರಿಗೆ 2 ಲಕ್ಷ, ಸಿದ್ದರಾಮಯ್ಯನವರಿಗೆ 2 ಲಕ್ಷ, ಎಚ್.ಡಿ ದೇವೇಗೌಡರಿಗೆ 1 ಲಕ್ಷ ಅಭಿಮಾನಿಗಳಿದ್ದಾರೆ.

ಸಿನಿಮಾ ನಟರಲ್ಲಿ ಹರಿಪ್ರಿಯಾಗೆ 21 ಲಕ್ಷ, ದರ್ಶನ್ ತೂಗುದೀಪ್‍ಗೆ 12 ಲಕ್ಷ, ರಾಧಿಕ ಪಂಡಿತ್‍ಗೆ 9 ಲಕ್ಷ, ಯಶ್‍ಗೆ 7ಲಕ್ಷ, ಪುನೀತ್ ರಾಜ್‍ಕುಮಾರ್‍ರವರಿಗೆ 7 ಲಕ್ಷ, ಸುದೀಪ್‍ರವರ ಫ್ಯಾನ್ಸ್ ಅಸೋಷಿಯೇಷನ್ ಪೇಜ್ ಗೆ 14 ಲಕ್ಷ ಫಾಲೋವರ್ಸ್ ಇದ್ದಾರೆ.

ಇದರಲ್ಲಿ ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಮತ್ತೆ ಕೆಲವು ರಾಜಕಾರಣಿಗಳು ಸಾಕಷ್ಟು ದುಡ್ಡು ಖರ್ಚು ಮಾಡಿ ತಮ್ಮ ಪೇಜ್ ಅನ್ನು ಪ್ರಮೋಷನ್ ಮಾಡಿಸಿರುತ್ತಾರೆ. ಹಾಗೆಯೇ ಟ್ವಿಟ್ಟರ್‍ನಲ್ಲಿ ನರೇಂದ್ರ ಮೋದಿಯವರನ್ನು ಫಾಲೋ ಮಾಡುತ್ತಿರುವವರಲ್ಲಿ ಶೇ.60 ರಷ್ಟ್ಟು ಫೇಕ್ ಅಕೌಂಟ್‍ಗಳೇ ಇವೆ ನ್ಯೂಇಂಡಿಯನ್ ಎಕ್ಸ್‍ಪ್ರೆಸ್, ಡೈಲಿಯೊ, ಎಸ್.ಬಿ.ಎಸ್ ಮುಂತಾದ ನಿಯತಕಾಲಿಕಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...