Homeಸಿನಿಮಾಕ್ರೀಡೆಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಾಯಕರಿಗಿರುವ ಫಾಲೋವರ್ಸ್‍ಗಳ ಸಂಖ್ಯೆಯು ಅವರು ಸಮಾಜದಲ್ಲಿ ಬೀರುವ ಪ್ರಭಾವವನ್ನು ಸಹ ಸೂಚಿಸುತ್ತದೆ. ಈ ನಿಟ್ಟಿನಲ್ಲಿ ಫೇಸ್ ಬುಕ್‍ನಲ್ಲಿ ಯಾವ ಯಾವ ಸ್ಟಾರ್‍ಗೆ ಎಷ್ಟೆಷ್ಟು ಜನ ಫಾಲೋವರ್ಸ್ ಇದ್ದಾರೆ ಎಂದು ಗೊತ್ತಾದರೆ ನೀವು ಬೆಚ್ಚಿ ಬೀಳುತ್ತೀರಿ.. ಇನ್ನೇಕೆ ತಡ ನೋಡಿಬಿಡಿ. ಕ್ರೀಡೆ, ಸಿನಿಮಾ ಮತ್ತು ರಾಜಕೀಯ ಸೆಲೆಬ್ರೆಟಿಗಳನ್ನು ನೋಡೋಣ.

ಯುವಜನರ ನೆಚ್ಚಿನ ಕ್ರಿಕೆಟಿಗ ವಿರಾಟ್ ಕೊಯ್ಲಿಗೆ ಫೇಸ್ ಬುಕ್ ನಲ್ಲಿ 3 ಕೋಟಿ 71 ಲಕ್ಷ ಬೆಂಬಲಿಗರಿದ್ದರೆ, ಸಚಿನ್ ತೆಂಡೂಲ್ಕರ್‍ಗೆ 2 ಕೋಟಿ 84 ಲಕ್ಷ ಜನ ಫಾಲೋವರ್ಸ್ ಇದ್ದಾರೆ. ಮಹೇಂದ್ರ ಸಿಂಗ್ ಧೋನಿ ಪೇಜ್‍ಗೆ 2 ಕೋಟಿ 4 ಲಕ್ಷ ಲೈಕ್ಸ್ ಇವೆ. ಯುವರಾಜ್ ಸಿಂಗ್‍ಗೆ 1ಕೋಟಿ 45 ಲಕ್ಷ, ವೀರೇಂದರ್ ಸೆಹ್ವಾಗ್‍ಗೆ 1ಕೋಟಿ 43 ಲಕ್ಷ, ರೋಹಿತ್ ಶರ್ಮಾಗೆ 1ಕೋಟಿ 9 ಲಕ್ಷ ಬೆಂಬಲಿಗರಿದ್ದಾರೆ. ಇನ್ನು ಭಾರತದ ಟೆನಿಸ್ ತಾರೆ ಸಾನಿಯ ಮಿರ್ಜಾಗೆ 1ಕೋಟಿ 24 ಲಕ್ಷ ಫಾಲೋವರ್ಸ್ ಇದ್ದರೆ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‍ಗೆ 78ಲಕ್ಷ ಲೈಕ್ಸ್ ಇವೆ.

ಸಿನಿಮಾ ತಾರೆಯರಲ್ಲಿ ಪ್ರಿಯಾಂಕ ಚೋಪ್ರಾಗೆ ಬರೋಬ್ಬರಿ 4ಕೋಟಿ ಫಾಲೋವರ್ಸ್ ಇದ್ದಾರೆ. ಇನ್ನುಳಿದಂತೆ ಸಲ್ಮಾನ್ ಖಾನ್ ಗೆ 3ಕೋಟಿ, 63ಲಕ್ಷ, ದೀಪಿಕಾ ಪಡುಕೋಣೆಗೆ 3ಕೋಟಿ, 42 ಲಕ್ಷ, ಅಮಿತಾಬ್ ಬಚ್ಚನ್‍ಗೆ 3ಕೋಟಿ 2 ಲಕ್ಷ, ಶಾರುಕ್ ಖಾನ್‍ಗೆ 2ಕೋಟಿ 94 ಲಕ್ಷ, ಶ್ರೇಯಾ ಘೋಷಾಲ್‍ಗೆ 2ಕೋಟಿ 77 ಲಕ್ಷ, ಮಾಧುರಿ ದಿಕ್ಷಿತ್‍ಗೆ 2ಕೋಟಿ 57 ಲಕ್ಷ, ಅಮಿರ್ ಖಾನ್‍ಗೆ 1ಕೋಟಿ 55 ಲಕ್ಷ, ಕತ್ರಿನಾ ಕೈಫ್‍ಗೆ 1ಕೋಟಿ 41 ಲಕ್ಷ ಫ್ಯಾನ್ಸ್ ಇದ್ದಾರೆ.

ರಾಜಕೀಯ ವ್ಯಕ್ತಿಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಫೇಸ್ ಬುಕ್ ನಲ್ಲಿ 4 ಕೋಟಿ 39 ಲಕ್ಷ ಫಾಲೋವರ್ಸ್ ಇದ್ದಾರೆ. ಅಮಿತ್ ಶಾಗೆ 1ಕೋಟಿ 44 ಲಕ್ಷ, ದೇವೇಂದ್ರ ಫಡ್ನಾವಿಸ್ 92 ಲಕ್ಷ, ಅರವಿಂದ್ ಕೇಜ್ರಿವಾಲ್‍ಗೆ 71 ಲಕ್ಷ, ಗೌತಮ್ ಗಂಭೀರ್ 69 ಲಕ್ಷ, ಅಖಿಲೇಶ್ ಯಾದವ್ 68 ಲಕ್ಷ, ರಾಜ್‍ನಾಥ್ ಸಿಂಗ್ 68 ಲಕ್ಷ, ಕಮಲ್ ಹಾಸನ್ 35 ಲಕ್ಷ, ಮಮತಾ ಬ್ಯಾನರ್ಜಿ 30 ಲಕ್ಷ, ರಾಹುಲ್ ಗಾಂಧಿ 28 ಲಕ್ಷ, ಅಸಾದ್ದೀನ್ ಒವೈಸಿಗೆ 26 ಲಕ್ಷ, ಎಂ.ಕೆ ಸ್ಟ್ಯಾಲಿನ್ 20 ಲಕ್ಷ, ಚಂದ್ರಬಾಬು ನಾಯ್ಡು 18 ಲಕ್ಷ, ಜಗನ್ ಮೋಹನ್ ರೆಡ್ಡಿ 17 ಲಕ್ಷ, ನವೀನ್ ಪಟ್ನಾಯಕ್ 14 ಲಕ್ಷ ಫಾಲೋವರ್ಸ್‍ಗಳನ್ನು ಹೊಂದಿದ್ದಾರೆ.

ಕರ್ನಾಟಕಕ್ಕೆ ಬರುವುದಾದರೆ ಪ್ರಕಾಶ್ ರಾಜ್‍ರವರಿಗೆ 44 ಲಕ್ಷ, ಯಡಿಯೂರಪ್ಪನವರಿಗೆ 17 ಲಕ್ಷ, ರಮ್ಯ ದಿವ್ಯ ಸ್ಪಂದನರವರಿಗೆ 15 ಲಕ್ಷ, ಡಿ.ಕೆ ಶಿವಕುಮಾರ್‍ಗೆ 5 ಲಕ್ಷ, ಎಚ್.ಡಿ ಕುಮಾರಸ್ವಾಮಿರವರಿಗೆ 2 ಲಕ್ಷ, ಸಿದ್ದರಾಮಯ್ಯನವರಿಗೆ 2 ಲಕ್ಷ, ಎಚ್.ಡಿ ದೇವೇಗೌಡರಿಗೆ 1 ಲಕ್ಷ ಅಭಿಮಾನಿಗಳಿದ್ದಾರೆ.

ಸಿನಿಮಾ ನಟರಲ್ಲಿ ಹರಿಪ್ರಿಯಾಗೆ 21 ಲಕ್ಷ, ದರ್ಶನ್ ತೂಗುದೀಪ್‍ಗೆ 12 ಲಕ್ಷ, ರಾಧಿಕ ಪಂಡಿತ್‍ಗೆ 9 ಲಕ್ಷ, ಯಶ್‍ಗೆ 7ಲಕ್ಷ, ಪುನೀತ್ ರಾಜ್‍ಕುಮಾರ್‍ರವರಿಗೆ 7 ಲಕ್ಷ, ಸುದೀಪ್‍ರವರ ಫ್ಯಾನ್ಸ್ ಅಸೋಷಿಯೇಷನ್ ಪೇಜ್ ಗೆ 14 ಲಕ್ಷ ಫಾಲೋವರ್ಸ್ ಇದ್ದಾರೆ.

ಇದರಲ್ಲಿ ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಮತ್ತೆ ಕೆಲವು ರಾಜಕಾರಣಿಗಳು ಸಾಕಷ್ಟು ದುಡ್ಡು ಖರ್ಚು ಮಾಡಿ ತಮ್ಮ ಪೇಜ್ ಅನ್ನು ಪ್ರಮೋಷನ್ ಮಾಡಿಸಿರುತ್ತಾರೆ. ಹಾಗೆಯೇ ಟ್ವಿಟ್ಟರ್‍ನಲ್ಲಿ ನರೇಂದ್ರ ಮೋದಿಯವರನ್ನು ಫಾಲೋ ಮಾಡುತ್ತಿರುವವರಲ್ಲಿ ಶೇ.60 ರಷ್ಟ್ಟು ಫೇಕ್ ಅಕೌಂಟ್‍ಗಳೇ ಇವೆ ನ್ಯೂಇಂಡಿಯನ್ ಎಕ್ಸ್‍ಪ್ರೆಸ್, ಡೈಲಿಯೊ, ಎಸ್.ಬಿ.ಎಸ್ ಮುಂತಾದ ನಿಯತಕಾಲಿಕಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...