Homeಸಿನಿಮಾಕ್ರೀಡೆಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಾಯಕರಿಗಿರುವ ಫಾಲೋವರ್ಸ್‍ಗಳ ಸಂಖ್ಯೆಯು ಅವರು ಸಮಾಜದಲ್ಲಿ ಬೀರುವ ಪ್ರಭಾವವನ್ನು ಸಹ ಸೂಚಿಸುತ್ತದೆ. ಈ ನಿಟ್ಟಿನಲ್ಲಿ ಫೇಸ್ ಬುಕ್‍ನಲ್ಲಿ ಯಾವ ಯಾವ ಸ್ಟಾರ್‍ಗೆ ಎಷ್ಟೆಷ್ಟು ಜನ ಫಾಲೋವರ್ಸ್ ಇದ್ದಾರೆ ಎಂದು ಗೊತ್ತಾದರೆ ನೀವು ಬೆಚ್ಚಿ ಬೀಳುತ್ತೀರಿ.. ಇನ್ನೇಕೆ ತಡ ನೋಡಿಬಿಡಿ. ಕ್ರೀಡೆ, ಸಿನಿಮಾ ಮತ್ತು ರಾಜಕೀಯ ಸೆಲೆಬ್ರೆಟಿಗಳನ್ನು ನೋಡೋಣ.

ಯುವಜನರ ನೆಚ್ಚಿನ ಕ್ರಿಕೆಟಿಗ ವಿರಾಟ್ ಕೊಯ್ಲಿಗೆ ಫೇಸ್ ಬುಕ್ ನಲ್ಲಿ 3 ಕೋಟಿ 71 ಲಕ್ಷ ಬೆಂಬಲಿಗರಿದ್ದರೆ, ಸಚಿನ್ ತೆಂಡೂಲ್ಕರ್‍ಗೆ 2 ಕೋಟಿ 84 ಲಕ್ಷ ಜನ ಫಾಲೋವರ್ಸ್ ಇದ್ದಾರೆ. ಮಹೇಂದ್ರ ಸಿಂಗ್ ಧೋನಿ ಪೇಜ್‍ಗೆ 2 ಕೋಟಿ 4 ಲಕ್ಷ ಲೈಕ್ಸ್ ಇವೆ. ಯುವರಾಜ್ ಸಿಂಗ್‍ಗೆ 1ಕೋಟಿ 45 ಲಕ್ಷ, ವೀರೇಂದರ್ ಸೆಹ್ವಾಗ್‍ಗೆ 1ಕೋಟಿ 43 ಲಕ್ಷ, ರೋಹಿತ್ ಶರ್ಮಾಗೆ 1ಕೋಟಿ 9 ಲಕ್ಷ ಬೆಂಬಲಿಗರಿದ್ದಾರೆ. ಇನ್ನು ಭಾರತದ ಟೆನಿಸ್ ತಾರೆ ಸಾನಿಯ ಮಿರ್ಜಾಗೆ 1ಕೋಟಿ 24 ಲಕ್ಷ ಫಾಲೋವರ್ಸ್ ಇದ್ದರೆ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‍ಗೆ 78ಲಕ್ಷ ಲೈಕ್ಸ್ ಇವೆ.

ಸಿನಿಮಾ ತಾರೆಯರಲ್ಲಿ ಪ್ರಿಯಾಂಕ ಚೋಪ್ರಾಗೆ ಬರೋಬ್ಬರಿ 4ಕೋಟಿ ಫಾಲೋವರ್ಸ್ ಇದ್ದಾರೆ. ಇನ್ನುಳಿದಂತೆ ಸಲ್ಮಾನ್ ಖಾನ್ ಗೆ 3ಕೋಟಿ, 63ಲಕ್ಷ, ದೀಪಿಕಾ ಪಡುಕೋಣೆಗೆ 3ಕೋಟಿ, 42 ಲಕ್ಷ, ಅಮಿತಾಬ್ ಬಚ್ಚನ್‍ಗೆ 3ಕೋಟಿ 2 ಲಕ್ಷ, ಶಾರುಕ್ ಖಾನ್‍ಗೆ 2ಕೋಟಿ 94 ಲಕ್ಷ, ಶ್ರೇಯಾ ಘೋಷಾಲ್‍ಗೆ 2ಕೋಟಿ 77 ಲಕ್ಷ, ಮಾಧುರಿ ದಿಕ್ಷಿತ್‍ಗೆ 2ಕೋಟಿ 57 ಲಕ್ಷ, ಅಮಿರ್ ಖಾನ್‍ಗೆ 1ಕೋಟಿ 55 ಲಕ್ಷ, ಕತ್ರಿನಾ ಕೈಫ್‍ಗೆ 1ಕೋಟಿ 41 ಲಕ್ಷ ಫ್ಯಾನ್ಸ್ ಇದ್ದಾರೆ.

ರಾಜಕೀಯ ವ್ಯಕ್ತಿಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಫೇಸ್ ಬುಕ್ ನಲ್ಲಿ 4 ಕೋಟಿ 39 ಲಕ್ಷ ಫಾಲೋವರ್ಸ್ ಇದ್ದಾರೆ. ಅಮಿತ್ ಶಾಗೆ 1ಕೋಟಿ 44 ಲಕ್ಷ, ದೇವೇಂದ್ರ ಫಡ್ನಾವಿಸ್ 92 ಲಕ್ಷ, ಅರವಿಂದ್ ಕೇಜ್ರಿವಾಲ್‍ಗೆ 71 ಲಕ್ಷ, ಗೌತಮ್ ಗಂಭೀರ್ 69 ಲಕ್ಷ, ಅಖಿಲೇಶ್ ಯಾದವ್ 68 ಲಕ್ಷ, ರಾಜ್‍ನಾಥ್ ಸಿಂಗ್ 68 ಲಕ್ಷ, ಕಮಲ್ ಹಾಸನ್ 35 ಲಕ್ಷ, ಮಮತಾ ಬ್ಯಾನರ್ಜಿ 30 ಲಕ್ಷ, ರಾಹುಲ್ ಗಾಂಧಿ 28 ಲಕ್ಷ, ಅಸಾದ್ದೀನ್ ಒವೈಸಿಗೆ 26 ಲಕ್ಷ, ಎಂ.ಕೆ ಸ್ಟ್ಯಾಲಿನ್ 20 ಲಕ್ಷ, ಚಂದ್ರಬಾಬು ನಾಯ್ಡು 18 ಲಕ್ಷ, ಜಗನ್ ಮೋಹನ್ ರೆಡ್ಡಿ 17 ಲಕ್ಷ, ನವೀನ್ ಪಟ್ನಾಯಕ್ 14 ಲಕ್ಷ ಫಾಲೋವರ್ಸ್‍ಗಳನ್ನು ಹೊಂದಿದ್ದಾರೆ.

ಕರ್ನಾಟಕಕ್ಕೆ ಬರುವುದಾದರೆ ಪ್ರಕಾಶ್ ರಾಜ್‍ರವರಿಗೆ 44 ಲಕ್ಷ, ಯಡಿಯೂರಪ್ಪನವರಿಗೆ 17 ಲಕ್ಷ, ರಮ್ಯ ದಿವ್ಯ ಸ್ಪಂದನರವರಿಗೆ 15 ಲಕ್ಷ, ಡಿ.ಕೆ ಶಿವಕುಮಾರ್‍ಗೆ 5 ಲಕ್ಷ, ಎಚ್.ಡಿ ಕುಮಾರಸ್ವಾಮಿರವರಿಗೆ 2 ಲಕ್ಷ, ಸಿದ್ದರಾಮಯ್ಯನವರಿಗೆ 2 ಲಕ್ಷ, ಎಚ್.ಡಿ ದೇವೇಗೌಡರಿಗೆ 1 ಲಕ್ಷ ಅಭಿಮಾನಿಗಳಿದ್ದಾರೆ.

ಸಿನಿಮಾ ನಟರಲ್ಲಿ ಹರಿಪ್ರಿಯಾಗೆ 21 ಲಕ್ಷ, ದರ್ಶನ್ ತೂಗುದೀಪ್‍ಗೆ 12 ಲಕ್ಷ, ರಾಧಿಕ ಪಂಡಿತ್‍ಗೆ 9 ಲಕ್ಷ, ಯಶ್‍ಗೆ 7ಲಕ್ಷ, ಪುನೀತ್ ರಾಜ್‍ಕುಮಾರ್‍ರವರಿಗೆ 7 ಲಕ್ಷ, ಸುದೀಪ್‍ರವರ ಫ್ಯಾನ್ಸ್ ಅಸೋಷಿಯೇಷನ್ ಪೇಜ್ ಗೆ 14 ಲಕ್ಷ ಫಾಲೋವರ್ಸ್ ಇದ್ದಾರೆ.

ಇದರಲ್ಲಿ ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಮತ್ತೆ ಕೆಲವು ರಾಜಕಾರಣಿಗಳು ಸಾಕಷ್ಟು ದುಡ್ಡು ಖರ್ಚು ಮಾಡಿ ತಮ್ಮ ಪೇಜ್ ಅನ್ನು ಪ್ರಮೋಷನ್ ಮಾಡಿಸಿರುತ್ತಾರೆ. ಹಾಗೆಯೇ ಟ್ವಿಟ್ಟರ್‍ನಲ್ಲಿ ನರೇಂದ್ರ ಮೋದಿಯವರನ್ನು ಫಾಲೋ ಮಾಡುತ್ತಿರುವವರಲ್ಲಿ ಶೇ.60 ರಷ್ಟ್ಟು ಫೇಕ್ ಅಕೌಂಟ್‍ಗಳೇ ಇವೆ ನ್ಯೂಇಂಡಿಯನ್ ಎಕ್ಸ್‍ಪ್ರೆಸ್, ಡೈಲಿಯೊ, ಎಸ್.ಬಿ.ಎಸ್ ಮುಂತಾದ ನಿಯತಕಾಲಿಕಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...