Homeಎಕಾನಮಿಬಜಾಜ್ ಅವರ ಬುಲಂದ್ “ಟೀಕೆ” ಮತ್ತು ಹಮಾರಾ “ಮಿಜಾಜ್” : ರಾಜಾರಾಂ ತಲ್ಲೂರು

ಬಜಾಜ್ ಅವರ ಬುಲಂದ್ “ಟೀಕೆ” ಮತ್ತು ಹಮಾರಾ “ಮಿಜಾಜ್” : ರಾಜಾರಾಂ ತಲ್ಲೂರು

- Advertisement -
- Advertisement -

ಸರ್ಕಾರವೊಂದು ತನ್ನ ಎಲ್ಲ ಬಲ ಬಳಸಿಕೊಂಡು, ತನ್ನ ವಿರುದ್ಧ ತಳಮಟ್ಟದಲ್ಲಿ ಯಾರೂ ಚಕಾರ ಎತ್ತುವಂತಿಲ್ಲ ಎಂಬ ವಾತಾವರಣ ನಿರ್ಮಿಸಿರುವಾಗ, ಧ್ವನಿ ಎತ್ತಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಸಂದೇಶವನ್ನೂ ತನ್ನ ಕ್ರಿಯೆಯ ಮೂಲಕವೇ ಸ್ಪಷ್ಟವಾಗಿ ನೀಡಿರುವಾಗ, ರಾಹುಲ್ ಬಜಾಜ್ ಅವರ ಈ ಪ್ರತಿಕ್ರಿಯೆ “ಕೃತಕವಾಗಿ ಉತ್ಪಾದಿಸಲಾದ” ಪ್ರತಿಕ್ರಿಯೆ ಎಂಬ ಯೋಚನೆಗಳು ಬರುವುದೂ ಸಹಜ.

ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ ಎಂಬುದರಲ್ಲಿ ಅಧಿಕಾರಸ್ಥರ ಪಾವತಿ ಕೂಲಿಗಳು (ಟ್ರಾಲ್ ಸೇನೆ) ಬಿಟ್ಟರೆ ಬೇರಾರಿಗೂ ಎಲ್ಲೂ ಯಾರಿಗೂ ಸಂಶಯ ಉಳಿದಂತಿಲ್ಲ. ಸ್ವತಃ ಹಣಕಾಸು ಸಚಿವೆ ಎಲ್ಲವೂ ಸರಿಯಿಲ್ಲ, ಆದರೆ ಪೂರ್ಣ ಕೆಟ್ಟಿಲ್ಲ ಎಂದು ಸಂಸತ್ತಿನಲ್ಲೇ ದಾಖಲಿಸಿಯಾಗಿದೆ. ಸಾರ್ವಜನಿಕ ಅಭಿಪ್ರಾಯಗಳೂ ಈ ನಿಟ್ಟಿನಲ್ಲಿ ಹರಳುಗಟ್ಟಿವೆ.

ಮೊನ್ನೆ ಡಿಸೆಂಬರ್ ಒಂದರಂದು ಎಕನಾಮಿಕ್ ಟೈಮ್ಸ್ ಕಾನ್‍ಕ್ಲೇವ್‍ನಲ್ಲಿ ವೇದಿಕೆಯ ಮೇಲಿದ್ದ ಗೃಹ ಸಚಿವ ಅಮಿತ್ ಷಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರೈಲ್ವೇ ಸಚಿವ ಪಿಯೂಷ ಗೋಯಲ್ ಅವರನ್ನುದ್ದೇಶಿಸಿ ಬಜಾಜ್ ಗುಂಪಿನ ಮುಖ್ಯಸ್ಥ ರಾಹುಲ್ ಬಜಾಜ್ ಅವರು, ಸರ್ಕಾರದ ವಿರುದ್ಧ ಕುತೂಹಲಕರ ಟೀಕೆಯೊಂದನ್ನು ಮಾಡುತ್ತಾರೆ. “ಯುಪಿಎ -2 ಆಳ್ವಿಕೆಯಲ್ಲಿ ನಾವು (ಉದ್ಯಮಿಗಳು) ಯಾರನ್ನು ಬೇಕಿದ್ದರೂ ಟೀಕಿಸಬಹುದಿತ್ತು. ಆದರೆ ನೀವೀಗ ಅದನ್ನು (ಟೀಕೆಯನ್ನು) ಸ್ವೀಕರಿಸುತ್ತೀರಿ ಎಂಬ ವಿಶ್ವಾಸ ಇಲ್ಲ. ನಾನು ಹೇಳುತ್ತಿರುವುದು ತಪ್ಪಿರಬಹುದು, ಆದರೆ ಎಲ್ಲರಲ್ಲೂ ಈ ಭಾವನೆ ಇದೆ.”

ಅಸಹನೆಯ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿರುವಾಗ ಹುಲ್ಲುಕಡ್ಡಿಯಂತೆ ಕಾಣಿಸಿಕೊಂಡ ಈ ಟೀಕೆಯನ್ನು ಎಲ್ಲರೂ ಗಪ್ಪೆಂದು ಹಿಡಿದು ಕುಳಿತಿರುವ ರೀತಿ – ಹಲವಾರು ವ್ಯಥೆಗಳನ್ನು ಒಟ್ಟಾಗಿ ಹೇಳುತ್ತಿದೆ. ಅಲ್ಲಿ ದೇಶದ ಹಲವು ಮಂದಿ ಪ್ರಮುಖ ಕಾರ್ಪೋರೇಟ್ ಧಣಿಗಳು ಹಾಜರಿದ್ದರು.

ಅಧಿಕಾರಸ್ಥರ ಪ್ರತಿಕ್ರಿಯೆ
ಮೊದಲನೆಯದಾಗಿ ಬಜಾಜ್ ಟೀಕೆಗೆ ಅಲ್ಲೇ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಷಾ , ನರೇಂದ್ರ ಮೋದಿ ಸರ್ಕಾರ ಅತ್ಯಂತ ಹೆಚ್ಚು ಟೀಕೆಗೊಳಗಾಗಿರುವ ಸರ್ಕಾರ ಎಂದರಲ್ಲದೇ ಬಿಜೆಪಿಗೆ ಸತ್ಯ ತಿಳಿಸುವ ಕುರಿತು ಇನ್ನೂ ಜನರಲ್ಲಿ ಭಯ ಇದ್ದರೆ, ಅದನ್ನು ಹೋಗಲಾಡಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಭರವಸೆ ಇತ್ತರು. ಇದು ಸರ್ಕಾರದ ಕಡೆಯಿಂದ ಬಂದ ತಕ್ಷಣದ ಪ್ರತಿಕ್ರಿಯೆ.

ಅದಾದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮರುದಿನ, ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯಿಸಿ, ಪ್ರಶ್ನೆ ಕೇಳಿ ಉತ್ತರ ಪಡೆಯುವ ಬದಲು, ಅಭಿಪ್ರಾಯಗಳನ್ನು ಹರಡುತ್ತಾ ಹೋದರೆ ಆ ಅಭಿಪ್ರಾಯ ಜನಪ್ರಿಯವಾಗತೊಡಗಿದೊಡನೆ ದೇಶದ ಹಿತಾಸಕ್ತಿಗೆ ಹಾನಿ ಆಗಬಹುದೆಂದು ಎಚ್ಚರಿಸಿದರು.

ಅದೇದಿನ ಅಧಿಕಾರಸ್ಥರ ಮುಖವಾಣಿ ಸ್ವರಾಜ್ಯ ಮ್ಯಾಗಝೀನಿನ ಸಂಪಾದಕ ಆನಂದ್ ರಂಗನಾಥನ್ ಅವರು ಒಂದು ಟ್ವೀಟ್‍ನಲ್ಲಿ “ಬಜಾಜ್‍ಗೆ ಪ್ರಜ್ಞೆ ಬರಬೇಕೆಂದರೆ (ಅವರ ಸ್ಕೂಟರಿನಂತೆ) ಎರಡು ಬಾರಿ ಬಗ್ಗಿಸಿ ಕಿಕ್ ಒದೆಯಬೇಕು. ಓಆಂ ಸರ್ಕಾರ ಎದುರಿಸಿದಷ್ಟು ಟೀಕೆಗಳನ್ನು ಯಾರೂ ಎದುರಿಸಿಲ್ಲ. ಅವರು ಯಾವ ಲೋಕದಲ್ಲಿದ್ದಾರೆ? ಭೂಲೋಕದಲ್ಲಂತೂ ಅಲ್ಲ” ಎಂದು ವ್ಯಂಗ್ಯವಾಗಿ ಹೇಳಿದರು.

ಕಳೆದ ಆರು ವರ್ಷಗಳಲ್ಲಿ ಹಾಲೀ ಕೇಂದ್ರ ಸರ್ಕಾರದ ಮತ್ತವರ ಸಮರ್ಥಕರ ಕಾರ್ಯವೈಖರಿಯನ್ನು ಅರಿತಿರುವವರಿಗೆ ಈ ಮೂರು ಪ್ರತಿಕ್ರಿಯೆಗಳು ಸ್ತರವಾರು ಏನನ್ನು ಧ್ವನಿಸುತ್ತಿವೆ ಎಂಬುದನ್ನು ವಿವರಿಸಬೇಕಾಗಿಲ್ಲ.

ಉದ್ಯಮಿಗಳೇಕೆ ಹೀಗೆ?

ಇಲ್ಲಿ ನಿಜಕ್ಕೂ ಅಚ್ಚರಿ ಪಡಬೇಕಾಗಿರುವುದು ರಾಹುಲ್ ಬಜಾಜ್, ಕಿರಣ್ ಮಜುಂದಾರ್ ಅವರಂತಹ ದೊಡ್ಡ ಉದ್ಯಮಪತಿಗಳ ಈ ಚಹಾಕಪ್ಪಿನ ಹಠಾತ್ ಕ್ರಾಂತಿಯ ಬಗ್ಗೆ. ಯಾಕೆಂದರೆ, ಹಾಲೀ ಕೇಂದ್ರ ಸರ್ಕಾರ ಕಳೆದ ಆರು ವರ್ಷಗಳಲ್ಲಿ, ಅದರಲ್ಲೂ ನೋಟು ರದ್ಧತಿಯ ಬಳಿಕ, ಉದ್ದಿಮೆಗಳಿಗೆ ಕೊಟ್ಟಿರುವಷ್ಟು ಸವಲತ್ತುಗಳನ್ನು ಬೇರಾರಿಗೂ ಕೊಟ್ಟಿಲ್ಲ. ಆದರೂ ಹೀಗೇಕೆ?

ಒಂದು ಮಗ್ಗುಲಿನಿಂದ ನೋಡಿದಾಗ, ಇದು ಅಧಿಕಾರಸ್ಥರಿಗೆ ಹತ್ತಿರ ಇರುವ ಉದ್ದಿಮೆಗಳ (ಉದಾಹರಣೆಗೆ ಎಲ್ಲ ಆರ್ಥಿಕ ಹೊಡೆತಗಳ ಹೊರತಾಗಿಯೂ ಅಸ್ವಾಭಾವಿಕ ಎಂಬಷ್ಟು ಬೆಳವಣಿಗೆ ಕಂಡಿರುವ ಅದಾನಿ, ಅಂಬಾನಿ ಇತ್ಯಾದಿ ಕಾರ್ಪೋರೇಟ್ ಗಳು) ವಿರುದ್ಧ ಸ್ವಲ್ಪ ದೂರದಲ್ಲಿರುವವರ ಅಸಹಾಯಕ ಅಸಹನೆಯಂತೆ ಕಾಣಿಸುತ್ತದೆ.
ಎರಡನೆಯದಾಗಿ ತಮ್ಮ ಇಷ್ಟಕ್ಕೆ ತಕ್ಕಂತೆ ನಡೆದುಕೊಳ್ಳದಿದ್ದರೆ, ಸರ್ಕಾರಿ ವ್ಯವಸ್ಥೆ ಬಳಸಿಕೊಂಡು ಉದ್ದಿಮೆಗಳವರ ಬೆನ್ನು ಮುರಿಯಲು ನಾವು ಹಿಂಜರಿಯಲಾರೆವು ಎಂಬ ಸರ್ಕಾರದ ಪರೋಕ್ಷ ಎಚ್ಚರಿಕೆಗೆ ಉದ್ಯಮಿ ವರ್ಗದ ಭಯ-ಆತಂಕದ ಪ್ರತಿಕ್ರಿಯೆಯೂ ಇದಾಗಿರಬಹುದು.

ಇದಲ್ಲದೇ ಬೇರೆ ಕಾರಣಗಳೂ ಇದ್ದಿರಬಹುದು. ಆದರೆ ಕಾರಣಗಳಿಗಿಂತ ಹೆಚ್ಚಾಗಿ ಇದೊಂದು ಸುಯೋಜಿತ ತಂತ್ರವಾಗಿರಬಹುದು ಎಂಬ ಸಂಶಯ ಮೂಡಿದರೂ ಅಚ್ಚರಿ ಇಲ್ಲ.

ಮಾರುಕಟ್ಟೆಯ ವಾಸ್ತವಗಳು

ಆದರೆ ಸೇವಾ ಉದ್ಯಮವನ್ನೇ 65%ರಷ್ಟು ನೆಚ್ಚಿಕೊಂಡಿರುವ ಭಾರತದಂತಹ ದೇಶವೊಂದರಲ್ಲಿ ಮೂಲಸೌಕರ್ಯ, ಆಟೊ ಮೊಬೈಲ್‍ನಂತಹ ಉದ್ಯಮಗಳು ಬದಿಗೆ ಸರಿಯತೊಡಗಿದ್ದು ಹೊಸ ಬೆಳವಣಿಗೆಯೇನಲ್ಲ. ಇದು 90ರ ದಶಕದ ಕೊನೆಯಲ್ಲಿ ನಡೆದ “ಐಟಿ ಕ್ರಾಂತಿ”ಯ ಫಲ.

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆ ಕುಸಿತ, ಮಾರುಕಟ್ಟೆಯಲ್ಲಿ ಬೇರೆ ದೇಶಗಳ ಬುಡ ಕತ್ತರಿಸುವ ಸ್ಪರ್ಧೆ ಹಾಗೂ ಮೂರನೇ ಹಂತದ ಐಟಿ ಕ್ರಾಂತಿ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇತ್ಯಾದಿ) ಆರಂಭಗೊಂಡಿರುವುದರಿಂದ, ಅದಕ್ಕೆ ಸನ್ನದ್ಧಗೊಂಡಿರದ ಭಾರತದ ಐಟಿ ಉದ್ಯಮ ಥಂಡಾ ಹೊಡೆಯುತ್ತಿದೆ. ಪರ್ಯಾಯ ಇಂಧನ ಮೂಲಗಳ ಗಲಾಟೆಯಲ್ಲಿ ಆಟೊಮೊಬೈಲ್ ಉದ್ಯಮ ಕೂಡ ದಾರಿಕಾಣದೆ ನಿಂತಿದೆ.

ಇತ್ತ ಡಿಮಾನೆಟೈಸೇಷನ್‍ನಿಂದಾಗಿ ದೇಶದ ಹಣಕಾಸು ವ್ಯವಸ್ಥೆಗೆ “ಸಾಸಿವೆ ಡಬ್ಬಿಯ ಶಾಪ” ತಗುಲಿದೆ. ಒಂದು ಪುಟ್ಟ ಗಲ್ಲಿಯ ಆರ್ಥಿಕತೆಯ ಮೇಲೆ ಇದರಿಂದ ಬಿದ್ದಿರುವ ಹೊಡೆತ ಹಂತಹಂತವಾಗಿ ಮೇಲೆದ್ದು, ಎಲ್ಲವನ್ನೂ ನುಂಗಿ ನೊಣೆಯುತ್ತಾ, ಬಹುತೇಕ ಎಲ್ಲ ಮೂಲಸೌಕರ್ಯ ಉದ್ದಿಮೆಗಳ ಮೇಲೂ ದುಷ್ಪರಿಣಾಮ ಬೀರಿದೆ.

ನೋಟುರದ್ಧತಿಯ ಬಳಿಕ ಕೇಂದ್ರ ಸರ್ಕಾರ ತನ್ನಲ್ಲಿ ಆರೋಗ್ಯವಂತ ಯೋಜನೆಯೊಂದು ಇದ್ದಿದ್ದರೆ, ತನ್ನ ಮರುನಿರ್ಮಾಣ ಕೆಲಸವನ್ನು ದೇಶದ ಕೃಷಿಭೂಮಿಗಳಿಂದ ಆರಂಭಿಸಬೇಕಿತ್ತು. ಅದನ್ನು ಬಿಟ್ಟು ಕೃಷಿ ಭೂಮಿಗಳನ್ನು ಈಗ ಕೆಲಸ ಇಲ್ಲದೆ ಕುಳಿತಿರುವ ಕಾರ್ಪೋರೇಟ್ ಗಳಿಗೆ ಹಸ್ತಾಂತರಿಸುವ ಹಠ ಹಿಡಿದು ಕಾರ್ಯಾಚರಿಸುತ್ತಿದೆ. ಏನೆಲ್ಲ ಇದೆಯೋ ಅದನ್ನೆಲ್ಲ ಕಾರ್ಪೋರೇಟ್ ಗಳಿಗೆ ದಾನ ಕೊಡುವುದೇ ತನ್ನ ಉದ್ಯೋಗ ಎಂದು ತಿಳಿದಂತಿದೆ.

ಒಟ್ಟು ಅರ್ಥ ಏನು?

ಇಂತಹದೊಂದು ಗಂಭೀರ ಸನ್ನಿವೇಶದಲ್ಲಿ ಕೈಗಾರಿಕೆಗಳ ಪ್ರತಿನಿಧಿಯೊಬ್ಬರು ಸರ್ಕಾರವನ್ನು ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡಾಗ ಅದನ್ನು ದೇಶದ ನಾಗರಿಕ ಹೇಗೆ ಗ್ರಹಿಸಬೇಕು?

ಸರ್ಕಾರವೊಂದು ತನ್ನ ಎಲ್ಲ ಬಲ ಬಳಸಿಕೊಂಡು, ತನ್ನ ವಿರುದ್ಧ ತಳಮಟ್ಟದಲ್ಲಿ ಯಾರೂ ಚಕಾರ ಎತ್ತುವಂತಿಲ್ಲ ಎಂಬ ವಾತಾವರಣ ನಿರ್ಮಿಸಿರುವಾಗ, ಧ್ವನಿ ಎತ್ತಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಸಂದೇಶವನ್ನೂ ತನ್ನ ಕ್ರಿಯೆಯ ಮೂಲಕವೇ ಸ್ಪಷ್ಟವಾಗಿ ನೀಡಿರುವಾಗ, ರಾಹುಲ್ ಬಜಾಜ್ ಅವರ ಈ ಪ್ರತಿಕ್ರಿಯೆ “ಕೃತಕವಾಗಿ ಉತ್ಪಾದಿಸಲಾದ” ಪ್ರತಿಕ್ರಿಯೆ ಎಂಬ ಯೋಚನೆಗಳು ಬರುವುದೂ ಸಹಜ.

ಸಾವಿರಾರು ರೈತರು ದಿಲ್ಲಿ ಚಲೋ ಮಾಡಿದಾಗಲಾಗಲೀ, ಬ್ಯಾಂಕ್ ನೌಕರರು-ಸಾರ್ವಜನಿಕ ವಲಯದ ಸಂಸ್ಥೆಗಳ ಉದ್ಯೋಗಿಗಳು ತಮ್ಮ ಸಂಸ್ಥೆಗಳ ಅಸ್ತಿತ್ವಕ್ಕೆ ಧಕ್ಕೆ ಬಂದಿದೆ ಎಂದು ನಡೆಸಿದ ಹೋರಾಟಕ್ಕಾಗಲೀ, ಯಾವತ್ತೂ ಮಣೆ ಹಾಕದ ಮಾಧ್ಯಮಗಳು ಇದೊಂದು ಒಂಟಿಧ್ವನಿಗೆ ಈ ಮಹತ್ವ ಯಾಕೆ ಕೊಟ್ಟವು?!

ಸದ್ಯಕ್ಕೆ ಚಹಾಕಪ್ಪಿನಲ್ಲಿ ನಡೆದುಹೋದ ಈ ಕ್ರಾಂತಿ ಅಲ್ಲಿಂದ ಹೊರಜಗತ್ತಿಗೆ ಚೆಲ್ಲಿ ಬಿರುಗಾಳಿ ಮೂಡಿಸೀತೇ ಎಂಬುದು ಸ್ಪಷ್ಟವಾಗಲು ಇನ್ನೂ ಸ್ವಲ್ಪ ಸಮಯ ಕಾದುನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...