Homeಎಕಾನಮಿಬಜಾಜ್ ಅವರ ಬುಲಂದ್ “ಟೀಕೆ” ಮತ್ತು ಹಮಾರಾ “ಮಿಜಾಜ್” : ರಾಜಾರಾಂ ತಲ್ಲೂರು

ಬಜಾಜ್ ಅವರ ಬುಲಂದ್ “ಟೀಕೆ” ಮತ್ತು ಹಮಾರಾ “ಮಿಜಾಜ್” : ರಾಜಾರಾಂ ತಲ್ಲೂರು

- Advertisement -
- Advertisement -

ಸರ್ಕಾರವೊಂದು ತನ್ನ ಎಲ್ಲ ಬಲ ಬಳಸಿಕೊಂಡು, ತನ್ನ ವಿರುದ್ಧ ತಳಮಟ್ಟದಲ್ಲಿ ಯಾರೂ ಚಕಾರ ಎತ್ತುವಂತಿಲ್ಲ ಎಂಬ ವಾತಾವರಣ ನಿರ್ಮಿಸಿರುವಾಗ, ಧ್ವನಿ ಎತ್ತಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಸಂದೇಶವನ್ನೂ ತನ್ನ ಕ್ರಿಯೆಯ ಮೂಲಕವೇ ಸ್ಪಷ್ಟವಾಗಿ ನೀಡಿರುವಾಗ, ರಾಹುಲ್ ಬಜಾಜ್ ಅವರ ಈ ಪ್ರತಿಕ್ರಿಯೆ “ಕೃತಕವಾಗಿ ಉತ್ಪಾದಿಸಲಾದ” ಪ್ರತಿಕ್ರಿಯೆ ಎಂಬ ಯೋಚನೆಗಳು ಬರುವುದೂ ಸಹಜ.

ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ ಎಂಬುದರಲ್ಲಿ ಅಧಿಕಾರಸ್ಥರ ಪಾವತಿ ಕೂಲಿಗಳು (ಟ್ರಾಲ್ ಸೇನೆ) ಬಿಟ್ಟರೆ ಬೇರಾರಿಗೂ ಎಲ್ಲೂ ಯಾರಿಗೂ ಸಂಶಯ ಉಳಿದಂತಿಲ್ಲ. ಸ್ವತಃ ಹಣಕಾಸು ಸಚಿವೆ ಎಲ್ಲವೂ ಸರಿಯಿಲ್ಲ, ಆದರೆ ಪೂರ್ಣ ಕೆಟ್ಟಿಲ್ಲ ಎಂದು ಸಂಸತ್ತಿನಲ್ಲೇ ದಾಖಲಿಸಿಯಾಗಿದೆ. ಸಾರ್ವಜನಿಕ ಅಭಿಪ್ರಾಯಗಳೂ ಈ ನಿಟ್ಟಿನಲ್ಲಿ ಹರಳುಗಟ್ಟಿವೆ.

ಮೊನ್ನೆ ಡಿಸೆಂಬರ್ ಒಂದರಂದು ಎಕನಾಮಿಕ್ ಟೈಮ್ಸ್ ಕಾನ್‍ಕ್ಲೇವ್‍ನಲ್ಲಿ ವೇದಿಕೆಯ ಮೇಲಿದ್ದ ಗೃಹ ಸಚಿವ ಅಮಿತ್ ಷಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರೈಲ್ವೇ ಸಚಿವ ಪಿಯೂಷ ಗೋಯಲ್ ಅವರನ್ನುದ್ದೇಶಿಸಿ ಬಜಾಜ್ ಗುಂಪಿನ ಮುಖ್ಯಸ್ಥ ರಾಹುಲ್ ಬಜಾಜ್ ಅವರು, ಸರ್ಕಾರದ ವಿರುದ್ಧ ಕುತೂಹಲಕರ ಟೀಕೆಯೊಂದನ್ನು ಮಾಡುತ್ತಾರೆ. “ಯುಪಿಎ -2 ಆಳ್ವಿಕೆಯಲ್ಲಿ ನಾವು (ಉದ್ಯಮಿಗಳು) ಯಾರನ್ನು ಬೇಕಿದ್ದರೂ ಟೀಕಿಸಬಹುದಿತ್ತು. ಆದರೆ ನೀವೀಗ ಅದನ್ನು (ಟೀಕೆಯನ್ನು) ಸ್ವೀಕರಿಸುತ್ತೀರಿ ಎಂಬ ವಿಶ್ವಾಸ ಇಲ್ಲ. ನಾನು ಹೇಳುತ್ತಿರುವುದು ತಪ್ಪಿರಬಹುದು, ಆದರೆ ಎಲ್ಲರಲ್ಲೂ ಈ ಭಾವನೆ ಇದೆ.”

ಅಸಹನೆಯ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿರುವಾಗ ಹುಲ್ಲುಕಡ್ಡಿಯಂತೆ ಕಾಣಿಸಿಕೊಂಡ ಈ ಟೀಕೆಯನ್ನು ಎಲ್ಲರೂ ಗಪ್ಪೆಂದು ಹಿಡಿದು ಕುಳಿತಿರುವ ರೀತಿ – ಹಲವಾರು ವ್ಯಥೆಗಳನ್ನು ಒಟ್ಟಾಗಿ ಹೇಳುತ್ತಿದೆ. ಅಲ್ಲಿ ದೇಶದ ಹಲವು ಮಂದಿ ಪ್ರಮುಖ ಕಾರ್ಪೋರೇಟ್ ಧಣಿಗಳು ಹಾಜರಿದ್ದರು.

ಅಧಿಕಾರಸ್ಥರ ಪ್ರತಿಕ್ರಿಯೆ
ಮೊದಲನೆಯದಾಗಿ ಬಜಾಜ್ ಟೀಕೆಗೆ ಅಲ್ಲೇ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಷಾ , ನರೇಂದ್ರ ಮೋದಿ ಸರ್ಕಾರ ಅತ್ಯಂತ ಹೆಚ್ಚು ಟೀಕೆಗೊಳಗಾಗಿರುವ ಸರ್ಕಾರ ಎಂದರಲ್ಲದೇ ಬಿಜೆಪಿಗೆ ಸತ್ಯ ತಿಳಿಸುವ ಕುರಿತು ಇನ್ನೂ ಜನರಲ್ಲಿ ಭಯ ಇದ್ದರೆ, ಅದನ್ನು ಹೋಗಲಾಡಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಭರವಸೆ ಇತ್ತರು. ಇದು ಸರ್ಕಾರದ ಕಡೆಯಿಂದ ಬಂದ ತಕ್ಷಣದ ಪ್ರತಿಕ್ರಿಯೆ.

ಅದಾದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮರುದಿನ, ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯಿಸಿ, ಪ್ರಶ್ನೆ ಕೇಳಿ ಉತ್ತರ ಪಡೆಯುವ ಬದಲು, ಅಭಿಪ್ರಾಯಗಳನ್ನು ಹರಡುತ್ತಾ ಹೋದರೆ ಆ ಅಭಿಪ್ರಾಯ ಜನಪ್ರಿಯವಾಗತೊಡಗಿದೊಡನೆ ದೇಶದ ಹಿತಾಸಕ್ತಿಗೆ ಹಾನಿ ಆಗಬಹುದೆಂದು ಎಚ್ಚರಿಸಿದರು.

ಅದೇದಿನ ಅಧಿಕಾರಸ್ಥರ ಮುಖವಾಣಿ ಸ್ವರಾಜ್ಯ ಮ್ಯಾಗಝೀನಿನ ಸಂಪಾದಕ ಆನಂದ್ ರಂಗನಾಥನ್ ಅವರು ಒಂದು ಟ್ವೀಟ್‍ನಲ್ಲಿ “ಬಜಾಜ್‍ಗೆ ಪ್ರಜ್ಞೆ ಬರಬೇಕೆಂದರೆ (ಅವರ ಸ್ಕೂಟರಿನಂತೆ) ಎರಡು ಬಾರಿ ಬಗ್ಗಿಸಿ ಕಿಕ್ ಒದೆಯಬೇಕು. ಓಆಂ ಸರ್ಕಾರ ಎದುರಿಸಿದಷ್ಟು ಟೀಕೆಗಳನ್ನು ಯಾರೂ ಎದುರಿಸಿಲ್ಲ. ಅವರು ಯಾವ ಲೋಕದಲ್ಲಿದ್ದಾರೆ? ಭೂಲೋಕದಲ್ಲಂತೂ ಅಲ್ಲ” ಎಂದು ವ್ಯಂಗ್ಯವಾಗಿ ಹೇಳಿದರು.

ಕಳೆದ ಆರು ವರ್ಷಗಳಲ್ಲಿ ಹಾಲೀ ಕೇಂದ್ರ ಸರ್ಕಾರದ ಮತ್ತವರ ಸಮರ್ಥಕರ ಕಾರ್ಯವೈಖರಿಯನ್ನು ಅರಿತಿರುವವರಿಗೆ ಈ ಮೂರು ಪ್ರತಿಕ್ರಿಯೆಗಳು ಸ್ತರವಾರು ಏನನ್ನು ಧ್ವನಿಸುತ್ತಿವೆ ಎಂಬುದನ್ನು ವಿವರಿಸಬೇಕಾಗಿಲ್ಲ.

ಉದ್ಯಮಿಗಳೇಕೆ ಹೀಗೆ?

ಇಲ್ಲಿ ನಿಜಕ್ಕೂ ಅಚ್ಚರಿ ಪಡಬೇಕಾಗಿರುವುದು ರಾಹುಲ್ ಬಜಾಜ್, ಕಿರಣ್ ಮಜುಂದಾರ್ ಅವರಂತಹ ದೊಡ್ಡ ಉದ್ಯಮಪತಿಗಳ ಈ ಚಹಾಕಪ್ಪಿನ ಹಠಾತ್ ಕ್ರಾಂತಿಯ ಬಗ್ಗೆ. ಯಾಕೆಂದರೆ, ಹಾಲೀ ಕೇಂದ್ರ ಸರ್ಕಾರ ಕಳೆದ ಆರು ವರ್ಷಗಳಲ್ಲಿ, ಅದರಲ್ಲೂ ನೋಟು ರದ್ಧತಿಯ ಬಳಿಕ, ಉದ್ದಿಮೆಗಳಿಗೆ ಕೊಟ್ಟಿರುವಷ್ಟು ಸವಲತ್ತುಗಳನ್ನು ಬೇರಾರಿಗೂ ಕೊಟ್ಟಿಲ್ಲ. ಆದರೂ ಹೀಗೇಕೆ?

ಒಂದು ಮಗ್ಗುಲಿನಿಂದ ನೋಡಿದಾಗ, ಇದು ಅಧಿಕಾರಸ್ಥರಿಗೆ ಹತ್ತಿರ ಇರುವ ಉದ್ದಿಮೆಗಳ (ಉದಾಹರಣೆಗೆ ಎಲ್ಲ ಆರ್ಥಿಕ ಹೊಡೆತಗಳ ಹೊರತಾಗಿಯೂ ಅಸ್ವಾಭಾವಿಕ ಎಂಬಷ್ಟು ಬೆಳವಣಿಗೆ ಕಂಡಿರುವ ಅದಾನಿ, ಅಂಬಾನಿ ಇತ್ಯಾದಿ ಕಾರ್ಪೋರೇಟ್ ಗಳು) ವಿರುದ್ಧ ಸ್ವಲ್ಪ ದೂರದಲ್ಲಿರುವವರ ಅಸಹಾಯಕ ಅಸಹನೆಯಂತೆ ಕಾಣಿಸುತ್ತದೆ.
ಎರಡನೆಯದಾಗಿ ತಮ್ಮ ಇಷ್ಟಕ್ಕೆ ತಕ್ಕಂತೆ ನಡೆದುಕೊಳ್ಳದಿದ್ದರೆ, ಸರ್ಕಾರಿ ವ್ಯವಸ್ಥೆ ಬಳಸಿಕೊಂಡು ಉದ್ದಿಮೆಗಳವರ ಬೆನ್ನು ಮುರಿಯಲು ನಾವು ಹಿಂಜರಿಯಲಾರೆವು ಎಂಬ ಸರ್ಕಾರದ ಪರೋಕ್ಷ ಎಚ್ಚರಿಕೆಗೆ ಉದ್ಯಮಿ ವರ್ಗದ ಭಯ-ಆತಂಕದ ಪ್ರತಿಕ್ರಿಯೆಯೂ ಇದಾಗಿರಬಹುದು.

ಇದಲ್ಲದೇ ಬೇರೆ ಕಾರಣಗಳೂ ಇದ್ದಿರಬಹುದು. ಆದರೆ ಕಾರಣಗಳಿಗಿಂತ ಹೆಚ್ಚಾಗಿ ಇದೊಂದು ಸುಯೋಜಿತ ತಂತ್ರವಾಗಿರಬಹುದು ಎಂಬ ಸಂಶಯ ಮೂಡಿದರೂ ಅಚ್ಚರಿ ಇಲ್ಲ.

ಮಾರುಕಟ್ಟೆಯ ವಾಸ್ತವಗಳು

ಆದರೆ ಸೇವಾ ಉದ್ಯಮವನ್ನೇ 65%ರಷ್ಟು ನೆಚ್ಚಿಕೊಂಡಿರುವ ಭಾರತದಂತಹ ದೇಶವೊಂದರಲ್ಲಿ ಮೂಲಸೌಕರ್ಯ, ಆಟೊ ಮೊಬೈಲ್‍ನಂತಹ ಉದ್ಯಮಗಳು ಬದಿಗೆ ಸರಿಯತೊಡಗಿದ್ದು ಹೊಸ ಬೆಳವಣಿಗೆಯೇನಲ್ಲ. ಇದು 90ರ ದಶಕದ ಕೊನೆಯಲ್ಲಿ ನಡೆದ “ಐಟಿ ಕ್ರಾಂತಿ”ಯ ಫಲ.

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆ ಕುಸಿತ, ಮಾರುಕಟ್ಟೆಯಲ್ಲಿ ಬೇರೆ ದೇಶಗಳ ಬುಡ ಕತ್ತರಿಸುವ ಸ್ಪರ್ಧೆ ಹಾಗೂ ಮೂರನೇ ಹಂತದ ಐಟಿ ಕ್ರಾಂತಿ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇತ್ಯಾದಿ) ಆರಂಭಗೊಂಡಿರುವುದರಿಂದ, ಅದಕ್ಕೆ ಸನ್ನದ್ಧಗೊಂಡಿರದ ಭಾರತದ ಐಟಿ ಉದ್ಯಮ ಥಂಡಾ ಹೊಡೆಯುತ್ತಿದೆ. ಪರ್ಯಾಯ ಇಂಧನ ಮೂಲಗಳ ಗಲಾಟೆಯಲ್ಲಿ ಆಟೊಮೊಬೈಲ್ ಉದ್ಯಮ ಕೂಡ ದಾರಿಕಾಣದೆ ನಿಂತಿದೆ.

ಇತ್ತ ಡಿಮಾನೆಟೈಸೇಷನ್‍ನಿಂದಾಗಿ ದೇಶದ ಹಣಕಾಸು ವ್ಯವಸ್ಥೆಗೆ “ಸಾಸಿವೆ ಡಬ್ಬಿಯ ಶಾಪ” ತಗುಲಿದೆ. ಒಂದು ಪುಟ್ಟ ಗಲ್ಲಿಯ ಆರ್ಥಿಕತೆಯ ಮೇಲೆ ಇದರಿಂದ ಬಿದ್ದಿರುವ ಹೊಡೆತ ಹಂತಹಂತವಾಗಿ ಮೇಲೆದ್ದು, ಎಲ್ಲವನ್ನೂ ನುಂಗಿ ನೊಣೆಯುತ್ತಾ, ಬಹುತೇಕ ಎಲ್ಲ ಮೂಲಸೌಕರ್ಯ ಉದ್ದಿಮೆಗಳ ಮೇಲೂ ದುಷ್ಪರಿಣಾಮ ಬೀರಿದೆ.

ನೋಟುರದ್ಧತಿಯ ಬಳಿಕ ಕೇಂದ್ರ ಸರ್ಕಾರ ತನ್ನಲ್ಲಿ ಆರೋಗ್ಯವಂತ ಯೋಜನೆಯೊಂದು ಇದ್ದಿದ್ದರೆ, ತನ್ನ ಮರುನಿರ್ಮಾಣ ಕೆಲಸವನ್ನು ದೇಶದ ಕೃಷಿಭೂಮಿಗಳಿಂದ ಆರಂಭಿಸಬೇಕಿತ್ತು. ಅದನ್ನು ಬಿಟ್ಟು ಕೃಷಿ ಭೂಮಿಗಳನ್ನು ಈಗ ಕೆಲಸ ಇಲ್ಲದೆ ಕುಳಿತಿರುವ ಕಾರ್ಪೋರೇಟ್ ಗಳಿಗೆ ಹಸ್ತಾಂತರಿಸುವ ಹಠ ಹಿಡಿದು ಕಾರ್ಯಾಚರಿಸುತ್ತಿದೆ. ಏನೆಲ್ಲ ಇದೆಯೋ ಅದನ್ನೆಲ್ಲ ಕಾರ್ಪೋರೇಟ್ ಗಳಿಗೆ ದಾನ ಕೊಡುವುದೇ ತನ್ನ ಉದ್ಯೋಗ ಎಂದು ತಿಳಿದಂತಿದೆ.

ಒಟ್ಟು ಅರ್ಥ ಏನು?

ಇಂತಹದೊಂದು ಗಂಭೀರ ಸನ್ನಿವೇಶದಲ್ಲಿ ಕೈಗಾರಿಕೆಗಳ ಪ್ರತಿನಿಧಿಯೊಬ್ಬರು ಸರ್ಕಾರವನ್ನು ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡಾಗ ಅದನ್ನು ದೇಶದ ನಾಗರಿಕ ಹೇಗೆ ಗ್ರಹಿಸಬೇಕು?

ಸರ್ಕಾರವೊಂದು ತನ್ನ ಎಲ್ಲ ಬಲ ಬಳಸಿಕೊಂಡು, ತನ್ನ ವಿರುದ್ಧ ತಳಮಟ್ಟದಲ್ಲಿ ಯಾರೂ ಚಕಾರ ಎತ್ತುವಂತಿಲ್ಲ ಎಂಬ ವಾತಾವರಣ ನಿರ್ಮಿಸಿರುವಾಗ, ಧ್ವನಿ ಎತ್ತಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಸಂದೇಶವನ್ನೂ ತನ್ನ ಕ್ರಿಯೆಯ ಮೂಲಕವೇ ಸ್ಪಷ್ಟವಾಗಿ ನೀಡಿರುವಾಗ, ರಾಹುಲ್ ಬಜಾಜ್ ಅವರ ಈ ಪ್ರತಿಕ್ರಿಯೆ “ಕೃತಕವಾಗಿ ಉತ್ಪಾದಿಸಲಾದ” ಪ್ರತಿಕ್ರಿಯೆ ಎಂಬ ಯೋಚನೆಗಳು ಬರುವುದೂ ಸಹಜ.

ಸಾವಿರಾರು ರೈತರು ದಿಲ್ಲಿ ಚಲೋ ಮಾಡಿದಾಗಲಾಗಲೀ, ಬ್ಯಾಂಕ್ ನೌಕರರು-ಸಾರ್ವಜನಿಕ ವಲಯದ ಸಂಸ್ಥೆಗಳ ಉದ್ಯೋಗಿಗಳು ತಮ್ಮ ಸಂಸ್ಥೆಗಳ ಅಸ್ತಿತ್ವಕ್ಕೆ ಧಕ್ಕೆ ಬಂದಿದೆ ಎಂದು ನಡೆಸಿದ ಹೋರಾಟಕ್ಕಾಗಲೀ, ಯಾವತ್ತೂ ಮಣೆ ಹಾಕದ ಮಾಧ್ಯಮಗಳು ಇದೊಂದು ಒಂಟಿಧ್ವನಿಗೆ ಈ ಮಹತ್ವ ಯಾಕೆ ಕೊಟ್ಟವು?!

ಸದ್ಯಕ್ಕೆ ಚಹಾಕಪ್ಪಿನಲ್ಲಿ ನಡೆದುಹೋದ ಈ ಕ್ರಾಂತಿ ಅಲ್ಲಿಂದ ಹೊರಜಗತ್ತಿಗೆ ಚೆಲ್ಲಿ ಬಿರುಗಾಳಿ ಮೂಡಿಸೀತೇ ಎಂಬುದು ಸ್ಪಷ್ಟವಾಗಲು ಇನ್ನೂ ಸ್ವಲ್ಪ ಸಮಯ ಕಾದುನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...