Homeಕರ್ನಾಟಕಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

ಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

- Advertisement -
- Advertisement -

-ಮಲ್ಲಿ |

ಬಜೆಟ್ ಅಧಿವೇಶನ ನಡೆದಿದ್ದು 5 ದಿನ ಮಾತ್ರ! ಇದರಲ್ಲಿ ಕಲಾಪ ನಡೆದಿದ್ದು ಕೇವಲ 15 ಗಂಟೆ 10 ನಿಮಿಷ! ಇದನ್ನು ಅಧಿವೇಶನ ಎನ್ನುವುದೋ ಅಧಿ’ವೇಷಣ’ ಎನ್ನುವುದೋ? ಏಕೆಂದರೆ ಈ ಸಲ ಹಲವರ ‘ವೇಷಣಗಳು’ ಕಳಚಿಬಿದ್ದಿದ್ದಂತೂ ಸತ್ಯ. ಹಾಗೆಯೇ ಆಡಳಿತ ಪಕ್ಷ ಮತ್ತು ವಿಪಕ್ಷಗಳ ರಾಜಕೀಯ ಕಿತ್ತಾಟಕ್ಕೆ ಕಲಾಪ ಬಲಿಯಾಗಿದ್ದೂ ನಿಜ.
ರಾಜ್ಯ ಸರ್ಕಾರದ ಒಂದು ವರ್ಷದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಚೌಕಟ್ಟಿನ ಮುನ್ನೋಟ ನೀಡುವ ಮಹತ್ವದ ಬಜೆಟ್ ಯಾವುದೇ ಅಂಗೀಕಾರವಿಲ್ಲದೇ ಅನುಮೋದನೆ ಪಡೆದಿದೆ. ಅಂದರೆ ಪಾಸ್ ಆಗಿದೆ, ಅಲ್ಲಿಗೆ ಕಲಾಪದ ಒಟ್ಟೂ ಉದ್ದೇಶವೇ ಫೇಲ್ ಆಗಿದೆ. ಆಪರೇಷನ್ ಕಮಲ ಎಂಬ ಭೂತ ಬಜೆಟ್ ಚರ್ಚೆಯನ್ನೇ ನುಂಗಿ ಹಾಕಿ ಅಟ್ಟಹಾಸ ಮೆರೆದಿದೆ.
2 ಲಕ್ಷ 34 ಸಾವಿರ ಕೋಟಿಗಳ ಬಜೆಟ್ ಬಗ್ಗೆ ಚರ್ಚಿಸಲು ಅಲ್ಲಿ ಯಾರಿಗೂ ವ್ಯವಧಾನವೇ ಇರಲಿಲ್ಲ. ವಿಪಕ್ಷ ಬಿಜೆಪಿಗಂತೂ ತನ್ನ ಅಧಿವೇಶನದುದ್ದಕ್ಕೂ ತನ್ನ ಅಧಿನಾಯಕ ಯಡಿಯೂರಪ್ಪನವರನ್ನು ರಕ್ಷಿಸುವುದೇ ಒಂದು ಘನಂದಾರಿ ಕೆಲಸವಾಗಿತ್ತು. ಅದಕ್ಕೆ ಅದು ಆಯ್ದುಕೊಂಡ ಮಾರ್ಗ: ಇಡೀ ಕಲಾಪವನ್ನೇ ಗಬ್ಬೆಬ್ಬಿಸುವ ನೀಚ ಮಾರ್ಗ.
ಬಜೆಟ್‍ನ ಮೂರನೇ ಒಂದು ಭಾಗದಷ್ಟಿರುವ ಲೇಖಾನುಧನವನ್ನು ಯಾವುದೇ ರ್ಚೆಯಿಲ್ಲದೇ ಪಾಸು ಮಾಡಲಾಗಿತು. ಹಿಂದೆಂದೂ ಇಂತಹ ಘಟನೆ ಸಂಭವಿಸಿರಲಿಲ್ಲ. ಆದರೆ ಈ ಸದಸನದ ಯೋಗ್ಯತೆಯೇ ಅಷ್ಟಿರುವಂತಿದೆಯಲ್ಲವೇ?
ಕಲಾಪದಲ್ಲಿ ಸ್ಪೀಕರ್ ಸಾಹೇಬರು ಪದೇ ಪದೇ ತಮ್ಮ ನೋವು ತೊಡಿಕೊಳ್ಳುವ ‘ವಿಲಕ್ಷಣ’ ಸಂದರ್ಭಗಳೇ ಸೃಷಿಯಾದವು. ಕಲಾಪ ನಡೆಯುವಂತೆ ಮಾಡಲು ಅವರು ತುಂಬ ಪ್ರಯಾಸಪಟ್ಟರೂ ಉಪಯೋಗವಾಗಲಿಲ್ಲ. ಬಜೆಟ್ ಮುನ್ನ ಸ್ಪೋಟಗೊಂಡ ಆಡಿಯೋವೇ ಎಲ್ಲವನ್ನೂ ಗುಡಿಸಿ ಹಾಕಿತು- ಆಪರೇಷನ್ ಕಮಲವನ್ನೂ, ಕಲಾಪದ ಚರ್ಚೆಯನ್ನೂ….
ಅಂತಿಮವದಲ್ಲಿ ಯಾವುದೇ ರ್ಚೆಯಿಲ್ಲದೇ ಬಜೆಟ್ ಮಂಡನೆ ಆಗುತ್ತಿದ್ದಂತೆ, ಸ್ಪೀಕರ್ ಸಾಹೇಬರು ತಮ್ಮ ಹೃದಯ ಕಿತ್ತು ಬರುತ್ತಿದೆ, ಸಾರ್ವಜನಿಕರ ಹಣದ ಬಳಕೆಯ ಬಗ್ಗೆ ಚರ್ಚೆ ನಡೆಸದೇ ಘೋರ ಅಪರಾಧ ಮಾಡಿದ್ದೇವೆ ಎಂದು ಅವಲತ್ತುಕೊಳ್ಳಬೇಕಾಗಿತು. ಆಡಳಿತ ಮತ್ತು ವಿಪಕ್ಷಗಳಿಗೆ ಮಾತ್ರ ಇದೇನೂ ಘೋರ ಅಪರಾಧ ಎನಿಸಲೇ ಇಲ್ಲ!
ಎಸ್‍ಐಟಿ ತನಿಖೆ ಬೇಡ ಎಂದು ಗದ್ದಲ ಮಾಡಿ ಎರಡು ದಿನ ಕಲಾಪವನ್ನು ಬರ್ಬಾದ್ ಮಾಡಿದ ಬಿಜೆಪಿ, ಎಸ್‍ಐಟಿ ತನಿಖೆಯೇ ಫೈನಲ್ ಎಂದು ನಿರ್ಣಯವಾದ ಮೇಲಾದರೂ ಚರ್ಚೆಗೆ ಅವಕಾಶ ಮಾಡಿಕೊಡಬಹದಿತ್ತು. ಆದರೆ ಶಾಸಕ ಪ್ರೀತಂಗೌಡರಿಗೆ ರಕ್ಷಣೆ ಕೊಡಿ ಎಂದು ಮತ್ತೆ ಒಂದೂವರೆ ದಿನಗಳ ಕಲಾಪವನ್ನು ಹಳ್ಳ ಹಿಡಿಸಿತು. ಪ್ರೀತಂಗೌಡನಿಗೆ ರಕ್ಷಣೆ ಕೊಡಲು ಪೊಲೀಸ್ ಇಲಾಖೆಯಿತ್ತಲ್ಲವೇ? ಅದನ್ನೆಲ್ಲ ಬಿಟ್ಟು ಸದಸನದ ಕಲಾಪ ಹಾಳು ಮಾಡುವ ಅಗತ್ಯವಿತ್ತೇ?
ಎಲ್ಲ ಕಲಾಪಗಳಲ್ಲೂ ಅಬ್ಬರಿಸುತ್ತಿದ್ದ ಯಡಿಯೂರಪ್ಪ ಈ ಸಲ ಎಲ್ಲ ಮುಚ್ಚಿಕೊಂಡು, ಮುಖ ಗಂಟಿಕ್ಕಿಕೊಂಡು ಕೂತದ್ದೇ ಜಾಸ್ತಿ. ಆದರೂ ಅವರಿಗೆ ಮಾನ ಮುಚ್ಚಿಕೊಳ್ಳಲಾಗಲಿಲ್ಲ. ಈ ಅಧಿವೇಶನದ ಇನ್ನೊಂದು ಅಂಶವೆಂದರೆ, ಮಾಧುಸ್ವಾಮಿಯವರಂತಹ ಹಿರಿಯ ಸಂಸದೀಯ ಪಟು ಲಜ್ಜೆ ಬಿಟ್ಟು ಯಡಿಯೂರಪ್ಪನವರ ಸಮರ್ಥನೆಗೆ ಇಳಿದಿದ್ದು!
ಈ ಅಧಿವೇಶನದ ಲಾಭವಾಗಿದ್ದು ಮೈತ್ತಿ ಪಕ್ಷಗಳಿಗೆ ಮಾತ್ರ. ಆಪರೇಷನ್ ಕಮಲವನ್ನು ಹೊಡೆದು ಹಾಕುವ ಮೂಲಕ ಮೈತ್ರಿಬಣದಲ್ಲಿ ಮೂಡಿದ್ದ ಬಿರುಕನ್ನು ಅವು ನಿವಾರಿಸಿಕೊಂಡವು.
ಹಿಂದೆ ಧರ್ಮಸಿಂಗ್ ಮತ್ತು ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರವಿದ್ದಾಗ, ನಂತರ ಕುಮಾರಸ್ವಾಮಿ-ಯಡಿಯೂರಪ್ಪ ಸರ್ಕಾರವಿದ್ದಾಗಲೂ ಸದನದ ಕಲಾಪಗಳು ಹೀಗೇ ಬಲಿಯಾಗಿದ್ದವು. ತಮ್ಮ ಪಕ್ಷಗಳ ನಡುವಿನ ಕಿತ್ತಾಟದ ರಾಜಕೀಯವನ್ನು ಸದನದಲ್ಲಿ ಚಚಿಚ್ಸಲು ನಾವು ಅವರನ್ನು ಅಲ್ಲಿಗೆ ಕಳಿಸಿದ್ದೇವಾ ಎಂಬ ಪ್ರಶ್ನೆ ಜನರನ್ನು ಕಾಡದೇ ಇರದು. ಯಾವುದೇ ಚರ್ಚೆಯಿಲ್ಲದೇ ಮಸೂದೆಗಳನ್ನು ಧ್ವನಿಮತದ ಮೂಲಕ ಪಾಸು ಮಾಡುವುದಾದರೆ ಈ ಶಾಸಕರು ಸದನದಲ್ಲಿ ಕಿತ್ತು ಹಾಕುವುದಾದರೂ ಏನನ್ನು ಎಂದು ಪ್ರಶ್ನಿಸುವ ಸಮಯ ಬಂದಿದೆಯಲ್ಲವೇ?
ಹಿಂದೆ ಆಗಿನ್ನೂ ಸಂಸದಿಯ ವ್ಯವಸ್ಥೆ ಬಾಲ್ಯಾವಸ್ಥೆಯಲ್ಲಿ ಇದ್ದ ಸಂದರ್ಭದಲ್ಲೇ, ಬಜೆಟ್ ಅಧಿವೇಶನ 6 ದಿನಗಳ ಅವಧಿಯನ್ನು ಹೊಂದಿರುತ್ತಿತ್ತು. ದಿವಾನರ ಭಾಷಣ, ಪ್ರಶ್ನೆಗಳು ಮತ್ತು ಸರ್ಕಾರಿ ಕಲಾಪಕ್ಕಾಗಿ 1 ದಿನ, ಬಜೆಟ್ ಮೇಲಿನ ಸಾಮಾನ್ಯ ಚರ್ಚೆಗಾಗಿ ಗರಿಷ್ಠ 2 ದಿನ, ಬಜೆಟ್ ಮೇಲಿನ ನಿರ್ಣಯಗಳಿಗಾಗಿ 1 ದಿನ, ಅರಿಕೆಗಳಿಗಾಗಿ 1 ದಿನ ಮತ್ತು ಇತರ ನಿರ್ಣಯಗಳಿಗಾಗಿ 1 ದಿನವನ್ನು ನಿಗದಿಪಡಿಸಲಾಗಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ಬಜೆಟ್ ರ್ಚೆಗಳು ಕೇವಲ ದೂಷಾರೋಪಣೆಯಲ್ಲೇ ಮುಗಿದು ಹೋಗುತ್ತಿವೆ. ಕಳೆದ ವಾರ ಮುಗಿದ ಬಜೆಟ್ ಅಧಿವೇಶನವಂತೂ ಚರ್ಚೆಯಿಲ್ಲದೇ ಬಜೆಟ್ ಪಾಸು ಮಾಡಿ ‘ದಾಖಲೆ’ ಬರೆದಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...