Homeಅಂಕಣಗಳು“ಬದನೆಕಾಯಿ ತಿನ್ನಕ್ಕೆ ಪುರಾಣ ಹೇಳಕ್ಕೆ”

“ಬದನೆಕಾಯಿ ತಿನ್ನಕ್ಕೆ ಪುರಾಣ ಹೇಳಕ್ಕೆ”

- Advertisement -
- Advertisement -

ಬದನೆಕಾಯಿ ಇರೋದು ತಿನ್ನಕ್ಕೆ ಪುರಾಣ ಇರದು ಹೇಳಕ್ಕೆ. ಇದೊಂದು ಹಳ್ಳಿ ಕಡೆಯ ಗಾದೆ. ಇದನ್ನು ಚಾಚೂತಪ್ಪದೆ ಪಾಲಿಸುತ್ತಿರುವ ಎಡೂರಪ್ಪನ ಸರಕಾರ ಕೊರೊನಾ ಕಾಯಿಲೆ ನಿಯಂತ್ರಿಸುವ ನಿಷೇಧಗಳನ್ನ ಜನಗಳ ಮೇಲೆ ಹೇರಿ ತಾವು ಮಾತ್ರ ಮದುವೆ ಮುಂಜಿ ಹಬ್ಬಹರಿದಿನಗಳಲ್ಲಿ ಆರಾಮವಾಗಿ ಅಡ್ಡಾಡುತ್ತಿವೆಯಂತಲ್ಲಾ. ಹಾಗೆ ನೋಡಿದರೆ ಈ ಬಿಜೆಪಿಗಳೇ ಹಾಗೆ. ಬಾಯಿಬಿಟ್ಟಕೂಡಲೇ ಪುರಾಣವನ್ನು ಹೇಳುವ ಪ್ರಧಾನಿಯನ್ನ ಪಡೆದಿರುವ ನಾವು, ಅವರ ಸರಕಾರಗಳು ಅಸ್ತಿತ್ವದಲ್ಲಿರುವ ರಾಜ್ಯಗಳ ನಾಯಕರಿಂದ ಇನ್ನೇನು ಪಡೆಯಲು ಸಾಧ್ಯ. ಮಂಡ್ಯ ಜಿಲ್ಲೆಯ ಹಳ್ಳಿಯೊಂದರಲ್ಲಿ ನೂರು ಜನ ಸೇರಿ ಮಾಡುತ್ತಿದ್ದ ಅಮ್ಮನ ಹಬ್ಬ ತಡೆದ ಡಿ.ಸಿ, ಸಾಹಸವನ್ನೆ ಗೈದಂತೆ ಹೋಗುತ್ತಿದ್ದರೆ ಅತ್ತ ಎಡೂರಪ್ಪ `ಕೊರೊನ ಪರೋನ ನನಿಗೆ ಬರದಿಲ್ಲ’ ಅನ್ನಂಗೆ ತಪಾಸಣೆ ತಡಾಯ್ದು ಹೋಗುತ್ತಿದ್ದರೆ ಇತ್ತ ದೇವೇಗೌಡರು ನಾಲ್ಕೈದು ಸಾವಿರ ಜನ ಸೇರಿ ಮಾಡಿದ ಮದುವೆಯ ಮಧ್ಯದಲ್ಲಿದ್ದರು. ಇನ್ನ ಈಶ್ವರಪ್ಪನೂ ಕೂಡ ನಾನೇನು ಕಡಿಮೆ ಎನ್ನುವಂತೆ ಹಬ್ಬ ಸಡಗರದಲ್ಲಿದ್ದರಂತಲ್ಲಾ, ಥೂತ್ತೇರಿ.

ಜನ ಸೇರುವ ಹಬ್ಬ, ಹರಿದಿನ ಹುಡುಕುತ್ತ, ತಿರುಗುತ್ತಿರುವ ಈಶ್ವರಪ್ಪ ಬದುಕಿನಲ್ಲಿ ಬಹಳ ಪುರಾಣ ಹೇಳುವ ಮನುಷ್ಯನಂತಲ್ಲಾ. ಮಾಂಸ ನಿಷೇಧವಿದ್ದಾಗಲೇ ಭಕ್ಷಣೆ ಮಾಡಿ ತಾನು ಅಸುರ ಸಂತತಿ ಎಂದು ಹೇಳಿದವರು. ಚಡ್ಡಿಗಳಿಗೆ ಎಡೂರಪ್ಪನಿಗಿಂತಲೂ ಪ್ರಿಯರಾದವರು. ಅದಕ್ಕೇ ಏನೋ ಎಡೂರಪ್ಪನವರು ದಾವಣಗೆರೆ ಉಸ್ತುವಾರಿ ಸಚಿವರನ್ನಾಗಿ ಮಾಡಿಬಿಟ್ಟಿದ್ದಾರೆ. ಲಂಕೇಶ್ ಹೇಳುತ್ತಿದ್ದ ಪ್ರಕಾರ, ದಾವಣಗೆರೆಯಲ್ಲಿ ಒಂದು ಕಲ್ಲು ಬೀಸಿದರೆ ಅದು ಒಬ್ಬ ಲಿಂಗಾಯತನಿಗೇ ತಗಲುತ್ತದಂತೆ. ಮೊದಲು ಸೆಕ್ಯುಲರ್ ಎಂದೇಳುವ ಶ್ಯಾಮನೂರು ಜೊತೆಗಿದ್ದು, ಈಗ ಬಿಜೆಪಿ ಸಿದ್ದೇಶನ ಜೊತೆ ಸೇರಿಕೊಂಡು ಮೋದಿ ಭಜನೆ ಮಾಡುತ್ತಿರುವ ದಾವಣಗೆರೆಗೆ ಈಶ್ವರಪ್ಪನನ್ನು ಜಿಲ್ಲಾ ಉಸ್ತುವಾರಿ ಸಚಿವನನ್ನಾಗಿ ಮಾಡಿರುವುದು ಸೇಡುತೀರಿಸಿಕೊಳ್ಳುವ ಕ್ರಮವೆಂದು ಹೇಳುತ್ತಿದ್ದಾರಲ್ಲಾ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ಲಿಂಗಾಯತರೆಲ್ಲಾ ಸೇರಿಕೊಂಡು ಈಶ್ವರಪ್ಪನನ್ನು ಹುಡುಕಿಕೊಡಿ ಎಂದು ಪ್ರತಿಭಟಿಸಿದಾಗ, ಈಶ್ವರಪ್ಪ ಹಬ್ಬದಲ್ಲಿ ಭಾಗವಹಿಸಿ ಕೊರೊನಾ ಗಿರೋನ ಯಲ್ಲ ದೇವೇಗೌಡನಂತ ಮುದುಕರಿಗೆ ಬತ್ತದೆ ಕಂಡ್ರಿ ನಮಗಲ್ಲ ಎಂದರಂತಲ್ಲಾ, ಥೂತ್ತೇರಿ.

ವಿಧಾನಸೌಧದ ಹೊರಗೆ ಈ ಕತೆಯಾದರೆ, ಇನ್ನ ವಿಧಾನಸೌಧದ ಒಳಗಿನ ಕತೆಗಳು ಮನಕರಗುವಂತಿವೆಯಲ್ಲ. ಪ್ರವಾಹ, ಜನರ ಗೋಳು, ದೊರೆಸ್ವಾಮಿ ನಿಂದನೆಯ ವಿಚಾರ ಚರ್ಚೆಯಾಗಲು ಅವಕಾಶ ಕೊಡದೆ ಕಾಗೇರಿ, ಸಂವಿಧಾನ ಚರ್ಚೆಯಾಗಲು ಧಾರಾಳ ಅವಕಾಶಕೊಟ್ಟು, ಅಳುತ್ತ ಹೋದರಂತಲ್ಲ. ಇವರ ಬುದ್ಧವಂತಿಕೆ ಗ್ರಹಿಸುವುದಾದರೆ, ಪ್ರವಾಹಸಂತ್ರಸ್ತರ ವಿಷಯಕ್ಕೆ ಸಮಯ ಕೊಟ್ಟರೆ ಸರಕಾರದ ಮರ್ಯಾದೆ ಹರಾಜಾಗುತ್ತದೆ. ಜನರ ಗೋಳಿನ ಚರ್ಚೆಯೂ ಅಂತಹ ಅನಾಹುತವನ್ನೆ ಮಾಡಬಹುದು. ಇನ್ನ ದೊರೆಸ್ವಾಮಿ ವಿಷಯ ಪಾರ್ಟಿಯಲ್ಲಿ ಅನಾಗರಿಕರ ಅಪೂರ್ವ ಗುಣಗಳನ್ನ ಅನಾವರಣಮಾಡಬಹುದು. ಸಂವಿಧಾನಕ್ಕೆ ಅವಕಾಶ ಕೊಟ್ಟರೆ ಹಾಗಾಗುವುದಿಲ್ಲ. ಚಡ್ಡಿಗಳಿಗೂ ಸಂವಿಧಾನದ ಬಗ್ಗೆ ಗೌರವವಿದೆ ಎಂಬುದು ಜಗಜ್ಜಾಹೀರಾಗುತ್ತದೆ. ಇಂತಹ ಯೋಚನೆಯ ಕಾಗೇರಿ ಹೊಗಳುಭಟ್ಟರ ಸಂತತಿಯವರಾದ ರಮೇಶಕುಮಾರರಿಂದ ಹಿಗಾಮುಗ್ಗ ಹೊಗಳಿಸಿಕೊಂಡು ನಿರ್ಗಮಿಸಿದರಂತಲ್ಲಾ, ಥೂತ್ತೇರಿ.

ಇನ್ನ ವಿಧಾನಪರಿಷತ್‍ನಲ್ಲಿ ಯಾತಕ್ಕೂ ಲಾಯಕ್ ಅಲ್ಲದ ಕೋಟ ಶ್ರೀನಿವಾಸ ಪೂಜಾರಿ ಎಂಬ ಸಭಾನಾಯಕ ಕರ್ನಾಟಕದಲ್ಲಿ ಅಸ್ಪೃಶ್ಯತೆ ಆಚರಣೆಯಲ್ಲಿ ಇಲ್ಲ ಎಂದು ಬಿಟ್ಟಿದ್ದಾನಲ್ಲ. ಈ ಅಜ್ಞಾನಿಗೆ ಬಹುಶ ದೃಷ್ಟಿದೋಷವಿರಬಹುದು ಇಲ್ಲವೇ ಕೂಪಮಂಡೂಕನಿರಬಹುದು. ಇದೆಲ್ಲಕ್ಕಿಂತ ಮುಖ್ಯವಾಗಿ ಬಿ.ಜೆ.ಪಿ.ಯ ಭಯಂಕರ ಸುಳ್ಳುಗಾರನಿರಬಹುದು. ಈತನನ್ನ ಹಿಡಿದುಕೊಂಡು ಹೋಗಿ ಅಸ್ಪøಶ್ಯತೆ ಭೀಕರವಾಗಿರುವ ನಮ್ಮ ಹಳ್ಳಿಗಳ ಆಚರಣೆ ತೋರಿಸಬೇಕು. ಅಲ್ಲಿ ಹೊಲೆಯರವನು ಇನ್ನೂ ಅಮ್ಮನಗುಡಿ ಮುಂದೆ ತಮಟೆ ಬಡಿಯುತ್ತಿದ್ದಾನೆ. ಮಾದಿಗರವನು ಕೊಂಡ ಹಾಕುತ್ತಿದ್ದಾನೆ. ಮಡಿವಾಳರವನ್ನು ನೆಡೆಮಡಿಹಾಸಿ ಪತ್ತು ಹಿಡಿಯುತ್ತಿದ್ದಾನೆ. ಕ್ಷೌರಿಕರವನು ವಾಲಗ ಊದುತ್ತಿದ್ದಾನೆ ಇವರೆಲ್ಲಾ ತಮ್ಮತಮ್ಮ ಸ್ಥಾನದಲ್ಲಿ ತಮ್ಮ ಕರ್ತವ್ಯ ಅಂದರೆ ಭಕ್ತಿ ಅರ್ಪಿಸುತ್ತಿದ್ದಾರೆ. ಇನ್ನ ಹೊಟೇಲುಗಳಿಗೆ ಪ್ಲಾಸ್ಟಿಕ್ ಲೋಟ ಬಂದಿರುವುದರಿಂದ ಅದರ ಸಮಸ್ಯೆ ಸಾಲ್ವು ಆಗಿದೆ. ಇಂತಹ ಕೇರಿಗಳಿಗೆ ಈ ಪೂಜಾರಿ ಹೋಗಿ ನೋಡಬೇಕು. ಅವನು ಅಲ್ಲಿಗೆಲ್ಲ ಹೋಗುವುದಿಲ್ಲ. ಸುಳ್ಳುಗಾರ ಜನಕ್ಕೆ ಪ್ರತ್ಯಕ್ಷದ ಅಗತ್ಯವಿಲ್ಲವಂತಲ್ಲಾ, ಥೂತ್ತೇರಿ.

ಪ್ರಭಾಕರ ಕೋರೆಗೆ ಕೆಂಗಲ್ ಹನುಮಂತಯ್ಯ ಸಂಸ್ಕøತಿ ದತ್ತಿ ಪ್ರಶಸ್ತಿ ಪ್ರಾಪ್ತವಾಗಿದೆ. ಕೋರೆಗೆ ಅಭಿನಂದನೆ, ಆದರೆ ಅದನ್ನ ಕೊಡಮಾಡಿದ ಲೀಡರ್ ಬಗ್ಗೆ ಅನುಮಾನ ಎದ್ದಿವೆಯಲ್ಲಾ. ಏಕೆಂದರೆ, ಈ ಪ್ರಶಸ್ತಿಯನ್ನ ಕನ್ನಡ ಸಾಹಿತ್ಯ ಪರಿಷತ್ ಕೊಡುತ್ತದೆ. ಅದರ ಅಧ್ಯಕ್ಷ ಮನುಬಳಿಗಾರ. ಈತ ಪ್ರಶಸ್ತಿ ಕೊಡುವ ಮೊದಲೇ ಸದಸ್ಯರಿಗೆ ಸೂಚನೆ ಕೊಡುವ ಗಿರಾಕಿ. ಆದ್ದರಿಂದ ಕೆಂಗಲ್ ಮತ್ತು ಕೋರೆಗೆ ಜೊತೆಯಾಗಿಯೇ ಅವಮಾನವಾಗಿದೆ. ಕೆಂಗಲ್ ಕರ್ನಾಟಕ ಕಂಡ ಅಪ್ರತಿಮ ನಾಯಕ. ವಿಧಾನಸೌಧ ಕಟ್ಟಿದವರು. ನೆಹರೂಗೆ ಹೆದರದ ಧೀರ. ಇಂದಿರಾಗಾಂಧಿ ಎದುರು ಪಾರ್ಟಿ ಕಟ್ಟಿದವರು. ಭಗವಧ್ಗೀತೆ ಸಾಮಾನ್ಯನೂ ಓದಲೆಂದು ಮುದ್ರಿಸಿ ಹಂಚಿದವರು. ಕನ್ನಡದ ಸಂಸ್ಕøತಿ ಮತ್ತು ರಾಜಕಾರಣದ ಪ್ರತಿನಿಧಿ ಅನ್ನಬಹುದು. ಇಂತಹ ಮಹಾನಾಯಕನ ಹೆಸರಿನ ಪ್ರಶಸ್ತಿ ಕೋರೆಗೆ ಅನವುನ್ಸಾದಾಗ ಬಹುಶ: ಕೋರೆಗೆ ಅಚ್ಚರಿಯಾಗಿರಬಹುದು. ಕೊಟ್ಟವರಾರು ಎಂದು ಗೊತ್ತಾದಾಗ ಈಸಿಕೊಳ್ಳಲು ಸಂಕೋಚವೂ ಆಗಿರಬಹುದು. ಅದಕ್ಕಾಗಿ ಪ್ರಶಸ್ತಿ ಹಣವಾದ 25 ಸಾವಿರವನ್ನು ನೀನೇ ಇಟ್ಟಗಳೊ ಬಳಿಗಾರ ಅನ್ನುವ ಸಂಭವವಿದೆಯೆಂದು ಸಣ್ಣ ಸಂಸ್ಕøತಿ ಜನ ಆಡಿಕೊಳ್ಳುತ್ತಿದ್ದಾರಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...