Homeಅಂಕಣಗಳು“ಬದನೆಕಾಯಿ ತಿನ್ನಕ್ಕೆ ಪುರಾಣ ಹೇಳಕ್ಕೆ”

“ಬದನೆಕಾಯಿ ತಿನ್ನಕ್ಕೆ ಪುರಾಣ ಹೇಳಕ್ಕೆ”

- Advertisement -
- Advertisement -

ಬದನೆಕಾಯಿ ಇರೋದು ತಿನ್ನಕ್ಕೆ ಪುರಾಣ ಇರದು ಹೇಳಕ್ಕೆ. ಇದೊಂದು ಹಳ್ಳಿ ಕಡೆಯ ಗಾದೆ. ಇದನ್ನು ಚಾಚೂತಪ್ಪದೆ ಪಾಲಿಸುತ್ತಿರುವ ಎಡೂರಪ್ಪನ ಸರಕಾರ ಕೊರೊನಾ ಕಾಯಿಲೆ ನಿಯಂತ್ರಿಸುವ ನಿಷೇಧಗಳನ್ನ ಜನಗಳ ಮೇಲೆ ಹೇರಿ ತಾವು ಮಾತ್ರ ಮದುವೆ ಮುಂಜಿ ಹಬ್ಬಹರಿದಿನಗಳಲ್ಲಿ ಆರಾಮವಾಗಿ ಅಡ್ಡಾಡುತ್ತಿವೆಯಂತಲ್ಲಾ. ಹಾಗೆ ನೋಡಿದರೆ ಈ ಬಿಜೆಪಿಗಳೇ ಹಾಗೆ. ಬಾಯಿಬಿಟ್ಟಕೂಡಲೇ ಪುರಾಣವನ್ನು ಹೇಳುವ ಪ್ರಧಾನಿಯನ್ನ ಪಡೆದಿರುವ ನಾವು, ಅವರ ಸರಕಾರಗಳು ಅಸ್ತಿತ್ವದಲ್ಲಿರುವ ರಾಜ್ಯಗಳ ನಾಯಕರಿಂದ ಇನ್ನೇನು ಪಡೆಯಲು ಸಾಧ್ಯ. ಮಂಡ್ಯ ಜಿಲ್ಲೆಯ ಹಳ್ಳಿಯೊಂದರಲ್ಲಿ ನೂರು ಜನ ಸೇರಿ ಮಾಡುತ್ತಿದ್ದ ಅಮ್ಮನ ಹಬ್ಬ ತಡೆದ ಡಿ.ಸಿ, ಸಾಹಸವನ್ನೆ ಗೈದಂತೆ ಹೋಗುತ್ತಿದ್ದರೆ ಅತ್ತ ಎಡೂರಪ್ಪ `ಕೊರೊನ ಪರೋನ ನನಿಗೆ ಬರದಿಲ್ಲ’ ಅನ್ನಂಗೆ ತಪಾಸಣೆ ತಡಾಯ್ದು ಹೋಗುತ್ತಿದ್ದರೆ ಇತ್ತ ದೇವೇಗೌಡರು ನಾಲ್ಕೈದು ಸಾವಿರ ಜನ ಸೇರಿ ಮಾಡಿದ ಮದುವೆಯ ಮಧ್ಯದಲ್ಲಿದ್ದರು. ಇನ್ನ ಈಶ್ವರಪ್ಪನೂ ಕೂಡ ನಾನೇನು ಕಡಿಮೆ ಎನ್ನುವಂತೆ ಹಬ್ಬ ಸಡಗರದಲ್ಲಿದ್ದರಂತಲ್ಲಾ, ಥೂತ್ತೇರಿ.

ಜನ ಸೇರುವ ಹಬ್ಬ, ಹರಿದಿನ ಹುಡುಕುತ್ತ, ತಿರುಗುತ್ತಿರುವ ಈಶ್ವರಪ್ಪ ಬದುಕಿನಲ್ಲಿ ಬಹಳ ಪುರಾಣ ಹೇಳುವ ಮನುಷ್ಯನಂತಲ್ಲಾ. ಮಾಂಸ ನಿಷೇಧವಿದ್ದಾಗಲೇ ಭಕ್ಷಣೆ ಮಾಡಿ ತಾನು ಅಸುರ ಸಂತತಿ ಎಂದು ಹೇಳಿದವರು. ಚಡ್ಡಿಗಳಿಗೆ ಎಡೂರಪ್ಪನಿಗಿಂತಲೂ ಪ್ರಿಯರಾದವರು. ಅದಕ್ಕೇ ಏನೋ ಎಡೂರಪ್ಪನವರು ದಾವಣಗೆರೆ ಉಸ್ತುವಾರಿ ಸಚಿವರನ್ನಾಗಿ ಮಾಡಿಬಿಟ್ಟಿದ್ದಾರೆ. ಲಂಕೇಶ್ ಹೇಳುತ್ತಿದ್ದ ಪ್ರಕಾರ, ದಾವಣಗೆರೆಯಲ್ಲಿ ಒಂದು ಕಲ್ಲು ಬೀಸಿದರೆ ಅದು ಒಬ್ಬ ಲಿಂಗಾಯತನಿಗೇ ತಗಲುತ್ತದಂತೆ. ಮೊದಲು ಸೆಕ್ಯುಲರ್ ಎಂದೇಳುವ ಶ್ಯಾಮನೂರು ಜೊತೆಗಿದ್ದು, ಈಗ ಬಿಜೆಪಿ ಸಿದ್ದೇಶನ ಜೊತೆ ಸೇರಿಕೊಂಡು ಮೋದಿ ಭಜನೆ ಮಾಡುತ್ತಿರುವ ದಾವಣಗೆರೆಗೆ ಈಶ್ವರಪ್ಪನನ್ನು ಜಿಲ್ಲಾ ಉಸ್ತುವಾರಿ ಸಚಿವನನ್ನಾಗಿ ಮಾಡಿರುವುದು ಸೇಡುತೀರಿಸಿಕೊಳ್ಳುವ ಕ್ರಮವೆಂದು ಹೇಳುತ್ತಿದ್ದಾರಲ್ಲಾ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ಲಿಂಗಾಯತರೆಲ್ಲಾ ಸೇರಿಕೊಂಡು ಈಶ್ವರಪ್ಪನನ್ನು ಹುಡುಕಿಕೊಡಿ ಎಂದು ಪ್ರತಿಭಟಿಸಿದಾಗ, ಈಶ್ವರಪ್ಪ ಹಬ್ಬದಲ್ಲಿ ಭಾಗವಹಿಸಿ ಕೊರೊನಾ ಗಿರೋನ ಯಲ್ಲ ದೇವೇಗೌಡನಂತ ಮುದುಕರಿಗೆ ಬತ್ತದೆ ಕಂಡ್ರಿ ನಮಗಲ್ಲ ಎಂದರಂತಲ್ಲಾ, ಥೂತ್ತೇರಿ.

ವಿಧಾನಸೌಧದ ಹೊರಗೆ ಈ ಕತೆಯಾದರೆ, ಇನ್ನ ವಿಧಾನಸೌಧದ ಒಳಗಿನ ಕತೆಗಳು ಮನಕರಗುವಂತಿವೆಯಲ್ಲ. ಪ್ರವಾಹ, ಜನರ ಗೋಳು, ದೊರೆಸ್ವಾಮಿ ನಿಂದನೆಯ ವಿಚಾರ ಚರ್ಚೆಯಾಗಲು ಅವಕಾಶ ಕೊಡದೆ ಕಾಗೇರಿ, ಸಂವಿಧಾನ ಚರ್ಚೆಯಾಗಲು ಧಾರಾಳ ಅವಕಾಶಕೊಟ್ಟು, ಅಳುತ್ತ ಹೋದರಂತಲ್ಲ. ಇವರ ಬುದ್ಧವಂತಿಕೆ ಗ್ರಹಿಸುವುದಾದರೆ, ಪ್ರವಾಹಸಂತ್ರಸ್ತರ ವಿಷಯಕ್ಕೆ ಸಮಯ ಕೊಟ್ಟರೆ ಸರಕಾರದ ಮರ್ಯಾದೆ ಹರಾಜಾಗುತ್ತದೆ. ಜನರ ಗೋಳಿನ ಚರ್ಚೆಯೂ ಅಂತಹ ಅನಾಹುತವನ್ನೆ ಮಾಡಬಹುದು. ಇನ್ನ ದೊರೆಸ್ವಾಮಿ ವಿಷಯ ಪಾರ್ಟಿಯಲ್ಲಿ ಅನಾಗರಿಕರ ಅಪೂರ್ವ ಗುಣಗಳನ್ನ ಅನಾವರಣಮಾಡಬಹುದು. ಸಂವಿಧಾನಕ್ಕೆ ಅವಕಾಶ ಕೊಟ್ಟರೆ ಹಾಗಾಗುವುದಿಲ್ಲ. ಚಡ್ಡಿಗಳಿಗೂ ಸಂವಿಧಾನದ ಬಗ್ಗೆ ಗೌರವವಿದೆ ಎಂಬುದು ಜಗಜ್ಜಾಹೀರಾಗುತ್ತದೆ. ಇಂತಹ ಯೋಚನೆಯ ಕಾಗೇರಿ ಹೊಗಳುಭಟ್ಟರ ಸಂತತಿಯವರಾದ ರಮೇಶಕುಮಾರರಿಂದ ಹಿಗಾಮುಗ್ಗ ಹೊಗಳಿಸಿಕೊಂಡು ನಿರ್ಗಮಿಸಿದರಂತಲ್ಲಾ, ಥೂತ್ತೇರಿ.

ಇನ್ನ ವಿಧಾನಪರಿಷತ್‍ನಲ್ಲಿ ಯಾತಕ್ಕೂ ಲಾಯಕ್ ಅಲ್ಲದ ಕೋಟ ಶ್ರೀನಿವಾಸ ಪೂಜಾರಿ ಎಂಬ ಸಭಾನಾಯಕ ಕರ್ನಾಟಕದಲ್ಲಿ ಅಸ್ಪೃಶ್ಯತೆ ಆಚರಣೆಯಲ್ಲಿ ಇಲ್ಲ ಎಂದು ಬಿಟ್ಟಿದ್ದಾನಲ್ಲ. ಈ ಅಜ್ಞಾನಿಗೆ ಬಹುಶ ದೃಷ್ಟಿದೋಷವಿರಬಹುದು ಇಲ್ಲವೇ ಕೂಪಮಂಡೂಕನಿರಬಹುದು. ಇದೆಲ್ಲಕ್ಕಿಂತ ಮುಖ್ಯವಾಗಿ ಬಿ.ಜೆ.ಪಿ.ಯ ಭಯಂಕರ ಸುಳ್ಳುಗಾರನಿರಬಹುದು. ಈತನನ್ನ ಹಿಡಿದುಕೊಂಡು ಹೋಗಿ ಅಸ್ಪøಶ್ಯತೆ ಭೀಕರವಾಗಿರುವ ನಮ್ಮ ಹಳ್ಳಿಗಳ ಆಚರಣೆ ತೋರಿಸಬೇಕು. ಅಲ್ಲಿ ಹೊಲೆಯರವನು ಇನ್ನೂ ಅಮ್ಮನಗುಡಿ ಮುಂದೆ ತಮಟೆ ಬಡಿಯುತ್ತಿದ್ದಾನೆ. ಮಾದಿಗರವನು ಕೊಂಡ ಹಾಕುತ್ತಿದ್ದಾನೆ. ಮಡಿವಾಳರವನ್ನು ನೆಡೆಮಡಿಹಾಸಿ ಪತ್ತು ಹಿಡಿಯುತ್ತಿದ್ದಾನೆ. ಕ್ಷೌರಿಕರವನು ವಾಲಗ ಊದುತ್ತಿದ್ದಾನೆ ಇವರೆಲ್ಲಾ ತಮ್ಮತಮ್ಮ ಸ್ಥಾನದಲ್ಲಿ ತಮ್ಮ ಕರ್ತವ್ಯ ಅಂದರೆ ಭಕ್ತಿ ಅರ್ಪಿಸುತ್ತಿದ್ದಾರೆ. ಇನ್ನ ಹೊಟೇಲುಗಳಿಗೆ ಪ್ಲಾಸ್ಟಿಕ್ ಲೋಟ ಬಂದಿರುವುದರಿಂದ ಅದರ ಸಮಸ್ಯೆ ಸಾಲ್ವು ಆಗಿದೆ. ಇಂತಹ ಕೇರಿಗಳಿಗೆ ಈ ಪೂಜಾರಿ ಹೋಗಿ ನೋಡಬೇಕು. ಅವನು ಅಲ್ಲಿಗೆಲ್ಲ ಹೋಗುವುದಿಲ್ಲ. ಸುಳ್ಳುಗಾರ ಜನಕ್ಕೆ ಪ್ರತ್ಯಕ್ಷದ ಅಗತ್ಯವಿಲ್ಲವಂತಲ್ಲಾ, ಥೂತ್ತೇರಿ.

ಪ್ರಭಾಕರ ಕೋರೆಗೆ ಕೆಂಗಲ್ ಹನುಮಂತಯ್ಯ ಸಂಸ್ಕøತಿ ದತ್ತಿ ಪ್ರಶಸ್ತಿ ಪ್ರಾಪ್ತವಾಗಿದೆ. ಕೋರೆಗೆ ಅಭಿನಂದನೆ, ಆದರೆ ಅದನ್ನ ಕೊಡಮಾಡಿದ ಲೀಡರ್ ಬಗ್ಗೆ ಅನುಮಾನ ಎದ್ದಿವೆಯಲ್ಲಾ. ಏಕೆಂದರೆ, ಈ ಪ್ರಶಸ್ತಿಯನ್ನ ಕನ್ನಡ ಸಾಹಿತ್ಯ ಪರಿಷತ್ ಕೊಡುತ್ತದೆ. ಅದರ ಅಧ್ಯಕ್ಷ ಮನುಬಳಿಗಾರ. ಈತ ಪ್ರಶಸ್ತಿ ಕೊಡುವ ಮೊದಲೇ ಸದಸ್ಯರಿಗೆ ಸೂಚನೆ ಕೊಡುವ ಗಿರಾಕಿ. ಆದ್ದರಿಂದ ಕೆಂಗಲ್ ಮತ್ತು ಕೋರೆಗೆ ಜೊತೆಯಾಗಿಯೇ ಅವಮಾನವಾಗಿದೆ. ಕೆಂಗಲ್ ಕರ್ನಾಟಕ ಕಂಡ ಅಪ್ರತಿಮ ನಾಯಕ. ವಿಧಾನಸೌಧ ಕಟ್ಟಿದವರು. ನೆಹರೂಗೆ ಹೆದರದ ಧೀರ. ಇಂದಿರಾಗಾಂಧಿ ಎದುರು ಪಾರ್ಟಿ ಕಟ್ಟಿದವರು. ಭಗವಧ್ಗೀತೆ ಸಾಮಾನ್ಯನೂ ಓದಲೆಂದು ಮುದ್ರಿಸಿ ಹಂಚಿದವರು. ಕನ್ನಡದ ಸಂಸ್ಕøತಿ ಮತ್ತು ರಾಜಕಾರಣದ ಪ್ರತಿನಿಧಿ ಅನ್ನಬಹುದು. ಇಂತಹ ಮಹಾನಾಯಕನ ಹೆಸರಿನ ಪ್ರಶಸ್ತಿ ಕೋರೆಗೆ ಅನವುನ್ಸಾದಾಗ ಬಹುಶ: ಕೋರೆಗೆ ಅಚ್ಚರಿಯಾಗಿರಬಹುದು. ಕೊಟ್ಟವರಾರು ಎಂದು ಗೊತ್ತಾದಾಗ ಈಸಿಕೊಳ್ಳಲು ಸಂಕೋಚವೂ ಆಗಿರಬಹುದು. ಅದಕ್ಕಾಗಿ ಪ್ರಶಸ್ತಿ ಹಣವಾದ 25 ಸಾವಿರವನ್ನು ನೀನೇ ಇಟ್ಟಗಳೊ ಬಳಿಗಾರ ಅನ್ನುವ ಸಂಭವವಿದೆಯೆಂದು ಸಣ್ಣ ಸಂಸ್ಕøತಿ ಜನ ಆಡಿಕೊಳ್ಳುತ್ತಿದ್ದಾರಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...