Homeಕರ್ನಾಟಕಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಂಡ್ಲುಪೇಟೆಯ ದಲಿತ ಯುವಕನರ ಬೆತ್ತಲೆ ಮೆರವಣಿಗೆ ಮೂಲಕ ಬಹಿರಂಗ ಅಸ್ಪೃಶ್ಯತೆ ಆಚರಣೆ ಮಾಡಿದ್ದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ಮಾನವ ಪ್ರೇಮಿಗಳು ಪಾಲ್ಗೊಂಡು ಜಿಲ್ಲಾಡಳಿತದ ವಿರುದ್ಧ ಮತ್ತು ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಟೌನ್ ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಂತ್ರಸ್ತ ಯುವಕನಿಗೆ ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸವನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ತಪ್ಪತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು, ಇಂತಹ ಅಮಾನವೀಯ ಘಟನೆಗಳು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮರಕಳಿಸಬಾರದು ಎಂಬ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕಳಿಸಿಕೊಡಲಾಯಿತು.

ದೇಶದಲ್ಲಿ ದಲಿತರನ್ನು ಮತ್ತಷ್ಟು ದುರ್ಬಲಗೊಳಿಸಲು ಮೀಸಲಾತಿಯನ್ನು ತೆಗೆಯಲು ಪ್ರಯತ್ನಿಸಲಾಗುತ್ತಿದೆ. ಬಡ್ತಿ ಮೀಸಲಾತಿಗೆ ನೂರಾರು ಅಡ್ಡಿಗಳನ್ನು ಒಡ್ಡಲಾಗುತ್ತಿದೆ. ದಲಿತ ದೌರ್ಜನ್ಯ ಕಾಯ್ದೆಯ ಹಲ್ಲು ಕೀಳುವ ಹುನ್ನಾರ ನಡೆಯುತ್ತಿದೆ, ಸಾಲದು ಎಂಬಂತೆ ಬೆತ್ತಲು ಮಾಡಿ ದೌರ್ಜನ್ಯವೆಸಗುವ ಕ್ರೂರ ಘಟನೆಗಳನ್ನು ನಡೆಯುತ್ತಿರುವುದನ್ನು ಸಹಿಸಲಾಗುವುದಿಲ್ಲ. ಪ್ರತಾಪ ದಲಿತನಾದ ಕಾರಣಕ್ಕೆ ಆತನನ್ನು ಬೆತ್ತಲು ಮಾಡಿ ಅವಮಾನ ಮಾಡಲಾಗಿದೆ. ಬೇರೆ ಸವರ್ಣಿಯ ಜಾತಿಯವರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಹೊಡೆದು ಬಡಿಯುವುದಕ್ಕಿಂತ ರೀತಿ ಬೆತ್ತಲು ಮಾಡುವುದು ಅಮಾನವೀಯ. ಮೈಮೇಲೆ ಆಗುವ ಗಾಯಕ್ಕಿಂತ ಇದು ಮನಸ್ಸಿನ ಮೇಲಾಗುವ ಗಾಯವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಒಗ್ಗಾಟ್ಟಾಗಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸೋಣ ಎಂದು ಹಿರಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್ ಕಿಡಿಕಾರಿದರು.

ಇಂದು ದೇಶಾದ್ಯಂತ ದಲಿತ ದಮನಿತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಘಪರಿವಾರ ಕುಮ್ಮಕ್ಕು ಕೊಡುತ್ತಿದೆ. ದಲಿತರು, ಮುಸ್ಲಿಮರು, ಮಹಿಳೆಯರ ಮೇಲೆ ಎಗ್ಗಿಲ್ಲದೇ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ಜವಾಬ್ದಾರಿ ನಮ್ಮ ಮೇಲಿದೆ. ಇಂತಹ ಸಂದರ್ಭದಲ್ಲಿ ನಾವು ಒಗ್ಗಟ್ಟಾಗುವ ಅನಿರ್ವಾಯತೆ ಹೆಚ್ಚಾಗಿದ್ದು ಆ ನಿಟ್ಟಿನಲ್ಲಿ ನಾವು ಹೆಜ್ಜೆ ಹಾಕಬೇಕು ಎಂದರು.

ವಿಡಿಯೋ ನೋಡಿ 

ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಗೌರಿಯವರ ಮಾತುಗಳು.ದಿನಾಂಕ ೨ರಂದು ಗುಂಡ್ಲುಪೇಟೆಯಲ್ಲಿ ದಲಿತ ಯುವಕ ಪ್ರತಾಪ್ ನನ್ನು ಬೆತ್ತಲೆ…

Naanu Gauri यांनी वर पोस्ट केले बुधवार, १२ जून, २०१९

ಕರ್ನಾಟಕ ಜನಶಕ್ತಿಯ ಗೌರಿಯವರು ಮಾತನಾಡಿ ಇದೇ ಮಾದರಿಯಲ್ಲಿ ತುಮಕೂರಿನ ಗುಬ್ಬಿಯಲ್ಲಿಯೂ ದಲಿತ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆಗ ಪ್ರಗತಿಪರರೆಲ್ಲರೂ ಸೇರಿ ‘ಚಲೋ ತುಮಕೂರು’ ಎಂಬ ದೊಡ್ಡ ಹೋರಾಟ ಮಾಡಿದ್ದೆವು. ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ನಾಗರೀಕ ಸಮಾಜ ಏನು ಮಾಡುತ್ತಿದೆ? ಇದು ಅವರೆಲ್ಲರೂ ತಲೆತಗ್ಗಿಸಬೇಕಾದ ವಿಚಾರವಾಗಿದೆ. ಈ ಘಟನೆಯನ್ನು ತಡೆಯಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಜೂನ್ 15ರ ಶನಿವಾರದಂದು  ಬೆಂಗಳೂರಿನಲ್ಲಿಯೂ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ವಿದ್ಯಾವಂತ ಯುವಕನಿಗೆ ಈ ಪರಿಸ್ಥಿತಿ ಎದುರಾದರೆ ಇನ್ನು ಓದದ ದಲಿತ ಯುವಕರು, ಹೆಣ್ಣು ಮಕ್ಕಳ ಕಥೆಯೇನು? ಹಾಗಾಗಿ ನಾವು ಈಗಲೇ ಸರ್ಕಾರವನ್ನು ಎಚ್ಚರಿಸಬೇಕಿದೆ. ಹಾಗಾಗಿ ನಮ್ಮ ಸ್ವಾಭಿಮಾನಿ ಉಳಿಸಿಕೊಳ್ಳಲು ದಿಟ್ಟ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು. ನೂರಾರು ಜನ ಪ್ರಜ್ಞಾವಂತರು ಭಾಗವಹಿಸಿದ್ದರು.

ಇದನ್ನು ಓದಿ: ಗುಂಡ್ಲುಪೇಟೆಯ ಯುವಕನ ಬೆತ್ತಲೆ ಮೆರವಣಿಗೆ: ಅಮಾನವೀಯ ಘಟನೆಗೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...