Homeಕರ್ನಾಟಕಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಂಡ್ಲುಪೇಟೆಯ ದಲಿತ ಯುವಕನರ ಬೆತ್ತಲೆ ಮೆರವಣಿಗೆ ಮೂಲಕ ಬಹಿರಂಗ ಅಸ್ಪೃಶ್ಯತೆ ಆಚರಣೆ ಮಾಡಿದ್ದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ಮಾನವ ಪ್ರೇಮಿಗಳು ಪಾಲ್ಗೊಂಡು ಜಿಲ್ಲಾಡಳಿತದ ವಿರುದ್ಧ ಮತ್ತು ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಟೌನ್ ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಂತ್ರಸ್ತ ಯುವಕನಿಗೆ ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸವನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ತಪ್ಪತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು, ಇಂತಹ ಅಮಾನವೀಯ ಘಟನೆಗಳು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮರಕಳಿಸಬಾರದು ಎಂಬ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕಳಿಸಿಕೊಡಲಾಯಿತು.

ದೇಶದಲ್ಲಿ ದಲಿತರನ್ನು ಮತ್ತಷ್ಟು ದುರ್ಬಲಗೊಳಿಸಲು ಮೀಸಲಾತಿಯನ್ನು ತೆಗೆಯಲು ಪ್ರಯತ್ನಿಸಲಾಗುತ್ತಿದೆ. ಬಡ್ತಿ ಮೀಸಲಾತಿಗೆ ನೂರಾರು ಅಡ್ಡಿಗಳನ್ನು ಒಡ್ಡಲಾಗುತ್ತಿದೆ. ದಲಿತ ದೌರ್ಜನ್ಯ ಕಾಯ್ದೆಯ ಹಲ್ಲು ಕೀಳುವ ಹುನ್ನಾರ ನಡೆಯುತ್ತಿದೆ, ಸಾಲದು ಎಂಬಂತೆ ಬೆತ್ತಲು ಮಾಡಿ ದೌರ್ಜನ್ಯವೆಸಗುವ ಕ್ರೂರ ಘಟನೆಗಳನ್ನು ನಡೆಯುತ್ತಿರುವುದನ್ನು ಸಹಿಸಲಾಗುವುದಿಲ್ಲ. ಪ್ರತಾಪ ದಲಿತನಾದ ಕಾರಣಕ್ಕೆ ಆತನನ್ನು ಬೆತ್ತಲು ಮಾಡಿ ಅವಮಾನ ಮಾಡಲಾಗಿದೆ. ಬೇರೆ ಸವರ್ಣಿಯ ಜಾತಿಯವರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಹೊಡೆದು ಬಡಿಯುವುದಕ್ಕಿಂತ ರೀತಿ ಬೆತ್ತಲು ಮಾಡುವುದು ಅಮಾನವೀಯ. ಮೈಮೇಲೆ ಆಗುವ ಗಾಯಕ್ಕಿಂತ ಇದು ಮನಸ್ಸಿನ ಮೇಲಾಗುವ ಗಾಯವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಒಗ್ಗಾಟ್ಟಾಗಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸೋಣ ಎಂದು ಹಿರಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್ ಕಿಡಿಕಾರಿದರು.

ಇಂದು ದೇಶಾದ್ಯಂತ ದಲಿತ ದಮನಿತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಘಪರಿವಾರ ಕುಮ್ಮಕ್ಕು ಕೊಡುತ್ತಿದೆ. ದಲಿತರು, ಮುಸ್ಲಿಮರು, ಮಹಿಳೆಯರ ಮೇಲೆ ಎಗ್ಗಿಲ್ಲದೇ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ಜವಾಬ್ದಾರಿ ನಮ್ಮ ಮೇಲಿದೆ. ಇಂತಹ ಸಂದರ್ಭದಲ್ಲಿ ನಾವು ಒಗ್ಗಟ್ಟಾಗುವ ಅನಿರ್ವಾಯತೆ ಹೆಚ್ಚಾಗಿದ್ದು ಆ ನಿಟ್ಟಿನಲ್ಲಿ ನಾವು ಹೆಜ್ಜೆ ಹಾಕಬೇಕು ಎಂದರು.

ವಿಡಿಯೋ ನೋಡಿ 

ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಗೌರಿಯವರ ಮಾತುಗಳು.ದಿನಾಂಕ ೨ರಂದು ಗುಂಡ್ಲುಪೇಟೆಯಲ್ಲಿ ದಲಿತ ಯುವಕ ಪ್ರತಾಪ್ ನನ್ನು ಬೆತ್ತಲೆ…

Naanu Gauri यांनी वर पोस्ट केले बुधवार, १२ जून, २०१९

ಕರ್ನಾಟಕ ಜನಶಕ್ತಿಯ ಗೌರಿಯವರು ಮಾತನಾಡಿ ಇದೇ ಮಾದರಿಯಲ್ಲಿ ತುಮಕೂರಿನ ಗುಬ್ಬಿಯಲ್ಲಿಯೂ ದಲಿತ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆಗ ಪ್ರಗತಿಪರರೆಲ್ಲರೂ ಸೇರಿ ‘ಚಲೋ ತುಮಕೂರು’ ಎಂಬ ದೊಡ್ಡ ಹೋರಾಟ ಮಾಡಿದ್ದೆವು. ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ನಾಗರೀಕ ಸಮಾಜ ಏನು ಮಾಡುತ್ತಿದೆ? ಇದು ಅವರೆಲ್ಲರೂ ತಲೆತಗ್ಗಿಸಬೇಕಾದ ವಿಚಾರವಾಗಿದೆ. ಈ ಘಟನೆಯನ್ನು ತಡೆಯಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಜೂನ್ 15ರ ಶನಿವಾರದಂದು  ಬೆಂಗಳೂರಿನಲ್ಲಿಯೂ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ವಿದ್ಯಾವಂತ ಯುವಕನಿಗೆ ಈ ಪರಿಸ್ಥಿತಿ ಎದುರಾದರೆ ಇನ್ನು ಓದದ ದಲಿತ ಯುವಕರು, ಹೆಣ್ಣು ಮಕ್ಕಳ ಕಥೆಯೇನು? ಹಾಗಾಗಿ ನಾವು ಈಗಲೇ ಸರ್ಕಾರವನ್ನು ಎಚ್ಚರಿಸಬೇಕಿದೆ. ಹಾಗಾಗಿ ನಮ್ಮ ಸ್ವಾಭಿಮಾನಿ ಉಳಿಸಿಕೊಳ್ಳಲು ದಿಟ್ಟ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು. ನೂರಾರು ಜನ ಪ್ರಜ್ಞಾವಂತರು ಭಾಗವಹಿಸಿದ್ದರು.

ಇದನ್ನು ಓದಿ: ಗುಂಡ್ಲುಪೇಟೆಯ ಯುವಕನ ಬೆತ್ತಲೆ ಮೆರವಣಿಗೆ: ಅಮಾನವೀಯ ಘಟನೆಗೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...