Homeಕರ್ನಾಟಕಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಂಡ್ಲುಪೇಟೆಯ ದಲಿತ ಯುವಕನರ ಬೆತ್ತಲೆ ಮೆರವಣಿಗೆ ಮೂಲಕ ಬಹಿರಂಗ ಅಸ್ಪೃಶ್ಯತೆ ಆಚರಣೆ ಮಾಡಿದ್ದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ಮಾನವ ಪ್ರೇಮಿಗಳು ಪಾಲ್ಗೊಂಡು ಜಿಲ್ಲಾಡಳಿತದ ವಿರುದ್ಧ ಮತ್ತು ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಟೌನ್ ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಂತ್ರಸ್ತ ಯುವಕನಿಗೆ ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸವನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ತಪ್ಪತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು, ಇಂತಹ ಅಮಾನವೀಯ ಘಟನೆಗಳು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮರಕಳಿಸಬಾರದು ಎಂಬ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕಳಿಸಿಕೊಡಲಾಯಿತು.

ದೇಶದಲ್ಲಿ ದಲಿತರನ್ನು ಮತ್ತಷ್ಟು ದುರ್ಬಲಗೊಳಿಸಲು ಮೀಸಲಾತಿಯನ್ನು ತೆಗೆಯಲು ಪ್ರಯತ್ನಿಸಲಾಗುತ್ತಿದೆ. ಬಡ್ತಿ ಮೀಸಲಾತಿಗೆ ನೂರಾರು ಅಡ್ಡಿಗಳನ್ನು ಒಡ್ಡಲಾಗುತ್ತಿದೆ. ದಲಿತ ದೌರ್ಜನ್ಯ ಕಾಯ್ದೆಯ ಹಲ್ಲು ಕೀಳುವ ಹುನ್ನಾರ ನಡೆಯುತ್ತಿದೆ, ಸಾಲದು ಎಂಬಂತೆ ಬೆತ್ತಲು ಮಾಡಿ ದೌರ್ಜನ್ಯವೆಸಗುವ ಕ್ರೂರ ಘಟನೆಗಳನ್ನು ನಡೆಯುತ್ತಿರುವುದನ್ನು ಸಹಿಸಲಾಗುವುದಿಲ್ಲ. ಪ್ರತಾಪ ದಲಿತನಾದ ಕಾರಣಕ್ಕೆ ಆತನನ್ನು ಬೆತ್ತಲು ಮಾಡಿ ಅವಮಾನ ಮಾಡಲಾಗಿದೆ. ಬೇರೆ ಸವರ್ಣಿಯ ಜಾತಿಯವರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಹೊಡೆದು ಬಡಿಯುವುದಕ್ಕಿಂತ ರೀತಿ ಬೆತ್ತಲು ಮಾಡುವುದು ಅಮಾನವೀಯ. ಮೈಮೇಲೆ ಆಗುವ ಗಾಯಕ್ಕಿಂತ ಇದು ಮನಸ್ಸಿನ ಮೇಲಾಗುವ ಗಾಯವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಒಗ್ಗಾಟ್ಟಾಗಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸೋಣ ಎಂದು ಹಿರಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್ ಕಿಡಿಕಾರಿದರು.

ಇಂದು ದೇಶಾದ್ಯಂತ ದಲಿತ ದಮನಿತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಘಪರಿವಾರ ಕುಮ್ಮಕ್ಕು ಕೊಡುತ್ತಿದೆ. ದಲಿತರು, ಮುಸ್ಲಿಮರು, ಮಹಿಳೆಯರ ಮೇಲೆ ಎಗ್ಗಿಲ್ಲದೇ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ಜವಾಬ್ದಾರಿ ನಮ್ಮ ಮೇಲಿದೆ. ಇಂತಹ ಸಂದರ್ಭದಲ್ಲಿ ನಾವು ಒಗ್ಗಟ್ಟಾಗುವ ಅನಿರ್ವಾಯತೆ ಹೆಚ್ಚಾಗಿದ್ದು ಆ ನಿಟ್ಟಿನಲ್ಲಿ ನಾವು ಹೆಜ್ಜೆ ಹಾಕಬೇಕು ಎಂದರು.

ವಿಡಿಯೋ ನೋಡಿ 

ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಗೌರಿಯವರ ಮಾತುಗಳು.ದಿನಾಂಕ ೨ರಂದು ಗುಂಡ್ಲುಪೇಟೆಯಲ್ಲಿ ದಲಿತ ಯುವಕ ಪ್ರತಾಪ್ ನನ್ನು ಬೆತ್ತಲೆ…

Naanu Gauri यांनी वर पोस्ट केले बुधवार, १२ जून, २०१९

ಕರ್ನಾಟಕ ಜನಶಕ್ತಿಯ ಗೌರಿಯವರು ಮಾತನಾಡಿ ಇದೇ ಮಾದರಿಯಲ್ಲಿ ತುಮಕೂರಿನ ಗುಬ್ಬಿಯಲ್ಲಿಯೂ ದಲಿತ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆಗ ಪ್ರಗತಿಪರರೆಲ್ಲರೂ ಸೇರಿ ‘ಚಲೋ ತುಮಕೂರು’ ಎಂಬ ದೊಡ್ಡ ಹೋರಾಟ ಮಾಡಿದ್ದೆವು. ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ನಾಗರೀಕ ಸಮಾಜ ಏನು ಮಾಡುತ್ತಿದೆ? ಇದು ಅವರೆಲ್ಲರೂ ತಲೆತಗ್ಗಿಸಬೇಕಾದ ವಿಚಾರವಾಗಿದೆ. ಈ ಘಟನೆಯನ್ನು ತಡೆಯಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಜೂನ್ 15ರ ಶನಿವಾರದಂದು  ಬೆಂಗಳೂರಿನಲ್ಲಿಯೂ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ವಿದ್ಯಾವಂತ ಯುವಕನಿಗೆ ಈ ಪರಿಸ್ಥಿತಿ ಎದುರಾದರೆ ಇನ್ನು ಓದದ ದಲಿತ ಯುವಕರು, ಹೆಣ್ಣು ಮಕ್ಕಳ ಕಥೆಯೇನು? ಹಾಗಾಗಿ ನಾವು ಈಗಲೇ ಸರ್ಕಾರವನ್ನು ಎಚ್ಚರಿಸಬೇಕಿದೆ. ಹಾಗಾಗಿ ನಮ್ಮ ಸ್ವಾಭಿಮಾನಿ ಉಳಿಸಿಕೊಳ್ಳಲು ದಿಟ್ಟ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು. ನೂರಾರು ಜನ ಪ್ರಜ್ಞಾವಂತರು ಭಾಗವಹಿಸಿದ್ದರು.

ಇದನ್ನು ಓದಿ: ಗುಂಡ್ಲುಪೇಟೆಯ ಯುವಕನ ಬೆತ್ತಲೆ ಮೆರವಣಿಗೆ: ಅಮಾನವೀಯ ಘಟನೆಗೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....