Homeಕರ್ನಾಟಕಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಂಡ್ಲುಪೇಟೆಯ ದಲಿತ ಯುವಕನರ ಬೆತ್ತಲೆ ಮೆರವಣಿಗೆ ಮೂಲಕ ಬಹಿರಂಗ ಅಸ್ಪೃಶ್ಯತೆ ಆಚರಣೆ ಮಾಡಿದ್ದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ಮಾನವ ಪ್ರೇಮಿಗಳು ಪಾಲ್ಗೊಂಡು ಜಿಲ್ಲಾಡಳಿತದ ವಿರುದ್ಧ ಮತ್ತು ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಟೌನ್ ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಂತ್ರಸ್ತ ಯುವಕನಿಗೆ ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸವನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ತಪ್ಪತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು, ಇಂತಹ ಅಮಾನವೀಯ ಘಟನೆಗಳು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮರಕಳಿಸಬಾರದು ಎಂಬ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕಳಿಸಿಕೊಡಲಾಯಿತು.

ದೇಶದಲ್ಲಿ ದಲಿತರನ್ನು ಮತ್ತಷ್ಟು ದುರ್ಬಲಗೊಳಿಸಲು ಮೀಸಲಾತಿಯನ್ನು ತೆಗೆಯಲು ಪ್ರಯತ್ನಿಸಲಾಗುತ್ತಿದೆ. ಬಡ್ತಿ ಮೀಸಲಾತಿಗೆ ನೂರಾರು ಅಡ್ಡಿಗಳನ್ನು ಒಡ್ಡಲಾಗುತ್ತಿದೆ. ದಲಿತ ದೌರ್ಜನ್ಯ ಕಾಯ್ದೆಯ ಹಲ್ಲು ಕೀಳುವ ಹುನ್ನಾರ ನಡೆಯುತ್ತಿದೆ, ಸಾಲದು ಎಂಬಂತೆ ಬೆತ್ತಲು ಮಾಡಿ ದೌರ್ಜನ್ಯವೆಸಗುವ ಕ್ರೂರ ಘಟನೆಗಳನ್ನು ನಡೆಯುತ್ತಿರುವುದನ್ನು ಸಹಿಸಲಾಗುವುದಿಲ್ಲ. ಪ್ರತಾಪ ದಲಿತನಾದ ಕಾರಣಕ್ಕೆ ಆತನನ್ನು ಬೆತ್ತಲು ಮಾಡಿ ಅವಮಾನ ಮಾಡಲಾಗಿದೆ. ಬೇರೆ ಸವರ್ಣಿಯ ಜಾತಿಯವರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಹೊಡೆದು ಬಡಿಯುವುದಕ್ಕಿಂತ ರೀತಿ ಬೆತ್ತಲು ಮಾಡುವುದು ಅಮಾನವೀಯ. ಮೈಮೇಲೆ ಆಗುವ ಗಾಯಕ್ಕಿಂತ ಇದು ಮನಸ್ಸಿನ ಮೇಲಾಗುವ ಗಾಯವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಒಗ್ಗಾಟ್ಟಾಗಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸೋಣ ಎಂದು ಹಿರಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್ ಕಿಡಿಕಾರಿದರು.

ಇಂದು ದೇಶಾದ್ಯಂತ ದಲಿತ ದಮನಿತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಘಪರಿವಾರ ಕುಮ್ಮಕ್ಕು ಕೊಡುತ್ತಿದೆ. ದಲಿತರು, ಮುಸ್ಲಿಮರು, ಮಹಿಳೆಯರ ಮೇಲೆ ಎಗ್ಗಿಲ್ಲದೇ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ಜವಾಬ್ದಾರಿ ನಮ್ಮ ಮೇಲಿದೆ. ಇಂತಹ ಸಂದರ್ಭದಲ್ಲಿ ನಾವು ಒಗ್ಗಟ್ಟಾಗುವ ಅನಿರ್ವಾಯತೆ ಹೆಚ್ಚಾಗಿದ್ದು ಆ ನಿಟ್ಟಿನಲ್ಲಿ ನಾವು ಹೆಜ್ಜೆ ಹಾಕಬೇಕು ಎಂದರು.

ವಿಡಿಯೋ ನೋಡಿ 

ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಗೌರಿಯವರ ಮಾತುಗಳು.ದಿನಾಂಕ ೨ರಂದು ಗುಂಡ್ಲುಪೇಟೆಯಲ್ಲಿ ದಲಿತ ಯುವಕ ಪ್ರತಾಪ್ ನನ್ನು ಬೆತ್ತಲೆ…

Naanu Gauri यांनी वर पोस्ट केले बुधवार, १२ जून, २०१९

ಕರ್ನಾಟಕ ಜನಶಕ್ತಿಯ ಗೌರಿಯವರು ಮಾತನಾಡಿ ಇದೇ ಮಾದರಿಯಲ್ಲಿ ತುಮಕೂರಿನ ಗುಬ್ಬಿಯಲ್ಲಿಯೂ ದಲಿತ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆಗ ಪ್ರಗತಿಪರರೆಲ್ಲರೂ ಸೇರಿ ‘ಚಲೋ ತುಮಕೂರು’ ಎಂಬ ದೊಡ್ಡ ಹೋರಾಟ ಮಾಡಿದ್ದೆವು. ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ನಾಗರೀಕ ಸಮಾಜ ಏನು ಮಾಡುತ್ತಿದೆ? ಇದು ಅವರೆಲ್ಲರೂ ತಲೆತಗ್ಗಿಸಬೇಕಾದ ವಿಚಾರವಾಗಿದೆ. ಈ ಘಟನೆಯನ್ನು ತಡೆಯಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಜೂನ್ 15ರ ಶನಿವಾರದಂದು  ಬೆಂಗಳೂರಿನಲ್ಲಿಯೂ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ವಿದ್ಯಾವಂತ ಯುವಕನಿಗೆ ಈ ಪರಿಸ್ಥಿತಿ ಎದುರಾದರೆ ಇನ್ನು ಓದದ ದಲಿತ ಯುವಕರು, ಹೆಣ್ಣು ಮಕ್ಕಳ ಕಥೆಯೇನು? ಹಾಗಾಗಿ ನಾವು ಈಗಲೇ ಸರ್ಕಾರವನ್ನು ಎಚ್ಚರಿಸಬೇಕಿದೆ. ಹಾಗಾಗಿ ನಮ್ಮ ಸ್ವಾಭಿಮಾನಿ ಉಳಿಸಿಕೊಳ್ಳಲು ದಿಟ್ಟ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು. ನೂರಾರು ಜನ ಪ್ರಜ್ಞಾವಂತರು ಭಾಗವಹಿಸಿದ್ದರು.

ಇದನ್ನು ಓದಿ: ಗುಂಡ್ಲುಪೇಟೆಯ ಯುವಕನ ಬೆತ್ತಲೆ ಮೆರವಣಿಗೆ: ಅಮಾನವೀಯ ಘಟನೆಗೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...