Homeಸಿನಿಮಾಸಿನಿ ಸುದ್ದಿಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

ಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

- Advertisement -
- Advertisement -

ಸೋಮಶೇಖರ್ ಚಲ್ಯ |
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಬಾಲ್ಯದ ಕಥೆಯನ್ನಾಧರಿಸಿದ ಚಿತ್ರಗಳು ಕಣ್ಮರೆಯಾಗಿ, ಪ್ರೀತಿ-ಪ್ರೇಮದ ಸುತ್ತಾ ಚಿತ್ರರಂಗ ಗಿರಕಿಹೊಡೆಯುತ್ತದೆ. ಮೊದಲೆಲ್ಲ ಮಕ್ಕಳನ್ನಾಧರಿಸಿದ ಚಿತ್ರಗಳದ್ದೇ ಸದ್ದು-ಗದ್ದಲವಿರುತ್ತಿತ್ತು. ಸಿಂಹದಮರಿ ಸೈನ್ಯ, ಪುಟಾಣಿ ಏಜೆಂಟ್‌ನಂತಹ ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲ್ಪನಾ, ಬೇಬಿ ಶಾಂಭವಿ, ಅರ್ಜುನ್ ಸರ್ಜಾ ಮೊದಲಾದವರು ಸ್ಟಾರ್‌ಗಳ ರೇಂಜಿಗೆ ಹೆಸರು ಮಾಡಿದ್ದು ಕೂಡ ಬಾಲ ನಟನೆಯಿಂದಲೇ. ಆದರೆ ಈಗ ಆ ಟ್ರೆಂಡ್ ಮಾಯವಾಗಿದೆ. ಅಂಥಾ ಕಾಲವನ್ನು ಇತ್ತೀಚೆಗೆ ಮತ್ತೊಮ್ಮೆ ಬಾಲ್ಯವನ್ನು ನೆನೆಸಿದ್ದು ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ. ಈಗ ಇಂಥದ್ದೇ ಮತ್ತೊಂದು ಚಿತ್ರ ಬಾಲ್ಯದ ಕಥೆಯೊಂದಿಗೆ ಸಿನಿ ಫ್ಯಾನ್‌ಗಳ ಬಾಲ್ಯದ ಕನಸುಗಳನ್ನು ನೆನಪಿಸಲು ಮುಂದಾಗಿದೆ. 2016ರಲ್ಲಿಯೇ ನಿರ್ಮಾಣಗೊಂಡಿರುವ ಕಾರ್ತಿಕ್ ಸರಗೂರು ನಿರ್ದೇಶನದ ಚೊಚ್ಚಲ ಚಿತ್ರ ಜೀರ್ಜಿಂಬೆ ಇನ್ನೂ ತೆರೆಕಾರಣದಿರುವುದು ಅಚ್ಚರಿ ಮೂಡಿಸಿದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದೆ.

ಕರ್ನಾಟಕದ ಗ್ರಾಮೀಣ ಪ್ರದೇಶದ ಬಾಲಕಿಯೊಬ್ಬಳ ಜೀವನಾಧಾರಿತ ಕಥೆಯನ್ನು ಚಿತ್ರಿಸಿರುವ ಜೀರ್ಜಿಂಬೆ, ಹಳ್ಳಿ ಪ್ರದೇಶದಲ್ಲಿ ಬೆಳೆಯುವ ಎಲ್ಲಾ ಹೆಣ್ಣುಮಕ್ಕಳ ಕನಸನ್ನು ಪ್ರತಿನಿಧಿಸುವ ಭರವಸೆ ಹುಟ್ಟುಹಾಕಿದೆ. ಹೆನ್ರಿ ಡೇವಿಡ್ ಥೋರೇನ್‌ರವರ ‘ಪ್ರಕೃತಿ ಮತ್ತು ಮಹಿಳೆ ಮಾತ್ರವೇ ಎಂಥಹ ಪರಿಸ್ಥಿತಿಯನ್ನು ಎದುರಿಸಿ ಬದುಕಬಲ್ಲವು, ಏಕೆಂದರೆ ಆ ಇಬ್ಬರಲ್ಲಿ ಮಾತ್ರ ಆತ್ಮವಿಶ್ವಾಸ ಹೊಂದಿರುತ್ತಾರೆ’ ಎಂಬ ಮಾತಿನ ಸ್ಫೂರ್ತಿಯಲ್ಲಿ ಬಾಲಕಿ ಬದುಕಿನ ಚಿತ್ರವನ್ನು ನಿರ್ಮಿಸಿದ್ದಾರೆ. ಇಂದಿನ ಸಮಾಜದಲ್ಲಿ ಪೋಷಕರು ತಮ್ಮ ಮಕ್ಕಳ ಬಗೆಗಿನ ನಿರ್ದಿಷ್ಟ ಬದುಕನ್ನು ಗುರುತಿಸುತ್ತಾ ಮಕ್ಕಳ ಬದುಕಿನ ಆಯ್ಕೆಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳ ವಿಚಾರದಲ್ಲಂತೂ ಅದು ದುಪ್ಪಟ್ಟು. ಮಕ್ಕಳ ಕನಸು ನನಸಾಗಿಸಲು ಪೋಷಕರು ಬಿಡುತ್ತಿಲ್ಲ. ಆದರೆ ಜೀರ್ಜಿಂಬೆ ಹೇಗೆ ತನ್ನ ಪುಟ್ಟ ಬಣ್ಣದ ರೆಕ್ಕೆಗಳಿಂದ ಸ್ವತಂತ್ರವಾಗಿ ಹಾರಾಡುತ್ತೋ ಹಾಗೇ ಪುಟ್ಟ ಬಾಲಕಿಯೊಬ್ಬಳು ತನ್ನ ಚಿಗುರು ಮನಸ್ಸಿನಲ್ಲಿ ಕನಸು ಕಾಣುವ ಸ್ವಾತಂತ್ರ್ಯ ಪಡೆದಿರುತ್ತಾಳೆ. ಅವರ ಗುರಿಯನ್ನು ಅವರೇ ಆಯ್ಕೆ ಮಾಡಿಕೊಳ್ಳಬೇಕು, ಆ ಗುರಿಯನ್ನು ಸಾಧಿಸಲು ಯಶಸ್ವಿಯಾಗಬೇಕು, ಅಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕೆಂಬ ಎಚ್ಚರಿಕೆಯನ್ನು ಈ ಚಿತ್ರ ಪೋಷಕರಿಗೆ ರವಾನಿಸಲಿದೆ. ಈಗಾಗಲೇ 23 ಅಂತಾರಾಷ್ಟ್ರೀಯ ಉತ್ಸವಗಳಲ್ಲಿ ಪ್ರದರ್ಶನಗೊಂಡು 2017ರಲ್ಲಿ ರಾಜ್ಯ ಪ್ರಶಸ್ತಿಯನ್ನೂ ಪಡೆದುಕೊಂಡಿರುವ ಜೀರ್ಜಿಂಬೆ ಸಧ್ಯದಲ್ಲೆ ಚಿತ್ರಮಂದಿರಗಳಲ್ಲಿ ಗುಯ್‌ಗುಟ್ಟಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...