Homeಸಿನಿಮಾಸಿನಿ ಸುದ್ದಿಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

ಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

- Advertisement -
- Advertisement -

ಸೋಮಶೇಖರ್ ಚಲ್ಯ |
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಬಾಲ್ಯದ ಕಥೆಯನ್ನಾಧರಿಸಿದ ಚಿತ್ರಗಳು ಕಣ್ಮರೆಯಾಗಿ, ಪ್ರೀತಿ-ಪ್ರೇಮದ ಸುತ್ತಾ ಚಿತ್ರರಂಗ ಗಿರಕಿಹೊಡೆಯುತ್ತದೆ. ಮೊದಲೆಲ್ಲ ಮಕ್ಕಳನ್ನಾಧರಿಸಿದ ಚಿತ್ರಗಳದ್ದೇ ಸದ್ದು-ಗದ್ದಲವಿರುತ್ತಿತ್ತು. ಸಿಂಹದಮರಿ ಸೈನ್ಯ, ಪುಟಾಣಿ ಏಜೆಂಟ್‌ನಂತಹ ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲ್ಪನಾ, ಬೇಬಿ ಶಾಂಭವಿ, ಅರ್ಜುನ್ ಸರ್ಜಾ ಮೊದಲಾದವರು ಸ್ಟಾರ್‌ಗಳ ರೇಂಜಿಗೆ ಹೆಸರು ಮಾಡಿದ್ದು ಕೂಡ ಬಾಲ ನಟನೆಯಿಂದಲೇ. ಆದರೆ ಈಗ ಆ ಟ್ರೆಂಡ್ ಮಾಯವಾಗಿದೆ. ಅಂಥಾ ಕಾಲವನ್ನು ಇತ್ತೀಚೆಗೆ ಮತ್ತೊಮ್ಮೆ ಬಾಲ್ಯವನ್ನು ನೆನೆಸಿದ್ದು ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ. ಈಗ ಇಂಥದ್ದೇ ಮತ್ತೊಂದು ಚಿತ್ರ ಬಾಲ್ಯದ ಕಥೆಯೊಂದಿಗೆ ಸಿನಿ ಫ್ಯಾನ್‌ಗಳ ಬಾಲ್ಯದ ಕನಸುಗಳನ್ನು ನೆನಪಿಸಲು ಮುಂದಾಗಿದೆ. 2016ರಲ್ಲಿಯೇ ನಿರ್ಮಾಣಗೊಂಡಿರುವ ಕಾರ್ತಿಕ್ ಸರಗೂರು ನಿರ್ದೇಶನದ ಚೊಚ್ಚಲ ಚಿತ್ರ ಜೀರ್ಜಿಂಬೆ ಇನ್ನೂ ತೆರೆಕಾರಣದಿರುವುದು ಅಚ್ಚರಿ ಮೂಡಿಸಿದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದೆ.

ಕರ್ನಾಟಕದ ಗ್ರಾಮೀಣ ಪ್ರದೇಶದ ಬಾಲಕಿಯೊಬ್ಬಳ ಜೀವನಾಧಾರಿತ ಕಥೆಯನ್ನು ಚಿತ್ರಿಸಿರುವ ಜೀರ್ಜಿಂಬೆ, ಹಳ್ಳಿ ಪ್ರದೇಶದಲ್ಲಿ ಬೆಳೆಯುವ ಎಲ್ಲಾ ಹೆಣ್ಣುಮಕ್ಕಳ ಕನಸನ್ನು ಪ್ರತಿನಿಧಿಸುವ ಭರವಸೆ ಹುಟ್ಟುಹಾಕಿದೆ. ಹೆನ್ರಿ ಡೇವಿಡ್ ಥೋರೇನ್‌ರವರ ‘ಪ್ರಕೃತಿ ಮತ್ತು ಮಹಿಳೆ ಮಾತ್ರವೇ ಎಂಥಹ ಪರಿಸ್ಥಿತಿಯನ್ನು ಎದುರಿಸಿ ಬದುಕಬಲ್ಲವು, ಏಕೆಂದರೆ ಆ ಇಬ್ಬರಲ್ಲಿ ಮಾತ್ರ ಆತ್ಮವಿಶ್ವಾಸ ಹೊಂದಿರುತ್ತಾರೆ’ ಎಂಬ ಮಾತಿನ ಸ್ಫೂರ್ತಿಯಲ್ಲಿ ಬಾಲಕಿ ಬದುಕಿನ ಚಿತ್ರವನ್ನು ನಿರ್ಮಿಸಿದ್ದಾರೆ. ಇಂದಿನ ಸಮಾಜದಲ್ಲಿ ಪೋಷಕರು ತಮ್ಮ ಮಕ್ಕಳ ಬಗೆಗಿನ ನಿರ್ದಿಷ್ಟ ಬದುಕನ್ನು ಗುರುತಿಸುತ್ತಾ ಮಕ್ಕಳ ಬದುಕಿನ ಆಯ್ಕೆಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳ ವಿಚಾರದಲ್ಲಂತೂ ಅದು ದುಪ್ಪಟ್ಟು. ಮಕ್ಕಳ ಕನಸು ನನಸಾಗಿಸಲು ಪೋಷಕರು ಬಿಡುತ್ತಿಲ್ಲ. ಆದರೆ ಜೀರ್ಜಿಂಬೆ ಹೇಗೆ ತನ್ನ ಪುಟ್ಟ ಬಣ್ಣದ ರೆಕ್ಕೆಗಳಿಂದ ಸ್ವತಂತ್ರವಾಗಿ ಹಾರಾಡುತ್ತೋ ಹಾಗೇ ಪುಟ್ಟ ಬಾಲಕಿಯೊಬ್ಬಳು ತನ್ನ ಚಿಗುರು ಮನಸ್ಸಿನಲ್ಲಿ ಕನಸು ಕಾಣುವ ಸ್ವಾತಂತ್ರ್ಯ ಪಡೆದಿರುತ್ತಾಳೆ. ಅವರ ಗುರಿಯನ್ನು ಅವರೇ ಆಯ್ಕೆ ಮಾಡಿಕೊಳ್ಳಬೇಕು, ಆ ಗುರಿಯನ್ನು ಸಾಧಿಸಲು ಯಶಸ್ವಿಯಾಗಬೇಕು, ಅಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕೆಂಬ ಎಚ್ಚರಿಕೆಯನ್ನು ಈ ಚಿತ್ರ ಪೋಷಕರಿಗೆ ರವಾನಿಸಲಿದೆ. ಈಗಾಗಲೇ 23 ಅಂತಾರಾಷ್ಟ್ರೀಯ ಉತ್ಸವಗಳಲ್ಲಿ ಪ್ರದರ್ಶನಗೊಂಡು 2017ರಲ್ಲಿ ರಾಜ್ಯ ಪ್ರಶಸ್ತಿಯನ್ನೂ ಪಡೆದುಕೊಂಡಿರುವ ಜೀರ್ಜಿಂಬೆ ಸಧ್ಯದಲ್ಲೆ ಚಿತ್ರಮಂದಿರಗಳಲ್ಲಿ ಗುಯ್‌ಗುಟ್ಟಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...