Homeಸಿನಿಮಾಸಿನಿ ಸುದ್ದಿಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

ಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

- Advertisement -
- Advertisement -

ಸೋಮಶೇಖರ್ ಚಲ್ಯ |
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಬಾಲ್ಯದ ಕಥೆಯನ್ನಾಧರಿಸಿದ ಚಿತ್ರಗಳು ಕಣ್ಮರೆಯಾಗಿ, ಪ್ರೀತಿ-ಪ್ರೇಮದ ಸುತ್ತಾ ಚಿತ್ರರಂಗ ಗಿರಕಿಹೊಡೆಯುತ್ತದೆ. ಮೊದಲೆಲ್ಲ ಮಕ್ಕಳನ್ನಾಧರಿಸಿದ ಚಿತ್ರಗಳದ್ದೇ ಸದ್ದು-ಗದ್ದಲವಿರುತ್ತಿತ್ತು. ಸಿಂಹದಮರಿ ಸೈನ್ಯ, ಪುಟಾಣಿ ಏಜೆಂಟ್‌ನಂತಹ ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲ್ಪನಾ, ಬೇಬಿ ಶಾಂಭವಿ, ಅರ್ಜುನ್ ಸರ್ಜಾ ಮೊದಲಾದವರು ಸ್ಟಾರ್‌ಗಳ ರೇಂಜಿಗೆ ಹೆಸರು ಮಾಡಿದ್ದು ಕೂಡ ಬಾಲ ನಟನೆಯಿಂದಲೇ. ಆದರೆ ಈಗ ಆ ಟ್ರೆಂಡ್ ಮಾಯವಾಗಿದೆ. ಅಂಥಾ ಕಾಲವನ್ನು ಇತ್ತೀಚೆಗೆ ಮತ್ತೊಮ್ಮೆ ಬಾಲ್ಯವನ್ನು ನೆನೆಸಿದ್ದು ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ. ಈಗ ಇಂಥದ್ದೇ ಮತ್ತೊಂದು ಚಿತ್ರ ಬಾಲ್ಯದ ಕಥೆಯೊಂದಿಗೆ ಸಿನಿ ಫ್ಯಾನ್‌ಗಳ ಬಾಲ್ಯದ ಕನಸುಗಳನ್ನು ನೆನಪಿಸಲು ಮುಂದಾಗಿದೆ. 2016ರಲ್ಲಿಯೇ ನಿರ್ಮಾಣಗೊಂಡಿರುವ ಕಾರ್ತಿಕ್ ಸರಗೂರು ನಿರ್ದೇಶನದ ಚೊಚ್ಚಲ ಚಿತ್ರ ಜೀರ್ಜಿಂಬೆ ಇನ್ನೂ ತೆರೆಕಾರಣದಿರುವುದು ಅಚ್ಚರಿ ಮೂಡಿಸಿದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದೆ.

ಕರ್ನಾಟಕದ ಗ್ರಾಮೀಣ ಪ್ರದೇಶದ ಬಾಲಕಿಯೊಬ್ಬಳ ಜೀವನಾಧಾರಿತ ಕಥೆಯನ್ನು ಚಿತ್ರಿಸಿರುವ ಜೀರ್ಜಿಂಬೆ, ಹಳ್ಳಿ ಪ್ರದೇಶದಲ್ಲಿ ಬೆಳೆಯುವ ಎಲ್ಲಾ ಹೆಣ್ಣುಮಕ್ಕಳ ಕನಸನ್ನು ಪ್ರತಿನಿಧಿಸುವ ಭರವಸೆ ಹುಟ್ಟುಹಾಕಿದೆ. ಹೆನ್ರಿ ಡೇವಿಡ್ ಥೋರೇನ್‌ರವರ ‘ಪ್ರಕೃತಿ ಮತ್ತು ಮಹಿಳೆ ಮಾತ್ರವೇ ಎಂಥಹ ಪರಿಸ್ಥಿತಿಯನ್ನು ಎದುರಿಸಿ ಬದುಕಬಲ್ಲವು, ಏಕೆಂದರೆ ಆ ಇಬ್ಬರಲ್ಲಿ ಮಾತ್ರ ಆತ್ಮವಿಶ್ವಾಸ ಹೊಂದಿರುತ್ತಾರೆ’ ಎಂಬ ಮಾತಿನ ಸ್ಫೂರ್ತಿಯಲ್ಲಿ ಬಾಲಕಿ ಬದುಕಿನ ಚಿತ್ರವನ್ನು ನಿರ್ಮಿಸಿದ್ದಾರೆ. ಇಂದಿನ ಸಮಾಜದಲ್ಲಿ ಪೋಷಕರು ತಮ್ಮ ಮಕ್ಕಳ ಬಗೆಗಿನ ನಿರ್ದಿಷ್ಟ ಬದುಕನ್ನು ಗುರುತಿಸುತ್ತಾ ಮಕ್ಕಳ ಬದುಕಿನ ಆಯ್ಕೆಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳ ವಿಚಾರದಲ್ಲಂತೂ ಅದು ದುಪ್ಪಟ್ಟು. ಮಕ್ಕಳ ಕನಸು ನನಸಾಗಿಸಲು ಪೋಷಕರು ಬಿಡುತ್ತಿಲ್ಲ. ಆದರೆ ಜೀರ್ಜಿಂಬೆ ಹೇಗೆ ತನ್ನ ಪುಟ್ಟ ಬಣ್ಣದ ರೆಕ್ಕೆಗಳಿಂದ ಸ್ವತಂತ್ರವಾಗಿ ಹಾರಾಡುತ್ತೋ ಹಾಗೇ ಪುಟ್ಟ ಬಾಲಕಿಯೊಬ್ಬಳು ತನ್ನ ಚಿಗುರು ಮನಸ್ಸಿನಲ್ಲಿ ಕನಸು ಕಾಣುವ ಸ್ವಾತಂತ್ರ್ಯ ಪಡೆದಿರುತ್ತಾಳೆ. ಅವರ ಗುರಿಯನ್ನು ಅವರೇ ಆಯ್ಕೆ ಮಾಡಿಕೊಳ್ಳಬೇಕು, ಆ ಗುರಿಯನ್ನು ಸಾಧಿಸಲು ಯಶಸ್ವಿಯಾಗಬೇಕು, ಅಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕೆಂಬ ಎಚ್ಚರಿಕೆಯನ್ನು ಈ ಚಿತ್ರ ಪೋಷಕರಿಗೆ ರವಾನಿಸಲಿದೆ. ಈಗಾಗಲೇ 23 ಅಂತಾರಾಷ್ಟ್ರೀಯ ಉತ್ಸವಗಳಲ್ಲಿ ಪ್ರದರ್ಶನಗೊಂಡು 2017ರಲ್ಲಿ ರಾಜ್ಯ ಪ್ರಶಸ್ತಿಯನ್ನೂ ಪಡೆದುಕೊಂಡಿರುವ ಜೀರ್ಜಿಂಬೆ ಸಧ್ಯದಲ್ಲೆ ಚಿತ್ರಮಂದಿರಗಳಲ್ಲಿ ಗುಯ್‌ಗುಟ್ಟಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...