Homeಕರ್ನಾಟಕಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

- Advertisement -
- Advertisement -

ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಸುಲಭದಲ್ಲಿ ಗೆಲ್ಲಬೇಕು. ಆದರೆ, ವಿಧಾನಸಭಾ ಚುನಾವಣೆ ಕಡೆಗೆ ಹೋಗುವ ಬದಲು, ಈಗಲೇ ಸರ್ಕಾರ ರಚನೆ ಮಾಡುವ ಆತುರಕ್ಕೆ ಬಿದ್ದಿದೆ. ಅಷ್ಟೇ ಅಲ್ಲದೇ, ಸುಮಾರು 16 ಜನ ಶಾಸಕರು ರಾಜೀನಾಮೆ ಕೊಟ್ಟ ನಂತರವೂ ದುರ್ಬಲವಾಗಿಯೇ ಕಾಣುತ್ತಿದೆ. ಆ ದೌರ್ಬಲ್ಯದ ಲಕ್ಷಣಗಳನ್ನು ನೋಡಿದರೆ ಯಾರಿಗಾದರೂ ಅದು ಮನವರಿಕೆಯಾಗುತ್ತದೆ.

1. ಮೊದಲನೆಯದಾಗಿ ರಾಜೀನಾಮೆ ಕೊಟ್ಟವರನ್ನು ಸ್ವತಂತ್ರವಾಗಿ ಬಿಟ್ಟರೆ ಅವರು ವಾಪಸ್ಸು ಹೋಗುತ್ತಾರೆ ಎಂದೆನಿಸಿ ಅವರನ್ನು ಕೂಡಲೇ ಬಿಜೆಪಿಯೇ ಅಧಿಕಾರದಲ್ಲಿರುವ ಮಹಾರಾಷ್ಟ್ರಕ್ಕೆ ರವಾನೆ ಮಾಡಲಾಯಿತು. ರಾಜೀನಾಮೆ ಕೊಟ್ಟವರು ವೀರಾವೇಶದಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು ಮತ್ತು 2-3 ಜನರನ್ನು ಬಿಟ್ಟರೆ ಮಿಕ್ಕವರೆಲ್ಲರೂ ಘಟಾನುಘಟಿ ಶಾಸಕರೇ. ಹಾಗಿದ್ದೂ ಮುಂಬೈಗೆ ಬಿಜೆಪಿಯೇ ವ್ಯವಸ್ಥೆ ಮಾಡಿದ ವಿಮಾನದಲ್ಲಿ ಹೊರಟು, ಬಿಜೆಪಿಗೆ ಆಪ್ತವಾದ ಉದ್ಯಮಿಯ ಹೋಟೆಲ್‍ನಲ್ಲೇ ಇರುವಂತೆ ನೋಡಿಕೊಳ್ಳಲಾಯಿತು.


2. ಅಲ್ಲಿಗೆ ಹೋದ ಮರುದಿನ ಡಿ.ಕೆ.ಶಿವಕುಮಾರ್ ‘ಮುಂಬೈಗೆ ಹೋಗಿ ಅವರ ಮನವೊಲಿಸಿ ಕರೆತರುತ್ತೇನೆ’ ಎಂದು ಘೋಷಿಸಿದ್ದರು. ಯಾರೇ ಬಂದರೂ, ಈ ಶಾಸಕರು ಜಗ್ಗಲ್ಲ ಎಂಬ ವಿಶ್ವಾಸ ಇರುವುದು ಹೋಗಲಿ, ತಾವೂ ಇದ್ದು (ಅದೇ ಹೋಟೆಲ್‍ನಲ್ಲಿ ಬಿಜೆಪಿ ನಾಯಕರೂ ಇದ್ದರು) ನಿಭಾಯಿಸಬಹುದು ಎಂಬ ಧೈರ್ಯವೂ ಬಿಜೆಪಿಗಿರಲಿಲ್ಲ. ಬದಲಿಗೆ ಡಿ.ಕೆ.ಶಿ ಅಥವಾ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದರೆ, ಇವರೆಲ್ಲರೂ ಓಡಿ ಹೋಗುತ್ತಾರೆಂದು ಬಿಜೆಪಿಯು ಭಾವಿಸಿತು. ಹಾಗಾಗಿ ಮಧ್ಯರಾತ್ರಿ 10 ಜನ ಶಾಸಕರಿಂದ ಪತ್ರ ಬರೆಸಿಕೊಂಡು ಮುಂಬೈನ ಪೊಲೀಸ್ ಕಮೀಷನರ್, ಸ್ಥಳೀಯ ಡಿಸಿಪಿ ಮತ್ತು ಪೊಲೀಸ್ ಠಾಣೆಗೆ ನೀಡಿದರು. ಆ ಪತ್ರವು ಡಿ.ಕೆ.ಶಿ ಮತ್ತು ಎಚ್.ಡಿ.ಕೆ ತಮ್ಮನ್ನು ಮಾತಾಡಿಸದಂತೆ ತಡೆಯಬೇಕು ಎಂಬಂತೆ ಧ್ವನಿಸಿತು. ತಾವು ಮರಳಿ ಹೋಗುವುದಿಲ್ಲ ಎಂದು ಖಚಿತವಿದ್ದು ಪೊಲೀಸರಿಗೇ ದೂರು ಸಲ್ಲಿಸುವವರು, ಎದುರಿಗೆ ಇವರಿಬ್ಬರು ಬಂದರೆ ಯಾಕೆ ಹೆದರಬೇಕು? ಹಾಗಾಗಿ ಈ ಪತ್ರವನ್ನು ಬಿಜೆಪಿಯೇ ಬರೆಸಿಕೊಂಡಿತ್ತು ಎಂದು ನಂಬಲು ಕಾರಣಗಳಿವೆ.


3. ಅಧಿವೇಶನ ಶುರುವಾದ ದಿನ ‘ವಿಶ್ವಾಸಮತ ಯಾಚನೆ ಮಾಡಲು ಸಿದ್ಧ’ ಎಂದು ಕುಮಾರಸ್ವಾಮಿ ಘೋಷಿಸಿದ ತಕ್ಷಣ ಬೆಚ್ಚಿಬಿದ್ದಿದ್ದು ಬಿಜೆಪಿ. ತೃಪ್ತರಲ್ಲದ ಜೆಡಿಎಸ್, ಕಾಂಗ್ರೆಸ್ ಶಾಸಕರ ಕುರಿತಲ್ಲ, ತನ್ನ ಶಾಸಕರ ಕುರಿತಂತೆ. ಕೂಡಲೇ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಸ್ಥಳಾಂತರಿಸಿತು. ಸದ್ಯ, ಇನ್ನೂ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಿಲ್ಲ ಅಷ್ಟೇ.


4. ನಾಲ್ಕನೆಯದಾಗಿ, ಮುಂಬೈನಲ್ಲಿದ್ದ 12 ಜನ ತೃಪ್ತರಲ್ಲದ ಶಾಸಕರು ಇಂದು ಶಿರಡಿಗೆ ಹೋಗಿ ಬಂದರು. ಸುದ್ದಿಯೇನೆಂದರೆ ಅಲ್ಲಿ ಈ ಶಾಸಕರಿಂದ ಆಣೆ ಪ್ರಮಾಣ ಮಾಡಿಸಿ ನಾವು ಮರಳಿ ನಮ್ಮ ಪಕ್ಷಗಳಿಗೆ ಹೋಗುವುದಿಲ್ಲ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿಸಲಾಗಿದೆ!!

ಹಾಗೆ ನೋಡಿದರೆ, ಬೆಂಗಳೂರಿನಲ್ಲೇ ಇರುವ ರಾಮಲಿಂಗಾರೆಡ್ಡಿ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳುತ್ತಿದ್ದಾರೆ. ಅವರ ಮನೆಗೆ ಪದೇ ಪದೇ ಕಾಂಗ್ರೆಸ್ ನಾಯಕರೂ ಹೋಗುತ್ತಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ತನ್ನ ಮನೆಯಲ್ಲಿ ಕೂತಿದ್ದರೆಂದು ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಬಂದವರು ಅಜ್ಞಾತ ಸ್ಥಳಕ್ಕೆ ಹೋದರೆಂದು ಹೇಳಲಾಗಿದೆ.
ಅಂದರೆ ವಿಚಾರ ಸ್ಪಷ್ಟವಿದೆ. ಬಿಜೆಪಿ ಆತ್ಮವಿಶ್ವಾಸದಿಂದಿಲ್ಲ. ಈ ಎಲ್ಲಾ ಅಂಶಗಳೂ ಅದರ ದೌರ್ಬಲ್ಯವನ್ನಷ್ಟೇ ತೋರಿಸುತ್ತಿವೆ. ಈಗಾಗಲೇ ತನ್ನ 13 ಶಾಸಕರು ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ತನ್ನ ಇತರ ಶಾಸಕರನ್ನು ರೆಸಾರ್ಟ್‍ಗೆ ಒಯ್ದಿಲ್ಲ. ಇದರ ಅರ್ಥವೇನು?
ಬಿಜೆಪಿಯು ಈ ಸಾರಿಯೂ ಅಧಿಕಾರ ಪಡೆದುಕೊಳ್ಳುವುದಿಲ್ಲವಾ? ಮತ್ತೊಂದು ಠುಸ್ ಪಟಾಕಿಯಾ? ಮುಂದಿನ ಮೂರ್ನಾಲ್ಕು ದಿನಗಳು ಈ ಕುರಿತು ಸ್ಪಷ್ಟ ಚಿತ್ರಣ ನೀಡುತ್ತವಾದರೂ, ಈ ಸದ್ಯ ಬಿಜೆಪಿ ದುರ್ಬಲವಾಗಿದೆ ಎಂಬುದು ಎದ್ದು ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...