Homeಕರ್ನಾಟಕಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

- Advertisement -
- Advertisement -

ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಸುಲಭದಲ್ಲಿ ಗೆಲ್ಲಬೇಕು. ಆದರೆ, ವಿಧಾನಸಭಾ ಚುನಾವಣೆ ಕಡೆಗೆ ಹೋಗುವ ಬದಲು, ಈಗಲೇ ಸರ್ಕಾರ ರಚನೆ ಮಾಡುವ ಆತುರಕ್ಕೆ ಬಿದ್ದಿದೆ. ಅಷ್ಟೇ ಅಲ್ಲದೇ, ಸುಮಾರು 16 ಜನ ಶಾಸಕರು ರಾಜೀನಾಮೆ ಕೊಟ್ಟ ನಂತರವೂ ದುರ್ಬಲವಾಗಿಯೇ ಕಾಣುತ್ತಿದೆ. ಆ ದೌರ್ಬಲ್ಯದ ಲಕ್ಷಣಗಳನ್ನು ನೋಡಿದರೆ ಯಾರಿಗಾದರೂ ಅದು ಮನವರಿಕೆಯಾಗುತ್ತದೆ.

1. ಮೊದಲನೆಯದಾಗಿ ರಾಜೀನಾಮೆ ಕೊಟ್ಟವರನ್ನು ಸ್ವತಂತ್ರವಾಗಿ ಬಿಟ್ಟರೆ ಅವರು ವಾಪಸ್ಸು ಹೋಗುತ್ತಾರೆ ಎಂದೆನಿಸಿ ಅವರನ್ನು ಕೂಡಲೇ ಬಿಜೆಪಿಯೇ ಅಧಿಕಾರದಲ್ಲಿರುವ ಮಹಾರಾಷ್ಟ್ರಕ್ಕೆ ರವಾನೆ ಮಾಡಲಾಯಿತು. ರಾಜೀನಾಮೆ ಕೊಟ್ಟವರು ವೀರಾವೇಶದಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು ಮತ್ತು 2-3 ಜನರನ್ನು ಬಿಟ್ಟರೆ ಮಿಕ್ಕವರೆಲ್ಲರೂ ಘಟಾನುಘಟಿ ಶಾಸಕರೇ. ಹಾಗಿದ್ದೂ ಮುಂಬೈಗೆ ಬಿಜೆಪಿಯೇ ವ್ಯವಸ್ಥೆ ಮಾಡಿದ ವಿಮಾನದಲ್ಲಿ ಹೊರಟು, ಬಿಜೆಪಿಗೆ ಆಪ್ತವಾದ ಉದ್ಯಮಿಯ ಹೋಟೆಲ್‍ನಲ್ಲೇ ಇರುವಂತೆ ನೋಡಿಕೊಳ್ಳಲಾಯಿತು.


2. ಅಲ್ಲಿಗೆ ಹೋದ ಮರುದಿನ ಡಿ.ಕೆ.ಶಿವಕುಮಾರ್ ‘ಮುಂಬೈಗೆ ಹೋಗಿ ಅವರ ಮನವೊಲಿಸಿ ಕರೆತರುತ್ತೇನೆ’ ಎಂದು ಘೋಷಿಸಿದ್ದರು. ಯಾರೇ ಬಂದರೂ, ಈ ಶಾಸಕರು ಜಗ್ಗಲ್ಲ ಎಂಬ ವಿಶ್ವಾಸ ಇರುವುದು ಹೋಗಲಿ, ತಾವೂ ಇದ್ದು (ಅದೇ ಹೋಟೆಲ್‍ನಲ್ಲಿ ಬಿಜೆಪಿ ನಾಯಕರೂ ಇದ್ದರು) ನಿಭಾಯಿಸಬಹುದು ಎಂಬ ಧೈರ್ಯವೂ ಬಿಜೆಪಿಗಿರಲಿಲ್ಲ. ಬದಲಿಗೆ ಡಿ.ಕೆ.ಶಿ ಅಥವಾ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದರೆ, ಇವರೆಲ್ಲರೂ ಓಡಿ ಹೋಗುತ್ತಾರೆಂದು ಬಿಜೆಪಿಯು ಭಾವಿಸಿತು. ಹಾಗಾಗಿ ಮಧ್ಯರಾತ್ರಿ 10 ಜನ ಶಾಸಕರಿಂದ ಪತ್ರ ಬರೆಸಿಕೊಂಡು ಮುಂಬೈನ ಪೊಲೀಸ್ ಕಮೀಷನರ್, ಸ್ಥಳೀಯ ಡಿಸಿಪಿ ಮತ್ತು ಪೊಲೀಸ್ ಠಾಣೆಗೆ ನೀಡಿದರು. ಆ ಪತ್ರವು ಡಿ.ಕೆ.ಶಿ ಮತ್ತು ಎಚ್.ಡಿ.ಕೆ ತಮ್ಮನ್ನು ಮಾತಾಡಿಸದಂತೆ ತಡೆಯಬೇಕು ಎಂಬಂತೆ ಧ್ವನಿಸಿತು. ತಾವು ಮರಳಿ ಹೋಗುವುದಿಲ್ಲ ಎಂದು ಖಚಿತವಿದ್ದು ಪೊಲೀಸರಿಗೇ ದೂರು ಸಲ್ಲಿಸುವವರು, ಎದುರಿಗೆ ಇವರಿಬ್ಬರು ಬಂದರೆ ಯಾಕೆ ಹೆದರಬೇಕು? ಹಾಗಾಗಿ ಈ ಪತ್ರವನ್ನು ಬಿಜೆಪಿಯೇ ಬರೆಸಿಕೊಂಡಿತ್ತು ಎಂದು ನಂಬಲು ಕಾರಣಗಳಿವೆ.


3. ಅಧಿವೇಶನ ಶುರುವಾದ ದಿನ ‘ವಿಶ್ವಾಸಮತ ಯಾಚನೆ ಮಾಡಲು ಸಿದ್ಧ’ ಎಂದು ಕುಮಾರಸ್ವಾಮಿ ಘೋಷಿಸಿದ ತಕ್ಷಣ ಬೆಚ್ಚಿಬಿದ್ದಿದ್ದು ಬಿಜೆಪಿ. ತೃಪ್ತರಲ್ಲದ ಜೆಡಿಎಸ್, ಕಾಂಗ್ರೆಸ್ ಶಾಸಕರ ಕುರಿತಲ್ಲ, ತನ್ನ ಶಾಸಕರ ಕುರಿತಂತೆ. ಕೂಡಲೇ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಸ್ಥಳಾಂತರಿಸಿತು. ಸದ್ಯ, ಇನ್ನೂ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಿಲ್ಲ ಅಷ್ಟೇ.


4. ನಾಲ್ಕನೆಯದಾಗಿ, ಮುಂಬೈನಲ್ಲಿದ್ದ 12 ಜನ ತೃಪ್ತರಲ್ಲದ ಶಾಸಕರು ಇಂದು ಶಿರಡಿಗೆ ಹೋಗಿ ಬಂದರು. ಸುದ್ದಿಯೇನೆಂದರೆ ಅಲ್ಲಿ ಈ ಶಾಸಕರಿಂದ ಆಣೆ ಪ್ರಮಾಣ ಮಾಡಿಸಿ ನಾವು ಮರಳಿ ನಮ್ಮ ಪಕ್ಷಗಳಿಗೆ ಹೋಗುವುದಿಲ್ಲ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿಸಲಾಗಿದೆ!!

ಹಾಗೆ ನೋಡಿದರೆ, ಬೆಂಗಳೂರಿನಲ್ಲೇ ಇರುವ ರಾಮಲಿಂಗಾರೆಡ್ಡಿ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳುತ್ತಿದ್ದಾರೆ. ಅವರ ಮನೆಗೆ ಪದೇ ಪದೇ ಕಾಂಗ್ರೆಸ್ ನಾಯಕರೂ ಹೋಗುತ್ತಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ತನ್ನ ಮನೆಯಲ್ಲಿ ಕೂತಿದ್ದರೆಂದು ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಬಂದವರು ಅಜ್ಞಾತ ಸ್ಥಳಕ್ಕೆ ಹೋದರೆಂದು ಹೇಳಲಾಗಿದೆ.
ಅಂದರೆ ವಿಚಾರ ಸ್ಪಷ್ಟವಿದೆ. ಬಿಜೆಪಿ ಆತ್ಮವಿಶ್ವಾಸದಿಂದಿಲ್ಲ. ಈ ಎಲ್ಲಾ ಅಂಶಗಳೂ ಅದರ ದೌರ್ಬಲ್ಯವನ್ನಷ್ಟೇ ತೋರಿಸುತ್ತಿವೆ. ಈಗಾಗಲೇ ತನ್ನ 13 ಶಾಸಕರು ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ತನ್ನ ಇತರ ಶಾಸಕರನ್ನು ರೆಸಾರ್ಟ್‍ಗೆ ಒಯ್ದಿಲ್ಲ. ಇದರ ಅರ್ಥವೇನು?
ಬಿಜೆಪಿಯು ಈ ಸಾರಿಯೂ ಅಧಿಕಾರ ಪಡೆದುಕೊಳ್ಳುವುದಿಲ್ಲವಾ? ಮತ್ತೊಂದು ಠುಸ್ ಪಟಾಕಿಯಾ? ಮುಂದಿನ ಮೂರ್ನಾಲ್ಕು ದಿನಗಳು ಈ ಕುರಿತು ಸ್ಪಷ್ಟ ಚಿತ್ರಣ ನೀಡುತ್ತವಾದರೂ, ಈ ಸದ್ಯ ಬಿಜೆಪಿ ದುರ್ಬಲವಾಗಿದೆ ಎಂಬುದು ಎದ್ದು ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...