Homeಕರ್ನಾಟಕಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

- Advertisement -
- Advertisement -

ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಸುಲಭದಲ್ಲಿ ಗೆಲ್ಲಬೇಕು. ಆದರೆ, ವಿಧಾನಸಭಾ ಚುನಾವಣೆ ಕಡೆಗೆ ಹೋಗುವ ಬದಲು, ಈಗಲೇ ಸರ್ಕಾರ ರಚನೆ ಮಾಡುವ ಆತುರಕ್ಕೆ ಬಿದ್ದಿದೆ. ಅಷ್ಟೇ ಅಲ್ಲದೇ, ಸುಮಾರು 16 ಜನ ಶಾಸಕರು ರಾಜೀನಾಮೆ ಕೊಟ್ಟ ನಂತರವೂ ದುರ್ಬಲವಾಗಿಯೇ ಕಾಣುತ್ತಿದೆ. ಆ ದೌರ್ಬಲ್ಯದ ಲಕ್ಷಣಗಳನ್ನು ನೋಡಿದರೆ ಯಾರಿಗಾದರೂ ಅದು ಮನವರಿಕೆಯಾಗುತ್ತದೆ.

1. ಮೊದಲನೆಯದಾಗಿ ರಾಜೀನಾಮೆ ಕೊಟ್ಟವರನ್ನು ಸ್ವತಂತ್ರವಾಗಿ ಬಿಟ್ಟರೆ ಅವರು ವಾಪಸ್ಸು ಹೋಗುತ್ತಾರೆ ಎಂದೆನಿಸಿ ಅವರನ್ನು ಕೂಡಲೇ ಬಿಜೆಪಿಯೇ ಅಧಿಕಾರದಲ್ಲಿರುವ ಮಹಾರಾಷ್ಟ್ರಕ್ಕೆ ರವಾನೆ ಮಾಡಲಾಯಿತು. ರಾಜೀನಾಮೆ ಕೊಟ್ಟವರು ವೀರಾವೇಶದಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು ಮತ್ತು 2-3 ಜನರನ್ನು ಬಿಟ್ಟರೆ ಮಿಕ್ಕವರೆಲ್ಲರೂ ಘಟಾನುಘಟಿ ಶಾಸಕರೇ. ಹಾಗಿದ್ದೂ ಮುಂಬೈಗೆ ಬಿಜೆಪಿಯೇ ವ್ಯವಸ್ಥೆ ಮಾಡಿದ ವಿಮಾನದಲ್ಲಿ ಹೊರಟು, ಬಿಜೆಪಿಗೆ ಆಪ್ತವಾದ ಉದ್ಯಮಿಯ ಹೋಟೆಲ್‍ನಲ್ಲೇ ಇರುವಂತೆ ನೋಡಿಕೊಳ್ಳಲಾಯಿತು.


2. ಅಲ್ಲಿಗೆ ಹೋದ ಮರುದಿನ ಡಿ.ಕೆ.ಶಿವಕುಮಾರ್ ‘ಮುಂಬೈಗೆ ಹೋಗಿ ಅವರ ಮನವೊಲಿಸಿ ಕರೆತರುತ್ತೇನೆ’ ಎಂದು ಘೋಷಿಸಿದ್ದರು. ಯಾರೇ ಬಂದರೂ, ಈ ಶಾಸಕರು ಜಗ್ಗಲ್ಲ ಎಂಬ ವಿಶ್ವಾಸ ಇರುವುದು ಹೋಗಲಿ, ತಾವೂ ಇದ್ದು (ಅದೇ ಹೋಟೆಲ್‍ನಲ್ಲಿ ಬಿಜೆಪಿ ನಾಯಕರೂ ಇದ್ದರು) ನಿಭಾಯಿಸಬಹುದು ಎಂಬ ಧೈರ್ಯವೂ ಬಿಜೆಪಿಗಿರಲಿಲ್ಲ. ಬದಲಿಗೆ ಡಿ.ಕೆ.ಶಿ ಅಥವಾ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದರೆ, ಇವರೆಲ್ಲರೂ ಓಡಿ ಹೋಗುತ್ತಾರೆಂದು ಬಿಜೆಪಿಯು ಭಾವಿಸಿತು. ಹಾಗಾಗಿ ಮಧ್ಯರಾತ್ರಿ 10 ಜನ ಶಾಸಕರಿಂದ ಪತ್ರ ಬರೆಸಿಕೊಂಡು ಮುಂಬೈನ ಪೊಲೀಸ್ ಕಮೀಷನರ್, ಸ್ಥಳೀಯ ಡಿಸಿಪಿ ಮತ್ತು ಪೊಲೀಸ್ ಠಾಣೆಗೆ ನೀಡಿದರು. ಆ ಪತ್ರವು ಡಿ.ಕೆ.ಶಿ ಮತ್ತು ಎಚ್.ಡಿ.ಕೆ ತಮ್ಮನ್ನು ಮಾತಾಡಿಸದಂತೆ ತಡೆಯಬೇಕು ಎಂಬಂತೆ ಧ್ವನಿಸಿತು. ತಾವು ಮರಳಿ ಹೋಗುವುದಿಲ್ಲ ಎಂದು ಖಚಿತವಿದ್ದು ಪೊಲೀಸರಿಗೇ ದೂರು ಸಲ್ಲಿಸುವವರು, ಎದುರಿಗೆ ಇವರಿಬ್ಬರು ಬಂದರೆ ಯಾಕೆ ಹೆದರಬೇಕು? ಹಾಗಾಗಿ ಈ ಪತ್ರವನ್ನು ಬಿಜೆಪಿಯೇ ಬರೆಸಿಕೊಂಡಿತ್ತು ಎಂದು ನಂಬಲು ಕಾರಣಗಳಿವೆ.


3. ಅಧಿವೇಶನ ಶುರುವಾದ ದಿನ ‘ವಿಶ್ವಾಸಮತ ಯಾಚನೆ ಮಾಡಲು ಸಿದ್ಧ’ ಎಂದು ಕುಮಾರಸ್ವಾಮಿ ಘೋಷಿಸಿದ ತಕ್ಷಣ ಬೆಚ್ಚಿಬಿದ್ದಿದ್ದು ಬಿಜೆಪಿ. ತೃಪ್ತರಲ್ಲದ ಜೆಡಿಎಸ್, ಕಾಂಗ್ರೆಸ್ ಶಾಸಕರ ಕುರಿತಲ್ಲ, ತನ್ನ ಶಾಸಕರ ಕುರಿತಂತೆ. ಕೂಡಲೇ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಸ್ಥಳಾಂತರಿಸಿತು. ಸದ್ಯ, ಇನ್ನೂ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಿಲ್ಲ ಅಷ್ಟೇ.


4. ನಾಲ್ಕನೆಯದಾಗಿ, ಮುಂಬೈನಲ್ಲಿದ್ದ 12 ಜನ ತೃಪ್ತರಲ್ಲದ ಶಾಸಕರು ಇಂದು ಶಿರಡಿಗೆ ಹೋಗಿ ಬಂದರು. ಸುದ್ದಿಯೇನೆಂದರೆ ಅಲ್ಲಿ ಈ ಶಾಸಕರಿಂದ ಆಣೆ ಪ್ರಮಾಣ ಮಾಡಿಸಿ ನಾವು ಮರಳಿ ನಮ್ಮ ಪಕ್ಷಗಳಿಗೆ ಹೋಗುವುದಿಲ್ಲ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿಸಲಾಗಿದೆ!!

ಹಾಗೆ ನೋಡಿದರೆ, ಬೆಂಗಳೂರಿನಲ್ಲೇ ಇರುವ ರಾಮಲಿಂಗಾರೆಡ್ಡಿ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳುತ್ತಿದ್ದಾರೆ. ಅವರ ಮನೆಗೆ ಪದೇ ಪದೇ ಕಾಂಗ್ರೆಸ್ ನಾಯಕರೂ ಹೋಗುತ್ತಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ತನ್ನ ಮನೆಯಲ್ಲಿ ಕೂತಿದ್ದರೆಂದು ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಬಂದವರು ಅಜ್ಞಾತ ಸ್ಥಳಕ್ಕೆ ಹೋದರೆಂದು ಹೇಳಲಾಗಿದೆ.
ಅಂದರೆ ವಿಚಾರ ಸ್ಪಷ್ಟವಿದೆ. ಬಿಜೆಪಿ ಆತ್ಮವಿಶ್ವಾಸದಿಂದಿಲ್ಲ. ಈ ಎಲ್ಲಾ ಅಂಶಗಳೂ ಅದರ ದೌರ್ಬಲ್ಯವನ್ನಷ್ಟೇ ತೋರಿಸುತ್ತಿವೆ. ಈಗಾಗಲೇ ತನ್ನ 13 ಶಾಸಕರು ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ತನ್ನ ಇತರ ಶಾಸಕರನ್ನು ರೆಸಾರ್ಟ್‍ಗೆ ಒಯ್ದಿಲ್ಲ. ಇದರ ಅರ್ಥವೇನು?
ಬಿಜೆಪಿಯು ಈ ಸಾರಿಯೂ ಅಧಿಕಾರ ಪಡೆದುಕೊಳ್ಳುವುದಿಲ್ಲವಾ? ಮತ್ತೊಂದು ಠುಸ್ ಪಟಾಕಿಯಾ? ಮುಂದಿನ ಮೂರ್ನಾಲ್ಕು ದಿನಗಳು ಈ ಕುರಿತು ಸ್ಪಷ್ಟ ಚಿತ್ರಣ ನೀಡುತ್ತವಾದರೂ, ಈ ಸದ್ಯ ಬಿಜೆಪಿ ದುರ್ಬಲವಾಗಿದೆ ಎಂಬುದು ಎದ್ದು ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....