Homeಕರ್ನಾಟಕಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

- Advertisement -
- Advertisement -

ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಸುಲಭದಲ್ಲಿ ಗೆಲ್ಲಬೇಕು. ಆದರೆ, ವಿಧಾನಸಭಾ ಚುನಾವಣೆ ಕಡೆಗೆ ಹೋಗುವ ಬದಲು, ಈಗಲೇ ಸರ್ಕಾರ ರಚನೆ ಮಾಡುವ ಆತುರಕ್ಕೆ ಬಿದ್ದಿದೆ. ಅಷ್ಟೇ ಅಲ್ಲದೇ, ಸುಮಾರು 16 ಜನ ಶಾಸಕರು ರಾಜೀನಾಮೆ ಕೊಟ್ಟ ನಂತರವೂ ದುರ್ಬಲವಾಗಿಯೇ ಕಾಣುತ್ತಿದೆ. ಆ ದೌರ್ಬಲ್ಯದ ಲಕ್ಷಣಗಳನ್ನು ನೋಡಿದರೆ ಯಾರಿಗಾದರೂ ಅದು ಮನವರಿಕೆಯಾಗುತ್ತದೆ.

1. ಮೊದಲನೆಯದಾಗಿ ರಾಜೀನಾಮೆ ಕೊಟ್ಟವರನ್ನು ಸ್ವತಂತ್ರವಾಗಿ ಬಿಟ್ಟರೆ ಅವರು ವಾಪಸ್ಸು ಹೋಗುತ್ತಾರೆ ಎಂದೆನಿಸಿ ಅವರನ್ನು ಕೂಡಲೇ ಬಿಜೆಪಿಯೇ ಅಧಿಕಾರದಲ್ಲಿರುವ ಮಹಾರಾಷ್ಟ್ರಕ್ಕೆ ರವಾನೆ ಮಾಡಲಾಯಿತು. ರಾಜೀನಾಮೆ ಕೊಟ್ಟವರು ವೀರಾವೇಶದಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು ಮತ್ತು 2-3 ಜನರನ್ನು ಬಿಟ್ಟರೆ ಮಿಕ್ಕವರೆಲ್ಲರೂ ಘಟಾನುಘಟಿ ಶಾಸಕರೇ. ಹಾಗಿದ್ದೂ ಮುಂಬೈಗೆ ಬಿಜೆಪಿಯೇ ವ್ಯವಸ್ಥೆ ಮಾಡಿದ ವಿಮಾನದಲ್ಲಿ ಹೊರಟು, ಬಿಜೆಪಿಗೆ ಆಪ್ತವಾದ ಉದ್ಯಮಿಯ ಹೋಟೆಲ್‍ನಲ್ಲೇ ಇರುವಂತೆ ನೋಡಿಕೊಳ್ಳಲಾಯಿತು.


2. ಅಲ್ಲಿಗೆ ಹೋದ ಮರುದಿನ ಡಿ.ಕೆ.ಶಿವಕುಮಾರ್ ‘ಮುಂಬೈಗೆ ಹೋಗಿ ಅವರ ಮನವೊಲಿಸಿ ಕರೆತರುತ್ತೇನೆ’ ಎಂದು ಘೋಷಿಸಿದ್ದರು. ಯಾರೇ ಬಂದರೂ, ಈ ಶಾಸಕರು ಜಗ್ಗಲ್ಲ ಎಂಬ ವಿಶ್ವಾಸ ಇರುವುದು ಹೋಗಲಿ, ತಾವೂ ಇದ್ದು (ಅದೇ ಹೋಟೆಲ್‍ನಲ್ಲಿ ಬಿಜೆಪಿ ನಾಯಕರೂ ಇದ್ದರು) ನಿಭಾಯಿಸಬಹುದು ಎಂಬ ಧೈರ್ಯವೂ ಬಿಜೆಪಿಗಿರಲಿಲ್ಲ. ಬದಲಿಗೆ ಡಿ.ಕೆ.ಶಿ ಅಥವಾ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದರೆ, ಇವರೆಲ್ಲರೂ ಓಡಿ ಹೋಗುತ್ತಾರೆಂದು ಬಿಜೆಪಿಯು ಭಾವಿಸಿತು. ಹಾಗಾಗಿ ಮಧ್ಯರಾತ್ರಿ 10 ಜನ ಶಾಸಕರಿಂದ ಪತ್ರ ಬರೆಸಿಕೊಂಡು ಮುಂಬೈನ ಪೊಲೀಸ್ ಕಮೀಷನರ್, ಸ್ಥಳೀಯ ಡಿಸಿಪಿ ಮತ್ತು ಪೊಲೀಸ್ ಠಾಣೆಗೆ ನೀಡಿದರು. ಆ ಪತ್ರವು ಡಿ.ಕೆ.ಶಿ ಮತ್ತು ಎಚ್.ಡಿ.ಕೆ ತಮ್ಮನ್ನು ಮಾತಾಡಿಸದಂತೆ ತಡೆಯಬೇಕು ಎಂಬಂತೆ ಧ್ವನಿಸಿತು. ತಾವು ಮರಳಿ ಹೋಗುವುದಿಲ್ಲ ಎಂದು ಖಚಿತವಿದ್ದು ಪೊಲೀಸರಿಗೇ ದೂರು ಸಲ್ಲಿಸುವವರು, ಎದುರಿಗೆ ಇವರಿಬ್ಬರು ಬಂದರೆ ಯಾಕೆ ಹೆದರಬೇಕು? ಹಾಗಾಗಿ ಈ ಪತ್ರವನ್ನು ಬಿಜೆಪಿಯೇ ಬರೆಸಿಕೊಂಡಿತ್ತು ಎಂದು ನಂಬಲು ಕಾರಣಗಳಿವೆ.


3. ಅಧಿವೇಶನ ಶುರುವಾದ ದಿನ ‘ವಿಶ್ವಾಸಮತ ಯಾಚನೆ ಮಾಡಲು ಸಿದ್ಧ’ ಎಂದು ಕುಮಾರಸ್ವಾಮಿ ಘೋಷಿಸಿದ ತಕ್ಷಣ ಬೆಚ್ಚಿಬಿದ್ದಿದ್ದು ಬಿಜೆಪಿ. ತೃಪ್ತರಲ್ಲದ ಜೆಡಿಎಸ್, ಕಾಂಗ್ರೆಸ್ ಶಾಸಕರ ಕುರಿತಲ್ಲ, ತನ್ನ ಶಾಸಕರ ಕುರಿತಂತೆ. ಕೂಡಲೇ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಸ್ಥಳಾಂತರಿಸಿತು. ಸದ್ಯ, ಇನ್ನೂ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಿಲ್ಲ ಅಷ್ಟೇ.


4. ನಾಲ್ಕನೆಯದಾಗಿ, ಮುಂಬೈನಲ್ಲಿದ್ದ 12 ಜನ ತೃಪ್ತರಲ್ಲದ ಶಾಸಕರು ಇಂದು ಶಿರಡಿಗೆ ಹೋಗಿ ಬಂದರು. ಸುದ್ದಿಯೇನೆಂದರೆ ಅಲ್ಲಿ ಈ ಶಾಸಕರಿಂದ ಆಣೆ ಪ್ರಮಾಣ ಮಾಡಿಸಿ ನಾವು ಮರಳಿ ನಮ್ಮ ಪಕ್ಷಗಳಿಗೆ ಹೋಗುವುದಿಲ್ಲ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿಸಲಾಗಿದೆ!!

ಹಾಗೆ ನೋಡಿದರೆ, ಬೆಂಗಳೂರಿನಲ್ಲೇ ಇರುವ ರಾಮಲಿಂಗಾರೆಡ್ಡಿ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳುತ್ತಿದ್ದಾರೆ. ಅವರ ಮನೆಗೆ ಪದೇ ಪದೇ ಕಾಂಗ್ರೆಸ್ ನಾಯಕರೂ ಹೋಗುತ್ತಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ತನ್ನ ಮನೆಯಲ್ಲಿ ಕೂತಿದ್ದರೆಂದು ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಬಂದವರು ಅಜ್ಞಾತ ಸ್ಥಳಕ್ಕೆ ಹೋದರೆಂದು ಹೇಳಲಾಗಿದೆ.
ಅಂದರೆ ವಿಚಾರ ಸ್ಪಷ್ಟವಿದೆ. ಬಿಜೆಪಿ ಆತ್ಮವಿಶ್ವಾಸದಿಂದಿಲ್ಲ. ಈ ಎಲ್ಲಾ ಅಂಶಗಳೂ ಅದರ ದೌರ್ಬಲ್ಯವನ್ನಷ್ಟೇ ತೋರಿಸುತ್ತಿವೆ. ಈಗಾಗಲೇ ತನ್ನ 13 ಶಾಸಕರು ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ತನ್ನ ಇತರ ಶಾಸಕರನ್ನು ರೆಸಾರ್ಟ್‍ಗೆ ಒಯ್ದಿಲ್ಲ. ಇದರ ಅರ್ಥವೇನು?
ಬಿಜೆಪಿಯು ಈ ಸಾರಿಯೂ ಅಧಿಕಾರ ಪಡೆದುಕೊಳ್ಳುವುದಿಲ್ಲವಾ? ಮತ್ತೊಂದು ಠುಸ್ ಪಟಾಕಿಯಾ? ಮುಂದಿನ ಮೂರ್ನಾಲ್ಕು ದಿನಗಳು ಈ ಕುರಿತು ಸ್ಪಷ್ಟ ಚಿತ್ರಣ ನೀಡುತ್ತವಾದರೂ, ಈ ಸದ್ಯ ಬಿಜೆಪಿ ದುರ್ಬಲವಾಗಿದೆ ಎಂಬುದು ಎದ್ದು ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...