Homeಮುಖಪುಟಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

- Advertisement -
- Advertisement -

ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ ಈ ಹಿಂದೆ ವಿಡಿಯೋವೊಂದನ್ನು ಹರಿಯಬಿಟ್ಟಿದ್ದು ನಿಮಗೆಲ್ಲಾ ಗೊತ್ತಿದೆ. ಆ ಆರೋಪವನ್ನು ನಿಜಮಾಡುವಂತೆ ಇಂದು ವಿಚಾರಣಗೆ ಕೋರ್ಟಿಗೆ ಹಾಜರಾದ ವೇಳೆ ಸಾಕ್ಷಿ ಮಿಶ್ರಾರವರ ಪತಿ ಅಜಿತೇಶ್ ಕುಮಾರ್ ಮೇಲೆ ಕೋರ್ಟ್ ಆವರಣದಲ್ಲಿಯೇ ಅಪರಿಚಿತ ವ್ಯಕ್ತಿಯಿಂದ ಹಲ್ಲೆ ಮಾಡಲಾಗಿದೆ.

ಈ ವಿಚಾರವಾಗಿ ಆ ದಂಪತಿಗಳನ್ನು ಭದ್ರತೆಯ ಕಾರಣಕ್ಕಾಗಿ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು. ಇಂದು ನೋಯ್ಡಾದಿಂದ ವಿಚಾರಣೆಗಾಗಿ ಪ್ರಯಾಗ್ ರಾಜ್ ಕೋರ್ಟಿಗೆ ಹಾಜರಾದಾಗ ಪೊಲೀಸರ ರಕ್ಷಣೆಯನ್ನು ಸಹ ಮೀರಿ ಒಬ್ಬ ವ್ಯಕ್ತಿ ಅಜಿತೇಶ್ ಕುಮಾರ್ ಕಪಾಳಕ್ಕೆ ಹೊಡೆದಿರುವುದಾಗಿ ಎನ್.ಡಿ.ಟಿ.ವಿ ವರದಿ ಮಾಡಿದೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ, ಆದರೆ ಈ ದಂಪತಿಗಳ ಜೀವಕ್ಕೆ ಅಪಾಯವಿದೆ ಅನ್ನುವುದು ಮಾತ್ರ ಇದರಿಂದ ಖಾತ್ರಿಯಾಗಿದೆ ಎಂದು ದಂಪತಿಗಳ ಪರ ವಕೀಲರು ಕೋರ್ಟಿನಲ್ಲಿ ನುಡಿದಿದ್ದಾರೆ.

ಹಲ್ಲೆಯ ನಂತರದ ವಿಚಾರಣೆಯಲ್ಲಿ, ದಂಪತಿಗಳ ವಿವಾಹದ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು ನ್ಯಾಯಾಲಯವು ವಧುವಿನ ತಂದೆ ಶಾಸಕರಾದ ರಾಜೇಶ್ ಮಿಶ್ರಾ ಅವರ ಮೇಲೆ ಕೋಪ ವ್ಯಕ್ತಪಡಿಸಿದೆ. ಜೊತೆಗೆ ದಂಪತಿಗಳಿಗೆ ಅಗತ್ಯವಾದ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತು.

ಉತ್ತರ ಪ್ರದೇಶದ ಬರೇಲಿಯ ಶಾಸಕರಾದ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ (23) ಜುಲೈ 4 ರಂದು ಪ್ರಯಾಗರಾಜ್‌ನ ದೇವಸ್ಥಾನವೊಂದರಲ್ಲಿ 29 ವರ್ಷದ ಅಜಿತೇಶ್ ಕುಮಾರ್ ಅವರನ್ನು ವಿವಾಹವಾಗಿದ್ದರು. ನಂತರ ಅವರು ಜಾತಿಯ ಹೊರಗೆ ಮದುವೆಯಾಗಿದ್ದಕ್ಕಾಗಿ ತನಗೆ ಮತ್ತು ತನ್ನ ಗಂಡನಿಗೆ ಜೀವ ಭಯವಿದ್ದು, ನ್ಯಾಯಾಲಯದಿಂದ ರಕ್ಷಣೆ ಕೋರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

ಆ ವಿಡಿಯೋದಲ್ಲಿ ತಮ್ಮ ತಂದೆ ಹಾಗೂ ಸೋದರನ ಅಡ್ಡ ಹೆಸರುಗಳಾದ ಪಪ್ಪು ಭರ್ತೌಲ್ ಹಾಗೂ ವಿಕ್ಕಿ ಭರ್ತೌಲ್ ಇವುಗಳನ್ನು ಸಾಕ್ಷಿ ಉಲ್ಲೇಖಿಸಿದ್ದಾರೆ. ‘ಮಾನ್ಯ ಶಾಸಕ ಪಪ್ಪು ಭರ್ತೌಲ್ ಜಿ ಹಾಗೂ ವಿಕ್ಕಿ ಭರ್ತೌಲ್ ಜಿ, ದಯವಿಟ್ಟು ನೀವೂ ಬದುಕಿ ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ. ನನಗೆ ನಿಜವಾಗಿಯೂ ಮದುವೆಯಾಗಿದೆ, ನಾನು ಫ್ಯಾಶನ್‍ಗಾಗಿ ಸಿಂಧೂರ ಧರಿಸಿಲ್ಲ’ ಎಂದು ಹೇಳಿದ್ದರು.

‘ಪಾಪಾ, ನೀವು ರಾಜೀವ್ ರಾಣಾ ಅವರಂತೆಯೇ ನಮ್ಮ ಹಿಂದೆ ಗೂಂಡಾಗಳನ್ನು ಕಳುಹಿಸಿದ್ದೀರಿ. ನನಗೆ ಸಾಕಾಗಿ ಹೋಗಿದೆ…. ಅಡಗಿ ಕುಳಿತು ಸಾಕಾಗಿ ಹೋಗಿದೆ, ನಮ್ಮ ಜೀವ ಅಪಾಯದಲ್ಲಿದೆ ಅಭಿ ಮತ್ತಾತನ ಸಂಬಂಧಿಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ನನಗೆ ಸಂತೋಷದಿಂದ ಸ್ವತಂತ್ರವಾಗಿರಬೇಕಿದೆ. ಭವಿಷ್ಯದಲ್ಲಿ ನನಗೆ, ಅಭಿ ಅಥವಾ ಆತನ ಕುಟುಂಬಕ್ಕೇನಾದರೂ ಅಪಾಯವಾದರೆ ಅದಕ್ಕೆ ವಿಕ್ಕಿ ಭರ್ತೌಲ್ ಹಾಗೂ ರಾಜೀವ್ ರಾಣಾ ಜವಾಬ್ದಾರರಾಗುತ್ತಾರೆ. ನನ್ನ ತಂದೆಗೆ ಸಹಾಯ ಮಾಡುತ್ತಿರುವವರು ಅವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಿ, ನಮ್ಮ ಜೀವಗಳು ಅಪಾಯದಲ್ಲಿವೆ,” ಎಂದು ವೀಡಿಯೋದಲ್ಲಿ ಸಾಕ್ಷಿ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...