Homeಮುಖಪುಟಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

- Advertisement -
- Advertisement -

ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ ಈ ಹಿಂದೆ ವಿಡಿಯೋವೊಂದನ್ನು ಹರಿಯಬಿಟ್ಟಿದ್ದು ನಿಮಗೆಲ್ಲಾ ಗೊತ್ತಿದೆ. ಆ ಆರೋಪವನ್ನು ನಿಜಮಾಡುವಂತೆ ಇಂದು ವಿಚಾರಣಗೆ ಕೋರ್ಟಿಗೆ ಹಾಜರಾದ ವೇಳೆ ಸಾಕ್ಷಿ ಮಿಶ್ರಾರವರ ಪತಿ ಅಜಿತೇಶ್ ಕುಮಾರ್ ಮೇಲೆ ಕೋರ್ಟ್ ಆವರಣದಲ್ಲಿಯೇ ಅಪರಿಚಿತ ವ್ಯಕ್ತಿಯಿಂದ ಹಲ್ಲೆ ಮಾಡಲಾಗಿದೆ.

ಈ ವಿಚಾರವಾಗಿ ಆ ದಂಪತಿಗಳನ್ನು ಭದ್ರತೆಯ ಕಾರಣಕ್ಕಾಗಿ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು. ಇಂದು ನೋಯ್ಡಾದಿಂದ ವಿಚಾರಣೆಗಾಗಿ ಪ್ರಯಾಗ್ ರಾಜ್ ಕೋರ್ಟಿಗೆ ಹಾಜರಾದಾಗ ಪೊಲೀಸರ ರಕ್ಷಣೆಯನ್ನು ಸಹ ಮೀರಿ ಒಬ್ಬ ವ್ಯಕ್ತಿ ಅಜಿತೇಶ್ ಕುಮಾರ್ ಕಪಾಳಕ್ಕೆ ಹೊಡೆದಿರುವುದಾಗಿ ಎನ್.ಡಿ.ಟಿ.ವಿ ವರದಿ ಮಾಡಿದೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ, ಆದರೆ ಈ ದಂಪತಿಗಳ ಜೀವಕ್ಕೆ ಅಪಾಯವಿದೆ ಅನ್ನುವುದು ಮಾತ್ರ ಇದರಿಂದ ಖಾತ್ರಿಯಾಗಿದೆ ಎಂದು ದಂಪತಿಗಳ ಪರ ವಕೀಲರು ಕೋರ್ಟಿನಲ್ಲಿ ನುಡಿದಿದ್ದಾರೆ.

ಹಲ್ಲೆಯ ನಂತರದ ವಿಚಾರಣೆಯಲ್ಲಿ, ದಂಪತಿಗಳ ವಿವಾಹದ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು ನ್ಯಾಯಾಲಯವು ವಧುವಿನ ತಂದೆ ಶಾಸಕರಾದ ರಾಜೇಶ್ ಮಿಶ್ರಾ ಅವರ ಮೇಲೆ ಕೋಪ ವ್ಯಕ್ತಪಡಿಸಿದೆ. ಜೊತೆಗೆ ದಂಪತಿಗಳಿಗೆ ಅಗತ್ಯವಾದ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತು.

ಉತ್ತರ ಪ್ರದೇಶದ ಬರೇಲಿಯ ಶಾಸಕರಾದ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ (23) ಜುಲೈ 4 ರಂದು ಪ್ರಯಾಗರಾಜ್‌ನ ದೇವಸ್ಥಾನವೊಂದರಲ್ಲಿ 29 ವರ್ಷದ ಅಜಿತೇಶ್ ಕುಮಾರ್ ಅವರನ್ನು ವಿವಾಹವಾಗಿದ್ದರು. ನಂತರ ಅವರು ಜಾತಿಯ ಹೊರಗೆ ಮದುವೆಯಾಗಿದ್ದಕ್ಕಾಗಿ ತನಗೆ ಮತ್ತು ತನ್ನ ಗಂಡನಿಗೆ ಜೀವ ಭಯವಿದ್ದು, ನ್ಯಾಯಾಲಯದಿಂದ ರಕ್ಷಣೆ ಕೋರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

ಆ ವಿಡಿಯೋದಲ್ಲಿ ತಮ್ಮ ತಂದೆ ಹಾಗೂ ಸೋದರನ ಅಡ್ಡ ಹೆಸರುಗಳಾದ ಪಪ್ಪು ಭರ್ತೌಲ್ ಹಾಗೂ ವಿಕ್ಕಿ ಭರ್ತೌಲ್ ಇವುಗಳನ್ನು ಸಾಕ್ಷಿ ಉಲ್ಲೇಖಿಸಿದ್ದಾರೆ. ‘ಮಾನ್ಯ ಶಾಸಕ ಪಪ್ಪು ಭರ್ತೌಲ್ ಜಿ ಹಾಗೂ ವಿಕ್ಕಿ ಭರ್ತೌಲ್ ಜಿ, ದಯವಿಟ್ಟು ನೀವೂ ಬದುಕಿ ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ. ನನಗೆ ನಿಜವಾಗಿಯೂ ಮದುವೆಯಾಗಿದೆ, ನಾನು ಫ್ಯಾಶನ್‍ಗಾಗಿ ಸಿಂಧೂರ ಧರಿಸಿಲ್ಲ’ ಎಂದು ಹೇಳಿದ್ದರು.

‘ಪಾಪಾ, ನೀವು ರಾಜೀವ್ ರಾಣಾ ಅವರಂತೆಯೇ ನಮ್ಮ ಹಿಂದೆ ಗೂಂಡಾಗಳನ್ನು ಕಳುಹಿಸಿದ್ದೀರಿ. ನನಗೆ ಸಾಕಾಗಿ ಹೋಗಿದೆ…. ಅಡಗಿ ಕುಳಿತು ಸಾಕಾಗಿ ಹೋಗಿದೆ, ನಮ್ಮ ಜೀವ ಅಪಾಯದಲ್ಲಿದೆ ಅಭಿ ಮತ್ತಾತನ ಸಂಬಂಧಿಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ನನಗೆ ಸಂತೋಷದಿಂದ ಸ್ವತಂತ್ರವಾಗಿರಬೇಕಿದೆ. ಭವಿಷ್ಯದಲ್ಲಿ ನನಗೆ, ಅಭಿ ಅಥವಾ ಆತನ ಕುಟುಂಬಕ್ಕೇನಾದರೂ ಅಪಾಯವಾದರೆ ಅದಕ್ಕೆ ವಿಕ್ಕಿ ಭರ್ತೌಲ್ ಹಾಗೂ ರಾಜೀವ್ ರಾಣಾ ಜವಾಬ್ದಾರರಾಗುತ್ತಾರೆ. ನನ್ನ ತಂದೆಗೆ ಸಹಾಯ ಮಾಡುತ್ತಿರುವವರು ಅವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಿ, ನಮ್ಮ ಜೀವಗಳು ಅಪಾಯದಲ್ಲಿವೆ,” ಎಂದು ವೀಡಿಯೋದಲ್ಲಿ ಸಾಕ್ಷಿ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...