Homeಮುಖಪುಟಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

- Advertisement -
- Advertisement -

ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ ಈ ಹಿಂದೆ ವಿಡಿಯೋವೊಂದನ್ನು ಹರಿಯಬಿಟ್ಟಿದ್ದು ನಿಮಗೆಲ್ಲಾ ಗೊತ್ತಿದೆ. ಆ ಆರೋಪವನ್ನು ನಿಜಮಾಡುವಂತೆ ಇಂದು ವಿಚಾರಣಗೆ ಕೋರ್ಟಿಗೆ ಹಾಜರಾದ ವೇಳೆ ಸಾಕ್ಷಿ ಮಿಶ್ರಾರವರ ಪತಿ ಅಜಿತೇಶ್ ಕುಮಾರ್ ಮೇಲೆ ಕೋರ್ಟ್ ಆವರಣದಲ್ಲಿಯೇ ಅಪರಿಚಿತ ವ್ಯಕ್ತಿಯಿಂದ ಹಲ್ಲೆ ಮಾಡಲಾಗಿದೆ.

ಈ ವಿಚಾರವಾಗಿ ಆ ದಂಪತಿಗಳನ್ನು ಭದ್ರತೆಯ ಕಾರಣಕ್ಕಾಗಿ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು. ಇಂದು ನೋಯ್ಡಾದಿಂದ ವಿಚಾರಣೆಗಾಗಿ ಪ್ರಯಾಗ್ ರಾಜ್ ಕೋರ್ಟಿಗೆ ಹಾಜರಾದಾಗ ಪೊಲೀಸರ ರಕ್ಷಣೆಯನ್ನು ಸಹ ಮೀರಿ ಒಬ್ಬ ವ್ಯಕ್ತಿ ಅಜಿತೇಶ್ ಕುಮಾರ್ ಕಪಾಳಕ್ಕೆ ಹೊಡೆದಿರುವುದಾಗಿ ಎನ್.ಡಿ.ಟಿ.ವಿ ವರದಿ ಮಾಡಿದೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ, ಆದರೆ ಈ ದಂಪತಿಗಳ ಜೀವಕ್ಕೆ ಅಪಾಯವಿದೆ ಅನ್ನುವುದು ಮಾತ್ರ ಇದರಿಂದ ಖಾತ್ರಿಯಾಗಿದೆ ಎಂದು ದಂಪತಿಗಳ ಪರ ವಕೀಲರು ಕೋರ್ಟಿನಲ್ಲಿ ನುಡಿದಿದ್ದಾರೆ.

ಹಲ್ಲೆಯ ನಂತರದ ವಿಚಾರಣೆಯಲ್ಲಿ, ದಂಪತಿಗಳ ವಿವಾಹದ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು ನ್ಯಾಯಾಲಯವು ವಧುವಿನ ತಂದೆ ಶಾಸಕರಾದ ರಾಜೇಶ್ ಮಿಶ್ರಾ ಅವರ ಮೇಲೆ ಕೋಪ ವ್ಯಕ್ತಪಡಿಸಿದೆ. ಜೊತೆಗೆ ದಂಪತಿಗಳಿಗೆ ಅಗತ್ಯವಾದ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತು.

ಉತ್ತರ ಪ್ರದೇಶದ ಬರೇಲಿಯ ಶಾಸಕರಾದ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ (23) ಜುಲೈ 4 ರಂದು ಪ್ರಯಾಗರಾಜ್‌ನ ದೇವಸ್ಥಾನವೊಂದರಲ್ಲಿ 29 ವರ್ಷದ ಅಜಿತೇಶ್ ಕುಮಾರ್ ಅವರನ್ನು ವಿವಾಹವಾಗಿದ್ದರು. ನಂತರ ಅವರು ಜಾತಿಯ ಹೊರಗೆ ಮದುವೆಯಾಗಿದ್ದಕ್ಕಾಗಿ ತನಗೆ ಮತ್ತು ತನ್ನ ಗಂಡನಿಗೆ ಜೀವ ಭಯವಿದ್ದು, ನ್ಯಾಯಾಲಯದಿಂದ ರಕ್ಷಣೆ ಕೋರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

ಆ ವಿಡಿಯೋದಲ್ಲಿ ತಮ್ಮ ತಂದೆ ಹಾಗೂ ಸೋದರನ ಅಡ್ಡ ಹೆಸರುಗಳಾದ ಪಪ್ಪು ಭರ್ತೌಲ್ ಹಾಗೂ ವಿಕ್ಕಿ ಭರ್ತೌಲ್ ಇವುಗಳನ್ನು ಸಾಕ್ಷಿ ಉಲ್ಲೇಖಿಸಿದ್ದಾರೆ. ‘ಮಾನ್ಯ ಶಾಸಕ ಪಪ್ಪು ಭರ್ತೌಲ್ ಜಿ ಹಾಗೂ ವಿಕ್ಕಿ ಭರ್ತೌಲ್ ಜಿ, ದಯವಿಟ್ಟು ನೀವೂ ಬದುಕಿ ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ. ನನಗೆ ನಿಜವಾಗಿಯೂ ಮದುವೆಯಾಗಿದೆ, ನಾನು ಫ್ಯಾಶನ್‍ಗಾಗಿ ಸಿಂಧೂರ ಧರಿಸಿಲ್ಲ’ ಎಂದು ಹೇಳಿದ್ದರು.

‘ಪಾಪಾ, ನೀವು ರಾಜೀವ್ ರಾಣಾ ಅವರಂತೆಯೇ ನಮ್ಮ ಹಿಂದೆ ಗೂಂಡಾಗಳನ್ನು ಕಳುಹಿಸಿದ್ದೀರಿ. ನನಗೆ ಸಾಕಾಗಿ ಹೋಗಿದೆ…. ಅಡಗಿ ಕುಳಿತು ಸಾಕಾಗಿ ಹೋಗಿದೆ, ನಮ್ಮ ಜೀವ ಅಪಾಯದಲ್ಲಿದೆ ಅಭಿ ಮತ್ತಾತನ ಸಂಬಂಧಿಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ನನಗೆ ಸಂತೋಷದಿಂದ ಸ್ವತಂತ್ರವಾಗಿರಬೇಕಿದೆ. ಭವಿಷ್ಯದಲ್ಲಿ ನನಗೆ, ಅಭಿ ಅಥವಾ ಆತನ ಕುಟುಂಬಕ್ಕೇನಾದರೂ ಅಪಾಯವಾದರೆ ಅದಕ್ಕೆ ವಿಕ್ಕಿ ಭರ್ತೌಲ್ ಹಾಗೂ ರಾಜೀವ್ ರಾಣಾ ಜವಾಬ್ದಾರರಾಗುತ್ತಾರೆ. ನನ್ನ ತಂದೆಗೆ ಸಹಾಯ ಮಾಡುತ್ತಿರುವವರು ಅವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಿ, ನಮ್ಮ ಜೀವಗಳು ಅಪಾಯದಲ್ಲಿವೆ,” ಎಂದು ವೀಡಿಯೋದಲ್ಲಿ ಸಾಕ್ಷಿ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....