Homeಕರ್ನಾಟಕಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

ಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

- Advertisement -
- Advertisement -

| ಗೌರಿ ಡೆಸ್ಕ್ |

ಸುಪ್ರೀಂ ಕೋರ್ಟ್ ನಿರ್ದೇಶನದಿಂದಾಗಿ ಕರ್ನಾಟಕದ ರಾಜಕೀಯ ಹೈಡ್ರಾಮ ಹೆಚ್ಚೂಕಮ್ಮಿ ಸಮಿಫೈನಲ್ ಹಂತಕ್ಕೆ ಬಂದು ತಲುಪಿದಂತಾಗಿದೆ. ಇವತ್ತೇ ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ೧೦ ಬಂಡಾಯ ಶಾಸಕರಿಗೆ ಸೂಚಿಸಿರುವ ಸರ್ವೋಚ್ಛ ನ್ಯಾಯಾಲಯ, ಆದಷ್ಟು ಬೇಗ ಇದಕ್ಕೊಂದು ಮಂಗಳ ಹಾಡುವಂತೆ ಸ್ಪೀಕರ್‌ಗೆ ಸೂಚನೆ ನೀಡಿದೆ. ಅದು ಕೇವಲ ಸೂಚನೆಯಾಗಿರೋದ್ರಿಂದ, ಸ್ಪೀಕರ್ ಮೇಲೆ ಯಾವ ಒತ್ತಡವನ್ನೂ ನ್ಯಾಯಾಲಯ ಹಾಕಿಲ್ಲ. ಹಾಗಾಗಿ, ನನಗೆ ರಾಜೀನಾಮೆಗಳನ್ನು ಪರಾಮರ್ಶಿಸಲು ಒಂದಷ್ಟು ಸಮಯ ಬೇಕು ಅಂತ ರಮೇಶ್ ಕುಮಾರರು ಸುರ್ಪೀಂ ಕೋರ್ಟಿಗೆ ಅರ್ಜಿ ಹಾಕಿರುವ ಲೇಟೆಸ್ಟ್ ಸುದ್ದಿ ಹೊರ ಬರುತ್ತಿದೆ.

ಆದರೆ ಬಿಜೆಪಿ ಈ ಸಾರಿ ತನ್ನ ಆಪರೇಷನ್ ಬಗ್ಗೆ ಅದೆಷ್ಟು ಅದಮ್ಯ ವಿಶ್ವಾಸದಲ್ಲಿದೆಯೆಂದರೆ, ಸಚಿವ ಸಂಪುಟದ ಪಟ್ಟಿಯೇ ತಯಾರಾಗಿ ಯಾರ್‍ಯಾರಿಗೆ ಯಾವ್ಯಾವ ಖಾತೆ ಅನ್ನೋ ಹಂಚಿಕೆಯೂ ಮುಗಿದುಹೋಗಿದೆ ಅನ್ನೋ ಲೇಟೆಸ್ಟ್ ವರ್ತಮಾನ ಕಮಲ ಪಾಳಯದಲ್ಲಿ ಕೇಳಿಬರುತ್ತಿದೆ. ಇದು ಎಷ್ಟರಮಟ್ಟಿಗೆ ಸತ್ಯವೋ ಅಲ್ಲವೋ ಗೊತ್ತಿಲ್ಲ, ಆದರೆ ವಿಧಾನಸೌಧ, ಯಡಿಯೂರಪ್ಪನವರ ನಿವಾಸ ಧವಳಗಿರಿ, ಪ್ರೆಸ್ಸ್‌ಕ್ಲಬ್, ಮಲ್ಲೇಶ್ವರಂ ಬಿಜೆಪಿ ಕಚೇರಿಯ ಆವರಣದಲ್ಲಿ ಈ ಮಾತುಕತೆಗಳು ಜೋರಾಗಿ ಚರ್ಚೆಯಲ್ಲಿವೆ.

ಆ ಚರ್ಚೆಯ ಒಟ್ಟಾರೆ ಸಾರಾಂಶ ಇಷ್ಟು. ಹೊಸ ಸರ್ಕಾರದಲ್ಲಿ ಯಡ್ಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋದು ಫಿಕ್ಸು. ಬಿ.ಎಲ್.ಸಂತೋಷ್ ಸೇರಿದಂತೆ ಬಿಜೆಪಿಯ ಒಂದು ಬಣಕ್ಕೆ ಯಡ್ಯೂರಪ್ಪ ಸಿಎಂ ಆಗೋದು ಇಷ್ಟವಿಲ್ಲ. ಅವರು ಈಗ ಸರ್ಕಾರ ರಚನೆ ಮಾಡೋದರ ಬದಲು, ಮಧ್ಯಂತರ ಚುನಾವಣೆಗೆ ಹೋಗುವ ವಾದವನ್ನು ಮುಂದೆ ಮಾಡಿದ್ದುಂಟು. ಅದಕ್ಕಾಗೆ, ಈಗ ಕೈ-ತೆನೆಗೆ ಕೈಕೊಟ್ಟು ಕಮಲ ಮುಡಿಯುತ್ತಿರುವ ಒಂದಷ್ಟು ಶಾಸಕರ ಬಿಜೆಪಿ ಸೇರ್ಪಡೆಗೆ ಈ ಬಣದಿಂದ ವಿರೋಧ ವ್ಯಕ್ತವಾದದ್ದು. ಮಧ್ಯಂತರ ಚುನಾವಣೆ ನಡೆದರೆ ಏನಿಲ್ಲವೆಂದರು 140 ರಿಂದ 150 ಸೀಟು ನಿರಾಯಾಸವಾಗಿ ಬಿಜೆಪಿ ಗೆಲ್ಲುತ್ತೆ, ಆಗ ಯಡ್ಯೂರಪ್ಪನವರ ಹಂಗು ಇರೋದಿಲ್ಲ, ಅವರನ್ನು ಪಕ್ಕಕ್ಕೆ ಸರಿಸಿ ನಮ್ಮಲ್ಲೇ ಬೇರೆ ಯಾರಾದರು ಸಿಎಂ ಆಗಬೇಕು ಅನ್ನೋದು ಅವರ ಲೆಕ್ಕಾಚಾರವಾಗಿತ್ತು. ಆದರೆ ಸದ್ಯಕ್ಕೆ ಅವರ ವಾದ ಕೈಮೇಲಾಗಿಲ್ಲ. ಹಾಗಾಗಿ ಯಡಿಯೂರಪ್ಪ ಸಿಎಂ ಆಗಲಿದ್ದಾರೆ.

ಇನ್ನು ಬಿಜೆಪಿ ಹೊಸ ಸರ್ಕಾರದಲ್ಲಿ ಬಿಜೆಪಿಯ 20 ಶಾಸಕರಿಗೆ ಮತ್ತು ಹೊರಗಿನಿಂದ ಬಂದ 14 ಶಾಸಕರಿಗೆ ಮಂತ್ರಿ ಭಾಗ್ಯ ಕರುಣಿಸಲಾಗಿದೆ ಎನ್ನಲಾಗುತ್ತಿದೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀರಾಮುಲು, ಮಾಧುಸ್ವಾಮಿ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ ಇನ್ನೂ ಮೊದಲಾದವರಿದ್ದರೆ ವಲಸಿಗ ಶಾಸಕರಲ್ಲಿ ಇಬ್ಬರು ಪಕ್ಷೇತರರನ್ನೂ ಸೇರಿಸಿ ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಹೆಸರುಗಳು ಅಂತಿಮಗೊಂಡಿವೆಯಂತೆ!

ಇನ್ನೂ ಕುತೂಹಲಕರ ಸಂಗತಿ ಅಂದ್ರೆ, ಯಡ್ಯೂರಪ್ಪನವರ ಹೊಸ ಸರ್ಕಾರದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ಫಿಕ್ಸ್ ಆಗಿದೆಯಂತೆ. ಈಶ್ವರಪ್ಪ,ಆರ್.ಅಶೋಕ್ ಜೊತೆಗೆ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಹೋಗಿ ಅಲ್ಲಿನ ಅಧ್ಯಕ್ಷಗಾದಿಯಿಂದ ನೇರವಾಗಿ ಎದ್ದುಬಂದು ಕಮಲದ ‘ಗೃಹಪ್ರವೇಶ’ಗೈದಿರುವ ಬಾಂಬೆಹಕ್ಕಿ ಎಚ್.ವಿಶ್ವನಾಥ್‌ರಿಗೂ ಡಿಸಿಎಂ ಭಾಗ್ಯ ಒಲಿದು ಬಂದಿದೆ ಎನ್ನಲಾಗಿದೆ! ಇದೇವೇಳೆ ಈಶ್ವರಪ್ಪ ಮತ್ತು ವಿಶ್ವನಾಥ್ ಇಬ್ಬರೂ ಕುರುಬ ಸಮುದಾಯಕ್ಕೆ ಸೇರಿರೋದ್ರಿಂದ ಒಂದೇ ಜಾತಿಗೆ ಎರಡು ಹುದ್ದೆ ಕೊಡಬಾರದೆಂಬ ಚರ್ಚೆಯೂ ಕೇಳಿಬಂದಿದ್ದು, ಈಶ್ವರಪ್ಪನವರಿಗೆ ಪ್ರಭಾವಿ ಖಾತೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನವನ್ನೂ ಬಿಟ್ಟುಕೊಟ್ಟು ಆ ಮೂರನೇ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಆಯ್ಕೆ ಮಾಡಬೇಕೆನ್ನುವ ಪ್ರಸ್ತಾಪ ಚರ್ಚೆಯಾಗುತ್ತಿದೆಯಂತೆ!

ಇದನ್ನು ಕೂಸು ಹುಟ್ಟುವ ಮುನ್ನ ಕುಲಾವಿ ಎನ್ನಬೇಕೋ, ಮಾಮೂಲಿ ರಾಜಕೀಯ ವದಂತಿ ಎನ್ನಬೇಕೋ ತಿಳಿಯದಾಗಿದೆ. ಒಟ್ಟಾರೆ ಬೆಳವಣಿಗೆಗಳನ್ನು ನೋಡಿದರೆ, ಕರ್ನಾಟಕಕ್ಕೊಂದು ಸ್ಥಿರ ಜನಪರ ಸರ್ಕಾರ ದೊರೆಯುವ ಲಕ್ಷಣಗಳಂತೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಡಿಯೂರಪ್ಪನವರ ಪರಿ ಲಜ್ಜೆಗೆಟ್ಟ ರಾಜಕೀಯ ವ್ಯಕ್ತಿ ಇನ್ನೊಬ್ಬ ಇಲ್ಲ ಅನುಕೂಲಸಿಂಧು ರಾಜಕೀಯ ನಡೆಯಿಂದ ಮೈತ್ರಿ ಸರ್ಕಾರ ಹುಟ್ಟಿಕೊಂಡು ನಡೆದುಕೊಂಡು ಹೋಗುತ್ತಿದೆ ಆದರೆ ಮುಖ್ಯಮಂತ್ರಿಯಾಗುವ ಆಗಲೇಬೇಕೆಂದು ಹೆಬ್ಬಯಕೆಯಿಂದ ಈ ರೀತಿಯಾಗಿ ನಿಂತು ಸರ್ಕಾರವನ್ನು ಬೀಳಿಸುವ ಲಜ್ಜೆಗೇಡಿ ವರ್ತನೆ ಯಡಿಯೂರಪ್ಪನಿಗೆ ಮಾತ್ರ ಸಾಧ್ಯ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...