Homeಕರ್ನಾಟಕಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

ಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

- Advertisement -
- Advertisement -

| ಗೌರಿ ಡೆಸ್ಕ್ |

ಸುಪ್ರೀಂ ಕೋರ್ಟ್ ನಿರ್ದೇಶನದಿಂದಾಗಿ ಕರ್ನಾಟಕದ ರಾಜಕೀಯ ಹೈಡ್ರಾಮ ಹೆಚ್ಚೂಕಮ್ಮಿ ಸಮಿಫೈನಲ್ ಹಂತಕ್ಕೆ ಬಂದು ತಲುಪಿದಂತಾಗಿದೆ. ಇವತ್ತೇ ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ೧೦ ಬಂಡಾಯ ಶಾಸಕರಿಗೆ ಸೂಚಿಸಿರುವ ಸರ್ವೋಚ್ಛ ನ್ಯಾಯಾಲಯ, ಆದಷ್ಟು ಬೇಗ ಇದಕ್ಕೊಂದು ಮಂಗಳ ಹಾಡುವಂತೆ ಸ್ಪೀಕರ್‌ಗೆ ಸೂಚನೆ ನೀಡಿದೆ. ಅದು ಕೇವಲ ಸೂಚನೆಯಾಗಿರೋದ್ರಿಂದ, ಸ್ಪೀಕರ್ ಮೇಲೆ ಯಾವ ಒತ್ತಡವನ್ನೂ ನ್ಯಾಯಾಲಯ ಹಾಕಿಲ್ಲ. ಹಾಗಾಗಿ, ನನಗೆ ರಾಜೀನಾಮೆಗಳನ್ನು ಪರಾಮರ್ಶಿಸಲು ಒಂದಷ್ಟು ಸಮಯ ಬೇಕು ಅಂತ ರಮೇಶ್ ಕುಮಾರರು ಸುರ್ಪೀಂ ಕೋರ್ಟಿಗೆ ಅರ್ಜಿ ಹಾಕಿರುವ ಲೇಟೆಸ್ಟ್ ಸುದ್ದಿ ಹೊರ ಬರುತ್ತಿದೆ.

ಆದರೆ ಬಿಜೆಪಿ ಈ ಸಾರಿ ತನ್ನ ಆಪರೇಷನ್ ಬಗ್ಗೆ ಅದೆಷ್ಟು ಅದಮ್ಯ ವಿಶ್ವಾಸದಲ್ಲಿದೆಯೆಂದರೆ, ಸಚಿವ ಸಂಪುಟದ ಪಟ್ಟಿಯೇ ತಯಾರಾಗಿ ಯಾರ್‍ಯಾರಿಗೆ ಯಾವ್ಯಾವ ಖಾತೆ ಅನ್ನೋ ಹಂಚಿಕೆಯೂ ಮುಗಿದುಹೋಗಿದೆ ಅನ್ನೋ ಲೇಟೆಸ್ಟ್ ವರ್ತಮಾನ ಕಮಲ ಪಾಳಯದಲ್ಲಿ ಕೇಳಿಬರುತ್ತಿದೆ. ಇದು ಎಷ್ಟರಮಟ್ಟಿಗೆ ಸತ್ಯವೋ ಅಲ್ಲವೋ ಗೊತ್ತಿಲ್ಲ, ಆದರೆ ವಿಧಾನಸೌಧ, ಯಡಿಯೂರಪ್ಪನವರ ನಿವಾಸ ಧವಳಗಿರಿ, ಪ್ರೆಸ್ಸ್‌ಕ್ಲಬ್, ಮಲ್ಲೇಶ್ವರಂ ಬಿಜೆಪಿ ಕಚೇರಿಯ ಆವರಣದಲ್ಲಿ ಈ ಮಾತುಕತೆಗಳು ಜೋರಾಗಿ ಚರ್ಚೆಯಲ್ಲಿವೆ.

ಆ ಚರ್ಚೆಯ ಒಟ್ಟಾರೆ ಸಾರಾಂಶ ಇಷ್ಟು. ಹೊಸ ಸರ್ಕಾರದಲ್ಲಿ ಯಡ್ಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋದು ಫಿಕ್ಸು. ಬಿ.ಎಲ್.ಸಂತೋಷ್ ಸೇರಿದಂತೆ ಬಿಜೆಪಿಯ ಒಂದು ಬಣಕ್ಕೆ ಯಡ್ಯೂರಪ್ಪ ಸಿಎಂ ಆಗೋದು ಇಷ್ಟವಿಲ್ಲ. ಅವರು ಈಗ ಸರ್ಕಾರ ರಚನೆ ಮಾಡೋದರ ಬದಲು, ಮಧ್ಯಂತರ ಚುನಾವಣೆಗೆ ಹೋಗುವ ವಾದವನ್ನು ಮುಂದೆ ಮಾಡಿದ್ದುಂಟು. ಅದಕ್ಕಾಗೆ, ಈಗ ಕೈ-ತೆನೆಗೆ ಕೈಕೊಟ್ಟು ಕಮಲ ಮುಡಿಯುತ್ತಿರುವ ಒಂದಷ್ಟು ಶಾಸಕರ ಬಿಜೆಪಿ ಸೇರ್ಪಡೆಗೆ ಈ ಬಣದಿಂದ ವಿರೋಧ ವ್ಯಕ್ತವಾದದ್ದು. ಮಧ್ಯಂತರ ಚುನಾವಣೆ ನಡೆದರೆ ಏನಿಲ್ಲವೆಂದರು 140 ರಿಂದ 150 ಸೀಟು ನಿರಾಯಾಸವಾಗಿ ಬಿಜೆಪಿ ಗೆಲ್ಲುತ್ತೆ, ಆಗ ಯಡ್ಯೂರಪ್ಪನವರ ಹಂಗು ಇರೋದಿಲ್ಲ, ಅವರನ್ನು ಪಕ್ಕಕ್ಕೆ ಸರಿಸಿ ನಮ್ಮಲ್ಲೇ ಬೇರೆ ಯಾರಾದರು ಸಿಎಂ ಆಗಬೇಕು ಅನ್ನೋದು ಅವರ ಲೆಕ್ಕಾಚಾರವಾಗಿತ್ತು. ಆದರೆ ಸದ್ಯಕ್ಕೆ ಅವರ ವಾದ ಕೈಮೇಲಾಗಿಲ್ಲ. ಹಾಗಾಗಿ ಯಡಿಯೂರಪ್ಪ ಸಿಎಂ ಆಗಲಿದ್ದಾರೆ.

ಇನ್ನು ಬಿಜೆಪಿ ಹೊಸ ಸರ್ಕಾರದಲ್ಲಿ ಬಿಜೆಪಿಯ 20 ಶಾಸಕರಿಗೆ ಮತ್ತು ಹೊರಗಿನಿಂದ ಬಂದ 14 ಶಾಸಕರಿಗೆ ಮಂತ್ರಿ ಭಾಗ್ಯ ಕರುಣಿಸಲಾಗಿದೆ ಎನ್ನಲಾಗುತ್ತಿದೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀರಾಮುಲು, ಮಾಧುಸ್ವಾಮಿ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ ಇನ್ನೂ ಮೊದಲಾದವರಿದ್ದರೆ ವಲಸಿಗ ಶಾಸಕರಲ್ಲಿ ಇಬ್ಬರು ಪಕ್ಷೇತರರನ್ನೂ ಸೇರಿಸಿ ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಹೆಸರುಗಳು ಅಂತಿಮಗೊಂಡಿವೆಯಂತೆ!

ಇನ್ನೂ ಕುತೂಹಲಕರ ಸಂಗತಿ ಅಂದ್ರೆ, ಯಡ್ಯೂರಪ್ಪನವರ ಹೊಸ ಸರ್ಕಾರದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ಫಿಕ್ಸ್ ಆಗಿದೆಯಂತೆ. ಈಶ್ವರಪ್ಪ,ಆರ್.ಅಶೋಕ್ ಜೊತೆಗೆ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಹೋಗಿ ಅಲ್ಲಿನ ಅಧ್ಯಕ್ಷಗಾದಿಯಿಂದ ನೇರವಾಗಿ ಎದ್ದುಬಂದು ಕಮಲದ ‘ಗೃಹಪ್ರವೇಶ’ಗೈದಿರುವ ಬಾಂಬೆಹಕ್ಕಿ ಎಚ್.ವಿಶ್ವನಾಥ್‌ರಿಗೂ ಡಿಸಿಎಂ ಭಾಗ್ಯ ಒಲಿದು ಬಂದಿದೆ ಎನ್ನಲಾಗಿದೆ! ಇದೇವೇಳೆ ಈಶ್ವರಪ್ಪ ಮತ್ತು ವಿಶ್ವನಾಥ್ ಇಬ್ಬರೂ ಕುರುಬ ಸಮುದಾಯಕ್ಕೆ ಸೇರಿರೋದ್ರಿಂದ ಒಂದೇ ಜಾತಿಗೆ ಎರಡು ಹುದ್ದೆ ಕೊಡಬಾರದೆಂಬ ಚರ್ಚೆಯೂ ಕೇಳಿಬಂದಿದ್ದು, ಈಶ್ವರಪ್ಪನವರಿಗೆ ಪ್ರಭಾವಿ ಖಾತೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನವನ್ನೂ ಬಿಟ್ಟುಕೊಟ್ಟು ಆ ಮೂರನೇ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಆಯ್ಕೆ ಮಾಡಬೇಕೆನ್ನುವ ಪ್ರಸ್ತಾಪ ಚರ್ಚೆಯಾಗುತ್ತಿದೆಯಂತೆ!

ಇದನ್ನು ಕೂಸು ಹುಟ್ಟುವ ಮುನ್ನ ಕುಲಾವಿ ಎನ್ನಬೇಕೋ, ಮಾಮೂಲಿ ರಾಜಕೀಯ ವದಂತಿ ಎನ್ನಬೇಕೋ ತಿಳಿಯದಾಗಿದೆ. ಒಟ್ಟಾರೆ ಬೆಳವಣಿಗೆಗಳನ್ನು ನೋಡಿದರೆ, ಕರ್ನಾಟಕಕ್ಕೊಂದು ಸ್ಥಿರ ಜನಪರ ಸರ್ಕಾರ ದೊರೆಯುವ ಲಕ್ಷಣಗಳಂತೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಡಿಯೂರಪ್ಪನವರ ಪರಿ ಲಜ್ಜೆಗೆಟ್ಟ ರಾಜಕೀಯ ವ್ಯಕ್ತಿ ಇನ್ನೊಬ್ಬ ಇಲ್ಲ ಅನುಕೂಲಸಿಂಧು ರಾಜಕೀಯ ನಡೆಯಿಂದ ಮೈತ್ರಿ ಸರ್ಕಾರ ಹುಟ್ಟಿಕೊಂಡು ನಡೆದುಕೊಂಡು ಹೋಗುತ್ತಿದೆ ಆದರೆ ಮುಖ್ಯಮಂತ್ರಿಯಾಗುವ ಆಗಲೇಬೇಕೆಂದು ಹೆಬ್ಬಯಕೆಯಿಂದ ಈ ರೀತಿಯಾಗಿ ನಿಂತು ಸರ್ಕಾರವನ್ನು ಬೀಳಿಸುವ ಲಜ್ಜೆಗೇಡಿ ವರ್ತನೆ ಯಡಿಯೂರಪ್ಪನಿಗೆ ಮಾತ್ರ ಸಾಧ್ಯ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....