Homeಕರ್ನಾಟಕಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

ಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

- Advertisement -
- Advertisement -

| ಗೌರಿ ಡೆಸ್ಕ್ |

ಸುಪ್ರೀಂ ಕೋರ್ಟ್ ನಿರ್ದೇಶನದಿಂದಾಗಿ ಕರ್ನಾಟಕದ ರಾಜಕೀಯ ಹೈಡ್ರಾಮ ಹೆಚ್ಚೂಕಮ್ಮಿ ಸಮಿಫೈನಲ್ ಹಂತಕ್ಕೆ ಬಂದು ತಲುಪಿದಂತಾಗಿದೆ. ಇವತ್ತೇ ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ೧೦ ಬಂಡಾಯ ಶಾಸಕರಿಗೆ ಸೂಚಿಸಿರುವ ಸರ್ವೋಚ್ಛ ನ್ಯಾಯಾಲಯ, ಆದಷ್ಟು ಬೇಗ ಇದಕ್ಕೊಂದು ಮಂಗಳ ಹಾಡುವಂತೆ ಸ್ಪೀಕರ್‌ಗೆ ಸೂಚನೆ ನೀಡಿದೆ. ಅದು ಕೇವಲ ಸೂಚನೆಯಾಗಿರೋದ್ರಿಂದ, ಸ್ಪೀಕರ್ ಮೇಲೆ ಯಾವ ಒತ್ತಡವನ್ನೂ ನ್ಯಾಯಾಲಯ ಹಾಕಿಲ್ಲ. ಹಾಗಾಗಿ, ನನಗೆ ರಾಜೀನಾಮೆಗಳನ್ನು ಪರಾಮರ್ಶಿಸಲು ಒಂದಷ್ಟು ಸಮಯ ಬೇಕು ಅಂತ ರಮೇಶ್ ಕುಮಾರರು ಸುರ್ಪೀಂ ಕೋರ್ಟಿಗೆ ಅರ್ಜಿ ಹಾಕಿರುವ ಲೇಟೆಸ್ಟ್ ಸುದ್ದಿ ಹೊರ ಬರುತ್ತಿದೆ.

ಆದರೆ ಬಿಜೆಪಿ ಈ ಸಾರಿ ತನ್ನ ಆಪರೇಷನ್ ಬಗ್ಗೆ ಅದೆಷ್ಟು ಅದಮ್ಯ ವಿಶ್ವಾಸದಲ್ಲಿದೆಯೆಂದರೆ, ಸಚಿವ ಸಂಪುಟದ ಪಟ್ಟಿಯೇ ತಯಾರಾಗಿ ಯಾರ್‍ಯಾರಿಗೆ ಯಾವ್ಯಾವ ಖಾತೆ ಅನ್ನೋ ಹಂಚಿಕೆಯೂ ಮುಗಿದುಹೋಗಿದೆ ಅನ್ನೋ ಲೇಟೆಸ್ಟ್ ವರ್ತಮಾನ ಕಮಲ ಪಾಳಯದಲ್ಲಿ ಕೇಳಿಬರುತ್ತಿದೆ. ಇದು ಎಷ್ಟರಮಟ್ಟಿಗೆ ಸತ್ಯವೋ ಅಲ್ಲವೋ ಗೊತ್ತಿಲ್ಲ, ಆದರೆ ವಿಧಾನಸೌಧ, ಯಡಿಯೂರಪ್ಪನವರ ನಿವಾಸ ಧವಳಗಿರಿ, ಪ್ರೆಸ್ಸ್‌ಕ್ಲಬ್, ಮಲ್ಲೇಶ್ವರಂ ಬಿಜೆಪಿ ಕಚೇರಿಯ ಆವರಣದಲ್ಲಿ ಈ ಮಾತುಕತೆಗಳು ಜೋರಾಗಿ ಚರ್ಚೆಯಲ್ಲಿವೆ.

ಆ ಚರ್ಚೆಯ ಒಟ್ಟಾರೆ ಸಾರಾಂಶ ಇಷ್ಟು. ಹೊಸ ಸರ್ಕಾರದಲ್ಲಿ ಯಡ್ಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋದು ಫಿಕ್ಸು. ಬಿ.ಎಲ್.ಸಂತೋಷ್ ಸೇರಿದಂತೆ ಬಿಜೆಪಿಯ ಒಂದು ಬಣಕ್ಕೆ ಯಡ್ಯೂರಪ್ಪ ಸಿಎಂ ಆಗೋದು ಇಷ್ಟವಿಲ್ಲ. ಅವರು ಈಗ ಸರ್ಕಾರ ರಚನೆ ಮಾಡೋದರ ಬದಲು, ಮಧ್ಯಂತರ ಚುನಾವಣೆಗೆ ಹೋಗುವ ವಾದವನ್ನು ಮುಂದೆ ಮಾಡಿದ್ದುಂಟು. ಅದಕ್ಕಾಗೆ, ಈಗ ಕೈ-ತೆನೆಗೆ ಕೈಕೊಟ್ಟು ಕಮಲ ಮುಡಿಯುತ್ತಿರುವ ಒಂದಷ್ಟು ಶಾಸಕರ ಬಿಜೆಪಿ ಸೇರ್ಪಡೆಗೆ ಈ ಬಣದಿಂದ ವಿರೋಧ ವ್ಯಕ್ತವಾದದ್ದು. ಮಧ್ಯಂತರ ಚುನಾವಣೆ ನಡೆದರೆ ಏನಿಲ್ಲವೆಂದರು 140 ರಿಂದ 150 ಸೀಟು ನಿರಾಯಾಸವಾಗಿ ಬಿಜೆಪಿ ಗೆಲ್ಲುತ್ತೆ, ಆಗ ಯಡ್ಯೂರಪ್ಪನವರ ಹಂಗು ಇರೋದಿಲ್ಲ, ಅವರನ್ನು ಪಕ್ಕಕ್ಕೆ ಸರಿಸಿ ನಮ್ಮಲ್ಲೇ ಬೇರೆ ಯಾರಾದರು ಸಿಎಂ ಆಗಬೇಕು ಅನ್ನೋದು ಅವರ ಲೆಕ್ಕಾಚಾರವಾಗಿತ್ತು. ಆದರೆ ಸದ್ಯಕ್ಕೆ ಅವರ ವಾದ ಕೈಮೇಲಾಗಿಲ್ಲ. ಹಾಗಾಗಿ ಯಡಿಯೂರಪ್ಪ ಸಿಎಂ ಆಗಲಿದ್ದಾರೆ.

ಇನ್ನು ಬಿಜೆಪಿ ಹೊಸ ಸರ್ಕಾರದಲ್ಲಿ ಬಿಜೆಪಿಯ 20 ಶಾಸಕರಿಗೆ ಮತ್ತು ಹೊರಗಿನಿಂದ ಬಂದ 14 ಶಾಸಕರಿಗೆ ಮಂತ್ರಿ ಭಾಗ್ಯ ಕರುಣಿಸಲಾಗಿದೆ ಎನ್ನಲಾಗುತ್ತಿದೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀರಾಮುಲು, ಮಾಧುಸ್ವಾಮಿ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ ಇನ್ನೂ ಮೊದಲಾದವರಿದ್ದರೆ ವಲಸಿಗ ಶಾಸಕರಲ್ಲಿ ಇಬ್ಬರು ಪಕ್ಷೇತರರನ್ನೂ ಸೇರಿಸಿ ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಹೆಸರುಗಳು ಅಂತಿಮಗೊಂಡಿವೆಯಂತೆ!

ಇನ್ನೂ ಕುತೂಹಲಕರ ಸಂಗತಿ ಅಂದ್ರೆ, ಯಡ್ಯೂರಪ್ಪನವರ ಹೊಸ ಸರ್ಕಾರದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ಫಿಕ್ಸ್ ಆಗಿದೆಯಂತೆ. ಈಶ್ವರಪ್ಪ,ಆರ್.ಅಶೋಕ್ ಜೊತೆಗೆ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಹೋಗಿ ಅಲ್ಲಿನ ಅಧ್ಯಕ್ಷಗಾದಿಯಿಂದ ನೇರವಾಗಿ ಎದ್ದುಬಂದು ಕಮಲದ ‘ಗೃಹಪ್ರವೇಶ’ಗೈದಿರುವ ಬಾಂಬೆಹಕ್ಕಿ ಎಚ್.ವಿಶ್ವನಾಥ್‌ರಿಗೂ ಡಿಸಿಎಂ ಭಾಗ್ಯ ಒಲಿದು ಬಂದಿದೆ ಎನ್ನಲಾಗಿದೆ! ಇದೇವೇಳೆ ಈಶ್ವರಪ್ಪ ಮತ್ತು ವಿಶ್ವನಾಥ್ ಇಬ್ಬರೂ ಕುರುಬ ಸಮುದಾಯಕ್ಕೆ ಸೇರಿರೋದ್ರಿಂದ ಒಂದೇ ಜಾತಿಗೆ ಎರಡು ಹುದ್ದೆ ಕೊಡಬಾರದೆಂಬ ಚರ್ಚೆಯೂ ಕೇಳಿಬಂದಿದ್ದು, ಈಶ್ವರಪ್ಪನವರಿಗೆ ಪ್ರಭಾವಿ ಖಾತೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನವನ್ನೂ ಬಿಟ್ಟುಕೊಟ್ಟು ಆ ಮೂರನೇ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಆಯ್ಕೆ ಮಾಡಬೇಕೆನ್ನುವ ಪ್ರಸ್ತಾಪ ಚರ್ಚೆಯಾಗುತ್ತಿದೆಯಂತೆ!

ಇದನ್ನು ಕೂಸು ಹುಟ್ಟುವ ಮುನ್ನ ಕುಲಾವಿ ಎನ್ನಬೇಕೋ, ಮಾಮೂಲಿ ರಾಜಕೀಯ ವದಂತಿ ಎನ್ನಬೇಕೋ ತಿಳಿಯದಾಗಿದೆ. ಒಟ್ಟಾರೆ ಬೆಳವಣಿಗೆಗಳನ್ನು ನೋಡಿದರೆ, ಕರ್ನಾಟಕಕ್ಕೊಂದು ಸ್ಥಿರ ಜನಪರ ಸರ್ಕಾರ ದೊರೆಯುವ ಲಕ್ಷಣಗಳಂತೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಡಿಯೂರಪ್ಪನವರ ಪರಿ ಲಜ್ಜೆಗೆಟ್ಟ ರಾಜಕೀಯ ವ್ಯಕ್ತಿ ಇನ್ನೊಬ್ಬ ಇಲ್ಲ ಅನುಕೂಲಸಿಂಧು ರಾಜಕೀಯ ನಡೆಯಿಂದ ಮೈತ್ರಿ ಸರ್ಕಾರ ಹುಟ್ಟಿಕೊಂಡು ನಡೆದುಕೊಂಡು ಹೋಗುತ್ತಿದೆ ಆದರೆ ಮುಖ್ಯಮಂತ್ರಿಯಾಗುವ ಆಗಲೇಬೇಕೆಂದು ಹೆಬ್ಬಯಕೆಯಿಂದ ಈ ರೀತಿಯಾಗಿ ನಿಂತು ಸರ್ಕಾರವನ್ನು ಬೀಳಿಸುವ ಲಜ್ಜೆಗೇಡಿ ವರ್ತನೆ ಯಡಿಯೂರಪ್ಪನಿಗೆ ಮಾತ್ರ ಸಾಧ್ಯ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...