Homeಕರ್ನಾಟಕಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

ಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

- Advertisement -
- Advertisement -

| ಗೌರಿ ಡೆಸ್ಕ್ |

ಸುಪ್ರೀಂ ಕೋರ್ಟ್ ನಿರ್ದೇಶನದಿಂದಾಗಿ ಕರ್ನಾಟಕದ ರಾಜಕೀಯ ಹೈಡ್ರಾಮ ಹೆಚ್ಚೂಕಮ್ಮಿ ಸಮಿಫೈನಲ್ ಹಂತಕ್ಕೆ ಬಂದು ತಲುಪಿದಂತಾಗಿದೆ. ಇವತ್ತೇ ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ೧೦ ಬಂಡಾಯ ಶಾಸಕರಿಗೆ ಸೂಚಿಸಿರುವ ಸರ್ವೋಚ್ಛ ನ್ಯಾಯಾಲಯ, ಆದಷ್ಟು ಬೇಗ ಇದಕ್ಕೊಂದು ಮಂಗಳ ಹಾಡುವಂತೆ ಸ್ಪೀಕರ್‌ಗೆ ಸೂಚನೆ ನೀಡಿದೆ. ಅದು ಕೇವಲ ಸೂಚನೆಯಾಗಿರೋದ್ರಿಂದ, ಸ್ಪೀಕರ್ ಮೇಲೆ ಯಾವ ಒತ್ತಡವನ್ನೂ ನ್ಯಾಯಾಲಯ ಹಾಕಿಲ್ಲ. ಹಾಗಾಗಿ, ನನಗೆ ರಾಜೀನಾಮೆಗಳನ್ನು ಪರಾಮರ್ಶಿಸಲು ಒಂದಷ್ಟು ಸಮಯ ಬೇಕು ಅಂತ ರಮೇಶ್ ಕುಮಾರರು ಸುರ್ಪೀಂ ಕೋರ್ಟಿಗೆ ಅರ್ಜಿ ಹಾಕಿರುವ ಲೇಟೆಸ್ಟ್ ಸುದ್ದಿ ಹೊರ ಬರುತ್ತಿದೆ.

ಆದರೆ ಬಿಜೆಪಿ ಈ ಸಾರಿ ತನ್ನ ಆಪರೇಷನ್ ಬಗ್ಗೆ ಅದೆಷ್ಟು ಅದಮ್ಯ ವಿಶ್ವಾಸದಲ್ಲಿದೆಯೆಂದರೆ, ಸಚಿವ ಸಂಪುಟದ ಪಟ್ಟಿಯೇ ತಯಾರಾಗಿ ಯಾರ್‍ಯಾರಿಗೆ ಯಾವ್ಯಾವ ಖಾತೆ ಅನ್ನೋ ಹಂಚಿಕೆಯೂ ಮುಗಿದುಹೋಗಿದೆ ಅನ್ನೋ ಲೇಟೆಸ್ಟ್ ವರ್ತಮಾನ ಕಮಲ ಪಾಳಯದಲ್ಲಿ ಕೇಳಿಬರುತ್ತಿದೆ. ಇದು ಎಷ್ಟರಮಟ್ಟಿಗೆ ಸತ್ಯವೋ ಅಲ್ಲವೋ ಗೊತ್ತಿಲ್ಲ, ಆದರೆ ವಿಧಾನಸೌಧ, ಯಡಿಯೂರಪ್ಪನವರ ನಿವಾಸ ಧವಳಗಿರಿ, ಪ್ರೆಸ್ಸ್‌ಕ್ಲಬ್, ಮಲ್ಲೇಶ್ವರಂ ಬಿಜೆಪಿ ಕಚೇರಿಯ ಆವರಣದಲ್ಲಿ ಈ ಮಾತುಕತೆಗಳು ಜೋರಾಗಿ ಚರ್ಚೆಯಲ್ಲಿವೆ.

ಆ ಚರ್ಚೆಯ ಒಟ್ಟಾರೆ ಸಾರಾಂಶ ಇಷ್ಟು. ಹೊಸ ಸರ್ಕಾರದಲ್ಲಿ ಯಡ್ಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋದು ಫಿಕ್ಸು. ಬಿ.ಎಲ್.ಸಂತೋಷ್ ಸೇರಿದಂತೆ ಬಿಜೆಪಿಯ ಒಂದು ಬಣಕ್ಕೆ ಯಡ್ಯೂರಪ್ಪ ಸಿಎಂ ಆಗೋದು ಇಷ್ಟವಿಲ್ಲ. ಅವರು ಈಗ ಸರ್ಕಾರ ರಚನೆ ಮಾಡೋದರ ಬದಲು, ಮಧ್ಯಂತರ ಚುನಾವಣೆಗೆ ಹೋಗುವ ವಾದವನ್ನು ಮುಂದೆ ಮಾಡಿದ್ದುಂಟು. ಅದಕ್ಕಾಗೆ, ಈಗ ಕೈ-ತೆನೆಗೆ ಕೈಕೊಟ್ಟು ಕಮಲ ಮುಡಿಯುತ್ತಿರುವ ಒಂದಷ್ಟು ಶಾಸಕರ ಬಿಜೆಪಿ ಸೇರ್ಪಡೆಗೆ ಈ ಬಣದಿಂದ ವಿರೋಧ ವ್ಯಕ್ತವಾದದ್ದು. ಮಧ್ಯಂತರ ಚುನಾವಣೆ ನಡೆದರೆ ಏನಿಲ್ಲವೆಂದರು 140 ರಿಂದ 150 ಸೀಟು ನಿರಾಯಾಸವಾಗಿ ಬಿಜೆಪಿ ಗೆಲ್ಲುತ್ತೆ, ಆಗ ಯಡ್ಯೂರಪ್ಪನವರ ಹಂಗು ಇರೋದಿಲ್ಲ, ಅವರನ್ನು ಪಕ್ಕಕ್ಕೆ ಸರಿಸಿ ನಮ್ಮಲ್ಲೇ ಬೇರೆ ಯಾರಾದರು ಸಿಎಂ ಆಗಬೇಕು ಅನ್ನೋದು ಅವರ ಲೆಕ್ಕಾಚಾರವಾಗಿತ್ತು. ಆದರೆ ಸದ್ಯಕ್ಕೆ ಅವರ ವಾದ ಕೈಮೇಲಾಗಿಲ್ಲ. ಹಾಗಾಗಿ ಯಡಿಯೂರಪ್ಪ ಸಿಎಂ ಆಗಲಿದ್ದಾರೆ.

ಇನ್ನು ಬಿಜೆಪಿ ಹೊಸ ಸರ್ಕಾರದಲ್ಲಿ ಬಿಜೆಪಿಯ 20 ಶಾಸಕರಿಗೆ ಮತ್ತು ಹೊರಗಿನಿಂದ ಬಂದ 14 ಶಾಸಕರಿಗೆ ಮಂತ್ರಿ ಭಾಗ್ಯ ಕರುಣಿಸಲಾಗಿದೆ ಎನ್ನಲಾಗುತ್ತಿದೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀರಾಮುಲು, ಮಾಧುಸ್ವಾಮಿ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ ಇನ್ನೂ ಮೊದಲಾದವರಿದ್ದರೆ ವಲಸಿಗ ಶಾಸಕರಲ್ಲಿ ಇಬ್ಬರು ಪಕ್ಷೇತರರನ್ನೂ ಸೇರಿಸಿ ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಹೆಸರುಗಳು ಅಂತಿಮಗೊಂಡಿವೆಯಂತೆ!

ಇನ್ನೂ ಕುತೂಹಲಕರ ಸಂಗತಿ ಅಂದ್ರೆ, ಯಡ್ಯೂರಪ್ಪನವರ ಹೊಸ ಸರ್ಕಾರದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ಫಿಕ್ಸ್ ಆಗಿದೆಯಂತೆ. ಈಶ್ವರಪ್ಪ,ಆರ್.ಅಶೋಕ್ ಜೊತೆಗೆ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಹೋಗಿ ಅಲ್ಲಿನ ಅಧ್ಯಕ್ಷಗಾದಿಯಿಂದ ನೇರವಾಗಿ ಎದ್ದುಬಂದು ಕಮಲದ ‘ಗೃಹಪ್ರವೇಶ’ಗೈದಿರುವ ಬಾಂಬೆಹಕ್ಕಿ ಎಚ್.ವಿಶ್ವನಾಥ್‌ರಿಗೂ ಡಿಸಿಎಂ ಭಾಗ್ಯ ಒಲಿದು ಬಂದಿದೆ ಎನ್ನಲಾಗಿದೆ! ಇದೇವೇಳೆ ಈಶ್ವರಪ್ಪ ಮತ್ತು ವಿಶ್ವನಾಥ್ ಇಬ್ಬರೂ ಕುರುಬ ಸಮುದಾಯಕ್ಕೆ ಸೇರಿರೋದ್ರಿಂದ ಒಂದೇ ಜಾತಿಗೆ ಎರಡು ಹುದ್ದೆ ಕೊಡಬಾರದೆಂಬ ಚರ್ಚೆಯೂ ಕೇಳಿಬಂದಿದ್ದು, ಈಶ್ವರಪ್ಪನವರಿಗೆ ಪ್ರಭಾವಿ ಖಾತೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನವನ್ನೂ ಬಿಟ್ಟುಕೊಟ್ಟು ಆ ಮೂರನೇ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಆಯ್ಕೆ ಮಾಡಬೇಕೆನ್ನುವ ಪ್ರಸ್ತಾಪ ಚರ್ಚೆಯಾಗುತ್ತಿದೆಯಂತೆ!

ಇದನ್ನು ಕೂಸು ಹುಟ್ಟುವ ಮುನ್ನ ಕುಲಾವಿ ಎನ್ನಬೇಕೋ, ಮಾಮೂಲಿ ರಾಜಕೀಯ ವದಂತಿ ಎನ್ನಬೇಕೋ ತಿಳಿಯದಾಗಿದೆ. ಒಟ್ಟಾರೆ ಬೆಳವಣಿಗೆಗಳನ್ನು ನೋಡಿದರೆ, ಕರ್ನಾಟಕಕ್ಕೊಂದು ಸ್ಥಿರ ಜನಪರ ಸರ್ಕಾರ ದೊರೆಯುವ ಲಕ್ಷಣಗಳಂತೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಡಿಯೂರಪ್ಪನವರ ಪರಿ ಲಜ್ಜೆಗೆಟ್ಟ ರಾಜಕೀಯ ವ್ಯಕ್ತಿ ಇನ್ನೊಬ್ಬ ಇಲ್ಲ ಅನುಕೂಲಸಿಂಧು ರಾಜಕೀಯ ನಡೆಯಿಂದ ಮೈತ್ರಿ ಸರ್ಕಾರ ಹುಟ್ಟಿಕೊಂಡು ನಡೆದುಕೊಂಡು ಹೋಗುತ್ತಿದೆ ಆದರೆ ಮುಖ್ಯಮಂತ್ರಿಯಾಗುವ ಆಗಲೇಬೇಕೆಂದು ಹೆಬ್ಬಯಕೆಯಿಂದ ಈ ರೀತಿಯಾಗಿ ನಿಂತು ಸರ್ಕಾರವನ್ನು ಬೀಳಿಸುವ ಲಜ್ಜೆಗೇಡಿ ವರ್ತನೆ ಯಡಿಯೂರಪ್ಪನಿಗೆ ಮಾತ್ರ ಸಾಧ್ಯ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...