Homeಅಂಕಣಗಳುನಾವು ಮರೆಯಲಾಗದ ಇತಿಹಾಸ ಹಾಗೂ ವರ್ತಮಾನದ ಎರಡು ಸಂಗತಿಗಳು..

ನಾವು ಮರೆಯಲಾಗದ ಇತಿಹಾಸ ಹಾಗೂ ವರ್ತಮಾನದ ಎರಡು ಸಂಗತಿಗಳು..

- Advertisement -
- Advertisement -

| ಡಾ. ವಾಸು ಎಚ್.ವಿ |

ಬಹುಶಃ ನೀವು ಇದನ್ನು ಕೇಳಿರಬಹುದು. ನಿಮ್ಮ ಕೈಯ್ಯಲ್ಲಿ ಒಂದು ಜೀವಂತ ಕಪ್ಪೆಯನ್ನು ಹಿಡಿದು ಅದನ್ನು ಬಿಸಿ ಬಿಸಿಯಾದ ನೀರಿನಲ್ಲಿ ಹಾಕಿದರೆ ಕಪ್ಪೆ ಏನು ಮಾಡುತ್ತದೆ? ಕೂಡಲೇ ಜಿಗಿದು ಹೊರ ಹಾರುತ್ತದೆ. ಆದರೆ, ಅದೇ ಕಪ್ಪೆಯನ್ನು ತಣ್ಣೀರಿನಲ್ಲಿ ಇಟ್ಟು, ನಿಧಾನಕ್ಕೆ ಕೆಳಗಿನಿಂದ ಬೆಂಕಿ ಹಾಕಿ ಉರಿಸುತ್ತಾ ಹೋದರೆ? ಕಪ್ಪೆಯು ಸ್ವಲ್ಪ ಸ್ವಲ್ಪವೇ ಬಿಸಿಯಾಗುತ್ತಿರುವ ನೀರಿನ ಉಷ್ಣತೆಗೆ ಹೊಂದಿಕೊಳ್ಳುತ್ತಾ ಹೋಗುತ್ತದೆ. ಕಡೆಗೆ ಹೊಂದಿಕೊಳ್ಳಲು ಸಾಧ್ಯವೇ ಆಗದ ಮಟ್ಟ ಮುಟ್ಟಿದಾಗಲೂ ಅದರ ಅರಿವಾಗದೇ ಬೇಯಲು ಶುರುವಾಗುತ್ತದೆ ಮತ್ತು ಸತ್ತು ಹೋಗುತ್ತದೆ.

ಒಟ್ಟಿಗೇ 10-15 ರೂ.ಗಳಷ್ಟು ಪೆಟ್ರೋಲ್ ದರ ಏರಿಸದೇ, ವಾರಕ್ಕೆ 2 ರೂ.ಗಳಂತೆ ಏರಿಸಿದರೆ? ಜನರಿಗೆ ಅದರ ಅರಿವೇ ಆಗುವುದಿಲ್ಲ. ಈ ದಿನ ಮಧ್ಯರಾತ್ರಿಯಿಂದ 5 ರೂ. ಏರಿಕೆ ಆಗುತ್ತದೆ ಎಂದು ಗೊತ್ತಾದಾಗ ವಾಹನ ಸವಾರರು ಏನು ಮಾಡುತ್ತಾರೆ? ಹಿಂದಿನ ದಿನ ಸಂಜೆಯಿಂದಲೇ ಪೆಟ್ರೋಲ್ ಬಂಕಿನಲ್ಲಿ ನೂಕುನುಗ್ಗಲು ಉಂಟಾಗುತ್ತದೆ. ಆದಷ್ಟು ಬೇಗ ತಮ್ಮ ಬೈಕ್ ಅಥವಾ ಕಾರಿಗೆ ಫುಲ್ ಟ್ಯಾಂಕ್ ಮಾಡಿಸಿಕೊಂಡರೆ ಯಾರನ್ನೋ ಮಣಿಸಿದ ಹೆಮ್ಮೆಯಲ್ಲಿ ಆ ಮಧ್ಯರಾತ್ರಿ ಗಾಢನಿದ್ರೆ ಮಾಡುತ್ತಾರೆ. ಒಂದು ವೇಳೆ ಸಾಧ್ಯವಾಗದೇ ಹೋದರೆ ನಿದ್ದೆಯಲ್ಲಿ ಚಡಪಡಿಸಿ, ಪೆಟ್ರೋಲ್ ಬಂಕಿನ ನೂಕುನುಗ್ಗಲನ್ನು ಬಯ್ದುಕೊಳ್ಳುತ್ತಾ, ಮುಂದಿನ ಸಾರಿ ಹಾಗಾಗದಂತೆ ಎಚ್ಚರ ವಹಿಸಬೇಕೆಂದುಕೊಳ್ಳುತ್ತಾರೆ.

ಮೊದಲನೆಯದು ಸಾರ್ವಕಾಲಿಕ ಸತ್ಯವಿರಬಹುದಾದರೂ, ಎರಡನೆಯದು ಇತ್ತೀಚಿನ ವಿದ್ಯಮಾನ. ಖಾಸಗಿ ಹೋಟೆಲಿನಲ್ಲಿ ಇಡ್ಲಿಯ ಬೆಲೆ 50 ಪೈಸೆ ಹೆಚ್ಚಾಗಿದ್ದಕ್ಕೂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾರೀ ಪ್ರತಿಭಟನೆ ನಡೆಸಿದ ಉದಾಹರಣೆಗಳಿವೆ. ಕಾಲ ಬದಲಾಗಿದೆ. ಎಷ್ಟು ಬದಲಾಗಿದೆ ಎಂಬುದಕ್ಕೆ ಟ್ರಾಫಿಕ್ ನಿಯಮಗಳ ಉಲ್ಲಂಘನೆಯ ದಂಡದ ಏರಿಕೆಯೇ ನಿದರ್ಶನ.

ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿದ್ದ ದಂಡವನ್ನು 1000 ರೂ.ನಿಂದ 10,000 ರೂ.ಗಳಿಗೆ ಏರಿಸುವಾಗ ಸರ್ಕಾರದ ಅನಿಸಿಕೆ ಏನಿದ್ದಿರಬಹುದು? ಇದಕ್ಕೆ ಬಹಳ ವಿರೋಧ ಬರುವುದರಿಂದ ಅದನ್ನು ಅರ್ಧಕ್ಕೆ ಇಳಿಸಿದರೂ, ಶೇ.500ರಷ್ಟು ಏರಿಕೆಯಾಗುತ್ತದೆ. ಸಾಮಾನ್ಯವಾಗಿ ಇಂತಹ ದಂಡಗಳಿಂದ ಸರ್ಕಾರ ದೊಡ್ಡ ಆದಾಯವೇನೂ ಮಾಡುವುದಿಲ್ಲ. ಸರ್ವಾಧಿಕಾರಿ ಮನಸ್ಥಿತಿಯ ಆಳುವವರಿದ್ದಾಗ ಇಂತಹ ತೀವ್ರ ಹೆಚ್ಚಳವನ್ನು ಹೇರುತ್ತಾರಷ್ಟೇ. ಉಳಿದಂತೆ, ವಿರೋಧ ಬಂದ ಮೇಲೆ ಇಳಿಸಿದರೂ ಲಾಭವಾಗುವ ರೀತಿ ವಿವಿಧ ಶುಲ್ಕಗಳನ್ನು ಏರಿಸುವ ಒಂದು ಚಾಳಿ ಅಧಿಕಾರಶಾಹಿಯಲ್ಲಿದೆ.

ಈ ಸಾರಿಯೂ ಹಾಗೆಯೇ ಆಯಿತು. ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಹಲವು ಈ ಹೆಚ್ಚಳ ಮಾಡಲೇ ಇಲ್ಲ. ಹೆಚ್ಚಿಸಿ ನಂತರ ಶೇ.50ರಷ್ಟು ಗುಜರಾತ್ ಸರ್ಕಾರ ಇಳಿಸಿ ಸುಮ್ಮನಾಯಿತು. ಕರ್ನಾಟಕದಲ್ಲಿ ಹೆಚ್ಚಳದ ಕುರಿತು ಕೆಲವು ನಕಾರಾತ್ಮಕ ಪತ್ರಿಕಾ ವರದಿಗಳು ಬಂದವು, ಸಾಮಾಜಿಕ ಜಾಲತಾಣಗಳಲ್ಲಿ ಗೊಣಗಾಟ ನಡೆಯಿತು. ಸಮಸ್ಯೆ ಆಗಬಹುದೇನೋ ಎಂದು ಮುಖ್ಯಮಂತ್ರಿಗಳು ‘ಇದನ್ನು ವಾಪಸ್ ತೆಗೆದುಕೊಳ್ಳುತ್ತೇವೆ’ ಎಂದು ಘೋಷಿಸಿದರು. ಅದರ ನಂತರ ಇದುವರೆಗೂ ಶುಲ್ಕ ಹೆಚ್ಚಳವನ್ನು ವಾಪಸ್ಸೂ ತೆಗೆದುಕೊಂಡಿಲ್ಲ; ಇಳಿಸಿಯೂ ಇಲ್ಲ.

ಅಂದರೆ, ಶೇ.1000ದಷ್ಟು ಏರಿಸಿ, ಶೇ.500ಕ್ಕಿಳಿಸುವ ಅಗತ್ಯವೂ ಇಲ್ಲ! ಈ ಪ್ರಮಾಣಕ್ಕೆ ಜನರ ಹೊಂದಾಣಿಕೆ ಮನೋಭಾವ ಏರಿದೆ!! ಬಹುಶಃ ಹೀಗೇ ಇದ್ದರೆ, ಯಡಿಯೂರಪ್ಪನವರು ಸುಮ್ಮನಾಗುವ ಸಾಧ್ಯತೆಯೇ ಹೆಚ್ಚು. ಇದೇಕೆ ಹೀಗೆ ಎಂಬುದನ್ನು ಆಳವಾಗಿ ಪರಿಶೀಲಿಸಿ ನೋಡುವ ಅಗತ್ಯವಿದೆ.

ಮೇಲಿನ ಕಪ್ಪೆಯ ನಿದರ್ಶನ ಒಂದು ಸಾಧ್ಯತೆಯನ್ನು ನಮ್ಮ ಮುಂದಿಡುತ್ತದೆ. ಮತಧರ್ಮ ಮತ್ತು ಜಾತಿಗಳ ಅಮಲು (ಜಾತಿಯ ಅಮಲು ಮೇಲ್ಜಾತಿಗಳಲ್ಲಿ ಮಾತ್ರ ಇರುವುದಿಲ್ಲ; ಶೋಷಿತ ಸಮುದಾಯಕ್ಕೆ ಸೇರಿದ ಸಚಿವರೊಬ್ಬರು ಭ್ರಷ್ಟಾಚಾರ ಅಥವಾ ಜನವಿರೋಧಿ ನೀತಿ ತಂದರೆ, ಅಲ್ಲಿಯೂ ಸಮರ್ಥನೆ ಇದ್ದೇ ಇರುತ್ತದೆ) ಅನಸ್ತೇಷಿಯಾ ಥರ ಕೆಲಸ ಮಾಡುತ್ತಿದೆ ಎಂದು ಕೆಲವರು ಹೇಳುತ್ತಾರೆ.

ಯಾವುದಾದರೂ ಒಂದು ವಿಚಾರಕ್ಕೆ, ಸುದ್ದಿಗೆ, ವಿದ್ಯಮಾನಕ್ಕೆ ದೀರ್ಘಕಾಲ ಅಂಟಿಕೊಳ್ಳುವ ಗುಣವೂ ಇಲ್ಲವಾಗಿದೆ. ಎಲ್ಲರ ಗಮನದ ಅವಧಿ (attention span)ಯೂ ಕಡಿಮೆಯಾಗಿದೆ. ತುಸು ಹೆಚ್ಚು ಕಾಲ ಒಂದೇ ವಿಚಾರದ ಮೇಲೆ ಕೇಂದ್ರೀಕರಿಸುವುದು ಬೋರಿಂಗ್ ಆದ ಕೆಲಸ ಎಂಬ ಭಾವನೆ ಹೆಚ್ಚಾಗಿದೆ. ಹಾಗಾಗಿ ಏನೇ ನಡೆದರೂ ತಕ್ಷಣದಲ್ಲಿ ಮುಗಿಯಬೇಕು. ಪ್ರಜ್ಞಾವಂತರು, ಜೀವಪರ ಕಾಳಜಿಯುಳ್ಳವರೂ ಫೇಸ್‍ಬುಕ್‍ನ ಆತ್ಮರತಿ ಮತ್ತು ತಕ್ಷಣದ ಪ್ರತಿಕ್ರಿಯೆಯ ಜೋಶ್‍ನಲ್ಲಿ ಇರುವ ಶಕ್ತಿಯನ್ನೆಲ್ಲಾ ಕಳೆದುಕೊಂಡು ಸಮಾಧಾನ ಪಟ್ಟುಕೊಳ್ಳುತ್ತಾರೆ. ಪ್ರತಿ ವ್ಯಕ್ತಿಯೂ ಕೇವಲ ಬಿಡಿ ವ್ಯಕ್ತಿ ಮಾತ್ರ ಆಗಿಬಿಡಲು ಬೇಕಾದ ಪ್ರತ್ಯೇಕತೆಗಳು ಹಲವು ರೀತಿಯಲ್ಲಿ ಹಿಗ್ಗುತ್ತಿವೆ.

ಇವಿಷ್ಟು ಹೇಳಿದರೂ ಇಂದಿನ ನಿಸ್ತೇಜ, ನಿರ್ವೀರ್ಯ ಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವ ವಿವರಣೆ ಕೊಟ್ಟಂತಾಗುವುದಿಲ್ಲ. ಇಡೀ ಸಮುದಾಯಗಳು ಇಂತಹ ಸ್ಥಿತಿಗೆ ಇಳಿದಿರುವುದನ್ನು ಕಂಡು ರೋಸಿಹೋದ ಸಂವೇದನಾಶೀಲರು ಹತಾಶೆಯಿಂದ ‘ಪರಿಸ್ಥಿತಿ ಇನ್ನಷ್ಟು ಭೀಕರವಾಗಲಿ, ಆಗ ಎಲ್ಲರಿಗೂ ಅರ್ಥವಾಗುತ್ತದೆ’ ಎಂದು ಹೇಳುವುದನ್ನು ನೋಡುತ್ತೇವೆ. ಇಂತಹ ಹತಾಶೆ ಇಲ್ಲದಂತಾಗಿ ಪರಿವರ್ತನಶೀಲ ಪ್ರಕ್ರಿಯೆಗಳಿಗೆ ದಾರಿ ಮಾಡಿಕೊಡಲಾದರೂ ಸರಿಯಾದ ವಿಶ್ಲೇಷಣೆ ಮತ್ತು ಬದಲಾವಣೆಯ ವಿಧಾನಗಳ ಶೋಧನೆ ಅಗತ್ಯವಿದೆ.

ಅಂತಹ ವಿಶ್ಲೇಷಣೆಗೆ ತೊಡಗುವವರು ಎರಡು ಅಂಶಗಳನ್ನು ನಿರ್ಲಕ್ಷಿಸಲಾಗದು. ಒಂದು, ಇಡಿ ಇಡೀ ಸಮುದಾಯವೇ ಆತ್ಮಸಾಕ್ಷಿ ಕಳೆದುಕೊಂಡ, ಕೊಳೆತ ಅಥವಾ ಸಂವೇದನಾಶೂನ್ಯ ಸ್ಥಿತಿಯಲ್ಲಿ ದೀರ್ಘಕಾಲವಿದ್ದ ಅವಧಿಗಳು ಇತಿಹಾಸದಲ್ಲಿ ಸಾಕಷ್ಟಿದ್ದವು. ಇದೇ ಮೊದಲೂ ಅಲ್ಲ, ಬಹುಶಃ ಕೊನೆಯೂ ಅಲ್ಲ. ಅಂತಹ ಸ್ಥಿತಿಗಳು ದೀರ್ಘವಿರಬಹುದಾದರೂ ಶಾಶ್ವತವಾಗಿ ಎಲ್ಲೂ ಉಳಿದಿಲ್ಲ. ಎರಡು, ಈಗಿನ ವಿದ್ಯಮಾನದ ಸ್ವರೂಪ ಹಾಗೂ ಅದನ್ನು ಬದಲಿಸಬಲ್ಲ ಪ್ರಕ್ರಿಯೆಯು ಅನನ್ಯ. ಏಕೆಂದರೆ 21ನೇ ಶತಮಾನ ಈ ಭುವಿಯ ಮೇಲೆ ಇದೇ ಮೊದಲ ಸಾರಿ ಬಂದಿದೆ; ಇಂತಹ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಸಂಕೀರ್ಣತೆ ಈಗ ಮಾತ್ರ ಇದ್ದದ್ದು. ಹಾಗಾಗಿ ಇದನ್ನು ಬದಲಿಸುವ ವಿಧಾನವನ್ನು ಹೊಸದಾಗಿಯೇ ಕಂಡುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರಾವಳಿಯಲ್ಲಿ ಒಂದು ಬಹಳ ಹಳೆಯ ಮಾತಿದೆ. ಮಲಗಿರುವ ಕೋಣಕ್ಕೆ ಬೆತ್ತದಲ್ಲಿ ಒಂದೇಟು ಕೊಟ್ಟರೆ ದಪ್ಪ ಚರ್ಮದ ಅದಕ್ಕೆ ಗೊತ್ತೇ ಆಗುವುದಿಲ್ಲ. ಎರಡನೇ ಏಟಿಗೆ ಕಣ್ಣು ತೆರೆಯುತ್ತದೆ. ಮೂರನೇ ಏಟಿಗೆ ಏನದು ಸದ್ದು ಎಂದು ಯೋಚಿಸುತ್ತದೆ. ನಾಲ್ಕನೇ ಏಟಿಗೆ- ಹೋ! ಯಾರಿಗೋ ಹೊಡೆಯುತ್ತಿದ್ದಾರೆ ಎಂದು ಯೋಚಿಸುತ್ತದೆ. ಐದನೇ ಏಟಿಗೆ ನನಗೇ ಹೊಡೆಯುತ್ತಿರುವುದು ಎಂದು ಗೊತ್ತಾಗಿ ಮೆಲ್ಲಗೆ ಎದ್ದುನಿಲ್ಲುತ್ತದೆ. ನಮ್ಮ ಜನರು ಐದು ಏಟುಗಳ ಬಳಿಕ, ಅಂದರೆ ಮುಂದಿನ ಚುನಾವಣೆ ಹೊತ್ತಿಗಾದರೂ, ತಮಗೆ ಬೀಳುತ್ತಿರುವ ಏಟುಗಳನ್ನು ತಿಳಿದುಕೊಂಡು ಎದ್ದೇಳಲಿ!

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...