Homeಅಂಕಣಗಳುನಾವು ಮರೆಯಲಾಗದ ಇತಿಹಾಸ ಹಾಗೂ ವರ್ತಮಾನದ ಎರಡು ಸಂಗತಿಗಳು..

ನಾವು ಮರೆಯಲಾಗದ ಇತಿಹಾಸ ಹಾಗೂ ವರ್ತಮಾನದ ಎರಡು ಸಂಗತಿಗಳು..

- Advertisement -
- Advertisement -

| ಡಾ. ವಾಸು ಎಚ್.ವಿ |

ಬಹುಶಃ ನೀವು ಇದನ್ನು ಕೇಳಿರಬಹುದು. ನಿಮ್ಮ ಕೈಯ್ಯಲ್ಲಿ ಒಂದು ಜೀವಂತ ಕಪ್ಪೆಯನ್ನು ಹಿಡಿದು ಅದನ್ನು ಬಿಸಿ ಬಿಸಿಯಾದ ನೀರಿನಲ್ಲಿ ಹಾಕಿದರೆ ಕಪ್ಪೆ ಏನು ಮಾಡುತ್ತದೆ? ಕೂಡಲೇ ಜಿಗಿದು ಹೊರ ಹಾರುತ್ತದೆ. ಆದರೆ, ಅದೇ ಕಪ್ಪೆಯನ್ನು ತಣ್ಣೀರಿನಲ್ಲಿ ಇಟ್ಟು, ನಿಧಾನಕ್ಕೆ ಕೆಳಗಿನಿಂದ ಬೆಂಕಿ ಹಾಕಿ ಉರಿಸುತ್ತಾ ಹೋದರೆ? ಕಪ್ಪೆಯು ಸ್ವಲ್ಪ ಸ್ವಲ್ಪವೇ ಬಿಸಿಯಾಗುತ್ತಿರುವ ನೀರಿನ ಉಷ್ಣತೆಗೆ ಹೊಂದಿಕೊಳ್ಳುತ್ತಾ ಹೋಗುತ್ತದೆ. ಕಡೆಗೆ ಹೊಂದಿಕೊಳ್ಳಲು ಸಾಧ್ಯವೇ ಆಗದ ಮಟ್ಟ ಮುಟ್ಟಿದಾಗಲೂ ಅದರ ಅರಿವಾಗದೇ ಬೇಯಲು ಶುರುವಾಗುತ್ತದೆ ಮತ್ತು ಸತ್ತು ಹೋಗುತ್ತದೆ.

ಒಟ್ಟಿಗೇ 10-15 ರೂ.ಗಳಷ್ಟು ಪೆಟ್ರೋಲ್ ದರ ಏರಿಸದೇ, ವಾರಕ್ಕೆ 2 ರೂ.ಗಳಂತೆ ಏರಿಸಿದರೆ? ಜನರಿಗೆ ಅದರ ಅರಿವೇ ಆಗುವುದಿಲ್ಲ. ಈ ದಿನ ಮಧ್ಯರಾತ್ರಿಯಿಂದ 5 ರೂ. ಏರಿಕೆ ಆಗುತ್ತದೆ ಎಂದು ಗೊತ್ತಾದಾಗ ವಾಹನ ಸವಾರರು ಏನು ಮಾಡುತ್ತಾರೆ? ಹಿಂದಿನ ದಿನ ಸಂಜೆಯಿಂದಲೇ ಪೆಟ್ರೋಲ್ ಬಂಕಿನಲ್ಲಿ ನೂಕುನುಗ್ಗಲು ಉಂಟಾಗುತ್ತದೆ. ಆದಷ್ಟು ಬೇಗ ತಮ್ಮ ಬೈಕ್ ಅಥವಾ ಕಾರಿಗೆ ಫುಲ್ ಟ್ಯಾಂಕ್ ಮಾಡಿಸಿಕೊಂಡರೆ ಯಾರನ್ನೋ ಮಣಿಸಿದ ಹೆಮ್ಮೆಯಲ್ಲಿ ಆ ಮಧ್ಯರಾತ್ರಿ ಗಾಢನಿದ್ರೆ ಮಾಡುತ್ತಾರೆ. ಒಂದು ವೇಳೆ ಸಾಧ್ಯವಾಗದೇ ಹೋದರೆ ನಿದ್ದೆಯಲ್ಲಿ ಚಡಪಡಿಸಿ, ಪೆಟ್ರೋಲ್ ಬಂಕಿನ ನೂಕುನುಗ್ಗಲನ್ನು ಬಯ್ದುಕೊಳ್ಳುತ್ತಾ, ಮುಂದಿನ ಸಾರಿ ಹಾಗಾಗದಂತೆ ಎಚ್ಚರ ವಹಿಸಬೇಕೆಂದುಕೊಳ್ಳುತ್ತಾರೆ.

ಮೊದಲನೆಯದು ಸಾರ್ವಕಾಲಿಕ ಸತ್ಯವಿರಬಹುದಾದರೂ, ಎರಡನೆಯದು ಇತ್ತೀಚಿನ ವಿದ್ಯಮಾನ. ಖಾಸಗಿ ಹೋಟೆಲಿನಲ್ಲಿ ಇಡ್ಲಿಯ ಬೆಲೆ 50 ಪೈಸೆ ಹೆಚ್ಚಾಗಿದ್ದಕ್ಕೂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾರೀ ಪ್ರತಿಭಟನೆ ನಡೆಸಿದ ಉದಾಹರಣೆಗಳಿವೆ. ಕಾಲ ಬದಲಾಗಿದೆ. ಎಷ್ಟು ಬದಲಾಗಿದೆ ಎಂಬುದಕ್ಕೆ ಟ್ರಾಫಿಕ್ ನಿಯಮಗಳ ಉಲ್ಲಂಘನೆಯ ದಂಡದ ಏರಿಕೆಯೇ ನಿದರ್ಶನ.

ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿದ್ದ ದಂಡವನ್ನು 1000 ರೂ.ನಿಂದ 10,000 ರೂ.ಗಳಿಗೆ ಏರಿಸುವಾಗ ಸರ್ಕಾರದ ಅನಿಸಿಕೆ ಏನಿದ್ದಿರಬಹುದು? ಇದಕ್ಕೆ ಬಹಳ ವಿರೋಧ ಬರುವುದರಿಂದ ಅದನ್ನು ಅರ್ಧಕ್ಕೆ ಇಳಿಸಿದರೂ, ಶೇ.500ರಷ್ಟು ಏರಿಕೆಯಾಗುತ್ತದೆ. ಸಾಮಾನ್ಯವಾಗಿ ಇಂತಹ ದಂಡಗಳಿಂದ ಸರ್ಕಾರ ದೊಡ್ಡ ಆದಾಯವೇನೂ ಮಾಡುವುದಿಲ್ಲ. ಸರ್ವಾಧಿಕಾರಿ ಮನಸ್ಥಿತಿಯ ಆಳುವವರಿದ್ದಾಗ ಇಂತಹ ತೀವ್ರ ಹೆಚ್ಚಳವನ್ನು ಹೇರುತ್ತಾರಷ್ಟೇ. ಉಳಿದಂತೆ, ವಿರೋಧ ಬಂದ ಮೇಲೆ ಇಳಿಸಿದರೂ ಲಾಭವಾಗುವ ರೀತಿ ವಿವಿಧ ಶುಲ್ಕಗಳನ್ನು ಏರಿಸುವ ಒಂದು ಚಾಳಿ ಅಧಿಕಾರಶಾಹಿಯಲ್ಲಿದೆ.

ಈ ಸಾರಿಯೂ ಹಾಗೆಯೇ ಆಯಿತು. ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಹಲವು ಈ ಹೆಚ್ಚಳ ಮಾಡಲೇ ಇಲ್ಲ. ಹೆಚ್ಚಿಸಿ ನಂತರ ಶೇ.50ರಷ್ಟು ಗುಜರಾತ್ ಸರ್ಕಾರ ಇಳಿಸಿ ಸುಮ್ಮನಾಯಿತು. ಕರ್ನಾಟಕದಲ್ಲಿ ಹೆಚ್ಚಳದ ಕುರಿತು ಕೆಲವು ನಕಾರಾತ್ಮಕ ಪತ್ರಿಕಾ ವರದಿಗಳು ಬಂದವು, ಸಾಮಾಜಿಕ ಜಾಲತಾಣಗಳಲ್ಲಿ ಗೊಣಗಾಟ ನಡೆಯಿತು. ಸಮಸ್ಯೆ ಆಗಬಹುದೇನೋ ಎಂದು ಮುಖ್ಯಮಂತ್ರಿಗಳು ‘ಇದನ್ನು ವಾಪಸ್ ತೆಗೆದುಕೊಳ್ಳುತ್ತೇವೆ’ ಎಂದು ಘೋಷಿಸಿದರು. ಅದರ ನಂತರ ಇದುವರೆಗೂ ಶುಲ್ಕ ಹೆಚ್ಚಳವನ್ನು ವಾಪಸ್ಸೂ ತೆಗೆದುಕೊಂಡಿಲ್ಲ; ಇಳಿಸಿಯೂ ಇಲ್ಲ.

ಅಂದರೆ, ಶೇ.1000ದಷ್ಟು ಏರಿಸಿ, ಶೇ.500ಕ್ಕಿಳಿಸುವ ಅಗತ್ಯವೂ ಇಲ್ಲ! ಈ ಪ್ರಮಾಣಕ್ಕೆ ಜನರ ಹೊಂದಾಣಿಕೆ ಮನೋಭಾವ ಏರಿದೆ!! ಬಹುಶಃ ಹೀಗೇ ಇದ್ದರೆ, ಯಡಿಯೂರಪ್ಪನವರು ಸುಮ್ಮನಾಗುವ ಸಾಧ್ಯತೆಯೇ ಹೆಚ್ಚು. ಇದೇಕೆ ಹೀಗೆ ಎಂಬುದನ್ನು ಆಳವಾಗಿ ಪರಿಶೀಲಿಸಿ ನೋಡುವ ಅಗತ್ಯವಿದೆ.

ಮೇಲಿನ ಕಪ್ಪೆಯ ನಿದರ್ಶನ ಒಂದು ಸಾಧ್ಯತೆಯನ್ನು ನಮ್ಮ ಮುಂದಿಡುತ್ತದೆ. ಮತಧರ್ಮ ಮತ್ತು ಜಾತಿಗಳ ಅಮಲು (ಜಾತಿಯ ಅಮಲು ಮೇಲ್ಜಾತಿಗಳಲ್ಲಿ ಮಾತ್ರ ಇರುವುದಿಲ್ಲ; ಶೋಷಿತ ಸಮುದಾಯಕ್ಕೆ ಸೇರಿದ ಸಚಿವರೊಬ್ಬರು ಭ್ರಷ್ಟಾಚಾರ ಅಥವಾ ಜನವಿರೋಧಿ ನೀತಿ ತಂದರೆ, ಅಲ್ಲಿಯೂ ಸಮರ್ಥನೆ ಇದ್ದೇ ಇರುತ್ತದೆ) ಅನಸ್ತೇಷಿಯಾ ಥರ ಕೆಲಸ ಮಾಡುತ್ತಿದೆ ಎಂದು ಕೆಲವರು ಹೇಳುತ್ತಾರೆ.

ಯಾವುದಾದರೂ ಒಂದು ವಿಚಾರಕ್ಕೆ, ಸುದ್ದಿಗೆ, ವಿದ್ಯಮಾನಕ್ಕೆ ದೀರ್ಘಕಾಲ ಅಂಟಿಕೊಳ್ಳುವ ಗುಣವೂ ಇಲ್ಲವಾಗಿದೆ. ಎಲ್ಲರ ಗಮನದ ಅವಧಿ (attention span)ಯೂ ಕಡಿಮೆಯಾಗಿದೆ. ತುಸು ಹೆಚ್ಚು ಕಾಲ ಒಂದೇ ವಿಚಾರದ ಮೇಲೆ ಕೇಂದ್ರೀಕರಿಸುವುದು ಬೋರಿಂಗ್ ಆದ ಕೆಲಸ ಎಂಬ ಭಾವನೆ ಹೆಚ್ಚಾಗಿದೆ. ಹಾಗಾಗಿ ಏನೇ ನಡೆದರೂ ತಕ್ಷಣದಲ್ಲಿ ಮುಗಿಯಬೇಕು. ಪ್ರಜ್ಞಾವಂತರು, ಜೀವಪರ ಕಾಳಜಿಯುಳ್ಳವರೂ ಫೇಸ್‍ಬುಕ್‍ನ ಆತ್ಮರತಿ ಮತ್ತು ತಕ್ಷಣದ ಪ್ರತಿಕ್ರಿಯೆಯ ಜೋಶ್‍ನಲ್ಲಿ ಇರುವ ಶಕ್ತಿಯನ್ನೆಲ್ಲಾ ಕಳೆದುಕೊಂಡು ಸಮಾಧಾನ ಪಟ್ಟುಕೊಳ್ಳುತ್ತಾರೆ. ಪ್ರತಿ ವ್ಯಕ್ತಿಯೂ ಕೇವಲ ಬಿಡಿ ವ್ಯಕ್ತಿ ಮಾತ್ರ ಆಗಿಬಿಡಲು ಬೇಕಾದ ಪ್ರತ್ಯೇಕತೆಗಳು ಹಲವು ರೀತಿಯಲ್ಲಿ ಹಿಗ್ಗುತ್ತಿವೆ.

ಇವಿಷ್ಟು ಹೇಳಿದರೂ ಇಂದಿನ ನಿಸ್ತೇಜ, ನಿರ್ವೀರ್ಯ ಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವ ವಿವರಣೆ ಕೊಟ್ಟಂತಾಗುವುದಿಲ್ಲ. ಇಡೀ ಸಮುದಾಯಗಳು ಇಂತಹ ಸ್ಥಿತಿಗೆ ಇಳಿದಿರುವುದನ್ನು ಕಂಡು ರೋಸಿಹೋದ ಸಂವೇದನಾಶೀಲರು ಹತಾಶೆಯಿಂದ ‘ಪರಿಸ್ಥಿತಿ ಇನ್ನಷ್ಟು ಭೀಕರವಾಗಲಿ, ಆಗ ಎಲ್ಲರಿಗೂ ಅರ್ಥವಾಗುತ್ತದೆ’ ಎಂದು ಹೇಳುವುದನ್ನು ನೋಡುತ್ತೇವೆ. ಇಂತಹ ಹತಾಶೆ ಇಲ್ಲದಂತಾಗಿ ಪರಿವರ್ತನಶೀಲ ಪ್ರಕ್ರಿಯೆಗಳಿಗೆ ದಾರಿ ಮಾಡಿಕೊಡಲಾದರೂ ಸರಿಯಾದ ವಿಶ್ಲೇಷಣೆ ಮತ್ತು ಬದಲಾವಣೆಯ ವಿಧಾನಗಳ ಶೋಧನೆ ಅಗತ್ಯವಿದೆ.

ಅಂತಹ ವಿಶ್ಲೇಷಣೆಗೆ ತೊಡಗುವವರು ಎರಡು ಅಂಶಗಳನ್ನು ನಿರ್ಲಕ್ಷಿಸಲಾಗದು. ಒಂದು, ಇಡಿ ಇಡೀ ಸಮುದಾಯವೇ ಆತ್ಮಸಾಕ್ಷಿ ಕಳೆದುಕೊಂಡ, ಕೊಳೆತ ಅಥವಾ ಸಂವೇದನಾಶೂನ್ಯ ಸ್ಥಿತಿಯಲ್ಲಿ ದೀರ್ಘಕಾಲವಿದ್ದ ಅವಧಿಗಳು ಇತಿಹಾಸದಲ್ಲಿ ಸಾಕಷ್ಟಿದ್ದವು. ಇದೇ ಮೊದಲೂ ಅಲ್ಲ, ಬಹುಶಃ ಕೊನೆಯೂ ಅಲ್ಲ. ಅಂತಹ ಸ್ಥಿತಿಗಳು ದೀರ್ಘವಿರಬಹುದಾದರೂ ಶಾಶ್ವತವಾಗಿ ಎಲ್ಲೂ ಉಳಿದಿಲ್ಲ. ಎರಡು, ಈಗಿನ ವಿದ್ಯಮಾನದ ಸ್ವರೂಪ ಹಾಗೂ ಅದನ್ನು ಬದಲಿಸಬಲ್ಲ ಪ್ರಕ್ರಿಯೆಯು ಅನನ್ಯ. ಏಕೆಂದರೆ 21ನೇ ಶತಮಾನ ಈ ಭುವಿಯ ಮೇಲೆ ಇದೇ ಮೊದಲ ಸಾರಿ ಬಂದಿದೆ; ಇಂತಹ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಸಂಕೀರ್ಣತೆ ಈಗ ಮಾತ್ರ ಇದ್ದದ್ದು. ಹಾಗಾಗಿ ಇದನ್ನು ಬದಲಿಸುವ ವಿಧಾನವನ್ನು ಹೊಸದಾಗಿಯೇ ಕಂಡುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರಾವಳಿಯಲ್ಲಿ ಒಂದು ಬಹಳ ಹಳೆಯ ಮಾತಿದೆ. ಮಲಗಿರುವ ಕೋಣಕ್ಕೆ ಬೆತ್ತದಲ್ಲಿ ಒಂದೇಟು ಕೊಟ್ಟರೆ ದಪ್ಪ ಚರ್ಮದ ಅದಕ್ಕೆ ಗೊತ್ತೇ ಆಗುವುದಿಲ್ಲ. ಎರಡನೇ ಏಟಿಗೆ ಕಣ್ಣು ತೆರೆಯುತ್ತದೆ. ಮೂರನೇ ಏಟಿಗೆ ಏನದು ಸದ್ದು ಎಂದು ಯೋಚಿಸುತ್ತದೆ. ನಾಲ್ಕನೇ ಏಟಿಗೆ- ಹೋ! ಯಾರಿಗೋ ಹೊಡೆಯುತ್ತಿದ್ದಾರೆ ಎಂದು ಯೋಚಿಸುತ್ತದೆ. ಐದನೇ ಏಟಿಗೆ ನನಗೇ ಹೊಡೆಯುತ್ತಿರುವುದು ಎಂದು ಗೊತ್ತಾಗಿ ಮೆಲ್ಲಗೆ ಎದ್ದುನಿಲ್ಲುತ್ತದೆ. ನಮ್ಮ ಜನರು ಐದು ಏಟುಗಳ ಬಳಿಕ, ಅಂದರೆ ಮುಂದಿನ ಚುನಾವಣೆ ಹೊತ್ತಿಗಾದರೂ, ತಮಗೆ ಬೀಳುತ್ತಿರುವ ಏಟುಗಳನ್ನು ತಿಳಿದುಕೊಂಡು ಎದ್ದೇಳಲಿ!

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...