Homeಅಂತರಾಷ್ಟ್ರೀಯಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಆಯ್ಕೆ

ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಆಯ್ಕೆ

- Advertisement -
- Advertisement -

ಅಕ್ರಮಣಕಾರಿ ಆಟದಿಂದ ಹೆಸರಾಗಿರುವ ಸ್ಟ್ರಾಂಗ್ ಕ್ರಿಕೆಟರ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಬಿಸಿಸಿಐನ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬಂಗಾಳದ ಕ್ರಿಕೆಟರ್ ಸೌರವ್ ಗಂಗೂಲಿ ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಬಿಸಿಸಿಐನ ಪೂರ್ಣಾವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ನಲ್ಲಿ ಬಿಸಿಸಿಐನ ಅಧ್ಯಕ್ಷ ಸ್ಥಾನ ಅಲಂಕರಿಸಿದ ಎರಡನೇ ಭಾರತೀಯ ಕ್ರಿಕೆಟರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಸೌರವ್ ಗಂಗೂಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ನೂತನ ಶೈಲಿಗೆ ನಾಂದಿ ಹಾಡಿದ್ದರು. ಬಿಸಿಸಿಐನ ಅಧ್ಯಕ್ಷ ಗಾದಿ ರೇಸ್ ನಲ್ಲಿ ಭಾರತದ ಮಾಜಿ ಕ್ರಿಕೆಟಿಗ, ಕರ್ನಾಟಕದ ಬ್ರಿಜೇಶ್ ಪಟೇಲ್ ಕೂಡ ಇದ್ದರು. ಆದರೆ ಅಂತಿಮವಾಗಿ ಸೌರವ್ ಗಂಗೂಲಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.

ಬಿಸಿಸಿಐನ ಅಧ್ಯಕ್ಷರಾಗಿ ಅವಿರೋಧವಾಗಿ ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಆಯ್ಕೆಯಾದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇದರ ಜತೆಗೆ ನೂತನ ಖಜಾಂಚಿಯಾಗಿ ಅರುಣ್ ಧುಮಲ್ ನೇಮಕಗೊಂಡಿದ್ದಾರೆ.

ಬಿಸಿಸಿಐ ವಿವಿಧ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿತ್ತು. ಆದರೆ ಬಿಸಿಸಿಐ ಸ್ಥಾನಕ್ಕಾಗಿ ಸಾಕಷ್ಟು ಲಾಬಿ ನಡೆದ ಹಿನ್ನೆಲೆ ಚುನಾವಣೆ ನಡೆಯದೆಯೇ, ಅವಿರೋಧವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಬ್ರಿಜೇಶ್ ಕೂಡ ಪೈಪೋಟಿ ನಡೆಸಿದ್ದರು. ಈ ಮಧ್ಯೆ 2021ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರ ಪ್ರಚಾರ  ನಡೆಸುವ ವಿಚಾರವಾಗಿ ಸೌರವ್ ಗಂಗೂಲಿ ಒಪ್ಪಿಗೆ ಸೂಚಿಸಿರಲಿಲ್ಲ. ಹೀಗಾಗಿ ಬೇರೆ ಅಭ್ಯರ್ಥಿ ಹುಡುಕಾಟ ನಡೆದಿತ್ತು. ಆದರೆ ಬೇರೆ ಭಾಗಗಳಿಂದ ಕೇಳಿ ಬಂದ ವಿರೋಧದಿಂದ ಹೈಡ್ರಾಮಾ ನಡೆದಿತ್ತು. ಇದೆಲ್ಲದರ ನಂತರ ಈಗ ಸೌರವ್ ಗಂಗೂಲಿ ಬಿಸಿಸಿಐನ ನೂರನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಿಸಿಸಿಐ ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ವಿಚಾರಕ್ಕೆ ಸೌರವ್ ಗಂಗೂಲಿ ಸಂತಸ ವ್ಯಕ್ತಪಡಿಸಿದರು. ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಕ್ಕೆ ಖುಷಿಯಾಗಿದೆ. ಯಾವುದೋ ವಿಶೇಷ ಮತ್ತು ಉತ್ತಮ ಕೆಲಸ ಮಾಡಲು ಬಿಸಿಸಿಐ ಅವಕಾಶ ಕಲ್ಪಿಸಿದೆ. ನನಗೆ ಬಿಸಿಸಿಐ ಬೃಹತ್ ಜವಾಬ್ದಾರಿ ನೀಡಿದೆ. ಬಿಸಿಸಿಐ ಅಧ್ಯಕ್ಷ ಸ್ಥಾನ ನಿಭಾಯಿಸುವುದು ಒಂದು ಸವಾಲಿನ ಕೆಲಸ ಎಂದು ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಮೊದಲು ಬಿಸಿಸಿಐನ ಪೂರ್ಣಾವಧಿಗೆ ಅಧ್ಯಕ್ಷರಾಗಿ ಭಾರತ ತಂಡದ ಕ್ಯಾಪ್ಟನ್ ಮಹಾರಾಜಕುಮಾರ್ ವಿಜಿಯಾನಗ್ರಾಮ್ ಅಥವಾ ವಿಜ್ಜಿ 1954ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕೊಂಡಿದ್ದರು. ಅವರ ನಂತರ ಬಿಸಿಸಿಐ ಅಧ್ಯಕ್ಷರಾಗಿ ಭಾರತೀಯ ಕ್ರಿಕೆಟಿಗರು ಆಯ್ಕೆಯಾಗಿರಲಿಲ್ಲ. ಭಾರತೀಯ ಲೆಜೆಂಡ್ ಕ್ರಿಕೆಟಿಗ ಸುನೀಲ್ ಗವಾಸ್ಕರ್ 2014ರಲ್ಲಿ ಮಧ್ಯಂತರ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಅವರನ್ನು ಬಿಸಿಸಿಐ ಪೂರ್ಣಾವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಿಲ್ಲ.

ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಸಂಸ್ಕೃತಿ ಹುಟ್ಟುಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತದ ಹೊರಗೆ ಟೆಸ್ಟ್ ಕ್ರಿಕೆಟ್ ಆಡಿದ ರೀತಿಯ ಬದಲಾವಣೆಗೆ ಕಾರಣರಾಗಿದ್ದರು. 2003ರಲ್ಲಿ ಐಸಿಸಿ ವರ್ಲ್ಡ್ ಕಪ್ ಫೈನಲ್ ತಲುಪಲು ಭಾರತದ ತಂಡಕ್ಕೆ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು. ಯುವರಾಜ್ ಸಿಂಗ್, ಜಹೀರ್ ಖಾನ್, ವೀರೇಂದ್ರ ಸೆಹ್ವಾಗ್, ಎಂ.ಎಸ್.ಧೋನಿ ಸೇರಿದಂತೆ ಅನೇಕ ಯುವ ಆಟಗಾರರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದ್ದರು. ಗಂಗೂಲಿ 2015ರಿಂದ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಸಿಸಿಐ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೌರವ್ ಗಂಗೂಲಿಯವರಿಗೆ ಗಣ್ಯರು ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ಇಲ್ಲಿಯವರೆಗೆ ಆಯ್ಕೆಯಾದ ಬಿಸಿಸಿಐ ಅಧ್ಯಕ್ಷರ ಪಟ್ಟಿ ಈ ಕೆಳಗಿನಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...