Homeಸಾಮಾಜಿಕಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

ಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

- Advertisement -
- Advertisement -

ಕಡೆಗೂ ಎಚ್ಚೆತ್ತುಕೊಂಡ ಫೇಸ್‍ಬುಕ್ಕು ಕೆಟ್ಟದೊಂದು ಪುಟಕ್ಕೆ ಫುಲ್‍ಸ್ಟಾಪ್ ಇಟ್ಟಿದೆ. ಅದು `ಪೋಸ್ಟ್‍ಕಾರ್ಡ್’! ಮಹೇಶ್ ವಿಕ್ರಮ್ ಹೆಗ್ಡೆ ಎಂಬ ಆರೆಸ್ಸೆಸ್ ಮಾಣಿ ನಡೆಸುತ್ತಿದ್ದ ಫೇಕ್ ನ್ಯೂಸ್‍ಗಳ ಸುಳ್ಳಿನ ಫ್ಯಾಕ್ಟರಿಯಂತಿದ್ದ ಅದು ಬಿತ್ತರಿಸುತ್ತಿದುದ್ದೆಲ್ಲ ಕೋಮು ಪ್ರಚೋದಕ ಸುಳ್ಳುಗಳನ್ನು. ಸಮಾಜದ ಸ್ವಾಸ್ಥ್ಯ ಕದಡುವ, ಇದೇ ಕಾರಣಕ್ಕೆ ಇತ್ತೀಚೆಗಷ್ಟೇ ಸೈಬರ್ ಕ್ರೈಮ್ ಪೊಲೀಸರು ಮಹೇಶ್ ವಿಕ್ರಂ ಹೆಗ್ಡೆಯನ್ನು ಅರೆಸ್ಟ್ ಮಾಡಿ ಜೈಲಿಗೂ ಗದುಮಿದ್ದರು. ಈಗ ಎಚ್ಚೆತ್ತುಕೊಂಡಿರುವ ಫೇಸ್‍ಬುಕ್ ಕೋಮುಕ್ರಿಮಿಯಿಂದ ತನಗೆ ಅಂಟಬಹುದಾದ ಕಳಂಕವನ್ನು ತೊಳೆದುಕೊಳ್ಳಲು ಆತನ ಪೋಸ್ಟ್‍ಕಾರ್ಡ್ ನ್ಯೂಸ್ ಫೇಸ್‍ಬುಕ್ ಪೇಜನ್ನು ರದ್ದು ಮಾಡಿ ಮಾನಸ್ಥ ಮನುಷ್ಯರ ಕೊಂಚ ನಿಟ್ಟುಸಿರುವ ಬಿಡುವಂತೆ ಮಾಡಿದೆ.
ಅಸಲಿಗೆ, ಬಿಜೆಪಿ ಮತ್ತು ಸಂಘ ಪರಿವೆಂದರೇನೆ ಪೇಕ್‍ನ್ಯೂಸ್‍ಗಳ ಪಿತೃಸ್ಥಾನಗಳಂತೆ ಎಂಬ ಆರೋಪವಿದೆ. ಅದನ್ನು ನಿಜ ಮಾಡುವಂತೆಯೇ ಅವರ ವರ್ತನೆಗಳಿರೋದು ದುರಾದೃಷ್ಟ. ರಾಜಕೀಯ ದುರುದ್ದೇಶದಿಂದ ಸೃಷ್ಟಿಸಿ, ಹರಿದಾಡಿಸಲ್ಪಟ್ಟ ಫೇಕ್ ನ್ಯೂಸ್‍ಗಳು ಜನರ ನೆಮ್ಮದಿಯನ್ನೇ ಹಾಳುಗೆಡವುತ್ತಿರೋದು ಈ ಸಂದರ್ಭದ ದುರಂತ. ಕನ್ನಡದ ವಾತಾವರಣದ ಮಟ್ಟಿಗೆ ಅಂತಹ ಸುದ್ದಿಗಳಿಗೆಲ್ಲ ತವರುಮನೆಯಂತಿದ್ದಿದ್ದು ಈ ಪೋಸ್ಟ್‍ಕಾರ್ಡ್ ವೆಬ್‍ಸೈಟು ಮತ್ತದರ ಫೇಸ್‍ಬುಕ್ ಪೇಜು!
ಮಹೇಶ್ ವಿಕ್ರಮ್ ಹೆಗ್ಡೆಯ ಈ ಪೇಜ್‍ನಲ್ಲಿ ಮುಸ್ಲಿಂ ಸಮುದಾಯದ ವಿರುದ್ದ ಹಿಂದೂತ್ವದ ಕೋಮುಭಾವನೆ ಬಿತ್ತುವಂತ ಸುದ್ದಿಗಳದ್ದೇ ಕಾರುಬಾರು. ರಾಣಿ ಚೆನ್ನಮ್ಮ ಮತ್ತು ಒನಕೆ ಓಬವ್ವರ ಬಗ್ಗೆ ಅಶ್ಲೀಲ ಪೋಸ್ಟ್ ಹಾಕಿದ್ದ ಈತ, ಮಾರ್ಚ್ 18ರಂದು ಆಕ್ಸಿಡೆಂಟ್‍ನಲ್ಲಿ ಮರಣ ಹೊಂದಿದ್ದ ಜೈನ ಸನ್ಯಾಸಿಯನ್ನು ಮುಸ್ಲಿಂ ಯುವಕರು ಕೊಲೆ ಮಾಡಿದ್ದಾರೆಂದು ತನ್ನ ಪೋಸ್ಟ್‍ಕಾರ್ಡ್ ಪೇಜ್‍ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ. ಈ ಸುಳ್ಳನ್ನು ಆಧಾರವಾಗಿಟ್ಟುಕೊಂಡೇ ಮಾರ್ಚ್ 29ರಂದು ಸೈಬರ್ ಕ್ರೈಮ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯಿದೆ 66 ಮತ್ತು ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಅರೆಸ್ಟ್ ಮಾಡಿ, ಸಿಲವರ್ ತಟ್ಟೆಯಲ್ಲಿ ಜೈಲೂಟ ಬಡಿಸಿದ್ದರು. ಈತನನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಕಂ ಕಾಂಟ್ರವರ್ಸಿ ಕಿಂಗ್ ಅನಂತಕುಮಾರ್ ಹೆಗಡೆಯನ್ನೂ ಒಳಗೊಂಡಂತೆ ಬಿಜೆಪಿಯ ಹಲವಾರು ಲೀಡರುಗಳು ಒಂದು ಕ್ಯಾಂಪೇನನ್ನೇ ನಡೆಸಿದ್ದರು! ಮಹೇಶ್ ವಿಕ್ರಂ ಹೆಗ್ಡೆಯ ಫೇಕ್ ನ್ಯೂಸ್‍ಗಳ ಫಲಾನುಭವಿಗಳು ಯಾರು ಅನ್ನೋದಕ್ಕೆ ಇದೊಂದು Phಥಿsiಛಿಚಿಟ ನಿದರ್ಶನವಷ್ಟೆ. ಅಂದಹಾಗೆ, ಬಿಜೆಪಿ ಸಂಸದ ಪ್ರತಾಪ್ ಸಿಂಗ ಹೆಗ್ಡೆ ಈತನ ಅತ್ಯಾಪ್ತ!
ಹಾಗೆ ನೋಡಿದರೆ, 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಭರಪೂರ ಫಸಲು ತಂದುಕೊಡುವಲ್ಲಿ ಇಂಥಾ ಫೇಕ್‍ಸುದ್ದಿ ವೀರರ ಪಾತ್ರವೂ ಇತ್ತೆಂದರೆ ತಪ್ಪಾಗಲಿಕ್ಕಿಲ್ಲ. ಮೋದಿಯ ಸುಳ್ಳು ಪೊಳ್ಳು ಭಾಷಣಗಳನ್ನು ಹೈಲೈಟ್ ಮಾಡಿ, ಫೋಟೋಶಾಪ್‍ನಲ್ಲೇ ಗುಜರಾತ್ ಅಭಿವೃದ್ಧಿಯನ್ನು ಸೃಷ್ಟಿಸಿ ಜನರ ನಡುವೆ ಹರಿಯಬಿಟ್ಟ ಇಂತವರಿಂದಾಗಿಯೇ ಮೋದಿ ಸಲೀಸಾಗಿ ಗದ್ದುಗೆ ಏರಲು ಸಾಧ್ಯವಾದದ್ದು. ಅಂತವರಿಂದ ಪ್ರೇರಣೆ ಪಡೆದೇ ವಿಕ್ರಂ ಹೆಗ್ಡೆ ಪೋಸ್ಟ್‍ಕಾರ್ಡ್‍ಗೆ ಜನ್ಮಕೊಟ್ಟಿದ್ದ. ಹಿಂದೂತ್ವದ, ರಾಷ್ಟ್ರಪ್ರೇಮದ ಹುಸಿ ಸುದ್ದಿಗಳ ಜೊತೆಗೆ ಮುಸ್ಲಿಂ ವಿರೋಧಿ ಒಗ್ಗರಣೆ ಬೆರೆಸಿ ಆತ ಬಿಡುಗಡೆ ಮಾಡುತ್ತಿದ್ದ ಪೋಸ್ಟ್‍ಗಳು ಕೋಮುಗಲಭೆ ಹಬ್ಬಲು ಏನು ಬೇಕೊ ಅದೆಲ್ಲವನ್ನು ಒಳಗೊಂಡಿರುತ್ತಿದ್ದವು. ಅಂತಹ ‘ಪೋಸ್ಟ್‍ಕಾರ್ಡ್ ನ್ಯೂಸ್’ ಫೇಸ್‍ಬುಕ್ ಪೇಜ್‍ನ ವಿರುದ್ಧ ಪ್ರಜ್ಞಾವಂತ ಜನರು ಫೇಸ್‍ಬುಕ್ ಮ್ಯಾನೆಜ್‍ಮೆಂಟ್‍ಗೆ ದೂರುತ್ತಲೇ ಬಂದಿದ್ದರು. ಆದರೆ ಮಾರ್ಕ್ ಜುಗರ್‍ಬರ್ಗ್‍ನ ಫೇಸ್‍ಬುಕ್ಕು ಎಚ್ಚೆತ್ತುಕೊಂಡಿರಲಿಲ್ಲ.
ಯಾವಾಗ ಫೇಕ್‍ಪೇಜ್‍ನ ಪಿತಾಮಹನನ್ನು ಪೊಲೀಸರು ಅರೆಸ್ಟ್ ಮಾಡಿದರೋ ಆಗ ಎಚ್ಚೆತ್ತುಕೊಂಡ ಫೇಸ್‍ಬುಕ್ ಆತನ ವಿರುದ್ಧ ತನಗೆ ಹರಿದುಬಂದ ಬೃಹತ್ ದೂರುಗಳನ್ನು ಮುಂದಿಟ್ಟುಕೊಂಡು ಜುಲೈ 16ರಂದು ಡಿಆಕ್ಟಿವೇಟ್ ಮಾಡಿದೆ. ಪೋಸ್ಟ್ ಕಾರ್ಡು ಇಷ್ಟು ದಿನ ಪ್ರಕಟಿಸಿದ್ದ ಸುದ್ದಿಗಳಲ್ಲಿ ಶೇ. 96ರಷ್ಟು ಸುದ್ದಿಗಳು ಮುಸ್ಲಿಂ ವಿರೋಧಿಯಾಗಿದ್ದವೆನ್ನುವುದು ವಿಕ್ರಂ ಹೆಗ್ಡೆಯ ಉದ್ದೇಶವನ್ನು ಬಿಚ್ಚಿಡುತ್ತದೆ.
ಈ ಕೇಸರಿ ಮಂದಿ ಅದೆಷ್ಟು ದೂ(ದು)ರಾಲೋಚನೆ ಹೊಂದಿರುತ್ತಾರೆಂದರೆ, ಮಾರ್ಚ್‍ನಲ್ಲಿ ವಿಕ್ರಂ ಹೆಗ್ಡೆ ಅರೆಸ್ಟಾಗುತ್ತಿದ್ದಂತೆಯೇ, ಸದ್ಯದಲ್ಲೇ ತಮ್ಮ ಫೇಸ್‍ಬುಕ್ ಪೇಜ್ ಕೂಡಾ ರದ್ದಾಗಬಹುದೆನ್ನುವುದನ್ನು ಅಂದಾಜಿಸಿ, ಏಪ್ರಿಲ್‍ನಲ್ಲಿ ಅದೇ ಹೆಸರಿನಲ್ಲಿ ಮತ್ತೊಂದು ಇಂಗ್ಲಿಷ್ ಭಾಷೆಯ ಪೇಜ್ ಓಪನ್ ಮಾಡಿದ್ದರು. ಪೋಸ್ಟ್‍ಕಾರ್ಡ್ ಇಂಗ್ಲಿಷ್ ನ್ಯೂಸ್ ಎಂಬ ಹೆಸರಿನ ಆ ಪುಟ ಕನ್ನಡ ಪೋಸ್ಟ್‍ಕಾರ್ಡ್ ಪುಟದ ವಿನ್ಯಾಸ, ಲೋಗೊಗಳನ್ನೇ ಹೊಂದಿದೆ. ಇತ್ತ ಫೇಸ್‍ಬುಕ್, ಕನ್ನಡದ ಪೋಸ್ಟ್ ಕಾರ್ಡ್ ರದ್ದು ಮಾಡುತ್ತಿದ್ದಂತೆಯೇ, ಇಂಗ್ಲಿಷ್ ಪುಟದ ಲಿಂಕನ್ನು ಮುಂಚೂಣಿಗೆ ತಂದು, ತಮ್ಮ ಪುಟವನ್ನು ಫೇಸ್‍ಬುಕ್ ರದ್ದು ಮಾಡಿಲ್ಲ, ಇದೆಲ್ಲಾ ಸುಳ್ಳು ಸುದ್ದಿ ಎಂದು ಜನರನ್ನು ಯಾಮಾರಿಸಲು ಯತ್ನಿಸಿತ್ತು. ಆದರೆ ಅಧಿಕೃತ ಮೂಲಗಳೇ ಫೇಸ್‍ಬುಕ್ ನಿರ್ಣಯವನ್ನು ಖಾತ್ರಿಪಡಿಸಿದ ತರುವಾಯ ಇದೀಗ ಅವರ ಬಣ್ಣ ಬಯಲಾಗಿದೆ. ಆದರೇನಂತೆ ಇಂಗ್ಲಿಷ್ ಪುಟದಲ್ಲಿ ಯಥಾ ಪ್ರಕಾರ ತಮ್ಮ ಕೋಮುವಾಂತಿಯನ್ನು ಮುಂದುವರಿಸಿದ್ದಾರೆ. ಫೇಸ್‍ಪುಸ್ತಕ ಅದಕ್ಕೆ ಯಾವಾಗ ಒಂದು ಗತಿ ಕಾಣಿಸುತ್ತೋ ನೋಡಬೇಕು.

-ಸೋಮಶೇಖರ್ ಚೆಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...