Homeಕರ್ನಾಟಕಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

ಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

- Advertisement -
- Advertisement -

| ಮುತ್ತುರಾಜು |

ಈಗಾಗಲೇ ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಿಂದ ಯಥೇಚ್ಛವಾಗಿ ಬೆಂಗಳೂರಿಗೆ ನೀರನ್ನು ಕೊಡಲಾಗುತ್ತಿದೆ. ಅದು ಹಣ್ಣು, ತರಕಾರಿ, ಹಾಲು, ಸೊಪ್ಪು, ಹೂವು ಮತ್ತು ಇನ್ನಿತರ ದಿನಬಳಕೆಯ ವಸ್ತುಗಳನ್ನು ಆ ಜಿಲ್ಲೆಗಳಲ್ಲಿ ಉತ್ಪಾದಿಸಿ ಬೆಂಗಳೂರಿಗೆ ಮಾರುವ ಮೂಲಕ ಅವರ ತಮ್ಮ ಜಿಲ್ಲೆಗಳ ಅಂತರ್ಜಲವನ್ನು ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ಮೈಸೂರು, ಕೊಡಗು, ಮಂಡ್ಯದ ಕಾವೇರಿ ನೀರು ಬೆಂಗಳೂರನ್ನು ರಕ್ಷಿಸುತ್ತಿದೆ. ಸಾಲದು ಎಂಬುದಕ್ಕೆ ಕರಾವಳಿಯ ದ.ಕ ಜಿಲ್ಲೆಯಿಂದ ಎತ್ತಿನಹೊಳೆಯಿಂದ ನೀರು ಎತ್ತಲು ಯೋಜಿಸಲಾಗಿದೆ. ನಮ್ಮ ಬೆಂಗಳೂರಿನ ತೀರದ ದಾಹಕ್ಕೆ ಈಗ ಮಲೆನಾಡಿನ ಲಿಂಗನಮಕ್ಕಿಯ ಮೇಲೆಯೂ ಆಳುವವರಿಗೆ ಕಣ್ಣು ಬಿದ್ದಿದೆ. ಇದಕ್ಕೆ ಕೊನೆಯೇ ಇಲ್ಲವೇ?

ಹೌದು ಬೆಂಗಳೂರಿನವರಿಗೆ ಕುಡಿಯಲು ನೀರು ಬೇಕು. ಈಗ ಏಕೆ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಕೇಳಿಕೊಳ್ಳಲು ಯಾರು ಸಿದ್ಧರಿಲ್ಲ. ವಿಚಿತ್ರವೆಂದರೆ ಒಣ ಬಯಲು ಸೀಮೆ ಪ್ರದೇಶಗಳಲ್ಲೇ ಹೆಚ್ಚು ಮಳೆ ಬೀಳುವ ಜಿಲ್ಲೆಯೆಂದರೆ ಬೆಂಗಳೂರು. ಆದರೆ ಹೀಗೆ ಬಿದ್ದ ಮಳೆ ಹಾಗೆ ಹರಿದು ಹೋಗುತ್ತಿದ್ದರೂ ಬೆಂಗಳೂರಿಗರು ಕಣ್ಣು ಮುಚ್ಚಿ ಕುಳಿತಿರುತ್ತಾರೆ. ನಂತರ ನಮಗೆ ನೀರು ಬೇಕೆಂದು ದಬ್ಬಾಳಿಕೆ ಮಾಡುತ್ತಾರೆ. ಹೌದು ಇದು ದಬ್ಬಾಳಿಕೆಯೇ ಹೊರತು ಮತ್ತೇನಲ್ಲ. ಮಲೆನಾಡಿನ ಲಿಂಗನಮಕ್ಕಿಯಿಂದ ಬಲವಂತವಾಗಿ ನೀರು ತರಲು 12 ಸಾವಿರ ಕೋಟಿ ರೂಗಳನ್ನು ಖರ್ಚು ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿ ನಿಂತಿದೆ. ಡಿಪಿಆರ್ ಸಿದ್ದಪಡಿಸುವಂತೆ ಡಿಸಿಎಂ ಪರಮೇಶ್ವರ್ ನಿನ್ನೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

ಈಗ ನಾವು ಸಮಸ್ಯೆಯ ಆಳ ಮತ್ತು ಪರಿಹಾರಕ್ಕೆ ಹೋಗೋಣ.

ಬೆಂಗಳೂರಿಗೆ ಬಂದು ಹೋಗುವವರು ಸೇರಿ ಇಲ್ಲಿ ದಿನವೊಂದಕ್ಕೆ ಒಂದೂವರೆ ಕೋಟಿ ಜನ ಇರುತ್ತಾರೆಂದು ಅಂದಾಜಿಸಲಾಗಿದೆ. ಅಂದರೆ ಉದ್ಯೋಗಕ್ಕಾಗಿ ಇಲ್ಲಿಗೆ ಬಂದು ಹೋಗುವವರು ಮತ್ತು ಇಲ್ಲಿಯೇ ನೆಲೆಸಿರುವವರೇ ಹೆಚ್ಚು. ಹಾಗಾಗಿ ಈ ಉದ್ಯೋಗ ಸೃಷ್ಟಿಯ ವಿಕೇಂದ್ರಿಕರಣದ ಪ್ರಶ್ನೆಯನ್ನು ಸರ್ಕಾರ ತನ್ನ ಆದ್ಯತೆಯನ್ನಾಗಿ ಮಾಡಿಕೊಂಡಾಗ ಮಾತ್ರ ಬೆಂಗಳೂರಿಗೆ ನೀರಿನ ಸಮಸ್ಯೆ ಮಾತ್ರವಲ್ಲ, ಟ್ರಾಫಿಕ್, ಮಾಲಿನ್ಯ, ಅಪಘಾತ ಸೇರಿದಂತೆ ಇನ್ನು ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ.

ಎಲ್ಲಾ ಉದ್ಯೋಗಗಳನ್ನು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದನ್ನು, ಬೆಂಗಳೂರು ಕೇಂದ್ರೀತ ಅಭಿವೃದ್ದಿ ಮಾದರಿಯನ್ನು ಕೈಬಿಟ್ಟು ವಿಕೇಂದ್ರಿಕೃತ ಮತ್ತು ಗ್ರಾಮೀಣ ಆಧಾರಿತ ಅಭಿವೃದ್ದಿಗೆ ಮುಂದಾಗಬೇಕು. ಅತ್ಯುತ್ತಮ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಕಲಬುರಗಿ, ಧಾರವಾಡ, ಬೆಳಗಾಂ, ಗದಗ ರೀತಿಯ ಜಿಲ್ಲೆಗಳಲ್ಲಿ ಸ್ಥಾಪಿಸಬೇಕು. ಜನ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಪರಿಪಾಟಲು ಪಡುವುದು ತಪ್ಪಬೇಕು. ಕೃಷಿಯನ್ನು ನಿಜವಾಗಿಯೂ ಲಾಭದಾಯಕವಾಗಿಸಲು ಸರ್ಕಾರ ತನ್ನೆಲ್ಲಾ ಶಕ್ತಿ-ಸಂಪನ್ಮೂಲಗಳನ್ನು ವಿನಿಯೋಗಿಸಬೇಕು. ಆಗ ನಿಧಾನವಾಗಿ ವಲಸೆ ಕಡಿಮೆಯಾಗುತ್ತದೆ ಮಾತ್ರವಲ್ಲ, ಬೆಂಗಳೂರಿನಿಂದ ಜನ ತಮ್ಮ ಸ್ವಂತ ಊರುಗಳಿಗೆ ವಾಪಸ್ ಹೋಗುವಂತೆ ಆಗಬೇಕು.

ಎರಡನೆಯದಾಗಿ ತಕ್ಷಣದ ಪರಿಹಾರಕ್ಕೆ ಬರುವುದಾದರೆ ನಾವು ಬೆಂಗಳೂರಿನ ಜನ ಎಷ್ಟೆಲ್ಲಾ ನೀರು ವ್ಯರ್ಥ ಮಾಡುತ್ತಿದ್ದೇವೆ ಎಂಬುದನ್ನು ಅರಿತು ಮಿತಬಳಕೆಗೆ ಮುಂದಾಗಬೇಕು. ಬೆಂಗಳೂರಿನ ಪ್ರತಿ ಮನೆಯು ಮಳೆನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಬೋರ್‍ವೆಲ್‍ಗಳಿಗೆ ಅದರಿಂದ ಮರುಪೂರಣ ವ್ಯವಸ್ಥೆ ಮಾಡಬೇಕು. ಇದು ಎಷ್ಟು ದೊಡ್ಡ ಕೆಲಸವೆಂದರೆ ಇದರಿಂದ ನೀರಿನ ಪರಾವಲಂಬನೆ ಬಹುಮಟ್ಟಿಗೆ ತಪ್ಪಿಸಬಹುದು.
ಜೊತೆಗೆ ಸರ್ಕಾರ ಕೆರೆ ಒತ್ತುವರಿ ಮಾಡಿಕೊಂಡಿರುವವರನ್ನು ಮುಲಾಜು ನೋಡದೆ ಬಿಡಿಸಿ ಕೆರೆಗಳ ಸಮಗ್ರ ಪುನಶ್ಚೇತನಕ್ಕೆ ಮುಂದಾಗಬೇಕು. ರಾಜ್ಯದ ಎಲ್ಲಾ ಕೆರೆಗಳ ಹೂಳೆತ್ತಿಸಿ ನೀರು ಸಂಗ್ರಹಕ್ಕೆ ಮುಂದಾಗಬೇಕು. ಯಮುನಾ ಬಯಲು ಪ್ರದೇಶದಲ್ಲಿ ನೈಸರ್ಗಿಕ ನೀರು ಸಂಗ್ರಹಾಲಯಕ್ಕೆ ದೆಹಲಿ ಸರ್ಕಾರ ಮುಂದಾಗಿದೆ. ಇಂತಹ ಯೋಜನೆಗಳನ್ನು ಅಧ್ಯಯನ ಮಾಡಿ ಜಾರಿಗೊಳಿಸಬೇಕು.

ಹುಡುಕಿದರೆ ಇಂತಹ ಹತ್ತಾರು ದಾರಿಗಳು ಸಿಗುತ್ತವೆ. ಅವನ್ನು ಮಾಡದೇ ನಾವು ನಮ್ಮ ವಿಲಾಸಕ್ಕಾಗಿ, ಮಿತಿಮೀರಿದ ದುರಾಸೆಗಾಗಿ ಎತ್ತಿನಹೊಳೆಯಿಂದಲೋ, ಲಿಂಗನಮಕ್ಕಿಯಿಂದಲೋ ನೀರು ಕದಿಯುವುದು ಸರ್ವಥಾ ಸರಿಯಲ್ಲ. ಲಿಂಗನಮಕ್ಕಿಯಿಂದ ನೀರು ಬೇಡ ಎಂದು ಮಲೆನಾಡಿಗರು ಹೋರಾಟ ಮಾಡುವ ಮುಂಚೆಯೇ ಬೆಂಗಳೂರಿಗರು ದನಿಯೆತ್ತಿ. ಸ್ವಲ್ಪವಾದರೂ ಆತ್ಮಸಾಕ್ಷಿ ಉಳಿಸಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಣ್ಣ ಮಳೆಗೆ ಇಲ್ಲಿನ ದಾರಿಗಳಲ್ಲಿ ನೀರು ತುಂಬಿ ಬಂಡಿಗಳ ಓಡಾಟಕ್ಕೆ ತೊಂದರೆಯಾಗಿ ಪಡುವ ಪಡಿಪಾಟಲು ಅಶ್ಟಿಶ್ಟಲ್ಲ. ನಗರದ ಯೋಜನಾರಹಿತ ಬೆಳವಣಗೆಯೇ ಇದಕ್ಕೆಲ್ಲಾ ಕಾರಣ.
    ದಾರಿಬದಿಯ ಚರಂಡಿಗಳ ಬಾಯಿಗೆ ಅಡ್ಡಲಾಗಿ ಹಾಕಿರುವ ನೀರು,ಕಳಚೆ,ಕರೆಂಟು ಕೊಳವೆಗಳನ್ನು ನಿಯಮದಂತೆ ಬೆಡ್ ಲೆವೆಲ್ ಗಿಂತ ಕೆಳಗೆ ಹಾಕದರೆ ನೂರಾರು ಕೋಟಿ ಹಣ ಉಳಿಸಬಹುದು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...