Homeಕರ್ನಾಟಕಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

ಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

- Advertisement -
- Advertisement -

| ಮುತ್ತುರಾಜು |

ಈಗಾಗಲೇ ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಿಂದ ಯಥೇಚ್ಛವಾಗಿ ಬೆಂಗಳೂರಿಗೆ ನೀರನ್ನು ಕೊಡಲಾಗುತ್ತಿದೆ. ಅದು ಹಣ್ಣು, ತರಕಾರಿ, ಹಾಲು, ಸೊಪ್ಪು, ಹೂವು ಮತ್ತು ಇನ್ನಿತರ ದಿನಬಳಕೆಯ ವಸ್ತುಗಳನ್ನು ಆ ಜಿಲ್ಲೆಗಳಲ್ಲಿ ಉತ್ಪಾದಿಸಿ ಬೆಂಗಳೂರಿಗೆ ಮಾರುವ ಮೂಲಕ ಅವರ ತಮ್ಮ ಜಿಲ್ಲೆಗಳ ಅಂತರ್ಜಲವನ್ನು ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ಮೈಸೂರು, ಕೊಡಗು, ಮಂಡ್ಯದ ಕಾವೇರಿ ನೀರು ಬೆಂಗಳೂರನ್ನು ರಕ್ಷಿಸುತ್ತಿದೆ. ಸಾಲದು ಎಂಬುದಕ್ಕೆ ಕರಾವಳಿಯ ದ.ಕ ಜಿಲ್ಲೆಯಿಂದ ಎತ್ತಿನಹೊಳೆಯಿಂದ ನೀರು ಎತ್ತಲು ಯೋಜಿಸಲಾಗಿದೆ. ನಮ್ಮ ಬೆಂಗಳೂರಿನ ತೀರದ ದಾಹಕ್ಕೆ ಈಗ ಮಲೆನಾಡಿನ ಲಿಂಗನಮಕ್ಕಿಯ ಮೇಲೆಯೂ ಆಳುವವರಿಗೆ ಕಣ್ಣು ಬಿದ್ದಿದೆ. ಇದಕ್ಕೆ ಕೊನೆಯೇ ಇಲ್ಲವೇ?

ಹೌದು ಬೆಂಗಳೂರಿನವರಿಗೆ ಕುಡಿಯಲು ನೀರು ಬೇಕು. ಈಗ ಏಕೆ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಕೇಳಿಕೊಳ್ಳಲು ಯಾರು ಸಿದ್ಧರಿಲ್ಲ. ವಿಚಿತ್ರವೆಂದರೆ ಒಣ ಬಯಲು ಸೀಮೆ ಪ್ರದೇಶಗಳಲ್ಲೇ ಹೆಚ್ಚು ಮಳೆ ಬೀಳುವ ಜಿಲ್ಲೆಯೆಂದರೆ ಬೆಂಗಳೂರು. ಆದರೆ ಹೀಗೆ ಬಿದ್ದ ಮಳೆ ಹಾಗೆ ಹರಿದು ಹೋಗುತ್ತಿದ್ದರೂ ಬೆಂಗಳೂರಿಗರು ಕಣ್ಣು ಮುಚ್ಚಿ ಕುಳಿತಿರುತ್ತಾರೆ. ನಂತರ ನಮಗೆ ನೀರು ಬೇಕೆಂದು ದಬ್ಬಾಳಿಕೆ ಮಾಡುತ್ತಾರೆ. ಹೌದು ಇದು ದಬ್ಬಾಳಿಕೆಯೇ ಹೊರತು ಮತ್ತೇನಲ್ಲ. ಮಲೆನಾಡಿನ ಲಿಂಗನಮಕ್ಕಿಯಿಂದ ಬಲವಂತವಾಗಿ ನೀರು ತರಲು 12 ಸಾವಿರ ಕೋಟಿ ರೂಗಳನ್ನು ಖರ್ಚು ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿ ನಿಂತಿದೆ. ಡಿಪಿಆರ್ ಸಿದ್ದಪಡಿಸುವಂತೆ ಡಿಸಿಎಂ ಪರಮೇಶ್ವರ್ ನಿನ್ನೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

ಈಗ ನಾವು ಸಮಸ್ಯೆಯ ಆಳ ಮತ್ತು ಪರಿಹಾರಕ್ಕೆ ಹೋಗೋಣ.

ಬೆಂಗಳೂರಿಗೆ ಬಂದು ಹೋಗುವವರು ಸೇರಿ ಇಲ್ಲಿ ದಿನವೊಂದಕ್ಕೆ ಒಂದೂವರೆ ಕೋಟಿ ಜನ ಇರುತ್ತಾರೆಂದು ಅಂದಾಜಿಸಲಾಗಿದೆ. ಅಂದರೆ ಉದ್ಯೋಗಕ್ಕಾಗಿ ಇಲ್ಲಿಗೆ ಬಂದು ಹೋಗುವವರು ಮತ್ತು ಇಲ್ಲಿಯೇ ನೆಲೆಸಿರುವವರೇ ಹೆಚ್ಚು. ಹಾಗಾಗಿ ಈ ಉದ್ಯೋಗ ಸೃಷ್ಟಿಯ ವಿಕೇಂದ್ರಿಕರಣದ ಪ್ರಶ್ನೆಯನ್ನು ಸರ್ಕಾರ ತನ್ನ ಆದ್ಯತೆಯನ್ನಾಗಿ ಮಾಡಿಕೊಂಡಾಗ ಮಾತ್ರ ಬೆಂಗಳೂರಿಗೆ ನೀರಿನ ಸಮಸ್ಯೆ ಮಾತ್ರವಲ್ಲ, ಟ್ರಾಫಿಕ್, ಮಾಲಿನ್ಯ, ಅಪಘಾತ ಸೇರಿದಂತೆ ಇನ್ನು ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ.

ಎಲ್ಲಾ ಉದ್ಯೋಗಗಳನ್ನು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದನ್ನು, ಬೆಂಗಳೂರು ಕೇಂದ್ರೀತ ಅಭಿವೃದ್ದಿ ಮಾದರಿಯನ್ನು ಕೈಬಿಟ್ಟು ವಿಕೇಂದ್ರಿಕೃತ ಮತ್ತು ಗ್ರಾಮೀಣ ಆಧಾರಿತ ಅಭಿವೃದ್ದಿಗೆ ಮುಂದಾಗಬೇಕು. ಅತ್ಯುತ್ತಮ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಕಲಬುರಗಿ, ಧಾರವಾಡ, ಬೆಳಗಾಂ, ಗದಗ ರೀತಿಯ ಜಿಲ್ಲೆಗಳಲ್ಲಿ ಸ್ಥಾಪಿಸಬೇಕು. ಜನ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಪರಿಪಾಟಲು ಪಡುವುದು ತಪ್ಪಬೇಕು. ಕೃಷಿಯನ್ನು ನಿಜವಾಗಿಯೂ ಲಾಭದಾಯಕವಾಗಿಸಲು ಸರ್ಕಾರ ತನ್ನೆಲ್ಲಾ ಶಕ್ತಿ-ಸಂಪನ್ಮೂಲಗಳನ್ನು ವಿನಿಯೋಗಿಸಬೇಕು. ಆಗ ನಿಧಾನವಾಗಿ ವಲಸೆ ಕಡಿಮೆಯಾಗುತ್ತದೆ ಮಾತ್ರವಲ್ಲ, ಬೆಂಗಳೂರಿನಿಂದ ಜನ ತಮ್ಮ ಸ್ವಂತ ಊರುಗಳಿಗೆ ವಾಪಸ್ ಹೋಗುವಂತೆ ಆಗಬೇಕು.

ಎರಡನೆಯದಾಗಿ ತಕ್ಷಣದ ಪರಿಹಾರಕ್ಕೆ ಬರುವುದಾದರೆ ನಾವು ಬೆಂಗಳೂರಿನ ಜನ ಎಷ್ಟೆಲ್ಲಾ ನೀರು ವ್ಯರ್ಥ ಮಾಡುತ್ತಿದ್ದೇವೆ ಎಂಬುದನ್ನು ಅರಿತು ಮಿತಬಳಕೆಗೆ ಮುಂದಾಗಬೇಕು. ಬೆಂಗಳೂರಿನ ಪ್ರತಿ ಮನೆಯು ಮಳೆನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಬೋರ್‍ವೆಲ್‍ಗಳಿಗೆ ಅದರಿಂದ ಮರುಪೂರಣ ವ್ಯವಸ್ಥೆ ಮಾಡಬೇಕು. ಇದು ಎಷ್ಟು ದೊಡ್ಡ ಕೆಲಸವೆಂದರೆ ಇದರಿಂದ ನೀರಿನ ಪರಾವಲಂಬನೆ ಬಹುಮಟ್ಟಿಗೆ ತಪ್ಪಿಸಬಹುದು.
ಜೊತೆಗೆ ಸರ್ಕಾರ ಕೆರೆ ಒತ್ತುವರಿ ಮಾಡಿಕೊಂಡಿರುವವರನ್ನು ಮುಲಾಜು ನೋಡದೆ ಬಿಡಿಸಿ ಕೆರೆಗಳ ಸಮಗ್ರ ಪುನಶ್ಚೇತನಕ್ಕೆ ಮುಂದಾಗಬೇಕು. ರಾಜ್ಯದ ಎಲ್ಲಾ ಕೆರೆಗಳ ಹೂಳೆತ್ತಿಸಿ ನೀರು ಸಂಗ್ರಹಕ್ಕೆ ಮುಂದಾಗಬೇಕು. ಯಮುನಾ ಬಯಲು ಪ್ರದೇಶದಲ್ಲಿ ನೈಸರ್ಗಿಕ ನೀರು ಸಂಗ್ರಹಾಲಯಕ್ಕೆ ದೆಹಲಿ ಸರ್ಕಾರ ಮುಂದಾಗಿದೆ. ಇಂತಹ ಯೋಜನೆಗಳನ್ನು ಅಧ್ಯಯನ ಮಾಡಿ ಜಾರಿಗೊಳಿಸಬೇಕು.

ಹುಡುಕಿದರೆ ಇಂತಹ ಹತ್ತಾರು ದಾರಿಗಳು ಸಿಗುತ್ತವೆ. ಅವನ್ನು ಮಾಡದೇ ನಾವು ನಮ್ಮ ವಿಲಾಸಕ್ಕಾಗಿ, ಮಿತಿಮೀರಿದ ದುರಾಸೆಗಾಗಿ ಎತ್ತಿನಹೊಳೆಯಿಂದಲೋ, ಲಿಂಗನಮಕ್ಕಿಯಿಂದಲೋ ನೀರು ಕದಿಯುವುದು ಸರ್ವಥಾ ಸರಿಯಲ್ಲ. ಲಿಂಗನಮಕ್ಕಿಯಿಂದ ನೀರು ಬೇಡ ಎಂದು ಮಲೆನಾಡಿಗರು ಹೋರಾಟ ಮಾಡುವ ಮುಂಚೆಯೇ ಬೆಂಗಳೂರಿಗರು ದನಿಯೆತ್ತಿ. ಸ್ವಲ್ಪವಾದರೂ ಆತ್ಮಸಾಕ್ಷಿ ಉಳಿಸಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಣ್ಣ ಮಳೆಗೆ ಇಲ್ಲಿನ ದಾರಿಗಳಲ್ಲಿ ನೀರು ತುಂಬಿ ಬಂಡಿಗಳ ಓಡಾಟಕ್ಕೆ ತೊಂದರೆಯಾಗಿ ಪಡುವ ಪಡಿಪಾಟಲು ಅಶ್ಟಿಶ್ಟಲ್ಲ. ನಗರದ ಯೋಜನಾರಹಿತ ಬೆಳವಣಗೆಯೇ ಇದಕ್ಕೆಲ್ಲಾ ಕಾರಣ.
    ದಾರಿಬದಿಯ ಚರಂಡಿಗಳ ಬಾಯಿಗೆ ಅಡ್ಡಲಾಗಿ ಹಾಕಿರುವ ನೀರು,ಕಳಚೆ,ಕರೆಂಟು ಕೊಳವೆಗಳನ್ನು ನಿಯಮದಂತೆ ಬೆಡ್ ಲೆವೆಲ್ ಗಿಂತ ಕೆಳಗೆ ಹಾಕದರೆ ನೂರಾರು ಕೋಟಿ ಹಣ ಉಳಿಸಬಹುದು.

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...