Homeಕರ್ನಾಟಕಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

ಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

- Advertisement -
- Advertisement -

| ಮುತ್ತುರಾಜು |

ಈಗಾಗಲೇ ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಿಂದ ಯಥೇಚ್ಛವಾಗಿ ಬೆಂಗಳೂರಿಗೆ ನೀರನ್ನು ಕೊಡಲಾಗುತ್ತಿದೆ. ಅದು ಹಣ್ಣು, ತರಕಾರಿ, ಹಾಲು, ಸೊಪ್ಪು, ಹೂವು ಮತ್ತು ಇನ್ನಿತರ ದಿನಬಳಕೆಯ ವಸ್ತುಗಳನ್ನು ಆ ಜಿಲ್ಲೆಗಳಲ್ಲಿ ಉತ್ಪಾದಿಸಿ ಬೆಂಗಳೂರಿಗೆ ಮಾರುವ ಮೂಲಕ ಅವರ ತಮ್ಮ ಜಿಲ್ಲೆಗಳ ಅಂತರ್ಜಲವನ್ನು ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ಮೈಸೂರು, ಕೊಡಗು, ಮಂಡ್ಯದ ಕಾವೇರಿ ನೀರು ಬೆಂಗಳೂರನ್ನು ರಕ್ಷಿಸುತ್ತಿದೆ. ಸಾಲದು ಎಂಬುದಕ್ಕೆ ಕರಾವಳಿಯ ದ.ಕ ಜಿಲ್ಲೆಯಿಂದ ಎತ್ತಿನಹೊಳೆಯಿಂದ ನೀರು ಎತ್ತಲು ಯೋಜಿಸಲಾಗಿದೆ. ನಮ್ಮ ಬೆಂಗಳೂರಿನ ತೀರದ ದಾಹಕ್ಕೆ ಈಗ ಮಲೆನಾಡಿನ ಲಿಂಗನಮಕ್ಕಿಯ ಮೇಲೆಯೂ ಆಳುವವರಿಗೆ ಕಣ್ಣು ಬಿದ್ದಿದೆ. ಇದಕ್ಕೆ ಕೊನೆಯೇ ಇಲ್ಲವೇ?

ಹೌದು ಬೆಂಗಳೂರಿನವರಿಗೆ ಕುಡಿಯಲು ನೀರು ಬೇಕು. ಈಗ ಏಕೆ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಕೇಳಿಕೊಳ್ಳಲು ಯಾರು ಸಿದ್ಧರಿಲ್ಲ. ವಿಚಿತ್ರವೆಂದರೆ ಒಣ ಬಯಲು ಸೀಮೆ ಪ್ರದೇಶಗಳಲ್ಲೇ ಹೆಚ್ಚು ಮಳೆ ಬೀಳುವ ಜಿಲ್ಲೆಯೆಂದರೆ ಬೆಂಗಳೂರು. ಆದರೆ ಹೀಗೆ ಬಿದ್ದ ಮಳೆ ಹಾಗೆ ಹರಿದು ಹೋಗುತ್ತಿದ್ದರೂ ಬೆಂಗಳೂರಿಗರು ಕಣ್ಣು ಮುಚ್ಚಿ ಕುಳಿತಿರುತ್ತಾರೆ. ನಂತರ ನಮಗೆ ನೀರು ಬೇಕೆಂದು ದಬ್ಬಾಳಿಕೆ ಮಾಡುತ್ತಾರೆ. ಹೌದು ಇದು ದಬ್ಬಾಳಿಕೆಯೇ ಹೊರತು ಮತ್ತೇನಲ್ಲ. ಮಲೆನಾಡಿನ ಲಿಂಗನಮಕ್ಕಿಯಿಂದ ಬಲವಂತವಾಗಿ ನೀರು ತರಲು 12 ಸಾವಿರ ಕೋಟಿ ರೂಗಳನ್ನು ಖರ್ಚು ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿ ನಿಂತಿದೆ. ಡಿಪಿಆರ್ ಸಿದ್ದಪಡಿಸುವಂತೆ ಡಿಸಿಎಂ ಪರಮೇಶ್ವರ್ ನಿನ್ನೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

ಈಗ ನಾವು ಸಮಸ್ಯೆಯ ಆಳ ಮತ್ತು ಪರಿಹಾರಕ್ಕೆ ಹೋಗೋಣ.

ಬೆಂಗಳೂರಿಗೆ ಬಂದು ಹೋಗುವವರು ಸೇರಿ ಇಲ್ಲಿ ದಿನವೊಂದಕ್ಕೆ ಒಂದೂವರೆ ಕೋಟಿ ಜನ ಇರುತ್ತಾರೆಂದು ಅಂದಾಜಿಸಲಾಗಿದೆ. ಅಂದರೆ ಉದ್ಯೋಗಕ್ಕಾಗಿ ಇಲ್ಲಿಗೆ ಬಂದು ಹೋಗುವವರು ಮತ್ತು ಇಲ್ಲಿಯೇ ನೆಲೆಸಿರುವವರೇ ಹೆಚ್ಚು. ಹಾಗಾಗಿ ಈ ಉದ್ಯೋಗ ಸೃಷ್ಟಿಯ ವಿಕೇಂದ್ರಿಕರಣದ ಪ್ರಶ್ನೆಯನ್ನು ಸರ್ಕಾರ ತನ್ನ ಆದ್ಯತೆಯನ್ನಾಗಿ ಮಾಡಿಕೊಂಡಾಗ ಮಾತ್ರ ಬೆಂಗಳೂರಿಗೆ ನೀರಿನ ಸಮಸ್ಯೆ ಮಾತ್ರವಲ್ಲ, ಟ್ರಾಫಿಕ್, ಮಾಲಿನ್ಯ, ಅಪಘಾತ ಸೇರಿದಂತೆ ಇನ್ನು ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ.

ಎಲ್ಲಾ ಉದ್ಯೋಗಗಳನ್ನು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದನ್ನು, ಬೆಂಗಳೂರು ಕೇಂದ್ರೀತ ಅಭಿವೃದ್ದಿ ಮಾದರಿಯನ್ನು ಕೈಬಿಟ್ಟು ವಿಕೇಂದ್ರಿಕೃತ ಮತ್ತು ಗ್ರಾಮೀಣ ಆಧಾರಿತ ಅಭಿವೃದ್ದಿಗೆ ಮುಂದಾಗಬೇಕು. ಅತ್ಯುತ್ತಮ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಕಲಬುರಗಿ, ಧಾರವಾಡ, ಬೆಳಗಾಂ, ಗದಗ ರೀತಿಯ ಜಿಲ್ಲೆಗಳಲ್ಲಿ ಸ್ಥಾಪಿಸಬೇಕು. ಜನ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಪರಿಪಾಟಲು ಪಡುವುದು ತಪ್ಪಬೇಕು. ಕೃಷಿಯನ್ನು ನಿಜವಾಗಿಯೂ ಲಾಭದಾಯಕವಾಗಿಸಲು ಸರ್ಕಾರ ತನ್ನೆಲ್ಲಾ ಶಕ್ತಿ-ಸಂಪನ್ಮೂಲಗಳನ್ನು ವಿನಿಯೋಗಿಸಬೇಕು. ಆಗ ನಿಧಾನವಾಗಿ ವಲಸೆ ಕಡಿಮೆಯಾಗುತ್ತದೆ ಮಾತ್ರವಲ್ಲ, ಬೆಂಗಳೂರಿನಿಂದ ಜನ ತಮ್ಮ ಸ್ವಂತ ಊರುಗಳಿಗೆ ವಾಪಸ್ ಹೋಗುವಂತೆ ಆಗಬೇಕು.

ಎರಡನೆಯದಾಗಿ ತಕ್ಷಣದ ಪರಿಹಾರಕ್ಕೆ ಬರುವುದಾದರೆ ನಾವು ಬೆಂಗಳೂರಿನ ಜನ ಎಷ್ಟೆಲ್ಲಾ ನೀರು ವ್ಯರ್ಥ ಮಾಡುತ್ತಿದ್ದೇವೆ ಎಂಬುದನ್ನು ಅರಿತು ಮಿತಬಳಕೆಗೆ ಮುಂದಾಗಬೇಕು. ಬೆಂಗಳೂರಿನ ಪ್ರತಿ ಮನೆಯು ಮಳೆನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಬೋರ್‍ವೆಲ್‍ಗಳಿಗೆ ಅದರಿಂದ ಮರುಪೂರಣ ವ್ಯವಸ್ಥೆ ಮಾಡಬೇಕು. ಇದು ಎಷ್ಟು ದೊಡ್ಡ ಕೆಲಸವೆಂದರೆ ಇದರಿಂದ ನೀರಿನ ಪರಾವಲಂಬನೆ ಬಹುಮಟ್ಟಿಗೆ ತಪ್ಪಿಸಬಹುದು.
ಜೊತೆಗೆ ಸರ್ಕಾರ ಕೆರೆ ಒತ್ತುವರಿ ಮಾಡಿಕೊಂಡಿರುವವರನ್ನು ಮುಲಾಜು ನೋಡದೆ ಬಿಡಿಸಿ ಕೆರೆಗಳ ಸಮಗ್ರ ಪುನಶ್ಚೇತನಕ್ಕೆ ಮುಂದಾಗಬೇಕು. ರಾಜ್ಯದ ಎಲ್ಲಾ ಕೆರೆಗಳ ಹೂಳೆತ್ತಿಸಿ ನೀರು ಸಂಗ್ರಹಕ್ಕೆ ಮುಂದಾಗಬೇಕು. ಯಮುನಾ ಬಯಲು ಪ್ರದೇಶದಲ್ಲಿ ನೈಸರ್ಗಿಕ ನೀರು ಸಂಗ್ರಹಾಲಯಕ್ಕೆ ದೆಹಲಿ ಸರ್ಕಾರ ಮುಂದಾಗಿದೆ. ಇಂತಹ ಯೋಜನೆಗಳನ್ನು ಅಧ್ಯಯನ ಮಾಡಿ ಜಾರಿಗೊಳಿಸಬೇಕು.

ಹುಡುಕಿದರೆ ಇಂತಹ ಹತ್ತಾರು ದಾರಿಗಳು ಸಿಗುತ್ತವೆ. ಅವನ್ನು ಮಾಡದೇ ನಾವು ನಮ್ಮ ವಿಲಾಸಕ್ಕಾಗಿ, ಮಿತಿಮೀರಿದ ದುರಾಸೆಗಾಗಿ ಎತ್ತಿನಹೊಳೆಯಿಂದಲೋ, ಲಿಂಗನಮಕ್ಕಿಯಿಂದಲೋ ನೀರು ಕದಿಯುವುದು ಸರ್ವಥಾ ಸರಿಯಲ್ಲ. ಲಿಂಗನಮಕ್ಕಿಯಿಂದ ನೀರು ಬೇಡ ಎಂದು ಮಲೆನಾಡಿಗರು ಹೋರಾಟ ಮಾಡುವ ಮುಂಚೆಯೇ ಬೆಂಗಳೂರಿಗರು ದನಿಯೆತ್ತಿ. ಸ್ವಲ್ಪವಾದರೂ ಆತ್ಮಸಾಕ್ಷಿ ಉಳಿಸಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಣ್ಣ ಮಳೆಗೆ ಇಲ್ಲಿನ ದಾರಿಗಳಲ್ಲಿ ನೀರು ತುಂಬಿ ಬಂಡಿಗಳ ಓಡಾಟಕ್ಕೆ ತೊಂದರೆಯಾಗಿ ಪಡುವ ಪಡಿಪಾಟಲು ಅಶ್ಟಿಶ್ಟಲ್ಲ. ನಗರದ ಯೋಜನಾರಹಿತ ಬೆಳವಣಗೆಯೇ ಇದಕ್ಕೆಲ್ಲಾ ಕಾರಣ.
    ದಾರಿಬದಿಯ ಚರಂಡಿಗಳ ಬಾಯಿಗೆ ಅಡ್ಡಲಾಗಿ ಹಾಕಿರುವ ನೀರು,ಕಳಚೆ,ಕರೆಂಟು ಕೊಳವೆಗಳನ್ನು ನಿಯಮದಂತೆ ಬೆಡ್ ಲೆವೆಲ್ ಗಿಂತ ಕೆಳಗೆ ಹಾಕದರೆ ನೂರಾರು ಕೋಟಿ ಹಣ ಉಳಿಸಬಹುದು.

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...