Homeಕರ್ನಾಟಕಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

ಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

- Advertisement -
- Advertisement -

| ಮುತ್ತುರಾಜು |

ಈಗಾಗಲೇ ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಿಂದ ಯಥೇಚ್ಛವಾಗಿ ಬೆಂಗಳೂರಿಗೆ ನೀರನ್ನು ಕೊಡಲಾಗುತ್ತಿದೆ. ಅದು ಹಣ್ಣು, ತರಕಾರಿ, ಹಾಲು, ಸೊಪ್ಪು, ಹೂವು ಮತ್ತು ಇನ್ನಿತರ ದಿನಬಳಕೆಯ ವಸ್ತುಗಳನ್ನು ಆ ಜಿಲ್ಲೆಗಳಲ್ಲಿ ಉತ್ಪಾದಿಸಿ ಬೆಂಗಳೂರಿಗೆ ಮಾರುವ ಮೂಲಕ ಅವರ ತಮ್ಮ ಜಿಲ್ಲೆಗಳ ಅಂತರ್ಜಲವನ್ನು ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ಮೈಸೂರು, ಕೊಡಗು, ಮಂಡ್ಯದ ಕಾವೇರಿ ನೀರು ಬೆಂಗಳೂರನ್ನು ರಕ್ಷಿಸುತ್ತಿದೆ. ಸಾಲದು ಎಂಬುದಕ್ಕೆ ಕರಾವಳಿಯ ದ.ಕ ಜಿಲ್ಲೆಯಿಂದ ಎತ್ತಿನಹೊಳೆಯಿಂದ ನೀರು ಎತ್ತಲು ಯೋಜಿಸಲಾಗಿದೆ. ನಮ್ಮ ಬೆಂಗಳೂರಿನ ತೀರದ ದಾಹಕ್ಕೆ ಈಗ ಮಲೆನಾಡಿನ ಲಿಂಗನಮಕ್ಕಿಯ ಮೇಲೆಯೂ ಆಳುವವರಿಗೆ ಕಣ್ಣು ಬಿದ್ದಿದೆ. ಇದಕ್ಕೆ ಕೊನೆಯೇ ಇಲ್ಲವೇ?

ಹೌದು ಬೆಂಗಳೂರಿನವರಿಗೆ ಕುಡಿಯಲು ನೀರು ಬೇಕು. ಈಗ ಏಕೆ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಕೇಳಿಕೊಳ್ಳಲು ಯಾರು ಸಿದ್ಧರಿಲ್ಲ. ವಿಚಿತ್ರವೆಂದರೆ ಒಣ ಬಯಲು ಸೀಮೆ ಪ್ರದೇಶಗಳಲ್ಲೇ ಹೆಚ್ಚು ಮಳೆ ಬೀಳುವ ಜಿಲ್ಲೆಯೆಂದರೆ ಬೆಂಗಳೂರು. ಆದರೆ ಹೀಗೆ ಬಿದ್ದ ಮಳೆ ಹಾಗೆ ಹರಿದು ಹೋಗುತ್ತಿದ್ದರೂ ಬೆಂಗಳೂರಿಗರು ಕಣ್ಣು ಮುಚ್ಚಿ ಕುಳಿತಿರುತ್ತಾರೆ. ನಂತರ ನಮಗೆ ನೀರು ಬೇಕೆಂದು ದಬ್ಬಾಳಿಕೆ ಮಾಡುತ್ತಾರೆ. ಹೌದು ಇದು ದಬ್ಬಾಳಿಕೆಯೇ ಹೊರತು ಮತ್ತೇನಲ್ಲ. ಮಲೆನಾಡಿನ ಲಿಂಗನಮಕ್ಕಿಯಿಂದ ಬಲವಂತವಾಗಿ ನೀರು ತರಲು 12 ಸಾವಿರ ಕೋಟಿ ರೂಗಳನ್ನು ಖರ್ಚು ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿ ನಿಂತಿದೆ. ಡಿಪಿಆರ್ ಸಿದ್ದಪಡಿಸುವಂತೆ ಡಿಸಿಎಂ ಪರಮೇಶ್ವರ್ ನಿನ್ನೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

ಈಗ ನಾವು ಸಮಸ್ಯೆಯ ಆಳ ಮತ್ತು ಪರಿಹಾರಕ್ಕೆ ಹೋಗೋಣ.

ಬೆಂಗಳೂರಿಗೆ ಬಂದು ಹೋಗುವವರು ಸೇರಿ ಇಲ್ಲಿ ದಿನವೊಂದಕ್ಕೆ ಒಂದೂವರೆ ಕೋಟಿ ಜನ ಇರುತ್ತಾರೆಂದು ಅಂದಾಜಿಸಲಾಗಿದೆ. ಅಂದರೆ ಉದ್ಯೋಗಕ್ಕಾಗಿ ಇಲ್ಲಿಗೆ ಬಂದು ಹೋಗುವವರು ಮತ್ತು ಇಲ್ಲಿಯೇ ನೆಲೆಸಿರುವವರೇ ಹೆಚ್ಚು. ಹಾಗಾಗಿ ಈ ಉದ್ಯೋಗ ಸೃಷ್ಟಿಯ ವಿಕೇಂದ್ರಿಕರಣದ ಪ್ರಶ್ನೆಯನ್ನು ಸರ್ಕಾರ ತನ್ನ ಆದ್ಯತೆಯನ್ನಾಗಿ ಮಾಡಿಕೊಂಡಾಗ ಮಾತ್ರ ಬೆಂಗಳೂರಿಗೆ ನೀರಿನ ಸಮಸ್ಯೆ ಮಾತ್ರವಲ್ಲ, ಟ್ರಾಫಿಕ್, ಮಾಲಿನ್ಯ, ಅಪಘಾತ ಸೇರಿದಂತೆ ಇನ್ನು ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ.

ಎಲ್ಲಾ ಉದ್ಯೋಗಗಳನ್ನು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದನ್ನು, ಬೆಂಗಳೂರು ಕೇಂದ್ರೀತ ಅಭಿವೃದ್ದಿ ಮಾದರಿಯನ್ನು ಕೈಬಿಟ್ಟು ವಿಕೇಂದ್ರಿಕೃತ ಮತ್ತು ಗ್ರಾಮೀಣ ಆಧಾರಿತ ಅಭಿವೃದ್ದಿಗೆ ಮುಂದಾಗಬೇಕು. ಅತ್ಯುತ್ತಮ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಕಲಬುರಗಿ, ಧಾರವಾಡ, ಬೆಳಗಾಂ, ಗದಗ ರೀತಿಯ ಜಿಲ್ಲೆಗಳಲ್ಲಿ ಸ್ಥಾಪಿಸಬೇಕು. ಜನ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಪರಿಪಾಟಲು ಪಡುವುದು ತಪ್ಪಬೇಕು. ಕೃಷಿಯನ್ನು ನಿಜವಾಗಿಯೂ ಲಾಭದಾಯಕವಾಗಿಸಲು ಸರ್ಕಾರ ತನ್ನೆಲ್ಲಾ ಶಕ್ತಿ-ಸಂಪನ್ಮೂಲಗಳನ್ನು ವಿನಿಯೋಗಿಸಬೇಕು. ಆಗ ನಿಧಾನವಾಗಿ ವಲಸೆ ಕಡಿಮೆಯಾಗುತ್ತದೆ ಮಾತ್ರವಲ್ಲ, ಬೆಂಗಳೂರಿನಿಂದ ಜನ ತಮ್ಮ ಸ್ವಂತ ಊರುಗಳಿಗೆ ವಾಪಸ್ ಹೋಗುವಂತೆ ಆಗಬೇಕು.

ಎರಡನೆಯದಾಗಿ ತಕ್ಷಣದ ಪರಿಹಾರಕ್ಕೆ ಬರುವುದಾದರೆ ನಾವು ಬೆಂಗಳೂರಿನ ಜನ ಎಷ್ಟೆಲ್ಲಾ ನೀರು ವ್ಯರ್ಥ ಮಾಡುತ್ತಿದ್ದೇವೆ ಎಂಬುದನ್ನು ಅರಿತು ಮಿತಬಳಕೆಗೆ ಮುಂದಾಗಬೇಕು. ಬೆಂಗಳೂರಿನ ಪ್ರತಿ ಮನೆಯು ಮಳೆನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಬೋರ್‍ವೆಲ್‍ಗಳಿಗೆ ಅದರಿಂದ ಮರುಪೂರಣ ವ್ಯವಸ್ಥೆ ಮಾಡಬೇಕು. ಇದು ಎಷ್ಟು ದೊಡ್ಡ ಕೆಲಸವೆಂದರೆ ಇದರಿಂದ ನೀರಿನ ಪರಾವಲಂಬನೆ ಬಹುಮಟ್ಟಿಗೆ ತಪ್ಪಿಸಬಹುದು.
ಜೊತೆಗೆ ಸರ್ಕಾರ ಕೆರೆ ಒತ್ತುವರಿ ಮಾಡಿಕೊಂಡಿರುವವರನ್ನು ಮುಲಾಜು ನೋಡದೆ ಬಿಡಿಸಿ ಕೆರೆಗಳ ಸಮಗ್ರ ಪುನಶ್ಚೇತನಕ್ಕೆ ಮುಂದಾಗಬೇಕು. ರಾಜ್ಯದ ಎಲ್ಲಾ ಕೆರೆಗಳ ಹೂಳೆತ್ತಿಸಿ ನೀರು ಸಂಗ್ರಹಕ್ಕೆ ಮುಂದಾಗಬೇಕು. ಯಮುನಾ ಬಯಲು ಪ್ರದೇಶದಲ್ಲಿ ನೈಸರ್ಗಿಕ ನೀರು ಸಂಗ್ರಹಾಲಯಕ್ಕೆ ದೆಹಲಿ ಸರ್ಕಾರ ಮುಂದಾಗಿದೆ. ಇಂತಹ ಯೋಜನೆಗಳನ್ನು ಅಧ್ಯಯನ ಮಾಡಿ ಜಾರಿಗೊಳಿಸಬೇಕು.

ಹುಡುಕಿದರೆ ಇಂತಹ ಹತ್ತಾರು ದಾರಿಗಳು ಸಿಗುತ್ತವೆ. ಅವನ್ನು ಮಾಡದೇ ನಾವು ನಮ್ಮ ವಿಲಾಸಕ್ಕಾಗಿ, ಮಿತಿಮೀರಿದ ದುರಾಸೆಗಾಗಿ ಎತ್ತಿನಹೊಳೆಯಿಂದಲೋ, ಲಿಂಗನಮಕ್ಕಿಯಿಂದಲೋ ನೀರು ಕದಿಯುವುದು ಸರ್ವಥಾ ಸರಿಯಲ್ಲ. ಲಿಂಗನಮಕ್ಕಿಯಿಂದ ನೀರು ಬೇಡ ಎಂದು ಮಲೆನಾಡಿಗರು ಹೋರಾಟ ಮಾಡುವ ಮುಂಚೆಯೇ ಬೆಂಗಳೂರಿಗರು ದನಿಯೆತ್ತಿ. ಸ್ವಲ್ಪವಾದರೂ ಆತ್ಮಸಾಕ್ಷಿ ಉಳಿಸಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಣ್ಣ ಮಳೆಗೆ ಇಲ್ಲಿನ ದಾರಿಗಳಲ್ಲಿ ನೀರು ತುಂಬಿ ಬಂಡಿಗಳ ಓಡಾಟಕ್ಕೆ ತೊಂದರೆಯಾಗಿ ಪಡುವ ಪಡಿಪಾಟಲು ಅಶ್ಟಿಶ್ಟಲ್ಲ. ನಗರದ ಯೋಜನಾರಹಿತ ಬೆಳವಣಗೆಯೇ ಇದಕ್ಕೆಲ್ಲಾ ಕಾರಣ.
    ದಾರಿಬದಿಯ ಚರಂಡಿಗಳ ಬಾಯಿಗೆ ಅಡ್ಡಲಾಗಿ ಹಾಕಿರುವ ನೀರು,ಕಳಚೆ,ಕರೆಂಟು ಕೊಳವೆಗಳನ್ನು ನಿಯಮದಂತೆ ಬೆಡ್ ಲೆವೆಲ್ ಗಿಂತ ಕೆಳಗೆ ಹಾಕದರೆ ನೂರಾರು ಕೋಟಿ ಹಣ ಉಳಿಸಬಹುದು.

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....