Homeಕರ್ನಾಟಕಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

ಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

- Advertisement -
- Advertisement -

| ಮುತ್ತುರಾಜು |

ಈಗಾಗಲೇ ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಿಂದ ಯಥೇಚ್ಛವಾಗಿ ಬೆಂಗಳೂರಿಗೆ ನೀರನ್ನು ಕೊಡಲಾಗುತ್ತಿದೆ. ಅದು ಹಣ್ಣು, ತರಕಾರಿ, ಹಾಲು, ಸೊಪ್ಪು, ಹೂವು ಮತ್ತು ಇನ್ನಿತರ ದಿನಬಳಕೆಯ ವಸ್ತುಗಳನ್ನು ಆ ಜಿಲ್ಲೆಗಳಲ್ಲಿ ಉತ್ಪಾದಿಸಿ ಬೆಂಗಳೂರಿಗೆ ಮಾರುವ ಮೂಲಕ ಅವರ ತಮ್ಮ ಜಿಲ್ಲೆಗಳ ಅಂತರ್ಜಲವನ್ನು ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ಮೈಸೂರು, ಕೊಡಗು, ಮಂಡ್ಯದ ಕಾವೇರಿ ನೀರು ಬೆಂಗಳೂರನ್ನು ರಕ್ಷಿಸುತ್ತಿದೆ. ಸಾಲದು ಎಂಬುದಕ್ಕೆ ಕರಾವಳಿಯ ದ.ಕ ಜಿಲ್ಲೆಯಿಂದ ಎತ್ತಿನಹೊಳೆಯಿಂದ ನೀರು ಎತ್ತಲು ಯೋಜಿಸಲಾಗಿದೆ. ನಮ್ಮ ಬೆಂಗಳೂರಿನ ತೀರದ ದಾಹಕ್ಕೆ ಈಗ ಮಲೆನಾಡಿನ ಲಿಂಗನಮಕ್ಕಿಯ ಮೇಲೆಯೂ ಆಳುವವರಿಗೆ ಕಣ್ಣು ಬಿದ್ದಿದೆ. ಇದಕ್ಕೆ ಕೊನೆಯೇ ಇಲ್ಲವೇ?

ಹೌದು ಬೆಂಗಳೂರಿನವರಿಗೆ ಕುಡಿಯಲು ನೀರು ಬೇಕು. ಈಗ ಏಕೆ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಕೇಳಿಕೊಳ್ಳಲು ಯಾರು ಸಿದ್ಧರಿಲ್ಲ. ವಿಚಿತ್ರವೆಂದರೆ ಒಣ ಬಯಲು ಸೀಮೆ ಪ್ರದೇಶಗಳಲ್ಲೇ ಹೆಚ್ಚು ಮಳೆ ಬೀಳುವ ಜಿಲ್ಲೆಯೆಂದರೆ ಬೆಂಗಳೂರು. ಆದರೆ ಹೀಗೆ ಬಿದ್ದ ಮಳೆ ಹಾಗೆ ಹರಿದು ಹೋಗುತ್ತಿದ್ದರೂ ಬೆಂಗಳೂರಿಗರು ಕಣ್ಣು ಮುಚ್ಚಿ ಕುಳಿತಿರುತ್ತಾರೆ. ನಂತರ ನಮಗೆ ನೀರು ಬೇಕೆಂದು ದಬ್ಬಾಳಿಕೆ ಮಾಡುತ್ತಾರೆ. ಹೌದು ಇದು ದಬ್ಬಾಳಿಕೆಯೇ ಹೊರತು ಮತ್ತೇನಲ್ಲ. ಮಲೆನಾಡಿನ ಲಿಂಗನಮಕ್ಕಿಯಿಂದ ಬಲವಂತವಾಗಿ ನೀರು ತರಲು 12 ಸಾವಿರ ಕೋಟಿ ರೂಗಳನ್ನು ಖರ್ಚು ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿ ನಿಂತಿದೆ. ಡಿಪಿಆರ್ ಸಿದ್ದಪಡಿಸುವಂತೆ ಡಿಸಿಎಂ ಪರಮೇಶ್ವರ್ ನಿನ್ನೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

ಈಗ ನಾವು ಸಮಸ್ಯೆಯ ಆಳ ಮತ್ತು ಪರಿಹಾರಕ್ಕೆ ಹೋಗೋಣ.

ಬೆಂಗಳೂರಿಗೆ ಬಂದು ಹೋಗುವವರು ಸೇರಿ ಇಲ್ಲಿ ದಿನವೊಂದಕ್ಕೆ ಒಂದೂವರೆ ಕೋಟಿ ಜನ ಇರುತ್ತಾರೆಂದು ಅಂದಾಜಿಸಲಾಗಿದೆ. ಅಂದರೆ ಉದ್ಯೋಗಕ್ಕಾಗಿ ಇಲ್ಲಿಗೆ ಬಂದು ಹೋಗುವವರು ಮತ್ತು ಇಲ್ಲಿಯೇ ನೆಲೆಸಿರುವವರೇ ಹೆಚ್ಚು. ಹಾಗಾಗಿ ಈ ಉದ್ಯೋಗ ಸೃಷ್ಟಿಯ ವಿಕೇಂದ್ರಿಕರಣದ ಪ್ರಶ್ನೆಯನ್ನು ಸರ್ಕಾರ ತನ್ನ ಆದ್ಯತೆಯನ್ನಾಗಿ ಮಾಡಿಕೊಂಡಾಗ ಮಾತ್ರ ಬೆಂಗಳೂರಿಗೆ ನೀರಿನ ಸಮಸ್ಯೆ ಮಾತ್ರವಲ್ಲ, ಟ್ರಾಫಿಕ್, ಮಾಲಿನ್ಯ, ಅಪಘಾತ ಸೇರಿದಂತೆ ಇನ್ನು ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ.

ಎಲ್ಲಾ ಉದ್ಯೋಗಗಳನ್ನು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದನ್ನು, ಬೆಂಗಳೂರು ಕೇಂದ್ರೀತ ಅಭಿವೃದ್ದಿ ಮಾದರಿಯನ್ನು ಕೈಬಿಟ್ಟು ವಿಕೇಂದ್ರಿಕೃತ ಮತ್ತು ಗ್ರಾಮೀಣ ಆಧಾರಿತ ಅಭಿವೃದ್ದಿಗೆ ಮುಂದಾಗಬೇಕು. ಅತ್ಯುತ್ತಮ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಕಲಬುರಗಿ, ಧಾರವಾಡ, ಬೆಳಗಾಂ, ಗದಗ ರೀತಿಯ ಜಿಲ್ಲೆಗಳಲ್ಲಿ ಸ್ಥಾಪಿಸಬೇಕು. ಜನ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಪರಿಪಾಟಲು ಪಡುವುದು ತಪ್ಪಬೇಕು. ಕೃಷಿಯನ್ನು ನಿಜವಾಗಿಯೂ ಲಾಭದಾಯಕವಾಗಿಸಲು ಸರ್ಕಾರ ತನ್ನೆಲ್ಲಾ ಶಕ್ತಿ-ಸಂಪನ್ಮೂಲಗಳನ್ನು ವಿನಿಯೋಗಿಸಬೇಕು. ಆಗ ನಿಧಾನವಾಗಿ ವಲಸೆ ಕಡಿಮೆಯಾಗುತ್ತದೆ ಮಾತ್ರವಲ್ಲ, ಬೆಂಗಳೂರಿನಿಂದ ಜನ ತಮ್ಮ ಸ್ವಂತ ಊರುಗಳಿಗೆ ವಾಪಸ್ ಹೋಗುವಂತೆ ಆಗಬೇಕು.

ಎರಡನೆಯದಾಗಿ ತಕ್ಷಣದ ಪರಿಹಾರಕ್ಕೆ ಬರುವುದಾದರೆ ನಾವು ಬೆಂಗಳೂರಿನ ಜನ ಎಷ್ಟೆಲ್ಲಾ ನೀರು ವ್ಯರ್ಥ ಮಾಡುತ್ತಿದ್ದೇವೆ ಎಂಬುದನ್ನು ಅರಿತು ಮಿತಬಳಕೆಗೆ ಮುಂದಾಗಬೇಕು. ಬೆಂಗಳೂರಿನ ಪ್ರತಿ ಮನೆಯು ಮಳೆನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಬೋರ್‍ವೆಲ್‍ಗಳಿಗೆ ಅದರಿಂದ ಮರುಪೂರಣ ವ್ಯವಸ್ಥೆ ಮಾಡಬೇಕು. ಇದು ಎಷ್ಟು ದೊಡ್ಡ ಕೆಲಸವೆಂದರೆ ಇದರಿಂದ ನೀರಿನ ಪರಾವಲಂಬನೆ ಬಹುಮಟ್ಟಿಗೆ ತಪ್ಪಿಸಬಹುದು.
ಜೊತೆಗೆ ಸರ್ಕಾರ ಕೆರೆ ಒತ್ತುವರಿ ಮಾಡಿಕೊಂಡಿರುವವರನ್ನು ಮುಲಾಜು ನೋಡದೆ ಬಿಡಿಸಿ ಕೆರೆಗಳ ಸಮಗ್ರ ಪುನಶ್ಚೇತನಕ್ಕೆ ಮುಂದಾಗಬೇಕು. ರಾಜ್ಯದ ಎಲ್ಲಾ ಕೆರೆಗಳ ಹೂಳೆತ್ತಿಸಿ ನೀರು ಸಂಗ್ರಹಕ್ಕೆ ಮುಂದಾಗಬೇಕು. ಯಮುನಾ ಬಯಲು ಪ್ರದೇಶದಲ್ಲಿ ನೈಸರ್ಗಿಕ ನೀರು ಸಂಗ್ರಹಾಲಯಕ್ಕೆ ದೆಹಲಿ ಸರ್ಕಾರ ಮುಂದಾಗಿದೆ. ಇಂತಹ ಯೋಜನೆಗಳನ್ನು ಅಧ್ಯಯನ ಮಾಡಿ ಜಾರಿಗೊಳಿಸಬೇಕು.

ಹುಡುಕಿದರೆ ಇಂತಹ ಹತ್ತಾರು ದಾರಿಗಳು ಸಿಗುತ್ತವೆ. ಅವನ್ನು ಮಾಡದೇ ನಾವು ನಮ್ಮ ವಿಲಾಸಕ್ಕಾಗಿ, ಮಿತಿಮೀರಿದ ದುರಾಸೆಗಾಗಿ ಎತ್ತಿನಹೊಳೆಯಿಂದಲೋ, ಲಿಂಗನಮಕ್ಕಿಯಿಂದಲೋ ನೀರು ಕದಿಯುವುದು ಸರ್ವಥಾ ಸರಿಯಲ್ಲ. ಲಿಂಗನಮಕ್ಕಿಯಿಂದ ನೀರು ಬೇಡ ಎಂದು ಮಲೆನಾಡಿಗರು ಹೋರಾಟ ಮಾಡುವ ಮುಂಚೆಯೇ ಬೆಂಗಳೂರಿಗರು ದನಿಯೆತ್ತಿ. ಸ್ವಲ್ಪವಾದರೂ ಆತ್ಮಸಾಕ್ಷಿ ಉಳಿಸಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಣ್ಣ ಮಳೆಗೆ ಇಲ್ಲಿನ ದಾರಿಗಳಲ್ಲಿ ನೀರು ತುಂಬಿ ಬಂಡಿಗಳ ಓಡಾಟಕ್ಕೆ ತೊಂದರೆಯಾಗಿ ಪಡುವ ಪಡಿಪಾಟಲು ಅಶ್ಟಿಶ್ಟಲ್ಲ. ನಗರದ ಯೋಜನಾರಹಿತ ಬೆಳವಣಗೆಯೇ ಇದಕ್ಕೆಲ್ಲಾ ಕಾರಣ.
    ದಾರಿಬದಿಯ ಚರಂಡಿಗಳ ಬಾಯಿಗೆ ಅಡ್ಡಲಾಗಿ ಹಾಕಿರುವ ನೀರು,ಕಳಚೆ,ಕರೆಂಟು ಕೊಳವೆಗಳನ್ನು ನಿಯಮದಂತೆ ಬೆಡ್ ಲೆವೆಲ್ ಗಿಂತ ಕೆಳಗೆ ಹಾಕದರೆ ನೂರಾರು ಕೋಟಿ ಹಣ ಉಳಿಸಬಹುದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...