Homeಸಾಮಾಜಿಕಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

ಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

- Advertisement -
- Advertisement -

ದು.ಸರಸ್ವತಿ |

ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ ಅನ್ನುವ ಕಾನ್ಸೆಪ್ಟನ್ನು ಮೊದಲು ಕೇಳಿದ್ದು ಉಮಾ ಚಕ್ರವರ್ತಿಯವರ ಜಂಡರಿಂಗ್ ಕಾಸ್ಟ್ ಎನ್ನುವ ಪುಸ್ತಕದಲ್ಲಿ. ಮಂಡಲ್ ಆಯೋಗ ವರದಿ ಜಾರಿಯಾದ ನಂತರ ದೇಶ ಹೊತ್ತಿ ಉರಿವಾಗ ಕೆಲವು ಹೆಣ್ಣು ಮಕ್ಕಳು, ಐಎಎಸ್, ಐಪಿಎಸ್ ಆಫೀಸರ್ ಗಂಡುಗಳು ಸಿಗುವುದಿಲ್ಲ ಎಂದು ಪ್ಲೆಕಾರ್ಡ್ ಹಿಡಿದು ನಿಂತಿದ್ದರು. ಅಂದರೆ ರಿಸರ್ವೇಶನ್ ಇದ್ರೆ ನಾವು ಮದುವೆ ಆಗಲು ಮೇಲ್ಜಾತಿ ಆಫೀಸರ್‌ಗಳು ಸಿಗುವುದಿಲ್ಲ ಎಂದು ಪರೋಕ್ಷವಾಗಿ ಮೀಸಲಾತಿಯ ವಿರುದ್ಧ ದನಿ ಎತ್ತಿದ್ದರು. ಮಹಿಳೆಯರೆಲ್ಲ ದಲಿತರು, ಶೋಷಿತರು ಎಂದು ಹೋರಾಟದಲ್ಲಿದ್ದ ಮಹಿಳಾ ಚಳುವಳಿಗೆ ಇದು ದೊಡ್ಡ ಸವಾಲಾಗಿ ಎದುರಾಯಿತು. ಈ ಸಂದರ್ಭದಲ್ಲಿ ಉಮಾ ಚಕ್ರವರ್ತಿ ‘ಜೆಂಡರಿಂಗ್ ಕಾಸ್ಟ್’ ಪುಸ್ತಕ ಬರೆದರು. ಮಹಾರಾಷ್ಟ್ರದ ದಲಿತ ಸ್ತ್ರೀವಾದಿಗಳು ಅಂಬೇಡ್ಕರ್ ಮತ್ತು ಮಹಿಳೆ ಬಗ್ಗೆ ತುಂಬಾ ಆಳವಾದ ಅಧ್ಯಯನ ಮಾಡಿದರು. ಆಗ, ಅಂಬೇಡ್ಕರ್ ಅವರ ಜಾತಿ ವಿನಾಶ ಚಳುವಳಿಯ ಪರಂಪರೆ ಅಂದರೆ, ಲಿಂಗ ತಾರತಮ್ಯದ ವಿರುದ್ಧವೂ ಹೋರಾಡುವ ಪರಂಪರೆ; ಅದನ್ನ ಯಾಕೆ ಮಹಿಳಾ ಚಳುವಳಿಗಳು ಗುರುತಿಸಲೇ ಇಲ್ಲ ಎಂದು ಮೊದಲನೇ ಬಾರಿ ಎಲ್ಲರೂ ಆಲೋಚಿಸುವಂತಾಯಿತು. ಜ್ಯೋತಿ ಬಾ ಪುಲೆ, ಸಾವಿತ್ರಿ ಬಾ ಪುಲೆ, ಅಂಬೇಡ್ಕರ್‌ರ ವಿಚಾರಗಳನ್ನು ಕುರಿತ ಪುಸ್ತಕಗಳು ಬಂದವು. ಅಂಬೇಡ್ಕರ್ ಮತ್ತು ಮಹಿಳೆ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣಿಕೆಯ ಪಿತೃಪ್ರಧಾನತೆ ಎಂಬ ಪರಿಕಲ್ಪನೆ ನಮಗೆಲ್ಲ ಸರಿಯಾಗಿ ಅರ್ಥವಾದದ್ದು.

ಈ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಪಿತೃಪ್ರಧಾನವಾದುದ್ದು ಎಂದು ಎಲ್ಲರಿಗೂ ಗೊತ್ತು. ರಾಜ್ಯವನ್ನು, ಆಸ್ತಿಯನ್ನ ಹಾಗೂ ಎಲ್ಲಾ ಅಧಿಕಾರವನ್ನು ಚಲಾಯಿಸುವಂತಹ, ಗಂಡು ನಾನೇ ಸುಪ್ರೀಂ ಎನ್ನುವ ವ್ಯವಸ್ಥೆ ಇದು. ಬ್ಯಾಹ್ಮಣ್ಯದ ಶ್ರೇಣೀಕರಣದಲ್ಲಿ ಬ್ರಾಹ್ಮಣರು ಜಾತಿ ವ್ಯವಸ್ಥೆಯ ಮೇಲ್ದರ್ಜೆಯ ತುತ್ತ ತುದಿಯಲ್ಲಿದ್ದಾರೆ. ಗಂಡು ಎನ್ನುವ ಶ್ರೇಷ್ಠತೆ, ಮೇಲ್ಜಾತಿ ಎನ್ನುವ ಶ್ರೇಷ್ಠತೆ ಎರಡೂ ಕೂಡಿ ಬ್ರಾಹ್ಮಣ ಶ್ರೇಷ್ಠತೆ ಉತ್ಕೃಷ್ಟ ಮಾದರಿಯಾಗಿ ನಿಲ್ಲುತ್ತದೆ. ಹಾಗಾಗಿ ಎಲ್ಲಾ ದೇವಾಲಯಗಳಲ್ಲಿ ಬ್ರಾಹ್ಮಣ ಗಂಡಸರು ಪೂಜೆ ಮಾಡುತ್ತಾರೆ, ಇತರರು ಕೈ ಮುಗಿದು ನಿಲ್ಲುತ್ತಾರೆ, ದಲಿತರು ಹೊರಗಿರಿಸಲ್ಪಡುತ್ತಾರೆ. ಇದು ಎಲ್ಲ ಸಮುದಾಯಗಳ ಒಳಕ್ಕೂ ಇಳಿದುಬಿಟ್ಟಿದೆ. ಮಾದಿಗರ ದಾಸಯ್ಯರು ಪೂಜೆ ಮಾಡ್ತಾರೆ, ಸಮಗಾರರು ಚರ್ಮದ ಕೆಲಸವನ್ನು ಮಾಡ್ತಾರೆ. ಇನ್ನು ಹೈರಾರ್ಕಿಯಲ್ಲಿ ಎಲ್ಲಾ ಸಮುದಾಯದಲ್ಲೂ ಪುರುಷರು ಮೇಲು ಎನ್ನುವುದೂ ಬೆಳೆದು ಬಂದಿದೆ, ಮೇಲ್ ಹೈರಾರ್ಕಿ, ಬ್ರಾಹ್ಮಿಣಿಕಲ್ ಹೈರಾರ್ಕಿಯ ಆಳದಲ್ಲಿ ಕಾಸ್ಟ್ ಸುಪ್ರಿಮಸಿ ಪ್ರಧಾನವಾಗಿದೆ, ಈ ಮೇಲರಿಮೆಯಲ್ಲಿ ಖಾಸಗಿ ಆಸ್ತಿಯೂ ಸೇರಿಕೊಂಡಿದೆ. ಇದು ಬೌದ್ಧಿಕ ಪವರ್‌ನೂ ಹೌದು ಮತ್ತೂ ಮೆಟಿರಿಯಲ್ ಪವರ್ ಕೂಡ ಹೌದು. ಅಕಾಡೆಮಿಕ್ ಬಳಕೆಯಲ್ಲಿ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಬ್ರಾಹ್ಮಣರನ್ನು ವಿರೋಧಿಸುವಂತದ್ದಲ್ಲ, ತಾನೇ ಸುಪ್ರೀಂ ನಾವಿರುವುದೇ ಆಳುವುದಕ್ಕೆ ಎನ್ನುವಂತಹ ವಾದವನ್ನು ಪ್ರಶ್ನಿಸುವಂತದ್ದು. ಈಗ ಮೇಲ್ಜಾತಿ ಎತ್ತಿರುವ ತಕರಾರು ಅಸಮಂಜಸವಾದದ್ದು. ವಿದ್ವತ್ ವಲಯದಲ್ಲಿ ಚರ್ಚೆಯಲ್ಲಿರುವ ಜಾಗತೀಕರಣ, ಆಳುವ ವರ್ಗ, ಫ್ಯೂಡಲಿಸಂ ಎನ್ನುವಂತಹ ಪರಿಕಲ್ಪನೆಗಳನ್ನು ಚರ್ಚೆ ಮಾಡಬೇಡಿ, ಇದರ ಬಗ್ಗೆ ಮಾತನಾಡಬೇಡಿ ಎಂದರೆ ಅದನ್ನೆಲ್ಲ ನಿಲ್ಲಸಲಾಗುತ್ತದೆಯೇ? ಖಂಡಿತಾ ಇಲ್ಲ. ಹಾಗೆಯೆ ಇದು ಕೂಡ. ಬ್ರಾಹ್ಮಣ್ಯದ ವಿರುದ್ಧದ ದನಿಯೇ ಹೊರತು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...