Homeಸಾಮಾಜಿಕಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

ಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

- Advertisement -
- Advertisement -

ದು.ಸರಸ್ವತಿ |

ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ ಅನ್ನುವ ಕಾನ್ಸೆಪ್ಟನ್ನು ಮೊದಲು ಕೇಳಿದ್ದು ಉಮಾ ಚಕ್ರವರ್ತಿಯವರ ಜಂಡರಿಂಗ್ ಕಾಸ್ಟ್ ಎನ್ನುವ ಪುಸ್ತಕದಲ್ಲಿ. ಮಂಡಲ್ ಆಯೋಗ ವರದಿ ಜಾರಿಯಾದ ನಂತರ ದೇಶ ಹೊತ್ತಿ ಉರಿವಾಗ ಕೆಲವು ಹೆಣ್ಣು ಮಕ್ಕಳು, ಐಎಎಸ್, ಐಪಿಎಸ್ ಆಫೀಸರ್ ಗಂಡುಗಳು ಸಿಗುವುದಿಲ್ಲ ಎಂದು ಪ್ಲೆಕಾರ್ಡ್ ಹಿಡಿದು ನಿಂತಿದ್ದರು. ಅಂದರೆ ರಿಸರ್ವೇಶನ್ ಇದ್ರೆ ನಾವು ಮದುವೆ ಆಗಲು ಮೇಲ್ಜಾತಿ ಆಫೀಸರ್‌ಗಳು ಸಿಗುವುದಿಲ್ಲ ಎಂದು ಪರೋಕ್ಷವಾಗಿ ಮೀಸಲಾತಿಯ ವಿರುದ್ಧ ದನಿ ಎತ್ತಿದ್ದರು. ಮಹಿಳೆಯರೆಲ್ಲ ದಲಿತರು, ಶೋಷಿತರು ಎಂದು ಹೋರಾಟದಲ್ಲಿದ್ದ ಮಹಿಳಾ ಚಳುವಳಿಗೆ ಇದು ದೊಡ್ಡ ಸವಾಲಾಗಿ ಎದುರಾಯಿತು. ಈ ಸಂದರ್ಭದಲ್ಲಿ ಉಮಾ ಚಕ್ರವರ್ತಿ ‘ಜೆಂಡರಿಂಗ್ ಕಾಸ್ಟ್’ ಪುಸ್ತಕ ಬರೆದರು. ಮಹಾರಾಷ್ಟ್ರದ ದಲಿತ ಸ್ತ್ರೀವಾದಿಗಳು ಅಂಬೇಡ್ಕರ್ ಮತ್ತು ಮಹಿಳೆ ಬಗ್ಗೆ ತುಂಬಾ ಆಳವಾದ ಅಧ್ಯಯನ ಮಾಡಿದರು. ಆಗ, ಅಂಬೇಡ್ಕರ್ ಅವರ ಜಾತಿ ವಿನಾಶ ಚಳುವಳಿಯ ಪರಂಪರೆ ಅಂದರೆ, ಲಿಂಗ ತಾರತಮ್ಯದ ವಿರುದ್ಧವೂ ಹೋರಾಡುವ ಪರಂಪರೆ; ಅದನ್ನ ಯಾಕೆ ಮಹಿಳಾ ಚಳುವಳಿಗಳು ಗುರುತಿಸಲೇ ಇಲ್ಲ ಎಂದು ಮೊದಲನೇ ಬಾರಿ ಎಲ್ಲರೂ ಆಲೋಚಿಸುವಂತಾಯಿತು. ಜ್ಯೋತಿ ಬಾ ಪುಲೆ, ಸಾವಿತ್ರಿ ಬಾ ಪುಲೆ, ಅಂಬೇಡ್ಕರ್‌ರ ವಿಚಾರಗಳನ್ನು ಕುರಿತ ಪುಸ್ತಕಗಳು ಬಂದವು. ಅಂಬೇಡ್ಕರ್ ಮತ್ತು ಮಹಿಳೆ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣಿಕೆಯ ಪಿತೃಪ್ರಧಾನತೆ ಎಂಬ ಪರಿಕಲ್ಪನೆ ನಮಗೆಲ್ಲ ಸರಿಯಾಗಿ ಅರ್ಥವಾದದ್ದು.

ಈ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಪಿತೃಪ್ರಧಾನವಾದುದ್ದು ಎಂದು ಎಲ್ಲರಿಗೂ ಗೊತ್ತು. ರಾಜ್ಯವನ್ನು, ಆಸ್ತಿಯನ್ನ ಹಾಗೂ ಎಲ್ಲಾ ಅಧಿಕಾರವನ್ನು ಚಲಾಯಿಸುವಂತಹ, ಗಂಡು ನಾನೇ ಸುಪ್ರೀಂ ಎನ್ನುವ ವ್ಯವಸ್ಥೆ ಇದು. ಬ್ಯಾಹ್ಮಣ್ಯದ ಶ್ರೇಣೀಕರಣದಲ್ಲಿ ಬ್ರಾಹ್ಮಣರು ಜಾತಿ ವ್ಯವಸ್ಥೆಯ ಮೇಲ್ದರ್ಜೆಯ ತುತ್ತ ತುದಿಯಲ್ಲಿದ್ದಾರೆ. ಗಂಡು ಎನ್ನುವ ಶ್ರೇಷ್ಠತೆ, ಮೇಲ್ಜಾತಿ ಎನ್ನುವ ಶ್ರೇಷ್ಠತೆ ಎರಡೂ ಕೂಡಿ ಬ್ರಾಹ್ಮಣ ಶ್ರೇಷ್ಠತೆ ಉತ್ಕೃಷ್ಟ ಮಾದರಿಯಾಗಿ ನಿಲ್ಲುತ್ತದೆ. ಹಾಗಾಗಿ ಎಲ್ಲಾ ದೇವಾಲಯಗಳಲ್ಲಿ ಬ್ರಾಹ್ಮಣ ಗಂಡಸರು ಪೂಜೆ ಮಾಡುತ್ತಾರೆ, ಇತರರು ಕೈ ಮುಗಿದು ನಿಲ್ಲುತ್ತಾರೆ, ದಲಿತರು ಹೊರಗಿರಿಸಲ್ಪಡುತ್ತಾರೆ. ಇದು ಎಲ್ಲ ಸಮುದಾಯಗಳ ಒಳಕ್ಕೂ ಇಳಿದುಬಿಟ್ಟಿದೆ. ಮಾದಿಗರ ದಾಸಯ್ಯರು ಪೂಜೆ ಮಾಡ್ತಾರೆ, ಸಮಗಾರರು ಚರ್ಮದ ಕೆಲಸವನ್ನು ಮಾಡ್ತಾರೆ. ಇನ್ನು ಹೈರಾರ್ಕಿಯಲ್ಲಿ ಎಲ್ಲಾ ಸಮುದಾಯದಲ್ಲೂ ಪುರುಷರು ಮೇಲು ಎನ್ನುವುದೂ ಬೆಳೆದು ಬಂದಿದೆ, ಮೇಲ್ ಹೈರಾರ್ಕಿ, ಬ್ರಾಹ್ಮಿಣಿಕಲ್ ಹೈರಾರ್ಕಿಯ ಆಳದಲ್ಲಿ ಕಾಸ್ಟ್ ಸುಪ್ರಿಮಸಿ ಪ್ರಧಾನವಾಗಿದೆ, ಈ ಮೇಲರಿಮೆಯಲ್ಲಿ ಖಾಸಗಿ ಆಸ್ತಿಯೂ ಸೇರಿಕೊಂಡಿದೆ. ಇದು ಬೌದ್ಧಿಕ ಪವರ್‌ನೂ ಹೌದು ಮತ್ತೂ ಮೆಟಿರಿಯಲ್ ಪವರ್ ಕೂಡ ಹೌದು. ಅಕಾಡೆಮಿಕ್ ಬಳಕೆಯಲ್ಲಿ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಬ್ರಾಹ್ಮಣರನ್ನು ವಿರೋಧಿಸುವಂತದ್ದಲ್ಲ, ತಾನೇ ಸುಪ್ರೀಂ ನಾವಿರುವುದೇ ಆಳುವುದಕ್ಕೆ ಎನ್ನುವಂತಹ ವಾದವನ್ನು ಪ್ರಶ್ನಿಸುವಂತದ್ದು. ಈಗ ಮೇಲ್ಜಾತಿ ಎತ್ತಿರುವ ತಕರಾರು ಅಸಮಂಜಸವಾದದ್ದು. ವಿದ್ವತ್ ವಲಯದಲ್ಲಿ ಚರ್ಚೆಯಲ್ಲಿರುವ ಜಾಗತೀಕರಣ, ಆಳುವ ವರ್ಗ, ಫ್ಯೂಡಲಿಸಂ ಎನ್ನುವಂತಹ ಪರಿಕಲ್ಪನೆಗಳನ್ನು ಚರ್ಚೆ ಮಾಡಬೇಡಿ, ಇದರ ಬಗ್ಗೆ ಮಾತನಾಡಬೇಡಿ ಎಂದರೆ ಅದನ್ನೆಲ್ಲ ನಿಲ್ಲಸಲಾಗುತ್ತದೆಯೇ? ಖಂಡಿತಾ ಇಲ್ಲ. ಹಾಗೆಯೆ ಇದು ಕೂಡ. ಬ್ರಾಹ್ಮಣ್ಯದ ವಿರುದ್ಧದ ದನಿಯೇ ಹೊರತು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...